Homeಕರ್ನಾಟಕಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ದೇಶದ ಹಲವು ನಗರಗಳು ಉಚಿತ ಪ್ರಯಾಣವನ್ನು ಘೋಷಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಪ್ರಯಾಣವು ಉಚಿತ ಮಾಡಬೇಕು ಎಂದು ಅರ್ಜಿ ಒತ್ತಾಯಿಸಿದೆ

- Advertisement -
- Advertisement -

ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಲೈಂಗಿಕ ಅಲ್ಪಸಂಖ್ಯಾತರಿಗೆ ಮತ್ತು ಹಿರಿಯ ನಾಗರಿಕರಿಗೆ ಬಿಎಂಟಿಸಿ ಬಸ್‌ಗಳ ಪ್ರಯಾಣ ಉಚಿತಗೊಳಿಸುವುದರೊಂದಿಗೆ, ಉಳಿದ ನಾಗರಿಕರಿಗೆ ಬಸ್ ದರಗಳನ್ನು ಕಡಿಮೆಗೊಳಿಸಲು ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ವಾರ್ಷಿಕವಾಗಿ ​1000 ಕೋಟಿ ರೂ​. ಹಂಚಿಕೆ ಮಾಡುವಂತೆ ಒತ್ತಾಯಿಸಿ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯು ಸಹಿ ಸಂಗ್ರಹ ಮಾಡುತ್ತಿದೆ. (ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ)

‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಅರ್ಜಿ ಚೇಂಜ್‌.ಆರ್ಗ್‌ನಲ್ಲಿ ಇದ್ದು, “ಬಸ್ ಟಿಕೆಟ್ ದರಗಳನ್ನು ಮಹತ್ತರವಾದ ಪ್ರಮಾಣದಲ್ಲಿ ಇಳಿಕೆ ಮಾಡಿದರೆ ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗುತ್ತದೆ. ಆರ್ಥಿಕ ಅವಕಾಶಗಳನ್ನು ಪಡೆದುಕೊಳ್ಳಲು ನೆರವಾಗಿ ಜೀವನ ಸುಧಾರಿಸುತ್ತದೆ. ಮಹಿಳೆಯರಿಗೆ, ಟ್ರಾನ್ಸ್ ಜೆಂಡರ್ ಸಮುದಾಯದವರಿಗೆ, ಹಿರಿಯ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣವನ್ನು ಉಚಿತಗೊಳಿಸುವುದರಿಂದ ಹೆಚ್ಚಿನ ಓಡಾಡುವ ಶಕ್ತಿ ಲಭಿಸುತ್ತದೆ” ಎಂದು ಅರ್ಜಿ ಹೇಳಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು 

“ಕರ್ನಾಟಕ ಸರ್ಕಾರ 2022-23ರ ಆಯವ್ಯಯದಲ್ಲಿ ಬಿಎಂಟಿಸಿಗೆ, ಬಸ್ ಟಿಕೆಟ್ ದರಗಳನ್ನು ಕಡಿಮೆಗೊಳಿಸಲು ಹಾಗೂ ಮಹಿಳೆಯರಿಗೆ ಬಸ್ ಪ್ರಯಾಣವನ್ನು ಉಚಿತವಾಗಿ ಲಭ್ಯಗೊಳಿಸಲು ಹಣವನ್ನು ಹಂಚಿಕೆ ಮಾಡಬೇಕು” ಎಂದು ಅರ್ಜಿ ಒತ್ತಾಯಿಸಿದೆ.

ದೇಶದ ಇತರ ನಗರಗಳಲ್ಲೂ ಬಸ್‌ಗಳ ದರಗಳು ಕಡಿಮೆಯಿದ್ದು, ಮಹಿಳೆಯರಿಗೆ ಅಲ್ಲಿನ ಸರ್ಕಾರ ಉಚಿತ ಪ್ರಯಾಣ ಘೋಷಿಸಿದೆ ಎಂದು ಅರ್ಜಿ ಉಲ್ಲೇಖಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಕೊಡಬೇಕು ಎಂದು ಒತ್ತಾಯಿಸಿದೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಬಿಎಂಟಿಸಿ ಬಸ್ಸುಗಳು ಬೆಂಗಳೂರು ನಗರದ ಜೀವನಾಡಿಯಾಗಿದೆ. ಆದರೆ ಬಿಎಂಟಿಸಿ ಬಸ್ ಟಿಕೆಟ್ ದರಗಳು ಭಾರತದ ಇತರೆ ಯಾವುದೇ ನಗರಗಳಲ್ಲಿರುವ ಬಸ್ ಟಿಕೆಟ್ ದರಗಳಿಂತಲೂ ಅತ್ಯಂತ ದುಬಾರಿಯಾಗಿದೆ ಎಂದು ಹೇಳಿರುವ ಅರ್ಜಿ ಹೇಳಿದೆ.

ಇದನ್ನೂ ಓದಿ:ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ 

“ಬಿಎಂಟಿಸಿ ಬಸ್ಸುಗಳು ಈ ಅತ್ಯಂತ ದುಬಾರಿ ಟಿಕೆಟ್ ದರಗಳು ಈಗಾಗಲೇ ಕಡಿಮೆಯಾಗಿರುವ ನಗರಬಡವರ ಆದಾಯಕ್ಕೆ ಕೊಳ್ಳಿ ಇಟ್ಟಿದೆ. ಅನೇಕ ಜನರು ಸಾರಿಗೆವೆಚ್ಚಗಳನ್ನು ಉಳಿಸುವುದಕ್ಕಾಗಿ ದೂರದವರೆಗೂ ನಡೆದುಕೊಂಡೇ ಹೋಗುವಂತಾಗಿದೆ. ಇಡೀ ಕುಟುಂಬದ ಸದಸ್ಯರು ಸಾರಿಗೆ ವೆಚ್ಚಗಳನ್ನುಭರಿಸುವುದು ಸಾಧ್ಯವಾಗದೇ ಇರುವ ಕಾರಣದಿಂದಾಗಿ ಆರೋಗ್ಯ ಅಥವಾ ತಮ್ಮ ಮಕ್ಕಳ ಪೌಷ್ಠಿಕತೆ ಹಾಗೂ ಶಿಕ್ಷಣದಂತಹ ಇತರೆ ವೆಚ್ಚಗಳನ್ನು ಅನಿವಾರ್ಯವಾಗಿ ಕಡಿತಗೊಳಿಸಬೇಕಾಗುತ್ತಿದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅರ್ಜಿಯು, “ಬಿಎಂಟಿಸಿ ಬಸ್ ಟಿಕೆಟ್ ದರಗಳನ್ನು ಸಾಮಾನ್ಯ ಜನರಿಗೆ ಅರ್ಧದಷ್ಟು ಕಡಿಮೆಗೊಳಿಸಬೇಕು.
ಮಹಿಳೆಯರು, ಮಂಗಳಮುಖಿಯರು ಹಾಗೂ ಹಿರಿಯ ನಾಗರಿಕರಿಗೆ ಬಿಎಂಟಿಸಿ ಪ್ರಯಾಣವನ್ನು ಉಚಿತಗೊಳಿಸಬೇಕು. ವಿದ್ಯಾರ್ಥಿ ಬಸ್ ಪಾಸುಗಳನ್ನು ಉಚಿತಗೊಳಿಸಿ; ವಿದ್ಯಾರ್ಥಿಗಳು ಪಾಸ್ ಬಳಸಿ ನಗರದಯಾವುದೇ ಭಾಗಕ್ಕೆ ಬೇಕಾದರೂ ಓಡಾಡುವಂತೆ ಮಾಡಬೇಕು. ಪ್ರಸ್ತುತ ಬಸ್ ಸೇವೆ ಸಮರ್ಪಕವಾಗಿ ಇಲ್ಲದಿರುವಂತಹ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಬಸ್‌ಗಳನ್ನು ಬಿಡುವುದು ಹಾಗೂ ಟ್ರಿಪ್‌ಗಳನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಸಂಚಾಲಕರಾದ ಅಮೃತರಾಜ್, “ನಮ್ಮ ಸಹಿ ಸಂಗ್ರಹಕ್ಕೆ ಉತ್ತಮವಾದ ಬೆಂಬಲ ಸಿಗುತ್ತಿದೆ. ಸುಮಾರು 20 ಸಾವಿರ ಸಹಿ ಸಂಗ್ರಹ ಮಾಡುವ ಉದ್ದೇಶವಿದೆ. ಜನರ ಸಹಿಯನ್ನು ಸಂಗ್ರಹಿಸಿ ಇನ್ನು ಎರಡು ದಿನಗಳ ನಂತರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...