Homeಮುಖಪುಟಪ್ರೊ. ಆನಂದ ತೇಲ್ತುಂಬ್ಡೆಯವರ ಬಂಧನ ವಿರೋದಿಸಿ ಸಹಿ ಸಂಗ್ರಹ ಅಭಿಯಾನ

ಪ್ರೊ. ಆನಂದ ತೇಲ್ತುಂಬ್ಡೆಯವರ ಬಂಧನ ವಿರೋದಿಸಿ ಸಹಿ ಸಂಗ್ರಹ ಅಭಿಯಾನ

- Advertisement -
- Advertisement -

ಪ್ರೊ. ಆನಂದ ತೇಲ್ತುಂಬ್ಡೆಯವರ ಮೇಲೆ ಸುಳ್ಳು ಅಪಾದನೆಗಳನ್ನು ಹೊರಿಸಿ ಬಂದಿಸುವುದನ್ನು ವಿರೋದಿಸಿ ಹಾಗೂ ಅವರ ಮೇಲಿನ ಸುಳ್ಳು ಆರೋಪಗಳನ್ನು ಕೈ ಬಿಡುವಂತೆ ಶಿಕ್ಷಣ ಹಕ್ಕಿಗಾಗಿ ಅಖಿಲ ಭಾರತ ವೇದಿಕೆ(ಎಐಎಫ್‌ಆರ್‌ಟಿಇ) ಅಭಿಯಾನ ಪ್ರಾರಂಭಿಸಿದೆ.

ಶಿಕ್ಷಣ ಹಕ್ಕಿಗಾಗಿ ಅಖಿಲ ಭಾರತ ವೇದಿಕೆಯು ಆನ್ ಲೈನ್ ಅರ್ಜಿಯನ್ನು ಸಹಿ ಮಾಡಲು ಕೋರಿದೆ. ಸರಕಾರವು  ಸುಳ್ಳು ಪ್ರಕರಣಗಳನ್ನು ಸೃಷ್ಟಿಸಿ ತೇಲ್ತುಂಬ್ಡೆಯವರು ಮುಂಬೈನ ಎನ್ ಐಎ ಕೋರ್ಟ್ ನ ಮುಂದೆ 6, ಎಪ್ರಿಲ್ 2020ರಂದು ಶರಣಾಗಬೇಕೆಂದು ಸೂಚಿಸಿದೆ ಎಂದು ವೇದಿಕೆ ಆರೋಪಿಸಿದೆ.

ಅರ್ಜಿಗೆ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಹಿರಿಯ ಪ್ರಾದ್ಯಾಪಕರಾಗಿರುವ ಆನಂದ ತೇಲ್ತುಂಬ್ಡೆ ಅವರ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿರುವುದು ಭಾರೀ ಅಘಾತ ಉಂಟು ಮಾಡಿದೆ ಎಂದಿರುವ ಎಐಎಫ್‌ಆರ್‌ಟಿಇ, ಜಾತಿ-ವರ್ಗ ಮತ್ತು ಸಾರ್ವಜನಿಕ ನೀತಿಗಳಿಗೆ ಸಂಬಂದಿಸಿದಂತೆ ಅತ್ಯಂತ ಮಹತ್ವದ ಚಿಂತಕರಾದ ಆನಂದ ತೇಲ್ತುಂಬ್ಡೆ ಅವರು ಪ್ರಜಾಪ್ರಭುತ್ವ ಮತ್ತು ಶಿಕ್ಷಣ ಹಕ್ಕುಗಳ ಪರವಾದ ಹೋರಾಟಗಾರರಾಗಿದ್ದಾರೆ ಎಂದಿದೆ.

ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂದ ಹೊಂದಿದ್ದಾರೆ ಎಂದು ಆರೋಪಿಸಿ ’ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಯಂತಹ ಕರಾಳ ಶಾಸನವನ್ನು ಬಳಸಿಕೊಂಡು ಅವರ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿದೆ. ೨೦೧೮ರಲ್ಲಿ ಭೀಮ್ – ಕೊರೆಗಾಂನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡ ಪೇಶ್ವಾಗಳ ವಿರುದ್ದದ ಯುದ್ದದಲ್ಲಿ ಜಯ ಗಳಿಸಿದ ೨೦೦ನೆ ವರ್ಷದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರವನ್ನು ಬಳಸಿಕೊಂಡ ಬಿಜೆಪಿ / ಆರೆಸ್ಸಸ್ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಕೇಂದ್ರ ಸರಕಾರವು ಮಾನವ ಹಕ್ಕುಗಳ ಹೋರಾಟಗಾರರು, ನಾಗರಿಕ ಹಕ್ಕುಗಳ ಹೋರಾಟಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ಎಐಎಫ್‌ಆರ್‌ಟಿಇ ಹೇಳಿದೆ.

ಜನವರಿ 1, 2018 ರಂದು ನಡೆದ ಘಟನೆಯೂ ವಿಡಿಯೋಗಳಲ್ಲಿ ಚಿತ್ರೀಕರಣಗೊಂಡಿದೆ, ವಾಟ್ಸಾಪ್‌ಗಳಾದ್ಯಂತ ಪ್ರಸಾರವಾಗಿದೆ. ಅನೇಕರು ಗಾಯಗೊಂಡು, ಹಲವರ ವಾಹನಗಳು ಜಖಂಗೊಂಡವು. ಈ ಗಲಭೆಗಳನ್ನು ಪ್ರಚೋದಿಸಿದ ಸಮಸ್ಥ ಹಿಂದುತ್ವ ಅಗಾಡಿಯ ಮಿಲಿಂದ್ ಏಕಬೋಟೆ ಮತ್ತು ಶಿವ ಚತ್ರಪತಿ ಪ್ರತಿಷ್ಟಾನದ ಸಾಂಬಾಂಜಿ ಭಿಡೆಯವರು ಜಾಮೀನಿನ ಮೇಲೆ ಹೊರ ಬಂದಿದ್ದರು ಮತ್ತು ಇವರ ವಿರುದ್ದ ಅಪೀಲು ಸಲ್ಲಿಸಲಿರಲಿಲ್ಲ. ಇವರಿಬ್ಬರನ್ನು ರಕ್ಷಿಸಲು ಹಿಂದಿನ ದಿನ ಪುಣೆಯಲ್ಲಿ ಹಮ್ಮಿಕೊಳ್ಳಲಾದ ಎಲ್ಗಾರ್ ಪರಿಷದ್ ನಲ್ಲಿ ಮಾತನಾಡಿದ ಭಾಷಣಕಾರರು ಈ ಗಲಭೆಗೆ ಕಾರಣ ಎಂದು ಪುಣೆ ಪೋಲೀಸರು ’ಪಿತೂರಿ ಕಟ್ಟುಕತೆ’ಯನ್ನು ತೇಲಿ ಬಿಟ್ಟರು ಎಂದು ಎಐಎಫ್‌ಆರ್‌ಟಿಇ ಆರೋಪಿಸಿದೆ.

ಅರ್ಜಿಗೆ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಜಸ್ಟೀಸ್ ಕೋಲ್ಸೆ-ಪಾಟೀಲ್ ಮತ್ತು ಪಿ.ಬಿ.ಸಾವಂತ್ ಅವರು ಈ ಸಮಾವೇಶವನ್ನು ಸಂಘಟಿಸಿದ್ದರು. ಆದರೆ ಸಂಘಟಕರಿಗೂ ಮತ್ತು ನಿಷೇದಿತ ಮಾವೋವಾದಿಗಳಿಗೂ ಸಂಬಂದವಿರುವುದಕ್ಕೆ ನಮ್ಮ ಬಳಿ ಸಾಕ್ಷಿ ಇದೆ ಎಂದು ಪೋಲೀಸರು ವಾದಿಸಿ, ನಂತರ ಜೂನ್ ೨೦೧೮ರಿಂದ ಮಾನವ ಹಕ್ಕುಗಳ ಹೋರಾಟಗಾರರು, ನ್ಯಾಯವಾದಿಗಳನ್ನು ಮಾವೋವಾದಿಗಳ ಪರ ಒಲವುಳ್ಳವರು ಎಂದು ಆರೋಪಿಸಿ ಮತ್ತು ಇವರ ವಿರುದ್ದ ಕರಾಳ ’ಯುಎಪಿಎ’ ಶಾಸನ ಆಡಿಯಲ್ಲಿ ಬಂದಿಸಿದರು ಮತ್ತು ಇವರೆಲ್ಲಾ ಇಂದಿಗೂ ಬಂದನದಲ್ಲಿದ್ದಾರೆ ಎಂದಿದೆ.

ಫೆಬ್ರವರಿ ೨೦೧೯ರಲ್ಲಿ ಸಲ್ಲಿಸಲಾದ ಪೂರಕ ಚಾರ್ಜ್ ಶೀಟ್ ನಲ್ಲಿ ಪ್ರೊ. ಆನಂದ ತೇಲ್ತುಂಬ್ಡೆ ಅವರ ಹೆಸರನ್ನು ಸೇರಿಸಲಾಯಿತು. ಆದರೆ ತೇಲ್ತುಂಬ್ಡೆಯವರು ಎಲ್ಗಾರ್ ಪರಿಷದ್ ನ ಸಮಾವೇಶದಲ್ಲಿ ಭಾಗವಹಿಸಿರಲಿಲ್ಲ. ಆದರೆ ಈ ಮೊದಲು ಬಂದಿಸಿದ್ದವರ ಕಂಪ್ಯೂಟರ್ ನಲ್ಲಿ ಒಂದು ಪತ್ರವನ್ನು ಉಲ್ಲೇಖಿಸಿ ತೇಲ್ತುಂಬ್ಡೆಯವರ ವಿರುದ್ದ ಅದನ್ನೇ ಸಾಕ್ಷಿಯಾಗಿ ಮುಂದಿಟ್ಟರು. ಕಂಪ್ಯೂಟರ್ ನ ಹಾರ್ಡ್ ಡಿಸ್ಕ್ ಅನ್ನು ಪರೀಕ್ಷಿಸಿದ ಸೈಬರ್ ಫೋರೆನ್ಸಿಕ್ ಪರಿಣಿತರು ಅಲ್ಲಿ malware ಇರುವುದನ್ನು ತೋರಿಸಿ, ಇದು ದೂರದಿಂದಲೆ ಕಂಪ್ಯೂಟರ್ ಅನ್ನು ಅಕ್ರಮವಾಗಿ ಬಳಸಿಕೊಳ್ಳುವುದಕ್ಕೆ ಅನುಮತಿಸುತ್ತದೆ ಎಂದು ವಿವರಿಸಿದರು. ಆದರೆ ಮುಂಚೂಣಿ ತಂತ್ರಜ್ನಾನದ ಪರಿಣಿತರಾಗಿ ಪ್ರೊ. ತೇಲ್ತುಂಬ್ಡೆ ಯವರ ವೃತ್ತಿಪರ ಸಾಧನೆಗಳು ಇಂದಿಗೂ ಮುಖ್ಯವಾಗಿವೆ. ಭಾರತದಲ್ಲಿ ಮಾಹಿತಿ ತಂತ್ರಜ್ನಾವನ್ನು ಅಬಿವೃದ್ದಿಪಡಿಸಿದ ೨೦ ವೃತ್ತಿಪರರ ಪಟ್ಟಿಯಲ್ಲಿ ತೇಲ್ತುಂಬ್ಡೆಯವರೂ ಒಬ್ಬರು ಮತ್ತು ಇದನ್ನು ಡಾಟಾಕ್ವೆಸ್ಟ್ ಸಂಸ್ಥೆಯು ಸತತ ಮೂರು ವರ್ಷಗಳ ಕಾಲ ಮೌಲ್ಯಮಾಪನ ಮಾಡುತ್ತ ಬಂದಿದೆ ಎಂದು ಎಐಎಫ್‌ಆರ್‌ಟಿಇ ತನ್ನಅರ್ಜಿಯಲ್ಲಿ ಹೇಳಿದೆ.

ತೈಲ ಮತ್ತು ಅನಿಲ ವಲಯಗಳಲ್ಲಿ ಮೂರು ದಶಕಗಳ ಕಾಲ ನಿರಂತರವಾಗಿ ಸಂಶೋದನೆ ನಡೆಸಿಕೊಂಡು ಬಂದ ಮತ್ತು ಹೊಸದಾದ ಅವಿಷ್ಕಾರಗಳನ್ನು ಮಾಡಿದ, ವಿನ್ಯಾಸಗಳನ್ನು ರೂಪಿಸಿದ ತೇಲ್ತುಂಬ್ಡೆಯವರು ಗೌರವಾನ್ವಿತ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ ಎಂದಿರುವ ಎಐಎಫ್‌ಆರ್‌ಟಿಇ ಇದೆ ಕಂಪನಿಯಲ್ಲಿ ಸಿಇಓ ಆಗಿದ್ದ ತೇಲ್ತುಂಬ್ಡೆಯವರು ಉಪಾಂಗ ಸಂಸ್ಥೆಗಳಲ್ಲಿ ಸತತವಾಗಿ ಏಳು ವರ್ಷಗಳ ಕಾಲ ಸದಸ್ಯರಾಗಿದ್ದರು ಎಂದಿದೆ.

ಅರ್ಜಿಗೆ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಭೂರಹಿತ ಕೂಲಿ ಕಾರ್ಮಿಕರ ಕುಟುಂಬದಲ್ಲಿ ಜನಿಸಿದ ಆನಂದ್ ತೇಲ್ತುಂಬ್ಡೆಯವರು ಶೋಷಿತರು ಮತ್ತು ದಮನಿತರ ಪರವಾಗಿ ಹೋರಾಡುತ್ತಾ ಬಂದಿದ್ದಾರೆ, ಮಾನವ ಹಕ್ಕುಗಳ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ ಸಾಮಾಜಿಕ ನ್ಯಾಯದ ಪರವಾಗಿ ಅತ್ಯಂತ ಪ್ರಮುಖ ಚಿಂತಕರು. ಅವರು ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗಳನ್ನು ಮದುವೆಯಾಗಿದ್ದಾರೆ.

’ಎಐಎಫ್‌ಆರ್‌ಟಿಇ’ ಸಂಘಟನೆಯ ಮುಂದಾಳತ್ವದಲ್ಲಿರುವ, ಕಳೆದ ಹತ್ತು ವರ್ಷಗಳಿಂದ ಅದರ ಪ್ರಿಸಿಡಿಯಂ ಸದಸ್ಯರಾಗಿರುವ ತೇಲ್ತುಂಬ್ಡೆಯವರು ಉಚಿತ ಮತ್ತು ಕಡ್ಡಾಯ ನೆರೆಹೊರೆ ಶಾಲಾ ವ್ಯವಸ್ಥೆಯ ಪರವಾಗಿ, ತಾಯ್ನುಡಿ ಮಾದ್ಯಮದ ಪರವಾಗಿ ಸಂಘಟನೆ ಮಾಡಿದ್ದಾರೆ ಮತ್ತು ದೇಶದ ಅನೇಕ ಚಿಂತಕರು ಮತ್ತು ಹೋರಾಟಗಾರರನ್ನು ಈ ಸಂಘಟನೆಯಲ್ಲಿ ತೊಡಗಿಸಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆ ಸಾದಿಸಲು ಇದೊಂದೆ ಏಕೈಕ ಮಾರ್ಗ ಎಂದು ನಂಬಿದ್ದಾರೆ. ನಮ್ಮ ದೇಶದ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಪ್ರೊ. ಆನಂದ ತೇಲ್ತುಂಬ್ಡೆ ಮತ್ತು ಇತರರ ವಿರುದ್ದದ ಆರೋಪಗಳನ್ನು ಕೈಬಿಡಬೇಕು ಎಂದು ಮನವಿ ಮಾಡುತ್ತಿದ್ದೇವೆ ಎಂದು ಎಐಎಫ್‌ಆರ್‌ಟಿಇ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ಎಐಎಫ್‌ಆರ್‌ಟಿಇ ಸಹಿ ಆದ ಅರ್ಜಿಯನ್ನು ಭಾರತದ ರಾಷ್ಟ್ರಪತಿ, ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾದೀಶರು, ಪ್ರದಾನ ಮಂತ್ರಿಗಳು ಹಾಹೂ ಕೇಂದ್ರ ಗೃಹ ಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದೆ.

ಈ ವಾರದೊಳಗಡೆ ಸಾವಿರಾರು ಸಹಿ ಸಂಗ್ರಹಣೆ ಮಾಡಬೇಕಿದೆ ಎಂದು ಎಐಎಫ್‌ಆರ್‌ಟಿಇ ಪ್ರಕಟನೆ ತಿಳಿಸಿದೆ. ಅರ್ಜಿಯ ಕನ್ನಡ ಅವತರಿಣಿಕೆಯನ್ನು ಲಗತ್ತಿಸಿದ ಎಐಎಫ್‌ಆರ್‌ಟಿಇ ಮತ್ತು ಅದರ ಸಹ ಸಂಘಟನೆಗಳು ಈ ಅರ್ಜಿಯನ್ನು ಸ್ನೇಹಿತರು, ಪರಿಚಿತರೊಂದಿಗೆ, ಸಂಘಟನೆಗಳೊಂದಿಗೆ ಹಂಚಿಕೊಳ್ಳಬೇಕೆಂದು ಕೋರಿದೆ.

ಅರ್ಜಿಗೆ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...