Homeಚಳವಳಿ'ಎಮರ್ಜೆನ್ಸಿ' ಚಿತ್ರ ನಿಷೇಧಕ್ಕೆ ಸಿಖ್ ಸಂಘಟನೆ ಒತ್ತಾಯ: ಪಂಜಾಬಿನಲ್ಲಿ ಪ್ರದರ್ಶನಗೊಳ್ಳದ ಕಂಗನಾ ಸಿನೆಮಾ

‘ಎಮರ್ಜೆನ್ಸಿ’ ಚಿತ್ರ ನಿಷೇಧಕ್ಕೆ ಸಿಖ್ ಸಂಘಟನೆ ಒತ್ತಾಯ: ಪಂಜಾಬಿನಲ್ಲಿ ಪ್ರದರ್ಶನಗೊಳ್ಳದ ಕಂಗನಾ ಸಿನೆಮಾ

- Advertisement -
- Advertisement -

ನಟಿ-ಸಂಸದೆ ಕಂಗನಾ ರನೌತ್ ಅವರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೀವನ ಚರಿತ್ರೆ ಕುರಿತಾದ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆಯ ದಿನವಾದ ಇಂದು (ಜ.17) ಈ ಹಿಂದಿನ ದಿನಕ್ಕಿಂತಲೂ ಇನ್ನೂ ಪ್ರಕ್ಷುಬ್ದ ವಾತಾವರಣವಿದೆ. ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್‌ಜಿಪಿಸಿ) ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ರಾಜ್ಯದಲ್ಲಿ ಅದರ ಪ್ರದರ್ಶನದ ಮೇಲೆ ನಿಷೇಧ ಹೇರುವಂತೆ ಒತ್ತಾಯಿಸಿದೆ. ಎಸ್‌ಜಿಪಿಸಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಬಿಡುಗಡೆಯನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗೆ ಪತ್ರ ಕಳುಹಿಸಿದ್ದಾರೆ.

ಚಿತ್ರವು ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ. ಏತನ್ಮಧ್ಯೆ, ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಪತ್ರದ ಪ್ರತಿಯನ್ನು ಗುಂಪಿನ ಅಧಿಕೃತ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಳ್ಳಲಾಗಿದೆ. “ಸಿಖ್ಖರ ಪವಿತ್ರ ದೇವಾಲಯ ಶ್ರೀ ಹರ್ಮಂದರ್ ಸಾಹಿಬ್, ಅತ್ಯುನ್ನತ ಧಾರ್ಮಿಕ ಸ್ಥಳ ಅಕಲ್ ತಖ್ತ್ ಸಾಹಿಬ್ ಮತ್ತು ಇತರ ಗುರುದ್ವಾರಗಳ ಮೇಲಿನ ದಾಳಿಗಳು ಮತ್ತು ಸಿಖ್ ನರಮೇಧ (1984 ರ)ಕ್ಕೆ ಸಂಬಂಧಿಸಿದ ಸಂಗತಿಗಳನ್ನು ಮರೆಮಾಚುವ ಮೂಲಕ, ಈ ಚಿತ್ರವು ಸಿಖ್ ವಿರೋಧಿ ಕಾರ್ಯಸೂಚಿಯಡಿಯಲ್ಲಿ ವಿಷವನ್ನು ಹರಡಲು ಕೆಲಸ ಮಾಡುತ್ತದೆ. ಆದ್ದರಿಂದ, ಪಂಜಾಬ್‌ನಲ್ಲಿ ಈ ಚಿತ್ರವನ್ನು ಪ್ರದರ್ಶಿಸುವುದನ್ನು ನಿಷೇಧಿಸಬೇಕೆಂದು ನಾವು ಮತ್ತೆ ಒತ್ತಾಯಿಸುತ್ತೇವೆ. ಬಿಡುಗಡೆಯಾದರೆ, ನಾವು ಅದನ್ನು ಬಲವಾಗಿ ಪ್ರತಿಭಟಿಸಬೇಕಾಗುತ್ತದೆ” ಎಂದಿದ್ದಾರೆ.

ಕೋಲಾಹಲದ ನಡುವೆ, ಅಮೃತಸರದ ಚಿತ್ರಮಂದಿರಗಳ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು, ಎಸ್‌ಜಿಪಿಸಿ ಸದಸ್ಯರೊಬ್ಬರು ಈ ವಿಷಯದ ಕುರಿತು ಎಎನ್‌ಐ ಜೊತೆ ಮಾತನಾಡುತ್ತಾ, “ಕಂಗನಾ ರನೌತ್ ಅವರ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆಗೆ ಸಂಬಂಧಿಸಿದಂತೆ ನಮ್ಮ ಇಂದಿನ ಪ್ರತಿಭಟನೆ. ಈ ಚಿತ್ರದಲ್ಲಿ ಸಿಖ್ ಧರ್ಮದ ಇತಿಹಾಸ ಮತ್ತು 1984ರ ಇತಿಹಾಸವನ್ನು ವಿರೂಪಗೊಳಿಸಿದ ರೀತಿಯಲ್ಲಿ ಚಿತ್ರಿಸಲಾಗಿದೆ. ಇದರ ಟೀಸರ್ ಹೊರಬಂದಾಗಲೂ ನಾವು ಇದರ ವಿರುದ್ಧ ಮೊದಲೇ ಪ್ರತಿಭಟಿಸಿದ್ದೆವು, ಆದರೆ ಸರ್ಕಾರ ಅದರ ವಿರುದ್ಧ ಯಾವ ಕ್ರಮಕೈಗೊಂಡಿಲ್ಲ. ಸೆನ್ಸಾರ್ ಮಂಡಳಿ ಅದನ್ನು ನಿಷೇಧಿಸುವ ಬದಲು ಹಸಿರು ನಿಶಾನೆ ತೋರಿಸಿದೆ. ಚಿತ್ರದ ಪ್ರದರ್ಶನದ ವಿರುದ್ಧ ಪ್ರತಿಭಟಿಸಲು ನಾವು ನಿರ್ಧರಿಸಿದ್ದೇವೆ. ಇಂದು ಚಿತ್ರಮಂದಿರದ ಮಾಲೀಕರು ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಲಿಲ್ಲ. ಆದರೆ ದಿನ ಕಳೆದಂತೆ ಈ ಕುರಿತು ಏನೂ ಮಾಡುತ್ತಾರೆ ಎಂಬುದನ್ನು ಕಾಯ್ದು ನೋಡಬೇಕು. ಇದು ಹೀಗೆಯೇ ಮುಂದುವರಿದರೆ, ಎಲ್ಲವೂ ಸರಿಯಾಗುತ್ತದೆ. ಇಲ್ಲದಿದ್ದರೆ ಚಿತ್ರ ಬಿಡುಗಡೆಯಾದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಪಂಜಾಬ್ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆಯ ಅಡಚಣೆಗೆ ಕಾರಣವಾಗಿರುತ್ತದೆ. ಏಕೆಂದರೆ ನಾವು ಮುಖ್ಯಮಂತ್ರಿಗೂ ಪತ್ರ ಬರೆದಿದ್ದೆವು, ಆದರೆ ಅವರಿಂದ ಯಾವುದೇ ಉತ್ತರ ಬಂದಿಲ್ಲ.” ಎಂದಿದ್ದಾರೆ.

1975ರಲ್ಲಿ ಗಾಂಧಿಯವರು ಹೇರಿದ ತುರ್ತು ಪರಿಸ್ಥಿತಿಯ ಅವಧಿಯ ಜೊತೆಗೆ, ಚಿತ್ರವು ಆಗಿನ ಪ್ರಧಾನಿಯ ಹತ್ಯೆ ಮತ್ತು 80ರ ದಶಕದಲ್ಲಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ನೇತೃತ್ವದ ಖಲಿಸ್ತಾನ್ ಚಳುವಳಿಯನ್ನು ಸಹ ಚಿತ್ರಿಸುತ್ತದೆ. ಇದನ್ನು ಬಿಡುಗಡೆಯಾದ ಟ್ರೇಲರ್‌ನಲ್ಲಿ ಹೈಲೈಟ್ ಮಾಡಲಾಗಿದೆ.

ವಿವಿಧ ಸಿಖ್ ಸಮುದಾಯಗಳು ಚಿತ್ರದಲ್ಲಿ ನಿರ್ಮಾಪಕರು ಸತ್ಯಗಳನ್ನು ತಪ್ಪಾಗಿ ನಿರೂಪಿಸಿದ್ದಾರೆ ಮತ್ತು ವಿರೂಪಗೊಳಿಸಿದ್ದಾರೆ ಎಂದು ಆರೋಪಿಸಿವೆ ಮತ್ತು ಇಂಟರ್ನೆಟ್‌ನಲ್ಲಿ ಈ ಹಿಂದೆ ಬಿಡುಗಡೆಯಾದ ಪ್ರೋಮೋವನ್ನು ವಿರೋಧಿಸಿವೆ.

ಗೋಧ್ರಾ ರೈಲು ದಹನ ದುರಂತ: ಫೆ.13ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...