Homeಮುಖಪುಟಭಾರತದ ವಿರುದ್ಧ ಅಮೆರಿಕದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಸಂಚು ಆರೋಪ

ಭಾರತದ ವಿರುದ್ಧ ಅಮೆರಿಕದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಸಂಚು ಆರೋಪ

- Advertisement -
- Advertisement -

ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿವಾದದ ಮಧ್ಯೆಯೇ ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರ ಹತ್ಯೆಯನ್ನು ಮಾಡುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ಹೇಳಿಕೊಂಡಿದೆ.

ಯುಎಸ್ ಈ ಸಂಚನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ ಮತ್ತು ಈ ವಿಷಯವನ್ನು ಭಾರತ ಸರ್ಕಾರದೊಂದಿಗೆ ಹಿರಿಯ ಮಟ್ಟದಲ್ಲಿ ಪ್ರಸ್ತಾಪಿಸಿದೆ ಎಂದು ಶ್ವೇತಭವನ ಬುಧವಾರ ತಿಳಿಸಿದೆ.

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌ ತನ್ನ ಹತ್ಯೆಯ ಸಂಚನ್ನು ಭಾರತ ಮಾಡಿದೆ ಮತ್ತು ಇದನ್ನು ಅಂತರಾಷ್ಟ್ರೀಯ ಭಯೋತ್ಪಾದನೆ ಎಂದು ಆರೋಪಿಸಿದ್ದಾರೆ. ಇದು ಯುಎಸ್ ಸಾರ್ವಭೌಮತ್ವ, ವಾಕ್ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವಕ್ಕೆ ಬೆದರಿಕೆಯಾಗಿದೆ. ಆದ್ದರಿಂದ ನಾನು ಈ  ಬಗ್ಗೆ  ಪ್ರತಿಕ್ರಿಯಿಸಲು ಯುಎಸ್ ಸರ್ಕಾರಕ್ಕೆ ಹೇಳುತ್ತೇನೆ ಎಂದು ಪನ್ನುನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಅಮೆರಿಕ ಕಳವಳ ವ್ಯಕ್ತಪಡಿಸಿದ್ದು, ಭಾರತ ಸರ್ಕಾರ ಈ ಸಂಚಿನ ಬಗ್ಗೆ ತಿಳಿದಿರಬಹುದು ಎಂದು ಹೇಳಿದೆ.

ಶ್ವೇತಭವನದ ವಕ್ತಾರ ಆಡ್ರಿಯೆನ್ ವ್ಯಾಟ್ಸನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಘಟನೆಯ ಬಗ್ಗೆ ತಿಳಿಸಿದಾಗ ಭಾರತೀಯ ಅಧಿಕಾರಿಗಳು ಆಶ್ಚರ್ಯ ಮತ್ತು ಕಳವಳ ವ್ಯಕ್ತಪಡಿಸಿದ್ದಾರೆ. ನಾವು ಈ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ ಮತ್ತು ಉನ್ನತ ಮಟ್ಟದಲ್ಲಿ ಭಾರತ ಸರ್ಕಾರದೊಂದಿಗೆ ಯುಎಸ್ ಸರ್ಕಾರವು ಇದನ್ನು ಪ್ರಸ್ತಾಪಿಸಿದೆ ಎಂದು ಹೇಳಿದ್ದಾರೆ. ಈ ರೀತಿಯ ಚಟುವಟಿಕೆಯು ಅವರ ನೀತಿಯಲ್ಲ. ಭಾರತ ಸರ್ಕಾರವು ಈ ಸಮಸ್ಯೆಯನ್ನು ಮತ್ತಷ್ಟು ತನಿಖೆ ಮಾಡುತ್ತಿದೆ ಮತ್ತು ಮುಂದಿನ ದಿನಗಳಲ್ಲಿ ಅದರ ಬಗ್ಗೆ ಪ್ರತಿಕ್ರಿಯೆಯನ್ನು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬೆನ್ನಲ್ಲೇ ಅಮೇರಿಕದಲ್ಲಿ ಕೆನಡಾದ ಪ್ರಜೆ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರನ್ನು ಕೊಲ್ಲುವ ಸಂಚನ್ನು ಯುಎಸ್ ವಿಫಲಗೊಳಿಸಿದೆ ಎಂದು ಫೈನಾನ್ಶಿಯಲ್ ಟೈಮ್ಸ್ ಬುಧವಾರ ವರದಿ ಮಾಡಿದೆ.

ಅಮೆರಿಕದ ಅಧಿಕಾರಿಗಳು ಈ ಸಂಚಿನ ಬಗ್ಗೆ ಯಾವಾಗ ಅಥವಾ ಹೇಗೆ ತಿಳಿದುಕೊಂಡರು ಅಥವಾ ಆಪಾದಿತ ಹತ್ಯೆಯು ಹೇಗೆ ತಪ್ಪಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಶ್ವೇತಭವನವು ಆರೋಪಗಳನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದೆ.

ಈ ಮೊದಲು ಭಾರತ ಮತ್ತು ಕೆನಡಾ ಕೆನಡಾದಲ್ಲಿ ಖಲಿಸ್ತಾನ್ ಚಳವಳಿಯೊಂದಿಗೆ ಸಂಪರ್ಕವನ್ನು ಹೊಂದಿದ್ದ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಕೆನಡಾ ಪ್ರಧಾನಿಯ ಆರೋಪದ ಬಳಿಕ ಭಾರತ ಮತ್ತು ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿತ್ತು. ಕೆನಡಾದ ಆರೋಪವನ್ನು ಭಾರತ ತಳ್ಳಿಹಾಕಿತ್ತು.

ಹತ್ಯೆಗೆ ಸಂಚು ಆರೋಪಿಸಿದ ಪನ್ನೂನ್, ಹರ್ದೀಪ್ ಸಿಂಗ್ ನಿಜ್ಜರ್‌ನಂತೆ ದಶಕಗಳ ಕಾಲದ ಸಿಖ್‌ ಪ್ರತ್ಯೇಕವಾದಿ ಪ್ರತಿಪಾದಕನಾಗಿದ್ದಾನೆ.

ಪನ್ನೂನ್ ಗಾರ್ಡಿಯನ್‌ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, ಕೆನಡಾದಲ್ಲಿರುವ ಭಾರತೀಯ ಅಧಿಕಾರಿಗಳು ನಿಜ್ಜರ್ ಹತ್ಯೆಯ ತನಿಖೆಯನ್ನು ಕುಂಠಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿಜ್ಜರ್‌ ಗುಂಡೇಟಿಗೆ ಬಲಿಯಾಗಿ 5 ತಿಂಗಳಾದರೂ ಯಾರನ್ನೂ ಬಂಧಿಸಲಾಗಿಲ್ಲ. ಸರಣಿ ಹತ್ಯೆಗಳ ಈ ತನಿಖೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ಟೊರೊಂಟೊ ಅಥವಾ ವ್ಯಾಂಕೋವರ್‌ನಲ್ಲಿ ನಡೆದ ಸರಳವಾದ ಕೊಲೆಯಲ್ಲ. ಇದು ಖಲಿಸ್ತಾನ್ ಪರ ಕಾರ್ಯಕರ್ತನ ಸುಸಂಘಟಿತ ಕೊಲೆಯಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಕದನ ವಿರಾಮ: ಒತ್ತೆಯಾಳುಗಳ ಕುಟುಂಬಸ್ಥರಿಗೆ ನಿರಾಶೆ ಉಂಟು ಮಾಡಿದ ಇಸ್ರೇಲ್‌ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...