Homeಕರ್ನಾಟಕಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

ಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

- Advertisement -
- Advertisement -

ಸೈಮಾ 2021ರ ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್‌ನಲ್ಲಿ ನಡೆದಿದ್ದು, ಕನ್ನಡದ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಆಯುಷ್ಮಾನ್​ ಭವ ಚಿತ್ರದ ನಟನೆಗಾಗಿ ರಚಿತಾ ರಾಮ್ ತಮ್ಮದಾಗಿಸಿಕೊಂಡಿದ್ದಾರೆ.

ಯಜಮಾನ ಚಿತ್ರದ ನಟನೆಗಾಗಿ ನಟ ದರ್ಶನ್, ಅವನೇ ಶ್ರೀಮನ್ನಾರಾಯಣ ಚಿತ್ರದ ನಟನೆಗಾಗಿ ರಕ್ಷಿತ್ ಶೆಟ್ಟಿ ಪ್ರಶಸ್ತಿ ಪಡೆದರೆ, ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ‘ಆಕ್ಟ್-1978’ ಚಿತ್ರದಲ್ಲಿನ ನಟನೆಗಾಗಿ ಬಿ.ಸುರೇಶ್ ತಮ್ಮದಾಗಿಸಿಕೊಂಡಿದ್ದಾರೆ.

ತೆಲುಗಿನ ಡಿಯರ್ ಕಾಮ್ರೆಡ್ ಮತ್ತು ಕನ್ನಡದ ಯಜಮಾನ ಚಿತ್ರಗಳಲ್ಲಿನ ನಟನೆಗಾಗಿ ಎರಡು ಭಾಷೆಗಳಲ್ಲಿ ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್‌ಗಳನ್ನು ರಶ್ಮಿಕಾ ಮಂದಣ್ಣ ಬಾಚಿಕೊಂಡಿದ್ದಾರೆ.

ಇದನ್ನೂ ಓದಿ: ಭ್ರಷ್ಟತೆಯ ಬಗ್ಗೆ ಮಧ್ಯಮ ವರ್ಗದ ನಂಬಿಕೆಯನ್ನು ಜನಪ್ರಿಯ ಧಾಟಿಯಲ್ಲಿ ಹೇಳುವ ಆಕ್ಟ್ – 1978

 

View this post on Instagram

 

A post shared by SIIMA (@siimawards)

 

View this post on Instagram

 

A post shared by SIIMA (@siimawards)

ನಾನುಗೌರಿ.ಕಾಂನೊಂದಿಗೆ ಮಾತನಾಡಿರುವ ಸೈಮಾ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದ ನಟ, ನಿರ್ದೇಶಕ ಬಿ.ಸುರೇಶ್, “ಪ್ರಶಸ್ತಿಗಳು ಬಹಳ ಮುಖ್ಯ ಅಲ್ಲ. ಅದಕ್ಕಿಂತ ಮುಖ್ಯವಾದದು ಜರ್ನಿ. ಈ ಪಯಣದಲ್ಲಿ ಏನೇನು ಮಾಡಲು ಸಾಧ್ಯವೋ ಅದನೇಲ್ಲಾ ಮಾಡಬೇಕು ಅಷ್ಟೇ. ಪ್ರಶಸ್ತಿ ಬಂದರೂ, ಬರದಿದ್ದರೂ ವ್ಯತ್ಯಾಸವಿಲ್ಲ. ಪ್ರಶಸ್ತಿಗಳನ್ನು ಮೀರಿದ್ದು ಬದುಕು” ಎಂದಿದ್ದಾರೆ.

“ಈ ಪಾತ್ರ ಮಾಡಲು ನನಗೆ ಕಥೆ ಹೇಳಿದಾಗ ನಾನು ಬೇರೆ ಐದು ಜನ ಕಲಾವಿದರ ಹೆಸರನ್ನು ಹೇಳಿ ಅವರು ನನಗಿಂತ ಚೆನ್ನಾಗಿ ಪಾತ್ರ ನಿರ್ವಹಿಸುತ್ತಾರೆ ಎಂದಿದ್ದೆ. ಆದರೆ, ನಿರ್ದೇಶಕರು ನೀವೇ ಈ ಪಾತ್ರ ಮಾಡಬೇಕು ಎಂದರು” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

 

View this post on Instagram

 

A post shared by SIIMA (@siimawards)

ಸೈಮಾ- 2021ರ ಕನ್ನಡ ವಿಭಾಗದ ಪ್ರಶಸ್ತಿ ವಿಜೇತರ ಪಟ್ಟಿ ಹೀಗಿದೆ.

ಅತ್ಯುತ್ತಮ ನಟ: ದರ್ಶನ್​ (ಯಜಮಾನ)

ಅತ್ಯುತ್ತಮ ನಟಿ: ರಚಿತಾ ರಾಮ್​ (ಆಯುಷ್ಮಾನ್​ ಭವ)

ಅತ್ಯುತ್ತಮ ನಟ ಕ್ರಿಟಿಕ್ಸ್​ ಅವಾರ್ಡ್​: ರಕ್ಷಿತ್​ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್​: ರಶ್ಮಿಕಾ ಮಂದಣ್ಣ (ಯಜಮಾನ)

ಅತ್ಯುತ್ತಮ ಹೊಸ ನಟ ಅಭಿಷೇಕ್​ ಅಂಬರೀಷ್​ (ಅಮರ್​)

ಅತ್ಯುತ್ತಮ ಪೋಷಕ ನಟಿ: ಕಾರುಣ್ಯ ರಾಮ್​ (ಮನೆ ಮಾರಾಟಕ್ಕಿದೆ)

ಅತ್ಯುತ್ತಮ ಪೋಷಕ ನಟ: ಬಿ.ಸುರೇಶ್ (ಆಕ್ಟ್-1978)

ಅತ್ಯುತ್ತಮ ಖಳನಟ: ಸಾಯಿ ಕುಮಾರ್​ (ಭರಾಟೆ)

ಅತ್ಯುತ್ತಮ ಚೊಚ್ಚಲ ನಿರ್ದೇಶನ: ಮಯೂರ ರಾಘವೇಂದ್ರ (ಕನ್ನಡ್​ ಗೊತ್ತಿಲ್ಲ)

ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)

ಅತ್ಯುತ್ತಮ ನಿರ್ದೇಶನ: ಹರಿಕೃಷ್ಣ, ಪೋನ್​ ಕುಮಾರ್​ (ಯಜಮಾನ)

ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)

ಅತ್ಯುತ್ತಮ ನೃತ್ಯ ನಿರ್ದೇಶನ: ಇಮ್ರಾನ್​ ಸರ್ದಾರಿಯಾ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಅನನ್ಯಾ ಭಟ್​ (ಗೀತಾ- ಕೇಳದೇ ಕೇಳದೇ)

ಅತ್ಯುತ್ತಮ ಸಾಹಿತ್ಯ: ಪವನ್​ ಒಡೆಯರ್​ (ನಟಸಾರ್ವಭೌಮ)

ಅತ್ಯುತ್ತಮ ಚಿತ್ರ (ಕನ್ನಡ) – ಮೀಡಿಯಾ ಹೌಸ್ ಸ್ಟುಡಿಯೋ (ಯಜಮಾನ)


ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ನಟಿ ತ್ರಿಷಾ ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...