Homeಕರ್ನಾಟಕಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ದೇಶದ ಹಲವು ನಗರಗಳು ಉಚಿತ ಪ್ರಯಾಣವನ್ನು ಘೋಷಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಪ್ರಯಾಣವು ಉಚಿತ ಮಾಡಬೇಕು ಎಂದು ಅರ್ಜಿ ಒತ್ತಾಯಿಸಿದೆ

- Advertisement -
- Advertisement -

ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಲೈಂಗಿಕ ಅಲ್ಪಸಂಖ್ಯಾತರಿಗೆ ಮತ್ತು ಹಿರಿಯ ನಾಗರಿಕರಿಗೆ ಬಿಎಂಟಿಸಿ ಬಸ್‌ಗಳ ಪ್ರಯಾಣ ಉಚಿತಗೊಳಿಸುವುದರೊಂದಿಗೆ, ಉಳಿದ ನಾಗರಿಕರಿಗೆ ಬಸ್ ದರಗಳನ್ನು ಕಡಿಮೆಗೊಳಿಸಲು ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ವಾರ್ಷಿಕವಾಗಿ ​1000 ಕೋಟಿ ರೂ​. ಹಂಚಿಕೆ ಮಾಡುವಂತೆ ಒತ್ತಾಯಿಸಿ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯು ಸಹಿ ಸಂಗ್ರಹ ಮಾಡುತ್ತಿದೆ. (ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ)

‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಅರ್ಜಿ ಚೇಂಜ್‌.ಆರ್ಗ್‌ನಲ್ಲಿ ಇದ್ದು, “ಬಸ್ ಟಿಕೆಟ್ ದರಗಳನ್ನು ಮಹತ್ತರವಾದ ಪ್ರಮಾಣದಲ್ಲಿ ಇಳಿಕೆ ಮಾಡಿದರೆ ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗುತ್ತದೆ. ಆರ್ಥಿಕ ಅವಕಾಶಗಳನ್ನು ಪಡೆದುಕೊಳ್ಳಲು ನೆರವಾಗಿ ಜೀವನ ಸುಧಾರಿಸುತ್ತದೆ. ಮಹಿಳೆಯರಿಗೆ, ಟ್ರಾನ್ಸ್ ಜೆಂಡರ್ ಸಮುದಾಯದವರಿಗೆ, ಹಿರಿಯ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣವನ್ನು ಉಚಿತಗೊಳಿಸುವುದರಿಂದ ಹೆಚ್ಚಿನ ಓಡಾಡುವ ಶಕ್ತಿ ಲಭಿಸುತ್ತದೆ” ಎಂದು ಅರ್ಜಿ ಹೇಳಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು 

“ಕರ್ನಾಟಕ ಸರ್ಕಾರ 2022-23ರ ಆಯವ್ಯಯದಲ್ಲಿ ಬಿಎಂಟಿಸಿಗೆ, ಬಸ್ ಟಿಕೆಟ್ ದರಗಳನ್ನು ಕಡಿಮೆಗೊಳಿಸಲು ಹಾಗೂ ಮಹಿಳೆಯರಿಗೆ ಬಸ್ ಪ್ರಯಾಣವನ್ನು ಉಚಿತವಾಗಿ ಲಭ್ಯಗೊಳಿಸಲು ಹಣವನ್ನು ಹಂಚಿಕೆ ಮಾಡಬೇಕು” ಎಂದು ಅರ್ಜಿ ಒತ್ತಾಯಿಸಿದೆ.

ದೇಶದ ಇತರ ನಗರಗಳಲ್ಲೂ ಬಸ್‌ಗಳ ದರಗಳು ಕಡಿಮೆಯಿದ್ದು, ಮಹಿಳೆಯರಿಗೆ ಅಲ್ಲಿನ ಸರ್ಕಾರ ಉಚಿತ ಪ್ರಯಾಣ ಘೋಷಿಸಿದೆ ಎಂದು ಅರ್ಜಿ ಉಲ್ಲೇಖಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಕೊಡಬೇಕು ಎಂದು ಒತ್ತಾಯಿಸಿದೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಬಿಎಂಟಿಸಿ ಬಸ್ಸುಗಳು ಬೆಂಗಳೂರು ನಗರದ ಜೀವನಾಡಿಯಾಗಿದೆ. ಆದರೆ ಬಿಎಂಟಿಸಿ ಬಸ್ ಟಿಕೆಟ್ ದರಗಳು ಭಾರತದ ಇತರೆ ಯಾವುದೇ ನಗರಗಳಲ್ಲಿರುವ ಬಸ್ ಟಿಕೆಟ್ ದರಗಳಿಂತಲೂ ಅತ್ಯಂತ ದುಬಾರಿಯಾಗಿದೆ ಎಂದು ಹೇಳಿರುವ ಅರ್ಜಿ ಹೇಳಿದೆ.

ಇದನ್ನೂ ಓದಿ:ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ 

“ಬಿಎಂಟಿಸಿ ಬಸ್ಸುಗಳು ಈ ಅತ್ಯಂತ ದುಬಾರಿ ಟಿಕೆಟ್ ದರಗಳು ಈಗಾಗಲೇ ಕಡಿಮೆಯಾಗಿರುವ ನಗರಬಡವರ ಆದಾಯಕ್ಕೆ ಕೊಳ್ಳಿ ಇಟ್ಟಿದೆ. ಅನೇಕ ಜನರು ಸಾರಿಗೆವೆಚ್ಚಗಳನ್ನು ಉಳಿಸುವುದಕ್ಕಾಗಿ ದೂರದವರೆಗೂ ನಡೆದುಕೊಂಡೇ ಹೋಗುವಂತಾಗಿದೆ. ಇಡೀ ಕುಟುಂಬದ ಸದಸ್ಯರು ಸಾರಿಗೆ ವೆಚ್ಚಗಳನ್ನುಭರಿಸುವುದು ಸಾಧ್ಯವಾಗದೇ ಇರುವ ಕಾರಣದಿಂದಾಗಿ ಆರೋಗ್ಯ ಅಥವಾ ತಮ್ಮ ಮಕ್ಕಳ ಪೌಷ್ಠಿಕತೆ ಹಾಗೂ ಶಿಕ್ಷಣದಂತಹ ಇತರೆ ವೆಚ್ಚಗಳನ್ನು ಅನಿವಾರ್ಯವಾಗಿ ಕಡಿತಗೊಳಿಸಬೇಕಾಗುತ್ತಿದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅರ್ಜಿಯು, “ಬಿಎಂಟಿಸಿ ಬಸ್ ಟಿಕೆಟ್ ದರಗಳನ್ನು ಸಾಮಾನ್ಯ ಜನರಿಗೆ ಅರ್ಧದಷ್ಟು ಕಡಿಮೆಗೊಳಿಸಬೇಕು.
ಮಹಿಳೆಯರು, ಮಂಗಳಮುಖಿಯರು ಹಾಗೂ ಹಿರಿಯ ನಾಗರಿಕರಿಗೆ ಬಿಎಂಟಿಸಿ ಪ್ರಯಾಣವನ್ನು ಉಚಿತಗೊಳಿಸಬೇಕು. ವಿದ್ಯಾರ್ಥಿ ಬಸ್ ಪಾಸುಗಳನ್ನು ಉಚಿತಗೊಳಿಸಿ; ವಿದ್ಯಾರ್ಥಿಗಳು ಪಾಸ್ ಬಳಸಿ ನಗರದಯಾವುದೇ ಭಾಗಕ್ಕೆ ಬೇಕಾದರೂ ಓಡಾಡುವಂತೆ ಮಾಡಬೇಕು. ಪ್ರಸ್ತುತ ಬಸ್ ಸೇವೆ ಸಮರ್ಪಕವಾಗಿ ಇಲ್ಲದಿರುವಂತಹ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಬಸ್‌ಗಳನ್ನು ಬಿಡುವುದು ಹಾಗೂ ಟ್ರಿಪ್‌ಗಳನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಸಂಚಾಲಕರಾದ ಅಮೃತರಾಜ್, “ನಮ್ಮ ಸಹಿ ಸಂಗ್ರಹಕ್ಕೆ ಉತ್ತಮವಾದ ಬೆಂಬಲ ಸಿಗುತ್ತಿದೆ. ಸುಮಾರು 20 ಸಾವಿರ ಸಹಿ ಸಂಗ್ರಹ ಮಾಡುವ ಉದ್ದೇಶವಿದೆ. ಜನರ ಸಹಿಯನ್ನು ಸಂಗ್ರಹಿಸಿ ಇನ್ನು ಎರಡು ದಿನಗಳ ನಂತರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...