Homeಕರ್ನಾಟಕಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

ಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

- Advertisement -
- Advertisement -

ಸೈಮಾ 2021ರ ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್‌ನಲ್ಲಿ ನಡೆದಿದ್ದು, ಕನ್ನಡದ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಆಯುಷ್ಮಾನ್​ ಭವ ಚಿತ್ರದ ನಟನೆಗಾಗಿ ರಚಿತಾ ರಾಮ್ ತಮ್ಮದಾಗಿಸಿಕೊಂಡಿದ್ದಾರೆ.

ಯಜಮಾನ ಚಿತ್ರದ ನಟನೆಗಾಗಿ ನಟ ದರ್ಶನ್, ಅವನೇ ಶ್ರೀಮನ್ನಾರಾಯಣ ಚಿತ್ರದ ನಟನೆಗಾಗಿ ರಕ್ಷಿತ್ ಶೆಟ್ಟಿ ಪ್ರಶಸ್ತಿ ಪಡೆದರೆ, ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ‘ಆಕ್ಟ್-1978’ ಚಿತ್ರದಲ್ಲಿನ ನಟನೆಗಾಗಿ ಬಿ.ಸುರೇಶ್ ತಮ್ಮದಾಗಿಸಿಕೊಂಡಿದ್ದಾರೆ.

ತೆಲುಗಿನ ಡಿಯರ್ ಕಾಮ್ರೆಡ್ ಮತ್ತು ಕನ್ನಡದ ಯಜಮಾನ ಚಿತ್ರಗಳಲ್ಲಿನ ನಟನೆಗಾಗಿ ಎರಡು ಭಾಷೆಗಳಲ್ಲಿ ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್‌ಗಳನ್ನು ರಶ್ಮಿಕಾ ಮಂದಣ್ಣ ಬಾಚಿಕೊಂಡಿದ್ದಾರೆ.

ಇದನ್ನೂ ಓದಿ: ಭ್ರಷ್ಟತೆಯ ಬಗ್ಗೆ ಮಧ್ಯಮ ವರ್ಗದ ನಂಬಿಕೆಯನ್ನು ಜನಪ್ರಿಯ ಧಾಟಿಯಲ್ಲಿ ಹೇಳುವ ಆಕ್ಟ್ – 1978

 

View this post on Instagram

 

A post shared by SIIMA (@siimawards)

 

View this post on Instagram

 

A post shared by SIIMA (@siimawards)

ನಾನುಗೌರಿ.ಕಾಂನೊಂದಿಗೆ ಮಾತನಾಡಿರುವ ಸೈಮಾ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದ ನಟ, ನಿರ್ದೇಶಕ ಬಿ.ಸುರೇಶ್, “ಪ್ರಶಸ್ತಿಗಳು ಬಹಳ ಮುಖ್ಯ ಅಲ್ಲ. ಅದಕ್ಕಿಂತ ಮುಖ್ಯವಾದದು ಜರ್ನಿ. ಈ ಪಯಣದಲ್ಲಿ ಏನೇನು ಮಾಡಲು ಸಾಧ್ಯವೋ ಅದನೇಲ್ಲಾ ಮಾಡಬೇಕು ಅಷ್ಟೇ. ಪ್ರಶಸ್ತಿ ಬಂದರೂ, ಬರದಿದ್ದರೂ ವ್ಯತ್ಯಾಸವಿಲ್ಲ. ಪ್ರಶಸ್ತಿಗಳನ್ನು ಮೀರಿದ್ದು ಬದುಕು” ಎಂದಿದ್ದಾರೆ.

“ಈ ಪಾತ್ರ ಮಾಡಲು ನನಗೆ ಕಥೆ ಹೇಳಿದಾಗ ನಾನು ಬೇರೆ ಐದು ಜನ ಕಲಾವಿದರ ಹೆಸರನ್ನು ಹೇಳಿ ಅವರು ನನಗಿಂತ ಚೆನ್ನಾಗಿ ಪಾತ್ರ ನಿರ್ವಹಿಸುತ್ತಾರೆ ಎಂದಿದ್ದೆ. ಆದರೆ, ನಿರ್ದೇಶಕರು ನೀವೇ ಈ ಪಾತ್ರ ಮಾಡಬೇಕು ಎಂದರು” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

 

View this post on Instagram

 

A post shared by SIIMA (@siimawards)

ಸೈಮಾ- 2021ರ ಕನ್ನಡ ವಿಭಾಗದ ಪ್ರಶಸ್ತಿ ವಿಜೇತರ ಪಟ್ಟಿ ಹೀಗಿದೆ.

ಅತ್ಯುತ್ತಮ ನಟ: ದರ್ಶನ್​ (ಯಜಮಾನ)

ಅತ್ಯುತ್ತಮ ನಟಿ: ರಚಿತಾ ರಾಮ್​ (ಆಯುಷ್ಮಾನ್​ ಭವ)

ಅತ್ಯುತ್ತಮ ನಟ ಕ್ರಿಟಿಕ್ಸ್​ ಅವಾರ್ಡ್​: ರಕ್ಷಿತ್​ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್​: ರಶ್ಮಿಕಾ ಮಂದಣ್ಣ (ಯಜಮಾನ)

ಅತ್ಯುತ್ತಮ ಹೊಸ ನಟ ಅಭಿಷೇಕ್​ ಅಂಬರೀಷ್​ (ಅಮರ್​)

ಅತ್ಯುತ್ತಮ ಪೋಷಕ ನಟಿ: ಕಾರುಣ್ಯ ರಾಮ್​ (ಮನೆ ಮಾರಾಟಕ್ಕಿದೆ)

ಅತ್ಯುತ್ತಮ ಪೋಷಕ ನಟ: ಬಿ.ಸುರೇಶ್ (ಆಕ್ಟ್-1978)

ಅತ್ಯುತ್ತಮ ಖಳನಟ: ಸಾಯಿ ಕುಮಾರ್​ (ಭರಾಟೆ)

ಅತ್ಯುತ್ತಮ ಚೊಚ್ಚಲ ನಿರ್ದೇಶನ: ಮಯೂರ ರಾಘವೇಂದ್ರ (ಕನ್ನಡ್​ ಗೊತ್ತಿಲ್ಲ)

ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)

ಅತ್ಯುತ್ತಮ ನಿರ್ದೇಶನ: ಹರಿಕೃಷ್ಣ, ಪೋನ್​ ಕುಮಾರ್​ (ಯಜಮಾನ)

ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)

ಅತ್ಯುತ್ತಮ ನೃತ್ಯ ನಿರ್ದೇಶನ: ಇಮ್ರಾನ್​ ಸರ್ದಾರಿಯಾ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಅನನ್ಯಾ ಭಟ್​ (ಗೀತಾ- ಕೇಳದೇ ಕೇಳದೇ)

ಅತ್ಯುತ್ತಮ ಸಾಹಿತ್ಯ: ಪವನ್​ ಒಡೆಯರ್​ (ನಟಸಾರ್ವಭೌಮ)

ಅತ್ಯುತ್ತಮ ಚಿತ್ರ (ಕನ್ನಡ) – ಮೀಡಿಯಾ ಹೌಸ್ ಸ್ಟುಡಿಯೋ (ಯಜಮಾನ)


ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ನಟಿ ತ್ರಿಷಾ ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...