Homeಅಂತರಾಷ್ಟ್ರೀಯಭಾರತದ ರೈತರ ಬೆಂಬಲಕ್ಕೆ ನಿಂತ ಸಿಖ್-ಅಮೆರಿಕನ್ನರಿಂದ ಪ್ರತಿಭಟನಾ ರ್‍ಯಾಲಿ

ಭಾರತದ ರೈತರ ಬೆಂಬಲಕ್ಕೆ ನಿಂತ ಸಿಖ್-ಅಮೆರಿಕನ್ನರಿಂದ ಪ್ರತಿಭಟನಾ ರ್‍ಯಾಲಿ

ರೈತರಿಲ್ಲದೆ, ಆಹಾರವಿಲ್ಲ. ಕೃಷಿ ಇಲ್ಲದೆ, ಪಂಜಾಬ್‌ನಲ್ಲಿ ಲಕ್ಷಾಂತರ ಜನರಿಗೆ ಜೀವನೋಪಾಯವಿಲ್ಲ, ಅವರು ಹಲವು ಪೀಳಿಗೆಯಿಂದ ಆದಾಯದ ಮೂಲವಾಗಿ ಕೃಷಿಯನ್ನು ಅವಲಂಬಿಸಿದ್ದಾರೆ

- Advertisement -
- Advertisement -

ದೇಶದಲ್ಲಿ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ರೈತರನ್ನು ಬೆಂಬಲಿಸಿ ನೂರಾರು ಸಿಖ್-ಅಮೆರಿಕನ್ನರು ಅಮೆರಿಕದಾದ್ಯಂತ ಹಲವಾರು ನಗರಗಳಲ್ಲಿ ಶಾಂತಿಯುತ ಪ್ರತಿಭಟನಾ ರ್‍ಯಾಲಿಗಳನ್ನು ನಡೆಸಿದ್ದಾರೆ.

ಕ್ಯಾಲಿಫೋರ್ನಿಯಾದ ವಿವಿಧ ಭಾಗಗಳಿಂದ ಬಂದಿದ್ದ ಪ್ರತಿಭಟನಾಕಾರರ ದಂಡು ಬೇ ಸೇತುವೆ ಮೇಲೆ ಟ್ರಾಫಿಕ್ ಜಾಮ್‌ಗೆ ಕಾರಣವಾಗಿತ್ತು. ಪ್ರತಿಭಟನಾಕಾರರು ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ರಾಯಭಾರಿ ಕಚೇರಿ ಕಡೆಗೆ ಸಾಗುತ್ತಿದ್ದರು. ಇತ್ತ ನೂರಾರು ಜನರು ಡೌನ್‌ಟೌನ್ ಇಂಡಿಯಾನಾಪೊಲಿಸ್‌ನಲ್ಲಿ ಜಮಾಯಿಸಿದ್ದರು.

ಎರಡೂ ಸ್ಥಳಗಳಲ್ಲಿ ಪ್ರತಿಭಟನಾಕಾರರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದರು. ಈ ಕಾನೂನುಗಳು ಭಾರತೀಯ ರೈತರನ್ನು ಬಡತನದತ್ತ ತಳ್ಳುತ್ತವೆ ಮತ್ತು ಕಾರ್ಪೊರೇಟ್ ಕ್ಷೇತ್ರಗಳಿಗೆ ಏಕಸ್ವಾಮ್ಯವನ್ನು ನೀಡುತ್ತದೆ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

“ರೈತರು ಯಾವುದೇ ರಾಷ್ಟ್ರದ ಆತ್ಮ. ನಾವು ನಮ್ಮ ಆತ್ಮವನ್ನು ರಕ್ಷಿಸಬೇಕು. ಯುಎಸ್ ಮತ್ತು ಕೆನಡಾದ ಅನೇಕ ನಗರಗಳು ಒಟ್ಟಾಗಿ ಭಾರತದ ಕೃಷಿ ಮಾರುಕಟ್ಟೆಯನ್ನು ಖಾಸಗಿ ವಲಯಕ್ಕೆ ತೆರೆಯುವ ಮಸೂದೆಗಳನ್ನು ವಾಪಸ್ ಪಡೆಯಲು ಒಗ್ಗೂಡಿದ್ದಾರೆ. ಇದರಿಂದ ಸ್ವತಂತ್ರ ಕೃಷಿ ಸಮುದಾಯಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗುತ್ತದೆ ಮತ್ತು ಬೆಳೆಗಳ ಮಾರುಕಟ್ಟೆ ಮೌಲ್ಯವನ್ನು ದುರ್ಬಲಗೊಳಿಸಲಾಗುತ್ತದೆ “ಎಂದು ಇಂಡಿಯಾನದ ದ ಗುರಿಂದರ್ ಸಿಂಗ್ ಖಲ್ಸಾ ಹೇಳಿದ್ದಾರೆ.

ಇಂಡಿಯಾನಾಪೊಲಿಸ್‌ನ ಡೌನ್‌ಟೌನ್‌ನಲ್ಲಿ ನಡೆದ ರ್‍ಯಾಲಿಯ ಸಂಘಟಕರಲ್ಲಿ ಖಲ್ಸಾ ಕೂಡ ಒಬ್ಬರು. ಪತ್ರತಿಭಟನೆಯಲ್ಲಿ ಇಂಡಿಯಾನಾದ ವಿವಿಧ ಭಾಗಗಳಿಂದ ಸುಮಾರು 500 ಸಿಖ್ ಅಮೆರಿಕನ್ನರು ಭಾಗವಹಿಸಿದ್ದರು.

ಶುಕ್ರವಾರ(ಡಿ.4) ರಂದು ಚಿಕಾಗೋದಲ್ಲಿ ಸಿಖ್-ಅಮೆರಿಕನ್ನರ ಸಭೆ ಮತ್ತು ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಮುಂದೆ ಪ್ರತಿಭಟನಾ ರ್‍ಯಾಲಿ ನಡೆದಿತ್ತು.

ಬೇ ಏರಿಯಾದಲ್ಲಿ ಭಾನುವಾರ ನಡೆದ ಪ್ರತಿಭಟನೆ, ನ್ಯೂಯಾರ್ಕ್, ಹೂಸ್ಟನ್, ಮಿಚಿಗನ್, ಚಿಕಾಗೊ ಮತ್ತು ವಾಷಿಂಗ್ಟನ್ ಡಿ.ಸಿ ಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳು ಒಗ್ಗಟ್ಟಿನ ಪ್ರದರ್ಶನವಾಗಿದೆ ಎಂದು ಸಂಘಟಕರು ಹೇಳಿದ್ದಾರೆ. ಏಕೆಂದರೆ ವಿಶ್ವದಾದ್ಯಂತ ನೆಲೆಸಿರುವ ಸಿಖ್ಖರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಒತ್ತಾಯಿಸುತ್ತಿದ್ದಾರೆ ಎಂದಿದ್ದಾರೆ.

“ರೈತರಿಲ್ಲದೆ, ಆಹಾರವಿಲ್ಲ. ಕೃಷಿ ಇಲ್ಲದೆ, ಪಂಜಾಬ್‌ನಲ್ಲಿ ಲಕ್ಷಾಂತರ ಜನರಿಗೆ ಜೀವನೋಪಾಯವಿಲ್ಲ, ಅವರು ಹಲವು ಪೀಳಿಗೆಯಿಂದ ಆದಾಯದ ಮೂಲವಾಗಿ ಕೃಷಿಯನ್ನು ಅವಲಂಬಿಸಿದ್ದಾರೆ ಎಂದಿದ್ದಾರೆ.

ಭಾರತದಲ್ಲಿ ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ಡಿಸೆಂಬರ್ 8 ರ ಮಂಗಳವಾರ ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ.


ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...