Homeಕರ್ನಾಟಕಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ದೇಶದ ಹಲವು ನಗರಗಳು ಉಚಿತ ಪ್ರಯಾಣವನ್ನು ಘೋಷಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಪ್ರಯಾಣವು ಉಚಿತ ಮಾಡಬೇಕು ಎಂದು ಅರ್ಜಿ ಒತ್ತಾಯಿಸಿದೆ

- Advertisement -
- Advertisement -

ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಲೈಂಗಿಕ ಅಲ್ಪಸಂಖ್ಯಾತರಿಗೆ ಮತ್ತು ಹಿರಿಯ ನಾಗರಿಕರಿಗೆ ಬಿಎಂಟಿಸಿ ಬಸ್‌ಗಳ ಪ್ರಯಾಣ ಉಚಿತಗೊಳಿಸುವುದರೊಂದಿಗೆ, ಉಳಿದ ನಾಗರಿಕರಿಗೆ ಬಸ್ ದರಗಳನ್ನು ಕಡಿಮೆಗೊಳಿಸಲು ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ವಾರ್ಷಿಕವಾಗಿ ​1000 ಕೋಟಿ ರೂ​. ಹಂಚಿಕೆ ಮಾಡುವಂತೆ ಒತ್ತಾಯಿಸಿ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯು ಸಹಿ ಸಂಗ್ರಹ ಮಾಡುತ್ತಿದೆ. (ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ)

‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಅರ್ಜಿ ಚೇಂಜ್‌.ಆರ್ಗ್‌ನಲ್ಲಿ ಇದ್ದು, “ಬಸ್ ಟಿಕೆಟ್ ದರಗಳನ್ನು ಮಹತ್ತರವಾದ ಪ್ರಮಾಣದಲ್ಲಿ ಇಳಿಕೆ ಮಾಡಿದರೆ ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗುತ್ತದೆ. ಆರ್ಥಿಕ ಅವಕಾಶಗಳನ್ನು ಪಡೆದುಕೊಳ್ಳಲು ನೆರವಾಗಿ ಜೀವನ ಸುಧಾರಿಸುತ್ತದೆ. ಮಹಿಳೆಯರಿಗೆ, ಟ್ರಾನ್ಸ್ ಜೆಂಡರ್ ಸಮುದಾಯದವರಿಗೆ, ಹಿರಿಯ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣವನ್ನು ಉಚಿತಗೊಳಿಸುವುದರಿಂದ ಹೆಚ್ಚಿನ ಓಡಾಡುವ ಶಕ್ತಿ ಲಭಿಸುತ್ತದೆ” ಎಂದು ಅರ್ಜಿ ಹೇಳಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು 

“ಕರ್ನಾಟಕ ಸರ್ಕಾರ 2022-23ರ ಆಯವ್ಯಯದಲ್ಲಿ ಬಿಎಂಟಿಸಿಗೆ, ಬಸ್ ಟಿಕೆಟ್ ದರಗಳನ್ನು ಕಡಿಮೆಗೊಳಿಸಲು ಹಾಗೂ ಮಹಿಳೆಯರಿಗೆ ಬಸ್ ಪ್ರಯಾಣವನ್ನು ಉಚಿತವಾಗಿ ಲಭ್ಯಗೊಳಿಸಲು ಹಣವನ್ನು ಹಂಚಿಕೆ ಮಾಡಬೇಕು” ಎಂದು ಅರ್ಜಿ ಒತ್ತಾಯಿಸಿದೆ.

ದೇಶದ ಇತರ ನಗರಗಳಲ್ಲೂ ಬಸ್‌ಗಳ ದರಗಳು ಕಡಿಮೆಯಿದ್ದು, ಮಹಿಳೆಯರಿಗೆ ಅಲ್ಲಿನ ಸರ್ಕಾರ ಉಚಿತ ಪ್ರಯಾಣ ಘೋಷಿಸಿದೆ ಎಂದು ಅರ್ಜಿ ಉಲ್ಲೇಖಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಕೊಡಬೇಕು ಎಂದು ಒತ್ತಾಯಿಸಿದೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಬಿಎಂಟಿಸಿ ಬಸ್ಸುಗಳು ಬೆಂಗಳೂರು ನಗರದ ಜೀವನಾಡಿಯಾಗಿದೆ. ಆದರೆ ಬಿಎಂಟಿಸಿ ಬಸ್ ಟಿಕೆಟ್ ದರಗಳು ಭಾರತದ ಇತರೆ ಯಾವುದೇ ನಗರಗಳಲ್ಲಿರುವ ಬಸ್ ಟಿಕೆಟ್ ದರಗಳಿಂತಲೂ ಅತ್ಯಂತ ದುಬಾರಿಯಾಗಿದೆ ಎಂದು ಹೇಳಿರುವ ಅರ್ಜಿ ಹೇಳಿದೆ.

ಇದನ್ನೂ ಓದಿ:ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ 

“ಬಿಎಂಟಿಸಿ ಬಸ್ಸುಗಳು ಈ ಅತ್ಯಂತ ದುಬಾರಿ ಟಿಕೆಟ್ ದರಗಳು ಈಗಾಗಲೇ ಕಡಿಮೆಯಾಗಿರುವ ನಗರಬಡವರ ಆದಾಯಕ್ಕೆ ಕೊಳ್ಳಿ ಇಟ್ಟಿದೆ. ಅನೇಕ ಜನರು ಸಾರಿಗೆವೆಚ್ಚಗಳನ್ನು ಉಳಿಸುವುದಕ್ಕಾಗಿ ದೂರದವರೆಗೂ ನಡೆದುಕೊಂಡೇ ಹೋಗುವಂತಾಗಿದೆ. ಇಡೀ ಕುಟುಂಬದ ಸದಸ್ಯರು ಸಾರಿಗೆ ವೆಚ್ಚಗಳನ್ನುಭರಿಸುವುದು ಸಾಧ್ಯವಾಗದೇ ಇರುವ ಕಾರಣದಿಂದಾಗಿ ಆರೋಗ್ಯ ಅಥವಾ ತಮ್ಮ ಮಕ್ಕಳ ಪೌಷ್ಠಿಕತೆ ಹಾಗೂ ಶಿಕ್ಷಣದಂತಹ ಇತರೆ ವೆಚ್ಚಗಳನ್ನು ಅನಿವಾರ್ಯವಾಗಿ ಕಡಿತಗೊಳಿಸಬೇಕಾಗುತ್ತಿದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅರ್ಜಿಯು, “ಬಿಎಂಟಿಸಿ ಬಸ್ ಟಿಕೆಟ್ ದರಗಳನ್ನು ಸಾಮಾನ್ಯ ಜನರಿಗೆ ಅರ್ಧದಷ್ಟು ಕಡಿಮೆಗೊಳಿಸಬೇಕು.
ಮಹಿಳೆಯರು, ಮಂಗಳಮುಖಿಯರು ಹಾಗೂ ಹಿರಿಯ ನಾಗರಿಕರಿಗೆ ಬಿಎಂಟಿಸಿ ಪ್ರಯಾಣವನ್ನು ಉಚಿತಗೊಳಿಸಬೇಕು. ವಿದ್ಯಾರ್ಥಿ ಬಸ್ ಪಾಸುಗಳನ್ನು ಉಚಿತಗೊಳಿಸಿ; ವಿದ್ಯಾರ್ಥಿಗಳು ಪಾಸ್ ಬಳಸಿ ನಗರದಯಾವುದೇ ಭಾಗಕ್ಕೆ ಬೇಕಾದರೂ ಓಡಾಡುವಂತೆ ಮಾಡಬೇಕು. ಪ್ರಸ್ತುತ ಬಸ್ ಸೇವೆ ಸಮರ್ಪಕವಾಗಿ ಇಲ್ಲದಿರುವಂತಹ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಬಸ್‌ಗಳನ್ನು ಬಿಡುವುದು ಹಾಗೂ ಟ್ರಿಪ್‌ಗಳನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಸಂಚಾಲಕರಾದ ಅಮೃತರಾಜ್, “ನಮ್ಮ ಸಹಿ ಸಂಗ್ರಹಕ್ಕೆ ಉತ್ತಮವಾದ ಬೆಂಬಲ ಸಿಗುತ್ತಿದೆ. ಸುಮಾರು 20 ಸಾವಿರ ಸಹಿ ಸಂಗ್ರಹ ಮಾಡುವ ಉದ್ದೇಶವಿದೆ. ಜನರ ಸಹಿಯನ್ನು ಸಂಗ್ರಹಿಸಿ ಇನ್ನು ಎರಡು ದಿನಗಳ ನಂತರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...