Homeಕರ್ನಾಟಕಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

ಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

- Advertisement -
- Advertisement -

ಸೈಮಾ 2021ರ ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್‌ನಲ್ಲಿ ನಡೆದಿದ್ದು, ಕನ್ನಡದ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಆಯುಷ್ಮಾನ್​ ಭವ ಚಿತ್ರದ ನಟನೆಗಾಗಿ ರಚಿತಾ ರಾಮ್ ತಮ್ಮದಾಗಿಸಿಕೊಂಡಿದ್ದಾರೆ.

ಯಜಮಾನ ಚಿತ್ರದ ನಟನೆಗಾಗಿ ನಟ ದರ್ಶನ್, ಅವನೇ ಶ್ರೀಮನ್ನಾರಾಯಣ ಚಿತ್ರದ ನಟನೆಗಾಗಿ ರಕ್ಷಿತ್ ಶೆಟ್ಟಿ ಪ್ರಶಸ್ತಿ ಪಡೆದರೆ, ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ‘ಆಕ್ಟ್-1978’ ಚಿತ್ರದಲ್ಲಿನ ನಟನೆಗಾಗಿ ಬಿ.ಸುರೇಶ್ ತಮ್ಮದಾಗಿಸಿಕೊಂಡಿದ್ದಾರೆ.

ತೆಲುಗಿನ ಡಿಯರ್ ಕಾಮ್ರೆಡ್ ಮತ್ತು ಕನ್ನಡದ ಯಜಮಾನ ಚಿತ್ರಗಳಲ್ಲಿನ ನಟನೆಗಾಗಿ ಎರಡು ಭಾಷೆಗಳಲ್ಲಿ ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್‌ಗಳನ್ನು ರಶ್ಮಿಕಾ ಮಂದಣ್ಣ ಬಾಚಿಕೊಂಡಿದ್ದಾರೆ.

ಇದನ್ನೂ ಓದಿ: ಭ್ರಷ್ಟತೆಯ ಬಗ್ಗೆ ಮಧ್ಯಮ ವರ್ಗದ ನಂಬಿಕೆಯನ್ನು ಜನಪ್ರಿಯ ಧಾಟಿಯಲ್ಲಿ ಹೇಳುವ ಆಕ್ಟ್ – 1978

 

View this post on Instagram

 

A post shared by SIIMA (@siimawards)

 

View this post on Instagram

 

A post shared by SIIMA (@siimawards)

ನಾನುಗೌರಿ.ಕಾಂನೊಂದಿಗೆ ಮಾತನಾಡಿರುವ ಸೈಮಾ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದ ನಟ, ನಿರ್ದೇಶಕ ಬಿ.ಸುರೇಶ್, “ಪ್ರಶಸ್ತಿಗಳು ಬಹಳ ಮುಖ್ಯ ಅಲ್ಲ. ಅದಕ್ಕಿಂತ ಮುಖ್ಯವಾದದು ಜರ್ನಿ. ಈ ಪಯಣದಲ್ಲಿ ಏನೇನು ಮಾಡಲು ಸಾಧ್ಯವೋ ಅದನೇಲ್ಲಾ ಮಾಡಬೇಕು ಅಷ್ಟೇ. ಪ್ರಶಸ್ತಿ ಬಂದರೂ, ಬರದಿದ್ದರೂ ವ್ಯತ್ಯಾಸವಿಲ್ಲ. ಪ್ರಶಸ್ತಿಗಳನ್ನು ಮೀರಿದ್ದು ಬದುಕು” ಎಂದಿದ್ದಾರೆ.

“ಈ ಪಾತ್ರ ಮಾಡಲು ನನಗೆ ಕಥೆ ಹೇಳಿದಾಗ ನಾನು ಬೇರೆ ಐದು ಜನ ಕಲಾವಿದರ ಹೆಸರನ್ನು ಹೇಳಿ ಅವರು ನನಗಿಂತ ಚೆನ್ನಾಗಿ ಪಾತ್ರ ನಿರ್ವಹಿಸುತ್ತಾರೆ ಎಂದಿದ್ದೆ. ಆದರೆ, ನಿರ್ದೇಶಕರು ನೀವೇ ಈ ಪಾತ್ರ ಮಾಡಬೇಕು ಎಂದರು” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

 

View this post on Instagram

 

A post shared by SIIMA (@siimawards)

ಸೈಮಾ- 2021ರ ಕನ್ನಡ ವಿಭಾಗದ ಪ್ರಶಸ್ತಿ ವಿಜೇತರ ಪಟ್ಟಿ ಹೀಗಿದೆ.

ಅತ್ಯುತ್ತಮ ನಟ: ದರ್ಶನ್​ (ಯಜಮಾನ)

ಅತ್ಯುತ್ತಮ ನಟಿ: ರಚಿತಾ ರಾಮ್​ (ಆಯುಷ್ಮಾನ್​ ಭವ)

ಅತ್ಯುತ್ತಮ ನಟ ಕ್ರಿಟಿಕ್ಸ್​ ಅವಾರ್ಡ್​: ರಕ್ಷಿತ್​ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್​: ರಶ್ಮಿಕಾ ಮಂದಣ್ಣ (ಯಜಮಾನ)

ಅತ್ಯುತ್ತಮ ಹೊಸ ನಟ ಅಭಿಷೇಕ್​ ಅಂಬರೀಷ್​ (ಅಮರ್​)

ಅತ್ಯುತ್ತಮ ಪೋಷಕ ನಟಿ: ಕಾರುಣ್ಯ ರಾಮ್​ (ಮನೆ ಮಾರಾಟಕ್ಕಿದೆ)

ಅತ್ಯುತ್ತಮ ಪೋಷಕ ನಟ: ಬಿ.ಸುರೇಶ್ (ಆಕ್ಟ್-1978)

ಅತ್ಯುತ್ತಮ ಖಳನಟ: ಸಾಯಿ ಕುಮಾರ್​ (ಭರಾಟೆ)

ಅತ್ಯುತ್ತಮ ಚೊಚ್ಚಲ ನಿರ್ದೇಶನ: ಮಯೂರ ರಾಘವೇಂದ್ರ (ಕನ್ನಡ್​ ಗೊತ್ತಿಲ್ಲ)

ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)

ಅತ್ಯುತ್ತಮ ನಿರ್ದೇಶನ: ಹರಿಕೃಷ್ಣ, ಪೋನ್​ ಕುಮಾರ್​ (ಯಜಮಾನ)

ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)

ಅತ್ಯುತ್ತಮ ನೃತ್ಯ ನಿರ್ದೇಶನ: ಇಮ್ರಾನ್​ ಸರ್ದಾರಿಯಾ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಅನನ್ಯಾ ಭಟ್​ (ಗೀತಾ- ಕೇಳದೇ ಕೇಳದೇ)

ಅತ್ಯುತ್ತಮ ಸಾಹಿತ್ಯ: ಪವನ್​ ಒಡೆಯರ್​ (ನಟಸಾರ್ವಭೌಮ)

ಅತ್ಯುತ್ತಮ ಚಿತ್ರ (ಕನ್ನಡ) – ಮೀಡಿಯಾ ಹೌಸ್ ಸ್ಟುಡಿಯೋ (ಯಜಮಾನ)


ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ನಟಿ ತ್ರಿಷಾ ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...