Homeಕರ್ನಾಟಕಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

ಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ

- Advertisement -
- Advertisement -

ಸೈಮಾ 2021ರ ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್‌ನಲ್ಲಿ ನಡೆದಿದ್ದು, ಕನ್ನಡದ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಆಯುಷ್ಮಾನ್​ ಭವ ಚಿತ್ರದ ನಟನೆಗಾಗಿ ರಚಿತಾ ರಾಮ್ ತಮ್ಮದಾಗಿಸಿಕೊಂಡಿದ್ದಾರೆ.

ಯಜಮಾನ ಚಿತ್ರದ ನಟನೆಗಾಗಿ ನಟ ದರ್ಶನ್, ಅವನೇ ಶ್ರೀಮನ್ನಾರಾಯಣ ಚಿತ್ರದ ನಟನೆಗಾಗಿ ರಕ್ಷಿತ್ ಶೆಟ್ಟಿ ಪ್ರಶಸ್ತಿ ಪಡೆದರೆ, ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ‘ಆಕ್ಟ್-1978’ ಚಿತ್ರದಲ್ಲಿನ ನಟನೆಗಾಗಿ ಬಿ.ಸುರೇಶ್ ತಮ್ಮದಾಗಿಸಿಕೊಂಡಿದ್ದಾರೆ.

ತೆಲುಗಿನ ಡಿಯರ್ ಕಾಮ್ರೆಡ್ ಮತ್ತು ಕನ್ನಡದ ಯಜಮಾನ ಚಿತ್ರಗಳಲ್ಲಿನ ನಟನೆಗಾಗಿ ಎರಡು ಭಾಷೆಗಳಲ್ಲಿ ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್‌ಗಳನ್ನು ರಶ್ಮಿಕಾ ಮಂದಣ್ಣ ಬಾಚಿಕೊಂಡಿದ್ದಾರೆ.

ಇದನ್ನೂ ಓದಿ: ಭ್ರಷ್ಟತೆಯ ಬಗ್ಗೆ ಮಧ್ಯಮ ವರ್ಗದ ನಂಬಿಕೆಯನ್ನು ಜನಪ್ರಿಯ ಧಾಟಿಯಲ್ಲಿ ಹೇಳುವ ಆಕ್ಟ್ – 1978

 

View this post on Instagram

 

A post shared by SIIMA (@siimawards)

 

View this post on Instagram

 

A post shared by SIIMA (@siimawards)

ನಾನುಗೌರಿ.ಕಾಂನೊಂದಿಗೆ ಮಾತನಾಡಿರುವ ಸೈಮಾ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದ ನಟ, ನಿರ್ದೇಶಕ ಬಿ.ಸುರೇಶ್, “ಪ್ರಶಸ್ತಿಗಳು ಬಹಳ ಮುಖ್ಯ ಅಲ್ಲ. ಅದಕ್ಕಿಂತ ಮುಖ್ಯವಾದದು ಜರ್ನಿ. ಈ ಪಯಣದಲ್ಲಿ ಏನೇನು ಮಾಡಲು ಸಾಧ್ಯವೋ ಅದನೇಲ್ಲಾ ಮಾಡಬೇಕು ಅಷ್ಟೇ. ಪ್ರಶಸ್ತಿ ಬಂದರೂ, ಬರದಿದ್ದರೂ ವ್ಯತ್ಯಾಸವಿಲ್ಲ. ಪ್ರಶಸ್ತಿಗಳನ್ನು ಮೀರಿದ್ದು ಬದುಕು” ಎಂದಿದ್ದಾರೆ.

“ಈ ಪಾತ್ರ ಮಾಡಲು ನನಗೆ ಕಥೆ ಹೇಳಿದಾಗ ನಾನು ಬೇರೆ ಐದು ಜನ ಕಲಾವಿದರ ಹೆಸರನ್ನು ಹೇಳಿ ಅವರು ನನಗಿಂತ ಚೆನ್ನಾಗಿ ಪಾತ್ರ ನಿರ್ವಹಿಸುತ್ತಾರೆ ಎಂದಿದ್ದೆ. ಆದರೆ, ನಿರ್ದೇಶಕರು ನೀವೇ ಈ ಪಾತ್ರ ಮಾಡಬೇಕು ಎಂದರು” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

 

View this post on Instagram

 

A post shared by SIIMA (@siimawards)

ಸೈಮಾ- 2021ರ ಕನ್ನಡ ವಿಭಾಗದ ಪ್ರಶಸ್ತಿ ವಿಜೇತರ ಪಟ್ಟಿ ಹೀಗಿದೆ.

ಅತ್ಯುತ್ತಮ ನಟ: ದರ್ಶನ್​ (ಯಜಮಾನ)

ಅತ್ಯುತ್ತಮ ನಟಿ: ರಚಿತಾ ರಾಮ್​ (ಆಯುಷ್ಮಾನ್​ ಭವ)

ಅತ್ಯುತ್ತಮ ನಟ ಕ್ರಿಟಿಕ್ಸ್​ ಅವಾರ್ಡ್​: ರಕ್ಷಿತ್​ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ ಅವಾರ್ಡ್​: ರಶ್ಮಿಕಾ ಮಂದಣ್ಣ (ಯಜಮಾನ)

ಅತ್ಯುತ್ತಮ ಹೊಸ ನಟ ಅಭಿಷೇಕ್​ ಅಂಬರೀಷ್​ (ಅಮರ್​)

ಅತ್ಯುತ್ತಮ ಪೋಷಕ ನಟಿ: ಕಾರುಣ್ಯ ರಾಮ್​ (ಮನೆ ಮಾರಾಟಕ್ಕಿದೆ)

ಅತ್ಯುತ್ತಮ ಪೋಷಕ ನಟ: ಬಿ.ಸುರೇಶ್ (ಆಕ್ಟ್-1978)

ಅತ್ಯುತ್ತಮ ಖಳನಟ: ಸಾಯಿ ಕುಮಾರ್​ (ಭರಾಟೆ)

ಅತ್ಯುತ್ತಮ ಚೊಚ್ಚಲ ನಿರ್ದೇಶನ: ಮಯೂರ ರಾಘವೇಂದ್ರ (ಕನ್ನಡ್​ ಗೊತ್ತಿಲ್ಲ)

ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)

ಅತ್ಯುತ್ತಮ ನಿರ್ದೇಶನ: ಹರಿಕೃಷ್ಣ, ಪೋನ್​ ಕುಮಾರ್​ (ಯಜಮಾನ)

ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)

ಅತ್ಯುತ್ತಮ ನೃತ್ಯ ನಿರ್ದೇಶನ: ಇಮ್ರಾನ್​ ಸರ್ದಾರಿಯಾ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಅನನ್ಯಾ ಭಟ್​ (ಗೀತಾ- ಕೇಳದೇ ಕೇಳದೇ)

ಅತ್ಯುತ್ತಮ ಸಾಹಿತ್ಯ: ಪವನ್​ ಒಡೆಯರ್​ (ನಟಸಾರ್ವಭೌಮ)

ಅತ್ಯುತ್ತಮ ಚಿತ್ರ (ಕನ್ನಡ) – ಮೀಡಿಯಾ ಹೌಸ್ ಸ್ಟುಡಿಯೋ (ಯಜಮಾನ)


ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ನಟಿ ತ್ರಿಷಾ ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...