Homeಕರ್ನಾಟಕಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

ಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

- Advertisement -
- Advertisement -

ಸೈಮಾ 2021ರ ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್‌ನಲ್ಲಿ ನಡೆದಿದ್ದು, ಕನ್ನಡದ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಆಯುಷ್ಮಾನ್​ ಭವ ಚಿತ್ರದ ನಟನೆಗಾಗಿ ರಚಿತಾ ರಾಮ್ ತಮ್ಮದಾಗಿಸಿಕೊಂಡಿದ್ದಾರೆ.

ಯಜಮಾನ ಚಿತ್ರದ ನಟನೆಗಾಗಿ ನಟ ದರ್ಶನ್, ಅವನೇ ಶ್ರೀಮನ್ನಾರಾಯಣ ಚಿತ್ರದ ನಟನೆಗಾಗಿ ರಕ್ಷಿತ್ ಶೆಟ್ಟಿ ಪ್ರಶಸ್ತಿ ಪಡೆದರೆ, ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ‘ಆಕ್ಟ್-1978’ ಚಿತ್ರದಲ್ಲಿನ ನಟನೆಗಾಗಿ ಬಿ.ಸುರೇಶ್ ತಮ್ಮದಾಗಿಸಿಕೊಂಡಿದ್ದಾರೆ.

ತೆಲುಗಿನ ಡಿಯರ್ ಕಾಮ್ರೆಡ್ ಮತ್ತು ಕನ್ನಡದ ಯಜಮಾನ ಚಿತ್ರಗಳಲ್ಲಿನ ನಟನೆಗಾಗಿ ಎರಡು ಭಾಷೆಗಳಲ್ಲಿ ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್‌ಗಳನ್ನು ರಶ್ಮಿಕಾ ಮಂದಣ್ಣ ಬಾಚಿಕೊಂಡಿದ್ದಾರೆ.

ಇದನ್ನೂ ಓದಿ: ಭ್ರಷ್ಟತೆಯ ಬಗ್ಗೆ ಮಧ್ಯಮ ವರ್ಗದ ನಂಬಿಕೆಯನ್ನು ಜನಪ್ರಿಯ ಧಾಟಿಯಲ್ಲಿ ಹೇಳುವ ಆಕ್ಟ್ – 1978

 

View this post on Instagram

 

A post shared by SIIMA (@siimawards)

 

View this post on Instagram

 

A post shared by SIIMA (@siimawards)

ನಾನುಗೌರಿ.ಕಾಂನೊಂದಿಗೆ ಮಾತನಾಡಿರುವ ಸೈಮಾ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದ ನಟ, ನಿರ್ದೇಶಕ ಬಿ.ಸುರೇಶ್, “ಪ್ರಶಸ್ತಿಗಳು ಬಹಳ ಮುಖ್ಯ ಅಲ್ಲ. ಅದಕ್ಕಿಂತ ಮುಖ್ಯವಾದದು ಜರ್ನಿ. ಈ ಪಯಣದಲ್ಲಿ ಏನೇನು ಮಾಡಲು ಸಾಧ್ಯವೋ ಅದನೇಲ್ಲಾ ಮಾಡಬೇಕು ಅಷ್ಟೇ. ಪ್ರಶಸ್ತಿ ಬಂದರೂ, ಬರದಿದ್ದರೂ ವ್ಯತ್ಯಾಸವಿಲ್ಲ. ಪ್ರಶಸ್ತಿಗಳನ್ನು ಮೀರಿದ್ದು ಬದುಕು” ಎಂದಿದ್ದಾರೆ.

“ಈ ಪಾತ್ರ ಮಾಡಲು ನನಗೆ ಕಥೆ ಹೇಳಿದಾಗ ನಾನು ಬೇರೆ ಐದು ಜನ ಕಲಾವಿದರ ಹೆಸರನ್ನು ಹೇಳಿ ಅವರು ನನಗಿಂತ ಚೆನ್ನಾಗಿ ಪಾತ್ರ ನಿರ್ವಹಿಸುತ್ತಾರೆ ಎಂದಿದ್ದೆ. ಆದರೆ, ನಿರ್ದೇಶಕರು ನೀವೇ ಈ ಪಾತ್ರ ಮಾಡಬೇಕು ಎಂದರು” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

 

View this post on Instagram

 

A post shared by SIIMA (@siimawards)

ಸೈಮಾ- 2021ರ ಕನ್ನಡ ವಿಭಾಗದ ಪ್ರಶಸ್ತಿ ವಿಜೇತರ ಪಟ್ಟಿ ಹೀಗಿದೆ.

ಅತ್ಯುತ್ತಮ ನಟ: ದರ್ಶನ್​ (ಯಜಮಾನ)

ಅತ್ಯುತ್ತಮ ನಟಿ: ರಚಿತಾ ರಾಮ್​ (ಆಯುಷ್ಮಾನ್​ ಭವ)

ಅತ್ಯುತ್ತಮ ನಟ ಕ್ರಿಟಿಕ್ಸ್​ ಅವಾರ್ಡ್​: ರಕ್ಷಿತ್​ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್​: ರಶ್ಮಿಕಾ ಮಂದಣ್ಣ (ಯಜಮಾನ)

ಅತ್ಯುತ್ತಮ ಹೊಸ ನಟ ಅಭಿಷೇಕ್​ ಅಂಬರೀಷ್​ (ಅಮರ್​)

ಅತ್ಯುತ್ತಮ ಪೋಷಕ ನಟಿ: ಕಾರುಣ್ಯ ರಾಮ್​ (ಮನೆ ಮಾರಾಟಕ್ಕಿದೆ)

ಅತ್ಯುತ್ತಮ ಪೋಷಕ ನಟ: ಬಿ.ಸುರೇಶ್ (ಆಕ್ಟ್-1978)

ಅತ್ಯುತ್ತಮ ಖಳನಟ: ಸಾಯಿ ಕುಮಾರ್​ (ಭರಾಟೆ)

ಅತ್ಯುತ್ತಮ ಚೊಚ್ಚಲ ನಿರ್ದೇಶನ: ಮಯೂರ ರಾಘವೇಂದ್ರ (ಕನ್ನಡ್​ ಗೊತ್ತಿಲ್ಲ)

ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)

ಅತ್ಯುತ್ತಮ ನಿರ್ದೇಶನ: ಹರಿಕೃಷ್ಣ, ಪೋನ್​ ಕುಮಾರ್​ (ಯಜಮಾನ)

ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)

ಅತ್ಯುತ್ತಮ ನೃತ್ಯ ನಿರ್ದೇಶನ: ಇಮ್ರಾನ್​ ಸರ್ದಾರಿಯಾ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಅನನ್ಯಾ ಭಟ್​ (ಗೀತಾ- ಕೇಳದೇ ಕೇಳದೇ)

ಅತ್ಯುತ್ತಮ ಸಾಹಿತ್ಯ: ಪವನ್​ ಒಡೆಯರ್​ (ನಟಸಾರ್ವಭೌಮ)

ಅತ್ಯುತ್ತಮ ಚಿತ್ರ (ಕನ್ನಡ) – ಮೀಡಿಯಾ ಹೌಸ್ ಸ್ಟುಡಿಯೋ (ಯಜಮಾನ)


ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ನಟಿ ತ್ರಿಷಾ ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....