Homeಕರ್ನಾಟಕಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

ಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

- Advertisement -
- Advertisement -

ಸೈಮಾ 2021ರ ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್‌ನಲ್ಲಿ ನಡೆದಿದ್ದು, ಕನ್ನಡದ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಆಯುಷ್ಮಾನ್​ ಭವ ಚಿತ್ರದ ನಟನೆಗಾಗಿ ರಚಿತಾ ರಾಮ್ ತಮ್ಮದಾಗಿಸಿಕೊಂಡಿದ್ದಾರೆ.

ಯಜಮಾನ ಚಿತ್ರದ ನಟನೆಗಾಗಿ ನಟ ದರ್ಶನ್, ಅವನೇ ಶ್ರೀಮನ್ನಾರಾಯಣ ಚಿತ್ರದ ನಟನೆಗಾಗಿ ರಕ್ಷಿತ್ ಶೆಟ್ಟಿ ಪ್ರಶಸ್ತಿ ಪಡೆದರೆ, ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ‘ಆಕ್ಟ್-1978’ ಚಿತ್ರದಲ್ಲಿನ ನಟನೆಗಾಗಿ ಬಿ.ಸುರೇಶ್ ತಮ್ಮದಾಗಿಸಿಕೊಂಡಿದ್ದಾರೆ.

ತೆಲುಗಿನ ಡಿಯರ್ ಕಾಮ್ರೆಡ್ ಮತ್ತು ಕನ್ನಡದ ಯಜಮಾನ ಚಿತ್ರಗಳಲ್ಲಿನ ನಟನೆಗಾಗಿ ಎರಡು ಭಾಷೆಗಳಲ್ಲಿ ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್‌ಗಳನ್ನು ರಶ್ಮಿಕಾ ಮಂದಣ್ಣ ಬಾಚಿಕೊಂಡಿದ್ದಾರೆ.

ಇದನ್ನೂ ಓದಿ: ಭ್ರಷ್ಟತೆಯ ಬಗ್ಗೆ ಮಧ್ಯಮ ವರ್ಗದ ನಂಬಿಕೆಯನ್ನು ಜನಪ್ರಿಯ ಧಾಟಿಯಲ್ಲಿ ಹೇಳುವ ಆಕ್ಟ್ – 1978

 

View this post on Instagram

 

A post shared by SIIMA (@siimawards)

 

View this post on Instagram

 

A post shared by SIIMA (@siimawards)

ನಾನುಗೌರಿ.ಕಾಂನೊಂದಿಗೆ ಮಾತನಾಡಿರುವ ಸೈಮಾ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದ ನಟ, ನಿರ್ದೇಶಕ ಬಿ.ಸುರೇಶ್, “ಪ್ರಶಸ್ತಿಗಳು ಬಹಳ ಮುಖ್ಯ ಅಲ್ಲ. ಅದಕ್ಕಿಂತ ಮುಖ್ಯವಾದದು ಜರ್ನಿ. ಈ ಪಯಣದಲ್ಲಿ ಏನೇನು ಮಾಡಲು ಸಾಧ್ಯವೋ ಅದನೇಲ್ಲಾ ಮಾಡಬೇಕು ಅಷ್ಟೇ. ಪ್ರಶಸ್ತಿ ಬಂದರೂ, ಬರದಿದ್ದರೂ ವ್ಯತ್ಯಾಸವಿಲ್ಲ. ಪ್ರಶಸ್ತಿಗಳನ್ನು ಮೀರಿದ್ದು ಬದುಕು” ಎಂದಿದ್ದಾರೆ.

“ಈ ಪಾತ್ರ ಮಾಡಲು ನನಗೆ ಕಥೆ ಹೇಳಿದಾಗ ನಾನು ಬೇರೆ ಐದು ಜನ ಕಲಾವಿದರ ಹೆಸರನ್ನು ಹೇಳಿ ಅವರು ನನಗಿಂತ ಚೆನ್ನಾಗಿ ಪಾತ್ರ ನಿರ್ವಹಿಸುತ್ತಾರೆ ಎಂದಿದ್ದೆ. ಆದರೆ, ನಿರ್ದೇಶಕರು ನೀವೇ ಈ ಪಾತ್ರ ಮಾಡಬೇಕು ಎಂದರು” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

 

View this post on Instagram

 

A post shared by SIIMA (@siimawards)

ಸೈಮಾ- 2021ರ ಕನ್ನಡ ವಿಭಾಗದ ಪ್ರಶಸ್ತಿ ವಿಜೇತರ ಪಟ್ಟಿ ಹೀಗಿದೆ.

ಅತ್ಯುತ್ತಮ ನಟ: ದರ್ಶನ್​ (ಯಜಮಾನ)

ಅತ್ಯುತ್ತಮ ನಟಿ: ರಚಿತಾ ರಾಮ್​ (ಆಯುಷ್ಮಾನ್​ ಭವ)

ಅತ್ಯುತ್ತಮ ನಟ ಕ್ರಿಟಿಕ್ಸ್​ ಅವಾರ್ಡ್​: ರಕ್ಷಿತ್​ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್​: ರಶ್ಮಿಕಾ ಮಂದಣ್ಣ (ಯಜಮಾನ)

ಅತ್ಯುತ್ತಮ ಹೊಸ ನಟ ಅಭಿಷೇಕ್​ ಅಂಬರೀಷ್​ (ಅಮರ್​)

ಅತ್ಯುತ್ತಮ ಪೋಷಕ ನಟಿ: ಕಾರುಣ್ಯ ರಾಮ್​ (ಮನೆ ಮಾರಾಟಕ್ಕಿದೆ)

ಅತ್ಯುತ್ತಮ ಪೋಷಕ ನಟ: ಬಿ.ಸುರೇಶ್ (ಆಕ್ಟ್-1978)

ಅತ್ಯುತ್ತಮ ಖಳನಟ: ಸಾಯಿ ಕುಮಾರ್​ (ಭರಾಟೆ)

ಅತ್ಯುತ್ತಮ ಚೊಚ್ಚಲ ನಿರ್ದೇಶನ: ಮಯೂರ ರಾಘವೇಂದ್ರ (ಕನ್ನಡ್​ ಗೊತ್ತಿಲ್ಲ)

ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)

ಅತ್ಯುತ್ತಮ ನಿರ್ದೇಶನ: ಹರಿಕೃಷ್ಣ, ಪೋನ್​ ಕುಮಾರ್​ (ಯಜಮಾನ)

ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)

ಅತ್ಯುತ್ತಮ ನೃತ್ಯ ನಿರ್ದೇಶನ: ಇಮ್ರಾನ್​ ಸರ್ದಾರಿಯಾ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಅನನ್ಯಾ ಭಟ್​ (ಗೀತಾ- ಕೇಳದೇ ಕೇಳದೇ)

ಅತ್ಯುತ್ತಮ ಸಾಹಿತ್ಯ: ಪವನ್​ ಒಡೆಯರ್​ (ನಟಸಾರ್ವಭೌಮ)

ಅತ್ಯುತ್ತಮ ಚಿತ್ರ (ಕನ್ನಡ) – ಮೀಡಿಯಾ ಹೌಸ್ ಸ್ಟುಡಿಯೋ (ಯಜಮಾನ)


ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ನಟಿ ತ್ರಿಷಾ ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...