Homeಕರ್ನಾಟಕಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

ಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

- Advertisement -
- Advertisement -

ಸೈಮಾ 2021ರ ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್‌ನಲ್ಲಿ ನಡೆದಿದ್ದು, ಕನ್ನಡದ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಆಯುಷ್ಮಾನ್​ ಭವ ಚಿತ್ರದ ನಟನೆಗಾಗಿ ರಚಿತಾ ರಾಮ್ ತಮ್ಮದಾಗಿಸಿಕೊಂಡಿದ್ದಾರೆ.

ಯಜಮಾನ ಚಿತ್ರದ ನಟನೆಗಾಗಿ ನಟ ದರ್ಶನ್, ಅವನೇ ಶ್ರೀಮನ್ನಾರಾಯಣ ಚಿತ್ರದ ನಟನೆಗಾಗಿ ರಕ್ಷಿತ್ ಶೆಟ್ಟಿ ಪ್ರಶಸ್ತಿ ಪಡೆದರೆ, ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ‘ಆಕ್ಟ್-1978’ ಚಿತ್ರದಲ್ಲಿನ ನಟನೆಗಾಗಿ ಬಿ.ಸುರೇಶ್ ತಮ್ಮದಾಗಿಸಿಕೊಂಡಿದ್ದಾರೆ.

ತೆಲುಗಿನ ಡಿಯರ್ ಕಾಮ್ರೆಡ್ ಮತ್ತು ಕನ್ನಡದ ಯಜಮಾನ ಚಿತ್ರಗಳಲ್ಲಿನ ನಟನೆಗಾಗಿ ಎರಡು ಭಾಷೆಗಳಲ್ಲಿ ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್‌ಗಳನ್ನು ರಶ್ಮಿಕಾ ಮಂದಣ್ಣ ಬಾಚಿಕೊಂಡಿದ್ದಾರೆ.

ಇದನ್ನೂ ಓದಿ: ಭ್ರಷ್ಟತೆಯ ಬಗ್ಗೆ ಮಧ್ಯಮ ವರ್ಗದ ನಂಬಿಕೆಯನ್ನು ಜನಪ್ರಿಯ ಧಾಟಿಯಲ್ಲಿ ಹೇಳುವ ಆಕ್ಟ್ – 1978

 

View this post on Instagram

 

A post shared by SIIMA (@siimawards)

 

View this post on Instagram

 

A post shared by SIIMA (@siimawards)

ನಾನುಗೌರಿ.ಕಾಂನೊಂದಿಗೆ ಮಾತನಾಡಿರುವ ಸೈಮಾ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದ ನಟ, ನಿರ್ದೇಶಕ ಬಿ.ಸುರೇಶ್, “ಪ್ರಶಸ್ತಿಗಳು ಬಹಳ ಮುಖ್ಯ ಅಲ್ಲ. ಅದಕ್ಕಿಂತ ಮುಖ್ಯವಾದದು ಜರ್ನಿ. ಈ ಪಯಣದಲ್ಲಿ ಏನೇನು ಮಾಡಲು ಸಾಧ್ಯವೋ ಅದನೇಲ್ಲಾ ಮಾಡಬೇಕು ಅಷ್ಟೇ. ಪ್ರಶಸ್ತಿ ಬಂದರೂ, ಬರದಿದ್ದರೂ ವ್ಯತ್ಯಾಸವಿಲ್ಲ. ಪ್ರಶಸ್ತಿಗಳನ್ನು ಮೀರಿದ್ದು ಬದುಕು” ಎಂದಿದ್ದಾರೆ.

“ಈ ಪಾತ್ರ ಮಾಡಲು ನನಗೆ ಕಥೆ ಹೇಳಿದಾಗ ನಾನು ಬೇರೆ ಐದು ಜನ ಕಲಾವಿದರ ಹೆಸರನ್ನು ಹೇಳಿ ಅವರು ನನಗಿಂತ ಚೆನ್ನಾಗಿ ಪಾತ್ರ ನಿರ್ವಹಿಸುತ್ತಾರೆ ಎಂದಿದ್ದೆ. ಆದರೆ, ನಿರ್ದೇಶಕರು ನೀವೇ ಈ ಪಾತ್ರ ಮಾಡಬೇಕು ಎಂದರು” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

 

View this post on Instagram

 

A post shared by SIIMA (@siimawards)

ಸೈಮಾ- 2021ರ ಕನ್ನಡ ವಿಭಾಗದ ಪ್ರಶಸ್ತಿ ವಿಜೇತರ ಪಟ್ಟಿ ಹೀಗಿದೆ.

ಅತ್ಯುತ್ತಮ ನಟ: ದರ್ಶನ್​ (ಯಜಮಾನ)

ಅತ್ಯುತ್ತಮ ನಟಿ: ರಚಿತಾ ರಾಮ್​ (ಆಯುಷ್ಮಾನ್​ ಭವ)

ಅತ್ಯುತ್ತಮ ನಟ ಕ್ರಿಟಿಕ್ಸ್​ ಅವಾರ್ಡ್​: ರಕ್ಷಿತ್​ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್​: ರಶ್ಮಿಕಾ ಮಂದಣ್ಣ (ಯಜಮಾನ)

ಅತ್ಯುತ್ತಮ ಹೊಸ ನಟ ಅಭಿಷೇಕ್​ ಅಂಬರೀಷ್​ (ಅಮರ್​)

ಅತ್ಯುತ್ತಮ ಪೋಷಕ ನಟಿ: ಕಾರುಣ್ಯ ರಾಮ್​ (ಮನೆ ಮಾರಾಟಕ್ಕಿದೆ)

ಅತ್ಯುತ್ತಮ ಪೋಷಕ ನಟ: ಬಿ.ಸುರೇಶ್ (ಆಕ್ಟ್-1978)

ಅತ್ಯುತ್ತಮ ಖಳನಟ: ಸಾಯಿ ಕುಮಾರ್​ (ಭರಾಟೆ)

ಅತ್ಯುತ್ತಮ ಚೊಚ್ಚಲ ನಿರ್ದೇಶನ: ಮಯೂರ ರಾಘವೇಂದ್ರ (ಕನ್ನಡ್​ ಗೊತ್ತಿಲ್ಲ)

ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)

ಅತ್ಯುತ್ತಮ ನಿರ್ದೇಶನ: ಹರಿಕೃಷ್ಣ, ಪೋನ್​ ಕುಮಾರ್​ (ಯಜಮಾನ)

ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)

ಅತ್ಯುತ್ತಮ ನೃತ್ಯ ನಿರ್ದೇಶನ: ಇಮ್ರಾನ್​ ಸರ್ದಾರಿಯಾ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಅನನ್ಯಾ ಭಟ್​ (ಗೀತಾ- ಕೇಳದೇ ಕೇಳದೇ)

ಅತ್ಯುತ್ತಮ ಸಾಹಿತ್ಯ: ಪವನ್​ ಒಡೆಯರ್​ (ನಟಸಾರ್ವಭೌಮ)

ಅತ್ಯುತ್ತಮ ಚಿತ್ರ (ಕನ್ನಡ) – ಮೀಡಿಯಾ ಹೌಸ್ ಸ್ಟುಡಿಯೋ (ಯಜಮಾನ)


ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ನಟಿ ತ್ರಿಷಾ ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...