Homeಮುಖಪುಟಭಾರತದ ವಿರುದ್ಧ ಅಮೆರಿಕದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಸಂಚು ಆರೋಪ

ಭಾರತದ ವಿರುದ್ಧ ಅಮೆರಿಕದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಸಂಚು ಆರೋಪ

- Advertisement -
- Advertisement -

ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿವಾದದ ಮಧ್ಯೆಯೇ ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರ ಹತ್ಯೆಯನ್ನು ಮಾಡುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ಹೇಳಿಕೊಂಡಿದೆ.

ಯುಎಸ್ ಈ ಸಂಚನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ ಮತ್ತು ಈ ವಿಷಯವನ್ನು ಭಾರತ ಸರ್ಕಾರದೊಂದಿಗೆ ಹಿರಿಯ ಮಟ್ಟದಲ್ಲಿ ಪ್ರಸ್ತಾಪಿಸಿದೆ ಎಂದು ಶ್ವೇತಭವನ ಬುಧವಾರ ತಿಳಿಸಿದೆ.

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌ ತನ್ನ ಹತ್ಯೆಯ ಸಂಚನ್ನು ಭಾರತ ಮಾಡಿದೆ ಮತ್ತು ಇದನ್ನು ಅಂತರಾಷ್ಟ್ರೀಯ ಭಯೋತ್ಪಾದನೆ ಎಂದು ಆರೋಪಿಸಿದ್ದಾರೆ. ಇದು ಯುಎಸ್ ಸಾರ್ವಭೌಮತ್ವ, ವಾಕ್ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವಕ್ಕೆ ಬೆದರಿಕೆಯಾಗಿದೆ. ಆದ್ದರಿಂದ ನಾನು ಈ  ಬಗ್ಗೆ  ಪ್ರತಿಕ್ರಿಯಿಸಲು ಯುಎಸ್ ಸರ್ಕಾರಕ್ಕೆ ಹೇಳುತ್ತೇನೆ ಎಂದು ಪನ್ನುನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಅಮೆರಿಕ ಕಳವಳ ವ್ಯಕ್ತಪಡಿಸಿದ್ದು, ಭಾರತ ಸರ್ಕಾರ ಈ ಸಂಚಿನ ಬಗ್ಗೆ ತಿಳಿದಿರಬಹುದು ಎಂದು ಹೇಳಿದೆ.

ಶ್ವೇತಭವನದ ವಕ್ತಾರ ಆಡ್ರಿಯೆನ್ ವ್ಯಾಟ್ಸನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಘಟನೆಯ ಬಗ್ಗೆ ತಿಳಿಸಿದಾಗ ಭಾರತೀಯ ಅಧಿಕಾರಿಗಳು ಆಶ್ಚರ್ಯ ಮತ್ತು ಕಳವಳ ವ್ಯಕ್ತಪಡಿಸಿದ್ದಾರೆ. ನಾವು ಈ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ ಮತ್ತು ಉನ್ನತ ಮಟ್ಟದಲ್ಲಿ ಭಾರತ ಸರ್ಕಾರದೊಂದಿಗೆ ಯುಎಸ್ ಸರ್ಕಾರವು ಇದನ್ನು ಪ್ರಸ್ತಾಪಿಸಿದೆ ಎಂದು ಹೇಳಿದ್ದಾರೆ. ಈ ರೀತಿಯ ಚಟುವಟಿಕೆಯು ಅವರ ನೀತಿಯಲ್ಲ. ಭಾರತ ಸರ್ಕಾರವು ಈ ಸಮಸ್ಯೆಯನ್ನು ಮತ್ತಷ್ಟು ತನಿಖೆ ಮಾಡುತ್ತಿದೆ ಮತ್ತು ಮುಂದಿನ ದಿನಗಳಲ್ಲಿ ಅದರ ಬಗ್ಗೆ ಪ್ರತಿಕ್ರಿಯೆಯನ್ನು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬೆನ್ನಲ್ಲೇ ಅಮೇರಿಕದಲ್ಲಿ ಕೆನಡಾದ ಪ್ರಜೆ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರನ್ನು ಕೊಲ್ಲುವ ಸಂಚನ್ನು ಯುಎಸ್ ವಿಫಲಗೊಳಿಸಿದೆ ಎಂದು ಫೈನಾನ್ಶಿಯಲ್ ಟೈಮ್ಸ್ ಬುಧವಾರ ವರದಿ ಮಾಡಿದೆ.

ಅಮೆರಿಕದ ಅಧಿಕಾರಿಗಳು ಈ ಸಂಚಿನ ಬಗ್ಗೆ ಯಾವಾಗ ಅಥವಾ ಹೇಗೆ ತಿಳಿದುಕೊಂಡರು ಅಥವಾ ಆಪಾದಿತ ಹತ್ಯೆಯು ಹೇಗೆ ತಪ್ಪಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಶ್ವೇತಭವನವು ಆರೋಪಗಳನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದೆ.

ಈ ಮೊದಲು ಭಾರತ ಮತ್ತು ಕೆನಡಾ ಕೆನಡಾದಲ್ಲಿ ಖಲಿಸ್ತಾನ್ ಚಳವಳಿಯೊಂದಿಗೆ ಸಂಪರ್ಕವನ್ನು ಹೊಂದಿದ್ದ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಕೆನಡಾ ಪ್ರಧಾನಿಯ ಆರೋಪದ ಬಳಿಕ ಭಾರತ ಮತ್ತು ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿತ್ತು. ಕೆನಡಾದ ಆರೋಪವನ್ನು ಭಾರತ ತಳ್ಳಿಹಾಕಿತ್ತು.

ಹತ್ಯೆಗೆ ಸಂಚು ಆರೋಪಿಸಿದ ಪನ್ನೂನ್, ಹರ್ದೀಪ್ ಸಿಂಗ್ ನಿಜ್ಜರ್‌ನಂತೆ ದಶಕಗಳ ಕಾಲದ ಸಿಖ್‌ ಪ್ರತ್ಯೇಕವಾದಿ ಪ್ರತಿಪಾದಕನಾಗಿದ್ದಾನೆ.

ಪನ್ನೂನ್ ಗಾರ್ಡಿಯನ್‌ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, ಕೆನಡಾದಲ್ಲಿರುವ ಭಾರತೀಯ ಅಧಿಕಾರಿಗಳು ನಿಜ್ಜರ್ ಹತ್ಯೆಯ ತನಿಖೆಯನ್ನು ಕುಂಠಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿಜ್ಜರ್‌ ಗುಂಡೇಟಿಗೆ ಬಲಿಯಾಗಿ 5 ತಿಂಗಳಾದರೂ ಯಾರನ್ನೂ ಬಂಧಿಸಲಾಗಿಲ್ಲ. ಸರಣಿ ಹತ್ಯೆಗಳ ಈ ತನಿಖೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ಟೊರೊಂಟೊ ಅಥವಾ ವ್ಯಾಂಕೋವರ್‌ನಲ್ಲಿ ನಡೆದ ಸರಳವಾದ ಕೊಲೆಯಲ್ಲ. ಇದು ಖಲಿಸ್ತಾನ್ ಪರ ಕಾರ್ಯಕರ್ತನ ಸುಸಂಘಟಿತ ಕೊಲೆಯಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಕದನ ವಿರಾಮ: ಒತ್ತೆಯಾಳುಗಳ ಕುಟುಂಬಸ್ಥರಿಗೆ ನಿರಾಶೆ ಉಂಟು ಮಾಡಿದ ಇಸ್ರೇಲ್‌ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...