Homeಕರ್ನಾಟಕಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ದೇಶದ ಹಲವು ನಗರಗಳು ಉಚಿತ ಪ್ರಯಾಣವನ್ನು ಘೋಷಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಪ್ರಯಾಣವು ಉಚಿತ ಮಾಡಬೇಕು ಎಂದು ಅರ್ಜಿ ಒತ್ತಾಯಿಸಿದೆ

- Advertisement -
- Advertisement -

ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಲೈಂಗಿಕ ಅಲ್ಪಸಂಖ್ಯಾತರಿಗೆ ಮತ್ತು ಹಿರಿಯ ನಾಗರಿಕರಿಗೆ ಬಿಎಂಟಿಸಿ ಬಸ್‌ಗಳ ಪ್ರಯಾಣ ಉಚಿತಗೊಳಿಸುವುದರೊಂದಿಗೆ, ಉಳಿದ ನಾಗರಿಕರಿಗೆ ಬಸ್ ದರಗಳನ್ನು ಕಡಿಮೆಗೊಳಿಸಲು ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ವಾರ್ಷಿಕವಾಗಿ ​1000 ಕೋಟಿ ರೂ​. ಹಂಚಿಕೆ ಮಾಡುವಂತೆ ಒತ್ತಾಯಿಸಿ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯು ಸಹಿ ಸಂಗ್ರಹ ಮಾಡುತ್ತಿದೆ. (ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ)

‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಅರ್ಜಿ ಚೇಂಜ್‌.ಆರ್ಗ್‌ನಲ್ಲಿ ಇದ್ದು, “ಬಸ್ ಟಿಕೆಟ್ ದರಗಳನ್ನು ಮಹತ್ತರವಾದ ಪ್ರಮಾಣದಲ್ಲಿ ಇಳಿಕೆ ಮಾಡಿದರೆ ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗುತ್ತದೆ. ಆರ್ಥಿಕ ಅವಕಾಶಗಳನ್ನು ಪಡೆದುಕೊಳ್ಳಲು ನೆರವಾಗಿ ಜೀವನ ಸುಧಾರಿಸುತ್ತದೆ. ಮಹಿಳೆಯರಿಗೆ, ಟ್ರಾನ್ಸ್ ಜೆಂಡರ್ ಸಮುದಾಯದವರಿಗೆ, ಹಿರಿಯ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣವನ್ನು ಉಚಿತಗೊಳಿಸುವುದರಿಂದ ಹೆಚ್ಚಿನ ಓಡಾಡುವ ಶಕ್ತಿ ಲಭಿಸುತ್ತದೆ” ಎಂದು ಅರ್ಜಿ ಹೇಳಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು 

“ಕರ್ನಾಟಕ ಸರ್ಕಾರ 2022-23ರ ಆಯವ್ಯಯದಲ್ಲಿ ಬಿಎಂಟಿಸಿಗೆ, ಬಸ್ ಟಿಕೆಟ್ ದರಗಳನ್ನು ಕಡಿಮೆಗೊಳಿಸಲು ಹಾಗೂ ಮಹಿಳೆಯರಿಗೆ ಬಸ್ ಪ್ರಯಾಣವನ್ನು ಉಚಿತವಾಗಿ ಲಭ್ಯಗೊಳಿಸಲು ಹಣವನ್ನು ಹಂಚಿಕೆ ಮಾಡಬೇಕು” ಎಂದು ಅರ್ಜಿ ಒತ್ತಾಯಿಸಿದೆ.

ದೇಶದ ಇತರ ನಗರಗಳಲ್ಲೂ ಬಸ್‌ಗಳ ದರಗಳು ಕಡಿಮೆಯಿದ್ದು, ಮಹಿಳೆಯರಿಗೆ ಅಲ್ಲಿನ ಸರ್ಕಾರ ಉಚಿತ ಪ್ರಯಾಣ ಘೋಷಿಸಿದೆ ಎಂದು ಅರ್ಜಿ ಉಲ್ಲೇಖಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಕೊಡಬೇಕು ಎಂದು ಒತ್ತಾಯಿಸಿದೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಬಿಎಂಟಿಸಿ ಬಸ್ಸುಗಳು ಬೆಂಗಳೂರು ನಗರದ ಜೀವನಾಡಿಯಾಗಿದೆ. ಆದರೆ ಬಿಎಂಟಿಸಿ ಬಸ್ ಟಿಕೆಟ್ ದರಗಳು ಭಾರತದ ಇತರೆ ಯಾವುದೇ ನಗರಗಳಲ್ಲಿರುವ ಬಸ್ ಟಿಕೆಟ್ ದರಗಳಿಂತಲೂ ಅತ್ಯಂತ ದುಬಾರಿಯಾಗಿದೆ ಎಂದು ಹೇಳಿರುವ ಅರ್ಜಿ ಹೇಳಿದೆ.

ಇದನ್ನೂ ಓದಿ:ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ 

“ಬಿಎಂಟಿಸಿ ಬಸ್ಸುಗಳು ಈ ಅತ್ಯಂತ ದುಬಾರಿ ಟಿಕೆಟ್ ದರಗಳು ಈಗಾಗಲೇ ಕಡಿಮೆಯಾಗಿರುವ ನಗರಬಡವರ ಆದಾಯಕ್ಕೆ ಕೊಳ್ಳಿ ಇಟ್ಟಿದೆ. ಅನೇಕ ಜನರು ಸಾರಿಗೆವೆಚ್ಚಗಳನ್ನು ಉಳಿಸುವುದಕ್ಕಾಗಿ ದೂರದವರೆಗೂ ನಡೆದುಕೊಂಡೇ ಹೋಗುವಂತಾಗಿದೆ. ಇಡೀ ಕುಟುಂಬದ ಸದಸ್ಯರು ಸಾರಿಗೆ ವೆಚ್ಚಗಳನ್ನುಭರಿಸುವುದು ಸಾಧ್ಯವಾಗದೇ ಇರುವ ಕಾರಣದಿಂದಾಗಿ ಆರೋಗ್ಯ ಅಥವಾ ತಮ್ಮ ಮಕ್ಕಳ ಪೌಷ್ಠಿಕತೆ ಹಾಗೂ ಶಿಕ್ಷಣದಂತಹ ಇತರೆ ವೆಚ್ಚಗಳನ್ನು ಅನಿವಾರ್ಯವಾಗಿ ಕಡಿತಗೊಳಿಸಬೇಕಾಗುತ್ತಿದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅರ್ಜಿಯು, “ಬಿಎಂಟಿಸಿ ಬಸ್ ಟಿಕೆಟ್ ದರಗಳನ್ನು ಸಾಮಾನ್ಯ ಜನರಿಗೆ ಅರ್ಧದಷ್ಟು ಕಡಿಮೆಗೊಳಿಸಬೇಕು.
ಮಹಿಳೆಯರು, ಮಂಗಳಮುಖಿಯರು ಹಾಗೂ ಹಿರಿಯ ನಾಗರಿಕರಿಗೆ ಬಿಎಂಟಿಸಿ ಪ್ರಯಾಣವನ್ನು ಉಚಿತಗೊಳಿಸಬೇಕು. ವಿದ್ಯಾರ್ಥಿ ಬಸ್ ಪಾಸುಗಳನ್ನು ಉಚಿತಗೊಳಿಸಿ; ವಿದ್ಯಾರ್ಥಿಗಳು ಪಾಸ್ ಬಳಸಿ ನಗರದಯಾವುದೇ ಭಾಗಕ್ಕೆ ಬೇಕಾದರೂ ಓಡಾಡುವಂತೆ ಮಾಡಬೇಕು. ಪ್ರಸ್ತುತ ಬಸ್ ಸೇವೆ ಸಮರ್ಪಕವಾಗಿ ಇಲ್ಲದಿರುವಂತಹ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಬಸ್‌ಗಳನ್ನು ಬಿಡುವುದು ಹಾಗೂ ಟ್ರಿಪ್‌ಗಳನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಸಂಚಾಲಕರಾದ ಅಮೃತರಾಜ್, “ನಮ್ಮ ಸಹಿ ಸಂಗ್ರಹಕ್ಕೆ ಉತ್ತಮವಾದ ಬೆಂಬಲ ಸಿಗುತ್ತಿದೆ. ಸುಮಾರು 20 ಸಾವಿರ ಸಹಿ ಸಂಗ್ರಹ ಮಾಡುವ ಉದ್ದೇಶವಿದೆ. ಜನರ ಸಹಿಯನ್ನು ಸಂಗ್ರಹಿಸಿ ಇನ್ನು ಎರಡು ದಿನಗಳ ನಂತರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...