Homeಕರ್ನಾಟಕಮಹತ್ವದ ಬೆಳವಣಿಗೆ: 42 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ರಾಜ್ಯ ಸರ್ಕಾರ

ಮಹತ್ವದ ಬೆಳವಣಿಗೆ: 42 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ರಾಜ್ಯ ಸರ್ಕಾರ

2019 ರಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಪಡೆದ ನಂತರ ನಡೆಯುತ್ತಿರುವ ಅತಿ ದೊಡ್ಡ ಐಎಎಸ್ ವರ್ಗಾವಣೆಯಾಗಿದೆ ಇದು.

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಸರ್ಕಾರ ಶನಿವಾರ 42 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದೆ. 2019 ರಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಪಡೆದ ನಂತರ ನಡೆಯುತ್ತಿರುವ ಅತಿ ದೊಡ್ಡ ಐಎಎಸ್ ವರ್ಗಾವಣೆಯಾಗಿದೆ ಇದು.

ಈ ವರ್ಗಾವಣೆಯ ಮೂಲಕ ಹಿರಿಯ ಐಎಎಸ್ ಅಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಆಯುಷ್ ಸೇವೆಗಳ ಹೊಸ ಆಯುಕ್ತರಾಗಿದ್ದಾರೆ. ಅವರು ಈ ಹಿಂದೆ ಕರ್ನಾಟಕದ ಕೋವಿಡ್ -19 ಕ್ರಿಟಿಕಲ್ ಕೇರ್ ಸಪೋರ್ಟ್ ಕಮಿಟಿಯ ಮುಖ್ಯಸ್ಥರಾಗಿದ್ದರು. ಇದರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತ ಹುದ್ದೆಯನ್ನು ಅಲಂಕರಿಸಿದ್ದ ಪಂಕಜ್ ಪಾಂಡೆ ಅವರನ್ನು ವರ್ಗಾಯಿಸಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರನ್ನು ನಗರಾಭಿವೃದ್ಧಿ ಪ್ರಧಾನ ಕಾರ್ಯದರ್ಶಿಗೆ ವರ್ಗಾಯಿಸಲಾಗಿದ್ದು, ನಗರಾಭಿವೃದ್ಧಿ ಪ್ರಧಾನ ಕಾರ್ಯದರ್ಶಿಯಾಗಿರುವ ಡಾ.ಜೆ.ರವಿಶಂಕರ್ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ರಶ್ಮಿ ಮಹೇಶ್ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಗಿದೆ.

ಈ ವರ್ಗಾವಣೆಯಿಂದಾಗಿ ಅನೇಕ ಜಿಲ್ಲಾಧಿಕಾರಿಗಳನ್ನೂ ವರ್ಗಾಯಿಸಲಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್ ಅವರನ್ನು ಜಲಾನಯನ ಅಭಿವೃದ್ಧಿ ಆಯುಕ್ತರಾಗಿ ವರ್ಗಾಯಿಸಲಾಗಿದೆ. ಚಿಕ್ಕಮಗಲೂರು ಜಿಲ್ಲಾಧಿಕಾರಿ ಬಗಡಿ ಗೌತಮ್ ಅವರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ (ಜಾರಿ) ಹುದ್ದೆಯನ್ನು ನೀಡಲಾಗಿದೆ.

ಇದನ್ನೂ ಓದಿ: ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

ರಾಯಚೂರು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಕಲ್ಬುರ್ಗಿಗೆ ವರ್ಗಾಯಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಅವರನ್ನು ಕಬ್ಬಿನ ಅಭಿವೃದ್ಧಿ ಆಯುಕ್ತರಾಗಿ ಮತ್ತು ಸಕ್ಕರೆ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ತುಮಕೂರು ಜಿಲ್ಲಾಧಿಕಾರಿ ಕೆ. ರಾಕೇಶ್ ಕುಮಾರ್ ಅವರನ್ನು ಪ್ರವಾಸೋದ್ಯಮಕ್ಕೆ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.

ಕೋಲಾರ್ ಜಿಲ್ಲಾಧಿಕಾರಿ ಸಿ. ಸತ್ಯಭಾಮ, ಚಾಮರಾಜನಗರ್ ಜಿಲ್ಲಾಧಿಕಾರಿ ರವಿ ಎಮ್ಆರ್, ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಹರೀಶ್ ಕುಮಾರ್ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲಾಧಿಕಾರಿ ಪಿಎಂ ರವೀಂದ್ರ ಅವರನ್ನು ವರ್ಗಾಯಿಸಲಾಗಿದೆ. ಯಾರನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಎಂಬ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...