Homeಮುಖಪುಟಸಿಖ್ ಪೊಲೀಸ್ ಅಧಿಕಾರಿಗೆ "ಖಲಿಸ್ತಾನಿ" ಹಣೆಪಟ್ಟಿ ಕಟ್ಟಿದ ಬಿಜೆಪಿಗರು; ಸುವೇಂದು ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ

ಸಿಖ್ ಪೊಲೀಸ್ ಅಧಿಕಾರಿಗೆ “ಖಲಿಸ್ತಾನಿ” ಹಣೆಪಟ್ಟಿ ಕಟ್ಟಿದ ಬಿಜೆಪಿಗರು; ಸುವೇಂದು ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಪ.ಬಂಗಾಳದ ಸಿಖ್ ಪೊಲೀಸ್ ಅಧಿಕಾರಿಯೊಬ್ಬರಿಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ “ಖಲಿಸ್ತಾನಿ” ಎಂದು ಕರೆದಿದ್ದು, ತಮ್ಮದೇ ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದ ಸಿಖ್‌ ಸಮುದಾಯಕ್ಕೆ ಸೇರಿದ ಐಪಿಎಸ್‌ ಅಧಿಕಾರಿಯನ್ನು ಸಿಖ್‌ ಪ್ರತ್ಯೇಕತಾವಾದಿಗಳಿಗೆ ಹೋಲಿಕೆ ಮಾಡಿದ್ದಾರೆ, ಆ ಮೂಲಕ ದೇಶ ವಿರೋಧಿ ಎಂದು ಬಿಂಬಿಸಲು ಹೊರಟ್ಟಿದ್ದಾರೆ. ಕಾನೂನು ರಕ್ಷಕರನ್ನು ಧರ್ಮದ ಹೆಸರಿನಲ್ಲಿ ಪ್ರತ್ಯೇಖಿಸಿ ಹೇಳಿಕೆ ಕೊಡುವ ಬಿಜೆಪಿ ನಾಯಕರ ನಡೆಯು ಆಘಾತಕಾರಿಯಾಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಬಿಜೆಪಿಯ ಸುವೇಂದು ಅಧಿಕಾರಿ ನಾಚಿಕೆಯಿಲ್ಲದೆ ಪೇಟ ಧರಿಸಿದ್ದ IPS ಅಧಿಕಾರಿಯನ್ನು ‘ಖಲಿಸ್ತಾನಿ’ ಎಂದು ಕರೆದಿದ್ದಾರೆ. ಬಿಜೆಪಿಯ ಈ ಲಜ್ಜೆಗೆಟ್ಟ ಮತ್ತು ವಿಭಜಕ ಹೇಳಿಕೆ ವಿರುದ್ಧ ಅಸನ್ಸೋಲ್‌ನ ಸಿಖ್ ಸಮುದಾಯವು ಬೀದಿಗಿಳಿದಿದೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ವಿವಾದಿತ ಸಂದೇಶಖಲಿ ಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸಿದ ವಿಪಕ್ಷ ಬಿಜೆಪಿ ನಾಯಕರನ್ನು ತಡೆದಾಗ ಗುಂಪಿನಲ್ಲಿ ಓರ್ವರು ಅಧಿಕಾರಿಯನ್ನು ಖಾಲಿಸ್ತಾನಿ ಎಂದು ಕರೆದಿದ್ದಾರೆ. ಖಾಲಿಸ್ತಾನಿ ಎಂದು ಕರೆದಿರುವುದನ್ನು ಕೇಳಿ ಐಪಿಎಸ್‌ ಅಧಿಕಾರಿ ಜಸ್‌ಪ್ರೀತ್‌ ಸಿಂಗ್‌, ಪೇಟ ಧರಿಸಿದ್ದೇನೆಂಬ ಮಾತ್ರಕ್ಕೆ ಖಾಲಿಸ್ತಾನಿ ಎನ್ನುತ್ತೀರಾ? ನಾನು ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇನೆ. ನೀವು ನನ್ನ ಧರ್ಮದ ಮೇಲೆ ದಾಳಿ ಮಾಡಬಾರದು. ನಿಮ್ಮ ಧರ್ಮದ ಬಗ್ಗೆ ನಾನು ಏನನ್ನೂ ಹೇಳಿಲ್ಲ ಎಂದು ಸಿಟ್ಟಿಗೆದ್ದು ಪೊಲೀಸ್‌ ಅಧಿಕಾರಿ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇಬ್ಬರು ಬಿಜೆಪಿ ನಾಯಕರು  ಅಸನ್ಸೋಲ್ ದಕ್ಷಿಣ ಶಾಸಕ ಅಗ್ನಿಮಿತ್ರ ಪಾಲ್ ಮತ್ತು ಸುವೇಂದು ಅಧಿಕಾರಿ ವಿಡಿಯೋದಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದಾರೆ.

ದಿ ವೈರ್‌ನೊಂದಿಗೆ ಮಾತನಾಡಿದ ಸಿಂಗ್, ಈ ಘಟನೆ ನಡೆದಾಗ ಅವರು ಬಸಿರ್‌ಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಸಂದೇಶಖಾಲಿ ಗ್ರಾಮದಲ್ಲಿ ಕರ್ತವ್ಯದಲ್ಲಿದ್ದರು. ಸೆಕ್ಷನ್ 144 CrPC ಜಾರಿಯಲ್ಲಿರುವುದರಿಂದ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೇತೃತ್ವದಲ್ಲಿ ನಾವು ರಾಜಕಾರಣಿಗಳ ಗುಂಪನ್ನು  ಸಂದೇಶಖಾಲಿ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿದ್ದೇವೆ. ನಾವು ರಾಜಕಾರಣಿಗಳನ್ನು ನಿಲ್ಲಿಸಿದಾಗ ಸುವೆಂದು ಅಧಿಕಾರಿ ನನ್ನನ್ನು ‘ಖಲಿಸ್ತಾನಿ’ ಎಂದು ಕರೆದರು, ಅದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಇದರ ವಿರುದ್ಧ ನಾನು ತೀವ್ರವಾಗಿ ಪ್ರತಿಕ್ರಿಯಿಸಿದೆ ಎಂದು ಹೇಳಿದ್ದಾರೆ.

ತಮ್ಮದೇ ರಾಜ್ಯದ ಪೊಲೀಸ್‌ ಅಧಿಕಾರಿಯೋರ್ವರನ್ನು ಖಲಿಸ್ತಾನಿ ಎಂದು ಕರೆದಿರುವುದು ಬಿಜೆಪಿ ವಿರುದ್ಧ ವ್ಯಾಪಕವಾಗಿ ಆಕ್ರೋಶಕ್ಕೆ ಕಾರಣವಾಗಿದೆ. ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಖ್ ಸಂಘಟನೆ ಎಸ್‌ಜಿಪಿಸಿ (ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ) ಮತ್ತು ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ. ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಈ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ರಾಜ್ಯ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಬಿಜೆಪಿ ಆರೋಪವನ್ನು ತಳ್ಳಿಹಾಕಿದ್ದು, ಪೊಲೀಸರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ ಅಧೀನರಾಗಿದ್ದಾರೆ ಎಂದು ಪ್ರತ್ಯಾರೋಪವನ್ನು ಮಾಡಿದೆ.

ನಮ್ಮದೇ ಅಧಿಕಾರಿಯೊಬ್ಬರನ್ನು ರಾಜ್ಯದ ವಿರೋಧ ಪಕ್ಷದ ನಾಯಕ ‘ಖಲಿಸ್ತಾನಿ’ ಎಂದು ಕರೆದರು. ಅದು ಅವರ ತಪ್ಪು, ಅವರು ಹೆಮ್ಮೆಯ ಸಿಖ್ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸುತ್ತಿರುವ ಸಮರ್ಥ ಪೋಲೀಸ್ ಅಧಿಕಾರಿಯಾಗಿದ್ದಾರೆ. ಬಿಜೆಪಿ ನಾಯಕರ ಹೇಳಿಕೆ ತುಂಬಾ ದುರುದ್ದೇಶಪೂರಿತವಾಗಿದೆ. ಇದು ಕೋಮು ಪ್ರಚೋದನೆಯಾಗಿರುವುದರಿಂದ ಜನಾಂಗೀಯವಾಗಿದೆ. ಇದು ಕ್ರಿಮಿನಲ್ ಕೃತ್ಯವಾಗಿದೆ ಎಂದು ರಾಜ್ಯ ಪೊಲೀಸ್‌ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ.

ಸುವೇಂದು ಅಧಿಕಾರಿ ನೇತೃತ್ವದಲ್ಲಿ ಪ್ರತಿಭಟನಾಕಾರರು ಸಂದೇಶಖಾಲಿಗೆ ತೆರಳುತ್ತಿದ್ದಾಗ ಪೊಲೀಸರು ತಡೆದಿದ್ದಾರೆ. ಬಳಿಕ ನಡೆದ ಘರ್ಷಣೆಯ ವೇಳೆ ಪ್ರತಿಭಟನಾಕಾರರಲ್ಲಿ ಒಬ್ಬರು ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಯನ್ನು ಖಲಿಸ್ತಾನಿ ಎಂದು ಕರೆದಿದ್ದಾರೆ.

ಬಿಜೆಪಿ ಒಡೆದು ಆಳುವ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದನ್ನು ಖಂಡಿಸಿದ್ದಾರೆ. ಇಂದು ಬಿಜೆಪಿಯ ಒಡೆದು ಆಳುವ ರಾಜಕಾರಣ, ನಾಚಿಕೆಯಿಲ್ಲದೆ ಸಾಂವಿಧಾನಿಕ ಗಡಿಗಳನ್ನು ಮೀರಿದೆ. ಬಿಜೆಪಿ ಪ್ರಕಾರ, ಟರ್ಬನ್ ಧರಿಸಿರುವ ಪ್ರತಿಯೊಬ್ಬ ವ್ಯಕ್ತಿಯು ಖಲಿಸ್ತಾನಿ. ನಮ್ಮ ಸಿಖ್ ಸಹೋದರರು ಮತ್ತು ಸಹೋದರಿಯರ ಖ್ಯಾತಿಯನ್ನು ದುರ್ಬಲಗೊಳಿಸುವ ಈ ದಿಟ್ಟ ಪ್ರಯತ್ನವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ, ಬಂಗಾಳದ ಸಾಮಾಜಿಕ ಸಾಮರಸ್ಯವನ್ನು ರಕ್ಷಿಸುವಲ್ಲಿ ನಾವು ದೃಢವಾಗಿ ನಿಲ್ಲುತ್ತೇವೆ ಮತ್ತು ಅದನ್ನು ಅಡ್ಡಿಪಡಿಸುವ ಯಾವುದೇ ಪ್ರಯತ್ನಗಳನ್ನು ತಡೆಯಲು ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ದೇಶದ ಸ್ವಾತಂತ್ರ್ಯ ಮತ್ತು ರಕ್ಷಣೆಗಾಗಿ ಸಿಖ್ಖರು ಅತಿ ಹೆಚ್ಚು ತ್ಯಾಗ ಮಾಡಿದ್ದಾರೆ ಎಂಬುವುದನ್ನು ದೇಶದಲ್ಲಿ ಇಂತಹ ಚಿಂತನೆಯನ್ನು ಹೊಂದಿರುವ ನಾಯಕರು ಎಂದಿಗೂ ಮರೆಯಬಾರದು. ದೇಶದಲ್ಲಿ ಅಂತಹ ಜನರು ಉದ್ದೇಶಪೂರ್ವಕವಾಗಿ ದ್ವೇಷದ ವಾತಾವರಣವನ್ನು ಸೃಷ್ಟಿಸುತ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ ಆದರೆ ಸರ್ಕಾರಗಳು ಮೌನವಾಗಿವೆ ಎಂದು SGCP ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಾಮಿ ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು ಹಬ್ಬಿಸಿರುವ ಧಾರ್ಮಿಕ ಮತಾಂಧತೆಯ ಕುಟುಕು ನಮ್ಮ ವೈವಿಧ್ಯಮಯ ಸಂಸ್ಕೃತಿಯನ್ನು ವಿಷಪೂರಿತಗೊಳಿಸುತ್ತಿದೆ, ಕಾನೂನು ರಕ್ಷಕರನ್ನು ಧರ್ಮದ ಹೆಸರಿನಲ್ಲಿ ಭಯೋತ್ಪಾದಕರು ಎಂದು ಹೆಸರಿಸಲಾಗುತ್ತಿದೆ. ಸಬ್ಕಾ ಸಾಥ್ ಅಂದರೆ ಈಗ ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಕಿತ್ತುಹಾಕುವುದಾ? ಮಿಸ್ಟರ್ ಮೋದಿ, ನಿಮ್ಮ ಏಕೈಕ ಉದ್ದೇಶವೆಂದರೆ ಧರ್ಮಗಳು, ಪಂಗಡಗಳು ಮತ್ತು ಸಮುದಾಯಗಳ ನಡುವೆ ಅಸಂಗತತೆ, ದ್ವೇಷ ಮತ್ತು ಹಿಂಸಾಚಾರವನ್ನು ಹರಡುವುದಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...