Homeಮುಖಪುಟಭಾರತದ ವಿರುದ್ಧ ಅಮೆರಿಕದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಸಂಚು ಆರೋಪ

ಭಾರತದ ವಿರುದ್ಧ ಅಮೆರಿಕದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಸಂಚು ಆರೋಪ

- Advertisement -
- Advertisement -

ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿವಾದದ ಮಧ್ಯೆಯೇ ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರ ಹತ್ಯೆಯನ್ನು ಮಾಡುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ಹೇಳಿಕೊಂಡಿದೆ.

ಯುಎಸ್ ಈ ಸಂಚನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ ಮತ್ತು ಈ ವಿಷಯವನ್ನು ಭಾರತ ಸರ್ಕಾರದೊಂದಿಗೆ ಹಿರಿಯ ಮಟ್ಟದಲ್ಲಿ ಪ್ರಸ್ತಾಪಿಸಿದೆ ಎಂದು ಶ್ವೇತಭವನ ಬುಧವಾರ ತಿಳಿಸಿದೆ.

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌ ತನ್ನ ಹತ್ಯೆಯ ಸಂಚನ್ನು ಭಾರತ ಮಾಡಿದೆ ಮತ್ತು ಇದನ್ನು ಅಂತರಾಷ್ಟ್ರೀಯ ಭಯೋತ್ಪಾದನೆ ಎಂದು ಆರೋಪಿಸಿದ್ದಾರೆ. ಇದು ಯುಎಸ್ ಸಾರ್ವಭೌಮತ್ವ, ವಾಕ್ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವಕ್ಕೆ ಬೆದರಿಕೆಯಾಗಿದೆ. ಆದ್ದರಿಂದ ನಾನು ಈ  ಬಗ್ಗೆ  ಪ್ರತಿಕ್ರಿಯಿಸಲು ಯುಎಸ್ ಸರ್ಕಾರಕ್ಕೆ ಹೇಳುತ್ತೇನೆ ಎಂದು ಪನ್ನುನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಅಮೆರಿಕ ಕಳವಳ ವ್ಯಕ್ತಪಡಿಸಿದ್ದು, ಭಾರತ ಸರ್ಕಾರ ಈ ಸಂಚಿನ ಬಗ್ಗೆ ತಿಳಿದಿರಬಹುದು ಎಂದು ಹೇಳಿದೆ.

ಶ್ವೇತಭವನದ ವಕ್ತಾರ ಆಡ್ರಿಯೆನ್ ವ್ಯಾಟ್ಸನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಘಟನೆಯ ಬಗ್ಗೆ ತಿಳಿಸಿದಾಗ ಭಾರತೀಯ ಅಧಿಕಾರಿಗಳು ಆಶ್ಚರ್ಯ ಮತ್ತು ಕಳವಳ ವ್ಯಕ್ತಪಡಿಸಿದ್ದಾರೆ. ನಾವು ಈ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ ಮತ್ತು ಉನ್ನತ ಮಟ್ಟದಲ್ಲಿ ಭಾರತ ಸರ್ಕಾರದೊಂದಿಗೆ ಯುಎಸ್ ಸರ್ಕಾರವು ಇದನ್ನು ಪ್ರಸ್ತಾಪಿಸಿದೆ ಎಂದು ಹೇಳಿದ್ದಾರೆ. ಈ ರೀತಿಯ ಚಟುವಟಿಕೆಯು ಅವರ ನೀತಿಯಲ್ಲ. ಭಾರತ ಸರ್ಕಾರವು ಈ ಸಮಸ್ಯೆಯನ್ನು ಮತ್ತಷ್ಟು ತನಿಖೆ ಮಾಡುತ್ತಿದೆ ಮತ್ತು ಮುಂದಿನ ದಿನಗಳಲ್ಲಿ ಅದರ ಬಗ್ಗೆ ಪ್ರತಿಕ್ರಿಯೆಯನ್ನು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬೆನ್ನಲ್ಲೇ ಅಮೇರಿಕದಲ್ಲಿ ಕೆನಡಾದ ಪ್ರಜೆ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರನ್ನು ಕೊಲ್ಲುವ ಸಂಚನ್ನು ಯುಎಸ್ ವಿಫಲಗೊಳಿಸಿದೆ ಎಂದು ಫೈನಾನ್ಶಿಯಲ್ ಟೈಮ್ಸ್ ಬುಧವಾರ ವರದಿ ಮಾಡಿದೆ.

ಅಮೆರಿಕದ ಅಧಿಕಾರಿಗಳು ಈ ಸಂಚಿನ ಬಗ್ಗೆ ಯಾವಾಗ ಅಥವಾ ಹೇಗೆ ತಿಳಿದುಕೊಂಡರು ಅಥವಾ ಆಪಾದಿತ ಹತ್ಯೆಯು ಹೇಗೆ ತಪ್ಪಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಶ್ವೇತಭವನವು ಆರೋಪಗಳನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದೆ.

ಈ ಮೊದಲು ಭಾರತ ಮತ್ತು ಕೆನಡಾ ಕೆನಡಾದಲ್ಲಿ ಖಲಿಸ್ತಾನ್ ಚಳವಳಿಯೊಂದಿಗೆ ಸಂಪರ್ಕವನ್ನು ಹೊಂದಿದ್ದ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಕೆನಡಾ ಪ್ರಧಾನಿಯ ಆರೋಪದ ಬಳಿಕ ಭಾರತ ಮತ್ತು ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿತ್ತು. ಕೆನಡಾದ ಆರೋಪವನ್ನು ಭಾರತ ತಳ್ಳಿಹಾಕಿತ್ತು.

ಹತ್ಯೆಗೆ ಸಂಚು ಆರೋಪಿಸಿದ ಪನ್ನೂನ್, ಹರ್ದೀಪ್ ಸಿಂಗ್ ನಿಜ್ಜರ್‌ನಂತೆ ದಶಕಗಳ ಕಾಲದ ಸಿಖ್‌ ಪ್ರತ್ಯೇಕವಾದಿ ಪ್ರತಿಪಾದಕನಾಗಿದ್ದಾನೆ.

ಪನ್ನೂನ್ ಗಾರ್ಡಿಯನ್‌ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, ಕೆನಡಾದಲ್ಲಿರುವ ಭಾರತೀಯ ಅಧಿಕಾರಿಗಳು ನಿಜ್ಜರ್ ಹತ್ಯೆಯ ತನಿಖೆಯನ್ನು ಕುಂಠಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿಜ್ಜರ್‌ ಗುಂಡೇಟಿಗೆ ಬಲಿಯಾಗಿ 5 ತಿಂಗಳಾದರೂ ಯಾರನ್ನೂ ಬಂಧಿಸಲಾಗಿಲ್ಲ. ಸರಣಿ ಹತ್ಯೆಗಳ ಈ ತನಿಖೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ಟೊರೊಂಟೊ ಅಥವಾ ವ್ಯಾಂಕೋವರ್‌ನಲ್ಲಿ ನಡೆದ ಸರಳವಾದ ಕೊಲೆಯಲ್ಲ. ಇದು ಖಲಿಸ್ತಾನ್ ಪರ ಕಾರ್ಯಕರ್ತನ ಸುಸಂಘಟಿತ ಕೊಲೆಯಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಕದನ ವಿರಾಮ: ಒತ್ತೆಯಾಳುಗಳ ಕುಟುಂಬಸ್ಥರಿಗೆ ನಿರಾಶೆ ಉಂಟು ಮಾಡಿದ ಇಸ್ರೇಲ್‌ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...