Homeಮುಖಪುಟಸಿಖ್ ಪೊಲೀಸ್ ಅಧಿಕಾರಿಗೆ "ಖಲಿಸ್ತಾನಿ" ಹಣೆಪಟ್ಟಿ ಕಟ್ಟಿದ ಬಿಜೆಪಿಗರು; ಸುವೇಂದು ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ

ಸಿಖ್ ಪೊಲೀಸ್ ಅಧಿಕಾರಿಗೆ “ಖಲಿಸ್ತಾನಿ” ಹಣೆಪಟ್ಟಿ ಕಟ್ಟಿದ ಬಿಜೆಪಿಗರು; ಸುವೇಂದು ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಪ.ಬಂಗಾಳದ ಸಿಖ್ ಪೊಲೀಸ್ ಅಧಿಕಾರಿಯೊಬ್ಬರಿಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ “ಖಲಿಸ್ತಾನಿ” ಎಂದು ಕರೆದಿದ್ದು, ತಮ್ಮದೇ ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದ ಸಿಖ್‌ ಸಮುದಾಯಕ್ಕೆ ಸೇರಿದ ಐಪಿಎಸ್‌ ಅಧಿಕಾರಿಯನ್ನು ಸಿಖ್‌ ಪ್ರತ್ಯೇಕತಾವಾದಿಗಳಿಗೆ ಹೋಲಿಕೆ ಮಾಡಿದ್ದಾರೆ, ಆ ಮೂಲಕ ದೇಶ ವಿರೋಧಿ ಎಂದು ಬಿಂಬಿಸಲು ಹೊರಟ್ಟಿದ್ದಾರೆ. ಕಾನೂನು ರಕ್ಷಕರನ್ನು ಧರ್ಮದ ಹೆಸರಿನಲ್ಲಿ ಪ್ರತ್ಯೇಖಿಸಿ ಹೇಳಿಕೆ ಕೊಡುವ ಬಿಜೆಪಿ ನಾಯಕರ ನಡೆಯು ಆಘಾತಕಾರಿಯಾಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಬಿಜೆಪಿಯ ಸುವೇಂದು ಅಧಿಕಾರಿ ನಾಚಿಕೆಯಿಲ್ಲದೆ ಪೇಟ ಧರಿಸಿದ್ದ IPS ಅಧಿಕಾರಿಯನ್ನು ‘ಖಲಿಸ್ತಾನಿ’ ಎಂದು ಕರೆದಿದ್ದಾರೆ. ಬಿಜೆಪಿಯ ಈ ಲಜ್ಜೆಗೆಟ್ಟ ಮತ್ತು ವಿಭಜಕ ಹೇಳಿಕೆ ವಿರುದ್ಧ ಅಸನ್ಸೋಲ್‌ನ ಸಿಖ್ ಸಮುದಾಯವು ಬೀದಿಗಿಳಿದಿದೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ವಿವಾದಿತ ಸಂದೇಶಖಲಿ ಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸಿದ ವಿಪಕ್ಷ ಬಿಜೆಪಿ ನಾಯಕರನ್ನು ತಡೆದಾಗ ಗುಂಪಿನಲ್ಲಿ ಓರ್ವರು ಅಧಿಕಾರಿಯನ್ನು ಖಾಲಿಸ್ತಾನಿ ಎಂದು ಕರೆದಿದ್ದಾರೆ. ಖಾಲಿಸ್ತಾನಿ ಎಂದು ಕರೆದಿರುವುದನ್ನು ಕೇಳಿ ಐಪಿಎಸ್‌ ಅಧಿಕಾರಿ ಜಸ್‌ಪ್ರೀತ್‌ ಸಿಂಗ್‌, ಪೇಟ ಧರಿಸಿದ್ದೇನೆಂಬ ಮಾತ್ರಕ್ಕೆ ಖಾಲಿಸ್ತಾನಿ ಎನ್ನುತ್ತೀರಾ? ನಾನು ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇನೆ. ನೀವು ನನ್ನ ಧರ್ಮದ ಮೇಲೆ ದಾಳಿ ಮಾಡಬಾರದು. ನಿಮ್ಮ ಧರ್ಮದ ಬಗ್ಗೆ ನಾನು ಏನನ್ನೂ ಹೇಳಿಲ್ಲ ಎಂದು ಸಿಟ್ಟಿಗೆದ್ದು ಪೊಲೀಸ್‌ ಅಧಿಕಾರಿ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇಬ್ಬರು ಬಿಜೆಪಿ ನಾಯಕರು  ಅಸನ್ಸೋಲ್ ದಕ್ಷಿಣ ಶಾಸಕ ಅಗ್ನಿಮಿತ್ರ ಪಾಲ್ ಮತ್ತು ಸುವೇಂದು ಅಧಿಕಾರಿ ವಿಡಿಯೋದಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದಾರೆ.

ದಿ ವೈರ್‌ನೊಂದಿಗೆ ಮಾತನಾಡಿದ ಸಿಂಗ್, ಈ ಘಟನೆ ನಡೆದಾಗ ಅವರು ಬಸಿರ್‌ಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಸಂದೇಶಖಾಲಿ ಗ್ರಾಮದಲ್ಲಿ ಕರ್ತವ್ಯದಲ್ಲಿದ್ದರು. ಸೆಕ್ಷನ್ 144 CrPC ಜಾರಿಯಲ್ಲಿರುವುದರಿಂದ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೇತೃತ್ವದಲ್ಲಿ ನಾವು ರಾಜಕಾರಣಿಗಳ ಗುಂಪನ್ನು  ಸಂದೇಶಖಾಲಿ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿದ್ದೇವೆ. ನಾವು ರಾಜಕಾರಣಿಗಳನ್ನು ನಿಲ್ಲಿಸಿದಾಗ ಸುವೆಂದು ಅಧಿಕಾರಿ ನನ್ನನ್ನು ‘ಖಲಿಸ್ತಾನಿ’ ಎಂದು ಕರೆದರು, ಅದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಇದರ ವಿರುದ್ಧ ನಾನು ತೀವ್ರವಾಗಿ ಪ್ರತಿಕ್ರಿಯಿಸಿದೆ ಎಂದು ಹೇಳಿದ್ದಾರೆ.

ತಮ್ಮದೇ ರಾಜ್ಯದ ಪೊಲೀಸ್‌ ಅಧಿಕಾರಿಯೋರ್ವರನ್ನು ಖಲಿಸ್ತಾನಿ ಎಂದು ಕರೆದಿರುವುದು ಬಿಜೆಪಿ ವಿರುದ್ಧ ವ್ಯಾಪಕವಾಗಿ ಆಕ್ರೋಶಕ್ಕೆ ಕಾರಣವಾಗಿದೆ. ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಖ್ ಸಂಘಟನೆ ಎಸ್‌ಜಿಪಿಸಿ (ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ) ಮತ್ತು ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ. ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಈ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ರಾಜ್ಯ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಬಿಜೆಪಿ ಆರೋಪವನ್ನು ತಳ್ಳಿಹಾಕಿದ್ದು, ಪೊಲೀಸರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ ಅಧೀನರಾಗಿದ್ದಾರೆ ಎಂದು ಪ್ರತ್ಯಾರೋಪವನ್ನು ಮಾಡಿದೆ.

ನಮ್ಮದೇ ಅಧಿಕಾರಿಯೊಬ್ಬರನ್ನು ರಾಜ್ಯದ ವಿರೋಧ ಪಕ್ಷದ ನಾಯಕ ‘ಖಲಿಸ್ತಾನಿ’ ಎಂದು ಕರೆದರು. ಅದು ಅವರ ತಪ್ಪು, ಅವರು ಹೆಮ್ಮೆಯ ಸಿಖ್ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸುತ್ತಿರುವ ಸಮರ್ಥ ಪೋಲೀಸ್ ಅಧಿಕಾರಿಯಾಗಿದ್ದಾರೆ. ಬಿಜೆಪಿ ನಾಯಕರ ಹೇಳಿಕೆ ತುಂಬಾ ದುರುದ್ದೇಶಪೂರಿತವಾಗಿದೆ. ಇದು ಕೋಮು ಪ್ರಚೋದನೆಯಾಗಿರುವುದರಿಂದ ಜನಾಂಗೀಯವಾಗಿದೆ. ಇದು ಕ್ರಿಮಿನಲ್ ಕೃತ್ಯವಾಗಿದೆ ಎಂದು ರಾಜ್ಯ ಪೊಲೀಸ್‌ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ.

ಸುವೇಂದು ಅಧಿಕಾರಿ ನೇತೃತ್ವದಲ್ಲಿ ಪ್ರತಿಭಟನಾಕಾರರು ಸಂದೇಶಖಾಲಿಗೆ ತೆರಳುತ್ತಿದ್ದಾಗ ಪೊಲೀಸರು ತಡೆದಿದ್ದಾರೆ. ಬಳಿಕ ನಡೆದ ಘರ್ಷಣೆಯ ವೇಳೆ ಪ್ರತಿಭಟನಾಕಾರರಲ್ಲಿ ಒಬ್ಬರು ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಯನ್ನು ಖಲಿಸ್ತಾನಿ ಎಂದು ಕರೆದಿದ್ದಾರೆ.

ಬಿಜೆಪಿ ಒಡೆದು ಆಳುವ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದನ್ನು ಖಂಡಿಸಿದ್ದಾರೆ. ಇಂದು ಬಿಜೆಪಿಯ ಒಡೆದು ಆಳುವ ರಾಜಕಾರಣ, ನಾಚಿಕೆಯಿಲ್ಲದೆ ಸಾಂವಿಧಾನಿಕ ಗಡಿಗಳನ್ನು ಮೀರಿದೆ. ಬಿಜೆಪಿ ಪ್ರಕಾರ, ಟರ್ಬನ್ ಧರಿಸಿರುವ ಪ್ರತಿಯೊಬ್ಬ ವ್ಯಕ್ತಿಯು ಖಲಿಸ್ತಾನಿ. ನಮ್ಮ ಸಿಖ್ ಸಹೋದರರು ಮತ್ತು ಸಹೋದರಿಯರ ಖ್ಯಾತಿಯನ್ನು ದುರ್ಬಲಗೊಳಿಸುವ ಈ ದಿಟ್ಟ ಪ್ರಯತ್ನವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ, ಬಂಗಾಳದ ಸಾಮಾಜಿಕ ಸಾಮರಸ್ಯವನ್ನು ರಕ್ಷಿಸುವಲ್ಲಿ ನಾವು ದೃಢವಾಗಿ ನಿಲ್ಲುತ್ತೇವೆ ಮತ್ತು ಅದನ್ನು ಅಡ್ಡಿಪಡಿಸುವ ಯಾವುದೇ ಪ್ರಯತ್ನಗಳನ್ನು ತಡೆಯಲು ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ದೇಶದ ಸ್ವಾತಂತ್ರ್ಯ ಮತ್ತು ರಕ್ಷಣೆಗಾಗಿ ಸಿಖ್ಖರು ಅತಿ ಹೆಚ್ಚು ತ್ಯಾಗ ಮಾಡಿದ್ದಾರೆ ಎಂಬುವುದನ್ನು ದೇಶದಲ್ಲಿ ಇಂತಹ ಚಿಂತನೆಯನ್ನು ಹೊಂದಿರುವ ನಾಯಕರು ಎಂದಿಗೂ ಮರೆಯಬಾರದು. ದೇಶದಲ್ಲಿ ಅಂತಹ ಜನರು ಉದ್ದೇಶಪೂರ್ವಕವಾಗಿ ದ್ವೇಷದ ವಾತಾವರಣವನ್ನು ಸೃಷ್ಟಿಸುತ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ ಆದರೆ ಸರ್ಕಾರಗಳು ಮೌನವಾಗಿವೆ ಎಂದು SGCP ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಾಮಿ ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು ಹಬ್ಬಿಸಿರುವ ಧಾರ್ಮಿಕ ಮತಾಂಧತೆಯ ಕುಟುಕು ನಮ್ಮ ವೈವಿಧ್ಯಮಯ ಸಂಸ್ಕೃತಿಯನ್ನು ವಿಷಪೂರಿತಗೊಳಿಸುತ್ತಿದೆ, ಕಾನೂನು ರಕ್ಷಕರನ್ನು ಧರ್ಮದ ಹೆಸರಿನಲ್ಲಿ ಭಯೋತ್ಪಾದಕರು ಎಂದು ಹೆಸರಿಸಲಾಗುತ್ತಿದೆ. ಸಬ್ಕಾ ಸಾಥ್ ಅಂದರೆ ಈಗ ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಕಿತ್ತುಹಾಕುವುದಾ? ಮಿಸ್ಟರ್ ಮೋದಿ, ನಿಮ್ಮ ಏಕೈಕ ಉದ್ದೇಶವೆಂದರೆ ಧರ್ಮಗಳು, ಪಂಗಡಗಳು ಮತ್ತು ಸಮುದಾಯಗಳ ನಡುವೆ ಅಸಂಗತತೆ, ದ್ವೇಷ ಮತ್ತು ಹಿಂಸಾಚಾರವನ್ನು ಹರಡುವುದಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...