Homeಕರ್ನಾಟಕಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

ಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

- Advertisement -
- Advertisement -

ಸೈಮಾ 2021ರ ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್‌ನಲ್ಲಿ ನಡೆದಿದ್ದು, ಕನ್ನಡದ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಆಯುಷ್ಮಾನ್​ ಭವ ಚಿತ್ರದ ನಟನೆಗಾಗಿ ರಚಿತಾ ರಾಮ್ ತಮ್ಮದಾಗಿಸಿಕೊಂಡಿದ್ದಾರೆ.

ಯಜಮಾನ ಚಿತ್ರದ ನಟನೆಗಾಗಿ ನಟ ದರ್ಶನ್, ಅವನೇ ಶ್ರೀಮನ್ನಾರಾಯಣ ಚಿತ್ರದ ನಟನೆಗಾಗಿ ರಕ್ಷಿತ್ ಶೆಟ್ಟಿ ಪ್ರಶಸ್ತಿ ಪಡೆದರೆ, ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ‘ಆಕ್ಟ್-1978’ ಚಿತ್ರದಲ್ಲಿನ ನಟನೆಗಾಗಿ ಬಿ.ಸುರೇಶ್ ತಮ್ಮದಾಗಿಸಿಕೊಂಡಿದ್ದಾರೆ.

ತೆಲುಗಿನ ಡಿಯರ್ ಕಾಮ್ರೆಡ್ ಮತ್ತು ಕನ್ನಡದ ಯಜಮಾನ ಚಿತ್ರಗಳಲ್ಲಿನ ನಟನೆಗಾಗಿ ಎರಡು ಭಾಷೆಗಳಲ್ಲಿ ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್‌ಗಳನ್ನು ರಶ್ಮಿಕಾ ಮಂದಣ್ಣ ಬಾಚಿಕೊಂಡಿದ್ದಾರೆ.

ಇದನ್ನೂ ಓದಿ: ಭ್ರಷ್ಟತೆಯ ಬಗ್ಗೆ ಮಧ್ಯಮ ವರ್ಗದ ನಂಬಿಕೆಯನ್ನು ಜನಪ್ರಿಯ ಧಾಟಿಯಲ್ಲಿ ಹೇಳುವ ಆಕ್ಟ್ – 1978

 

View this post on Instagram

 

A post shared by SIIMA (@siimawards)

 

View this post on Instagram

 

A post shared by SIIMA (@siimawards)

ನಾನುಗೌರಿ.ಕಾಂನೊಂದಿಗೆ ಮಾತನಾಡಿರುವ ಸೈಮಾ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದ ನಟ, ನಿರ್ದೇಶಕ ಬಿ.ಸುರೇಶ್, “ಪ್ರಶಸ್ತಿಗಳು ಬಹಳ ಮುಖ್ಯ ಅಲ್ಲ. ಅದಕ್ಕಿಂತ ಮುಖ್ಯವಾದದು ಜರ್ನಿ. ಈ ಪಯಣದಲ್ಲಿ ಏನೇನು ಮಾಡಲು ಸಾಧ್ಯವೋ ಅದನೇಲ್ಲಾ ಮಾಡಬೇಕು ಅಷ್ಟೇ. ಪ್ರಶಸ್ತಿ ಬಂದರೂ, ಬರದಿದ್ದರೂ ವ್ಯತ್ಯಾಸವಿಲ್ಲ. ಪ್ರಶಸ್ತಿಗಳನ್ನು ಮೀರಿದ್ದು ಬದುಕು” ಎಂದಿದ್ದಾರೆ.

“ಈ ಪಾತ್ರ ಮಾಡಲು ನನಗೆ ಕಥೆ ಹೇಳಿದಾಗ ನಾನು ಬೇರೆ ಐದು ಜನ ಕಲಾವಿದರ ಹೆಸರನ್ನು ಹೇಳಿ ಅವರು ನನಗಿಂತ ಚೆನ್ನಾಗಿ ಪಾತ್ರ ನಿರ್ವಹಿಸುತ್ತಾರೆ ಎಂದಿದ್ದೆ. ಆದರೆ, ನಿರ್ದೇಶಕರು ನೀವೇ ಈ ಪಾತ್ರ ಮಾಡಬೇಕು ಎಂದರು” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

 

View this post on Instagram

 

A post shared by SIIMA (@siimawards)

ಸೈಮಾ- 2021ರ ಕನ್ನಡ ವಿಭಾಗದ ಪ್ರಶಸ್ತಿ ವಿಜೇತರ ಪಟ್ಟಿ ಹೀಗಿದೆ.

ಅತ್ಯುತ್ತಮ ನಟ: ದರ್ಶನ್​ (ಯಜಮಾನ)

ಅತ್ಯುತ್ತಮ ನಟಿ: ರಚಿತಾ ರಾಮ್​ (ಆಯುಷ್ಮಾನ್​ ಭವ)

ಅತ್ಯುತ್ತಮ ನಟ ಕ್ರಿಟಿಕ್ಸ್​ ಅವಾರ್ಡ್​: ರಕ್ಷಿತ್​ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್​: ರಶ್ಮಿಕಾ ಮಂದಣ್ಣ (ಯಜಮಾನ)

ಅತ್ಯುತ್ತಮ ಹೊಸ ನಟ ಅಭಿಷೇಕ್​ ಅಂಬರೀಷ್​ (ಅಮರ್​)

ಅತ್ಯುತ್ತಮ ಪೋಷಕ ನಟಿ: ಕಾರುಣ್ಯ ರಾಮ್​ (ಮನೆ ಮಾರಾಟಕ್ಕಿದೆ)

ಅತ್ಯುತ್ತಮ ಪೋಷಕ ನಟ: ಬಿ.ಸುರೇಶ್ (ಆಕ್ಟ್-1978)

ಅತ್ಯುತ್ತಮ ಖಳನಟ: ಸಾಯಿ ಕುಮಾರ್​ (ಭರಾಟೆ)

ಅತ್ಯುತ್ತಮ ಚೊಚ್ಚಲ ನಿರ್ದೇಶನ: ಮಯೂರ ರಾಘವೇಂದ್ರ (ಕನ್ನಡ್​ ಗೊತ್ತಿಲ್ಲ)

ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)

ಅತ್ಯುತ್ತಮ ನಿರ್ದೇಶನ: ಹರಿಕೃಷ್ಣ, ಪೋನ್​ ಕುಮಾರ್​ (ಯಜಮಾನ)

ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)

ಅತ್ಯುತ್ತಮ ನೃತ್ಯ ನಿರ್ದೇಶನ: ಇಮ್ರಾನ್​ ಸರ್ದಾರಿಯಾ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಅನನ್ಯಾ ಭಟ್​ (ಗೀತಾ- ಕೇಳದೇ ಕೇಳದೇ)

ಅತ್ಯುತ್ತಮ ಸಾಹಿತ್ಯ: ಪವನ್​ ಒಡೆಯರ್​ (ನಟಸಾರ್ವಭೌಮ)

ಅತ್ಯುತ್ತಮ ಚಿತ್ರ (ಕನ್ನಡ) – ಮೀಡಿಯಾ ಹೌಸ್ ಸ್ಟುಡಿಯೋ (ಯಜಮಾನ)


ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ನಟಿ ತ್ರಿಷಾ ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...