Homeಕರ್ನಾಟಕಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ದೇಶದ ಹಲವು ನಗರಗಳು ಉಚಿತ ಪ್ರಯಾಣವನ್ನು ಘೋಷಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಪ್ರಯಾಣವು ಉಚಿತ ಮಾಡಬೇಕು ಎಂದು ಅರ್ಜಿ ಒತ್ತಾಯಿಸಿದೆ

- Advertisement -
- Advertisement -

ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಲೈಂಗಿಕ ಅಲ್ಪಸಂಖ್ಯಾತರಿಗೆ ಮತ್ತು ಹಿರಿಯ ನಾಗರಿಕರಿಗೆ ಬಿಎಂಟಿಸಿ ಬಸ್‌ಗಳ ಪ್ರಯಾಣ ಉಚಿತಗೊಳಿಸುವುದರೊಂದಿಗೆ, ಉಳಿದ ನಾಗರಿಕರಿಗೆ ಬಸ್ ದರಗಳನ್ನು ಕಡಿಮೆಗೊಳಿಸಲು ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ವಾರ್ಷಿಕವಾಗಿ ​1000 ಕೋಟಿ ರೂ​. ಹಂಚಿಕೆ ಮಾಡುವಂತೆ ಒತ್ತಾಯಿಸಿ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯು ಸಹಿ ಸಂಗ್ರಹ ಮಾಡುತ್ತಿದೆ. (ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ)

‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಅರ್ಜಿ ಚೇಂಜ್‌.ಆರ್ಗ್‌ನಲ್ಲಿ ಇದ್ದು, “ಬಸ್ ಟಿಕೆಟ್ ದರಗಳನ್ನು ಮಹತ್ತರವಾದ ಪ್ರಮಾಣದಲ್ಲಿ ಇಳಿಕೆ ಮಾಡಿದರೆ ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗುತ್ತದೆ. ಆರ್ಥಿಕ ಅವಕಾಶಗಳನ್ನು ಪಡೆದುಕೊಳ್ಳಲು ನೆರವಾಗಿ ಜೀವನ ಸುಧಾರಿಸುತ್ತದೆ. ಮಹಿಳೆಯರಿಗೆ, ಟ್ರಾನ್ಸ್ ಜೆಂಡರ್ ಸಮುದಾಯದವರಿಗೆ, ಹಿರಿಯ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣವನ್ನು ಉಚಿತಗೊಳಿಸುವುದರಿಂದ ಹೆಚ್ಚಿನ ಓಡಾಡುವ ಶಕ್ತಿ ಲಭಿಸುತ್ತದೆ” ಎಂದು ಅರ್ಜಿ ಹೇಳಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು 

“ಕರ್ನಾಟಕ ಸರ್ಕಾರ 2022-23ರ ಆಯವ್ಯಯದಲ್ಲಿ ಬಿಎಂಟಿಸಿಗೆ, ಬಸ್ ಟಿಕೆಟ್ ದರಗಳನ್ನು ಕಡಿಮೆಗೊಳಿಸಲು ಹಾಗೂ ಮಹಿಳೆಯರಿಗೆ ಬಸ್ ಪ್ರಯಾಣವನ್ನು ಉಚಿತವಾಗಿ ಲಭ್ಯಗೊಳಿಸಲು ಹಣವನ್ನು ಹಂಚಿಕೆ ಮಾಡಬೇಕು” ಎಂದು ಅರ್ಜಿ ಒತ್ತಾಯಿಸಿದೆ.

ದೇಶದ ಇತರ ನಗರಗಳಲ್ಲೂ ಬಸ್‌ಗಳ ದರಗಳು ಕಡಿಮೆಯಿದ್ದು, ಮಹಿಳೆಯರಿಗೆ ಅಲ್ಲಿನ ಸರ್ಕಾರ ಉಚಿತ ಪ್ರಯಾಣ ಘೋಷಿಸಿದೆ ಎಂದು ಅರ್ಜಿ ಉಲ್ಲೇಖಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಕೊಡಬೇಕು ಎಂದು ಒತ್ತಾಯಿಸಿದೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಬಿಎಂಟಿಸಿ ಬಸ್ಸುಗಳು ಬೆಂಗಳೂರು ನಗರದ ಜೀವನಾಡಿಯಾಗಿದೆ. ಆದರೆ ಬಿಎಂಟಿಸಿ ಬಸ್ ಟಿಕೆಟ್ ದರಗಳು ಭಾರತದ ಇತರೆ ಯಾವುದೇ ನಗರಗಳಲ್ಲಿರುವ ಬಸ್ ಟಿಕೆಟ್ ದರಗಳಿಂತಲೂ ಅತ್ಯಂತ ದುಬಾರಿಯಾಗಿದೆ ಎಂದು ಹೇಳಿರುವ ಅರ್ಜಿ ಹೇಳಿದೆ.

ಇದನ್ನೂ ಓದಿ:ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ 

“ಬಿಎಂಟಿಸಿ ಬಸ್ಸುಗಳು ಈ ಅತ್ಯಂತ ದುಬಾರಿ ಟಿಕೆಟ್ ದರಗಳು ಈಗಾಗಲೇ ಕಡಿಮೆಯಾಗಿರುವ ನಗರಬಡವರ ಆದಾಯಕ್ಕೆ ಕೊಳ್ಳಿ ಇಟ್ಟಿದೆ. ಅನೇಕ ಜನರು ಸಾರಿಗೆವೆಚ್ಚಗಳನ್ನು ಉಳಿಸುವುದಕ್ಕಾಗಿ ದೂರದವರೆಗೂ ನಡೆದುಕೊಂಡೇ ಹೋಗುವಂತಾಗಿದೆ. ಇಡೀ ಕುಟುಂಬದ ಸದಸ್ಯರು ಸಾರಿಗೆ ವೆಚ್ಚಗಳನ್ನುಭರಿಸುವುದು ಸಾಧ್ಯವಾಗದೇ ಇರುವ ಕಾರಣದಿಂದಾಗಿ ಆರೋಗ್ಯ ಅಥವಾ ತಮ್ಮ ಮಕ್ಕಳ ಪೌಷ್ಠಿಕತೆ ಹಾಗೂ ಶಿಕ್ಷಣದಂತಹ ಇತರೆ ವೆಚ್ಚಗಳನ್ನು ಅನಿವಾರ್ಯವಾಗಿ ಕಡಿತಗೊಳಿಸಬೇಕಾಗುತ್ತಿದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅರ್ಜಿಯು, “ಬಿಎಂಟಿಸಿ ಬಸ್ ಟಿಕೆಟ್ ದರಗಳನ್ನು ಸಾಮಾನ್ಯ ಜನರಿಗೆ ಅರ್ಧದಷ್ಟು ಕಡಿಮೆಗೊಳಿಸಬೇಕು.
ಮಹಿಳೆಯರು, ಮಂಗಳಮುಖಿಯರು ಹಾಗೂ ಹಿರಿಯ ನಾಗರಿಕರಿಗೆ ಬಿಎಂಟಿಸಿ ಪ್ರಯಾಣವನ್ನು ಉಚಿತಗೊಳಿಸಬೇಕು. ವಿದ್ಯಾರ್ಥಿ ಬಸ್ ಪಾಸುಗಳನ್ನು ಉಚಿತಗೊಳಿಸಿ; ವಿದ್ಯಾರ್ಥಿಗಳು ಪಾಸ್ ಬಳಸಿ ನಗರದಯಾವುದೇ ಭಾಗಕ್ಕೆ ಬೇಕಾದರೂ ಓಡಾಡುವಂತೆ ಮಾಡಬೇಕು. ಪ್ರಸ್ತುತ ಬಸ್ ಸೇವೆ ಸಮರ್ಪಕವಾಗಿ ಇಲ್ಲದಿರುವಂತಹ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಬಸ್‌ಗಳನ್ನು ಬಿಡುವುದು ಹಾಗೂ ಟ್ರಿಪ್‌ಗಳನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಸಂಚಾಲಕರಾದ ಅಮೃತರಾಜ್, “ನಮ್ಮ ಸಹಿ ಸಂಗ್ರಹಕ್ಕೆ ಉತ್ತಮವಾದ ಬೆಂಬಲ ಸಿಗುತ್ತಿದೆ. ಸುಮಾರು 20 ಸಾವಿರ ಸಹಿ ಸಂಗ್ರಹ ಮಾಡುವ ಉದ್ದೇಶವಿದೆ. ಜನರ ಸಹಿಯನ್ನು ಸಂಗ್ರಹಿಸಿ ಇನ್ನು ಎರಡು ದಿನಗಳ ನಂತರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...