ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಲೈಂಗಿಕ ಅಲ್ಪಸಂಖ್ಯಾತರಿಗೆ ಮತ್ತು ಹಿರಿಯ ನಾಗರಿಕರಿಗೆ ಬಿಎಂಟಿಸಿ ಬಸ್ಗಳ ಪ್ರಯಾಣ ಉಚಿತಗೊಳಿಸುವುದರೊಂದಿಗೆ, ಉಳಿದ ನಾಗರಿಕರಿಗೆ ಬಸ್ ದರಗಳನ್ನು ಕಡಿಮೆಗೊಳಿಸಲು ರಾಜ್ಯ ಸರ್ಕಾರವು ಬಜೆಟ್ನಲ್ಲಿ ವಾರ್ಷಿಕವಾಗಿ 1000 ಕೋಟಿ ರೂ. ಹಂಚಿಕೆ ಮಾಡುವಂತೆ ಒತ್ತಾಯಿಸಿ ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯು ಸಹಿ ಸಂಗ್ರಹ ಮಾಡುತ್ತಿದೆ. (ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ)
‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯ ಅರ್ಜಿ ಚೇಂಜ್.ಆರ್ಗ್ನಲ್ಲಿ ಇದ್ದು, “ಬಸ್ ಟಿಕೆಟ್ ದರಗಳನ್ನು ಮಹತ್ತರವಾದ ಪ್ರಮಾಣದಲ್ಲಿ ಇಳಿಕೆ ಮಾಡಿದರೆ ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗುತ್ತದೆ. ಆರ್ಥಿಕ ಅವಕಾಶಗಳನ್ನು ಪಡೆದುಕೊಳ್ಳಲು ನೆರವಾಗಿ ಜೀವನ ಸುಧಾರಿಸುತ್ತದೆ. ಮಹಿಳೆಯರಿಗೆ, ಟ್ರಾನ್ಸ್ ಜೆಂಡರ್ ಸಮುದಾಯದವರಿಗೆ, ಹಿರಿಯ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣವನ್ನು ಉಚಿತಗೊಳಿಸುವುದರಿಂದ ಹೆಚ್ಚಿನ ಓಡಾಡುವ ಶಕ್ತಿ ಲಭಿಸುತ್ತದೆ” ಎಂದು ಅರ್ಜಿ ಹೇಳಿದೆ.
ಇದನ್ನೂ ಓದಿ: ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್: ದೂರು, ಪ್ರತಿದೂರು ದಾಖಲು
“ಕರ್ನಾಟಕ ಸರ್ಕಾರ 2022-23ರ ಆಯವ್ಯಯದಲ್ಲಿ ಬಿಎಂಟಿಸಿಗೆ, ಬಸ್ ಟಿಕೆಟ್ ದರಗಳನ್ನು ಕಡಿಮೆಗೊಳಿಸಲು ಹಾಗೂ ಮಹಿಳೆಯರಿಗೆ ಬಸ್ ಪ್ರಯಾಣವನ್ನು ಉಚಿತವಾಗಿ ಲಭ್ಯಗೊಳಿಸಲು ಹಣವನ್ನು ಹಂಚಿಕೆ ಮಾಡಬೇಕು” ಎಂದು ಅರ್ಜಿ ಒತ್ತಾಯಿಸಿದೆ.
ದೇಶದ ಇತರ ನಗರಗಳಲ್ಲೂ ಬಸ್ಗಳ ದರಗಳು ಕಡಿಮೆಯಿದ್ದು, ಮಹಿಳೆಯರಿಗೆ ಅಲ್ಲಿನ ಸರ್ಕಾರ ಉಚಿತ ಪ್ರಯಾಣ ಘೋಷಿಸಿದೆ ಎಂದು ಅರ್ಜಿ ಉಲ್ಲೇಖಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಕೊಡಬೇಕು ಎಂದು ಒತ್ತಾಯಿಸಿದೆ.
ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಬಿಎಂಟಿಸಿ ಬಸ್ಸುಗಳು ಬೆಂಗಳೂರು ನಗರದ ಜೀವನಾಡಿಯಾಗಿದೆ. ಆದರೆ ಬಿಎಂಟಿಸಿ ಬಸ್ ಟಿಕೆಟ್ ದರಗಳು ಭಾರತದ ಇತರೆ ಯಾವುದೇ ನಗರಗಳಲ್ಲಿರುವ ಬಸ್ ಟಿಕೆಟ್ ದರಗಳಿಂತಲೂ ಅತ್ಯಂತ ದುಬಾರಿಯಾಗಿದೆ ಎಂದು ಹೇಳಿರುವ ಅರ್ಜಿ ಹೇಳಿದೆ.
ಇದನ್ನೂ ಓದಿ:ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ
“ಬಿಎಂಟಿಸಿ ಬಸ್ಸುಗಳು ಈ ಅತ್ಯಂತ ದುಬಾರಿ ಟಿಕೆಟ್ ದರಗಳು ಈಗಾಗಲೇ ಕಡಿಮೆಯಾಗಿರುವ ನಗರಬಡವರ ಆದಾಯಕ್ಕೆ ಕೊಳ್ಳಿ ಇಟ್ಟಿದೆ. ಅನೇಕ ಜನರು ಸಾರಿಗೆವೆಚ್ಚಗಳನ್ನು ಉಳಿಸುವುದಕ್ಕಾಗಿ ದೂರದವರೆಗೂ ನಡೆದುಕೊಂಡೇ ಹೋಗುವಂತಾಗಿದೆ. ಇಡೀ ಕುಟುಂಬದ ಸದಸ್ಯರು ಸಾರಿಗೆ ವೆಚ್ಚಗಳನ್ನುಭರಿಸುವುದು ಸಾಧ್ಯವಾಗದೇ ಇರುವ ಕಾರಣದಿಂದಾಗಿ ಆರೋಗ್ಯ ಅಥವಾ ತಮ್ಮ ಮಕ್ಕಳ ಪೌಷ್ಠಿಕತೆ ಹಾಗೂ ಶಿಕ್ಷಣದಂತಹ ಇತರೆ ವೆಚ್ಚಗಳನ್ನು ಅನಿವಾರ್ಯವಾಗಿ ಕಡಿತಗೊಳಿಸಬೇಕಾಗುತ್ತಿದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಅರ್ಜಿಯು, “ಬಿಎಂಟಿಸಿ ಬಸ್ ಟಿಕೆಟ್ ದರಗಳನ್ನು ಸಾಮಾನ್ಯ ಜನರಿಗೆ ಅರ್ಧದಷ್ಟು ಕಡಿಮೆಗೊಳಿಸಬೇಕು.
ಮಹಿಳೆಯರು, ಮಂಗಳಮುಖಿಯರು ಹಾಗೂ ಹಿರಿಯ ನಾಗರಿಕರಿಗೆ ಬಿಎಂಟಿಸಿ ಪ್ರಯಾಣವನ್ನು ಉಚಿತಗೊಳಿಸಬೇಕು. ವಿದ್ಯಾರ್ಥಿ ಬಸ್ ಪಾಸುಗಳನ್ನು ಉಚಿತಗೊಳಿಸಿ; ವಿದ್ಯಾರ್ಥಿಗಳು ಪಾಸ್ ಬಳಸಿ ನಗರದಯಾವುದೇ ಭಾಗಕ್ಕೆ ಬೇಕಾದರೂ ಓಡಾಡುವಂತೆ ಮಾಡಬೇಕು. ಪ್ರಸ್ತುತ ಬಸ್ ಸೇವೆ ಸಮರ್ಪಕವಾಗಿ ಇಲ್ಲದಿರುವಂತಹ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಬಸ್ಗಳನ್ನು ಬಿಡುವುದು ಹಾಗೂ ಟ್ರಿಪ್ಗಳನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದೆ.
ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯ ಸಂಚಾಲಕರಾದ ಅಮೃತರಾಜ್, “ನಮ್ಮ ಸಹಿ ಸಂಗ್ರಹಕ್ಕೆ ಉತ್ತಮವಾದ ಬೆಂಬಲ ಸಿಗುತ್ತಿದೆ. ಸುಮಾರು 20 ಸಾವಿರ ಸಹಿ ಸಂಗ್ರಹ ಮಾಡುವ ಉದ್ದೇಶವಿದೆ. ಜನರ ಸಹಿಯನ್ನು ಸಂಗ್ರಹಿಸಿ ಇನ್ನು ಎರಡು ದಿನಗಳ ನಂತರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.
ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ
Please include transgender in this