Homeಕರ್ನಾಟಕಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ದೇಶದ ಹಲವು ನಗರಗಳು ಉಚಿತ ಪ್ರಯಾಣವನ್ನು ಘೋಷಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಪ್ರಯಾಣವು ಉಚಿತ ಮಾಡಬೇಕು ಎಂದು ಅರ್ಜಿ ಒತ್ತಾಯಿಸಿದೆ

- Advertisement -
- Advertisement -

ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಲೈಂಗಿಕ ಅಲ್ಪಸಂಖ್ಯಾತರಿಗೆ ಮತ್ತು ಹಿರಿಯ ನಾಗರಿಕರಿಗೆ ಬಿಎಂಟಿಸಿ ಬಸ್‌ಗಳ ಪ್ರಯಾಣ ಉಚಿತಗೊಳಿಸುವುದರೊಂದಿಗೆ, ಉಳಿದ ನಾಗರಿಕರಿಗೆ ಬಸ್ ದರಗಳನ್ನು ಕಡಿಮೆಗೊಳಿಸಲು ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ವಾರ್ಷಿಕವಾಗಿ ​1000 ಕೋಟಿ ರೂ​. ಹಂಚಿಕೆ ಮಾಡುವಂತೆ ಒತ್ತಾಯಿಸಿ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯು ಸಹಿ ಸಂಗ್ರಹ ಮಾಡುತ್ತಿದೆ. (ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ)

‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಅರ್ಜಿ ಚೇಂಜ್‌.ಆರ್ಗ್‌ನಲ್ಲಿ ಇದ್ದು, “ಬಸ್ ಟಿಕೆಟ್ ದರಗಳನ್ನು ಮಹತ್ತರವಾದ ಪ್ರಮಾಣದಲ್ಲಿ ಇಳಿಕೆ ಮಾಡಿದರೆ ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗುತ್ತದೆ. ಆರ್ಥಿಕ ಅವಕಾಶಗಳನ್ನು ಪಡೆದುಕೊಳ್ಳಲು ನೆರವಾಗಿ ಜೀವನ ಸುಧಾರಿಸುತ್ತದೆ. ಮಹಿಳೆಯರಿಗೆ, ಟ್ರಾನ್ಸ್ ಜೆಂಡರ್ ಸಮುದಾಯದವರಿಗೆ, ಹಿರಿಯ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣವನ್ನು ಉಚಿತಗೊಳಿಸುವುದರಿಂದ ಹೆಚ್ಚಿನ ಓಡಾಡುವ ಶಕ್ತಿ ಲಭಿಸುತ್ತದೆ” ಎಂದು ಅರ್ಜಿ ಹೇಳಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು 

“ಕರ್ನಾಟಕ ಸರ್ಕಾರ 2022-23ರ ಆಯವ್ಯಯದಲ್ಲಿ ಬಿಎಂಟಿಸಿಗೆ, ಬಸ್ ಟಿಕೆಟ್ ದರಗಳನ್ನು ಕಡಿಮೆಗೊಳಿಸಲು ಹಾಗೂ ಮಹಿಳೆಯರಿಗೆ ಬಸ್ ಪ್ರಯಾಣವನ್ನು ಉಚಿತವಾಗಿ ಲಭ್ಯಗೊಳಿಸಲು ಹಣವನ್ನು ಹಂಚಿಕೆ ಮಾಡಬೇಕು” ಎಂದು ಅರ್ಜಿ ಒತ್ತಾಯಿಸಿದೆ.

ದೇಶದ ಇತರ ನಗರಗಳಲ್ಲೂ ಬಸ್‌ಗಳ ದರಗಳು ಕಡಿಮೆಯಿದ್ದು, ಮಹಿಳೆಯರಿಗೆ ಅಲ್ಲಿನ ಸರ್ಕಾರ ಉಚಿತ ಪ್ರಯಾಣ ಘೋಷಿಸಿದೆ ಎಂದು ಅರ್ಜಿ ಉಲ್ಲೇಖಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಕೊಡಬೇಕು ಎಂದು ಒತ್ತಾಯಿಸಿದೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಬಿಎಂಟಿಸಿ ಬಸ್ಸುಗಳು ಬೆಂಗಳೂರು ನಗರದ ಜೀವನಾಡಿಯಾಗಿದೆ. ಆದರೆ ಬಿಎಂಟಿಸಿ ಬಸ್ ಟಿಕೆಟ್ ದರಗಳು ಭಾರತದ ಇತರೆ ಯಾವುದೇ ನಗರಗಳಲ್ಲಿರುವ ಬಸ್ ಟಿಕೆಟ್ ದರಗಳಿಂತಲೂ ಅತ್ಯಂತ ದುಬಾರಿಯಾಗಿದೆ ಎಂದು ಹೇಳಿರುವ ಅರ್ಜಿ ಹೇಳಿದೆ.

ಇದನ್ನೂ ಓದಿ:ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ 

“ಬಿಎಂಟಿಸಿ ಬಸ್ಸುಗಳು ಈ ಅತ್ಯಂತ ದುಬಾರಿ ಟಿಕೆಟ್ ದರಗಳು ಈಗಾಗಲೇ ಕಡಿಮೆಯಾಗಿರುವ ನಗರಬಡವರ ಆದಾಯಕ್ಕೆ ಕೊಳ್ಳಿ ಇಟ್ಟಿದೆ. ಅನೇಕ ಜನರು ಸಾರಿಗೆವೆಚ್ಚಗಳನ್ನು ಉಳಿಸುವುದಕ್ಕಾಗಿ ದೂರದವರೆಗೂ ನಡೆದುಕೊಂಡೇ ಹೋಗುವಂತಾಗಿದೆ. ಇಡೀ ಕುಟುಂಬದ ಸದಸ್ಯರು ಸಾರಿಗೆ ವೆಚ್ಚಗಳನ್ನುಭರಿಸುವುದು ಸಾಧ್ಯವಾಗದೇ ಇರುವ ಕಾರಣದಿಂದಾಗಿ ಆರೋಗ್ಯ ಅಥವಾ ತಮ್ಮ ಮಕ್ಕಳ ಪೌಷ್ಠಿಕತೆ ಹಾಗೂ ಶಿಕ್ಷಣದಂತಹ ಇತರೆ ವೆಚ್ಚಗಳನ್ನು ಅನಿವಾರ್ಯವಾಗಿ ಕಡಿತಗೊಳಿಸಬೇಕಾಗುತ್ತಿದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅರ್ಜಿಯು, “ಬಿಎಂಟಿಸಿ ಬಸ್ ಟಿಕೆಟ್ ದರಗಳನ್ನು ಸಾಮಾನ್ಯ ಜನರಿಗೆ ಅರ್ಧದಷ್ಟು ಕಡಿಮೆಗೊಳಿಸಬೇಕು.
ಮಹಿಳೆಯರು, ಮಂಗಳಮುಖಿಯರು ಹಾಗೂ ಹಿರಿಯ ನಾಗರಿಕರಿಗೆ ಬಿಎಂಟಿಸಿ ಪ್ರಯಾಣವನ್ನು ಉಚಿತಗೊಳಿಸಬೇಕು. ವಿದ್ಯಾರ್ಥಿ ಬಸ್ ಪಾಸುಗಳನ್ನು ಉಚಿತಗೊಳಿಸಿ; ವಿದ್ಯಾರ್ಥಿಗಳು ಪಾಸ್ ಬಳಸಿ ನಗರದಯಾವುದೇ ಭಾಗಕ್ಕೆ ಬೇಕಾದರೂ ಓಡಾಡುವಂತೆ ಮಾಡಬೇಕು. ಪ್ರಸ್ತುತ ಬಸ್ ಸೇವೆ ಸಮರ್ಪಕವಾಗಿ ಇಲ್ಲದಿರುವಂತಹ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಬಸ್‌ಗಳನ್ನು ಬಿಡುವುದು ಹಾಗೂ ಟ್ರಿಪ್‌ಗಳನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಸಂಚಾಲಕರಾದ ಅಮೃತರಾಜ್, “ನಮ್ಮ ಸಹಿ ಸಂಗ್ರಹಕ್ಕೆ ಉತ್ತಮವಾದ ಬೆಂಬಲ ಸಿಗುತ್ತಿದೆ. ಸುಮಾರು 20 ಸಾವಿರ ಸಹಿ ಸಂಗ್ರಹ ಮಾಡುವ ಉದ್ದೇಶವಿದೆ. ಜನರ ಸಹಿಯನ್ನು ಸಂಗ್ರಹಿಸಿ ಇನ್ನು ಎರಡು ದಿನಗಳ ನಂತರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...