Homeಚಳವಳಿ'ಎಮರ್ಜೆನ್ಸಿ' ಚಿತ್ರ ನಿಷೇಧಕ್ಕೆ ಸಿಖ್ ಸಂಘಟನೆ ಒತ್ತಾಯ: ಪಂಜಾಬಿನಲ್ಲಿ ಪ್ರದರ್ಶನಗೊಳ್ಳದ ಕಂಗನಾ ಸಿನೆಮಾ

‘ಎಮರ್ಜೆನ್ಸಿ’ ಚಿತ್ರ ನಿಷೇಧಕ್ಕೆ ಸಿಖ್ ಸಂಘಟನೆ ಒತ್ತಾಯ: ಪಂಜಾಬಿನಲ್ಲಿ ಪ್ರದರ್ಶನಗೊಳ್ಳದ ಕಂಗನಾ ಸಿನೆಮಾ

- Advertisement -
- Advertisement -

ನಟಿ-ಸಂಸದೆ ಕಂಗನಾ ರನೌತ್ ಅವರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೀವನ ಚರಿತ್ರೆ ಕುರಿತಾದ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆಯ ದಿನವಾದ ಇಂದು (ಜ.17) ಈ ಹಿಂದಿನ ದಿನಕ್ಕಿಂತಲೂ ಇನ್ನೂ ಪ್ರಕ್ಷುಬ್ದ ವಾತಾವರಣವಿದೆ. ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್‌ಜಿಪಿಸಿ) ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ರಾಜ್ಯದಲ್ಲಿ ಅದರ ಪ್ರದರ್ಶನದ ಮೇಲೆ ನಿಷೇಧ ಹೇರುವಂತೆ ಒತ್ತಾಯಿಸಿದೆ. ಎಸ್‌ಜಿಪಿಸಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಬಿಡುಗಡೆಯನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗೆ ಪತ್ರ ಕಳುಹಿಸಿದ್ದಾರೆ.

ಚಿತ್ರವು ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ. ಏತನ್ಮಧ್ಯೆ, ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಪತ್ರದ ಪ್ರತಿಯನ್ನು ಗುಂಪಿನ ಅಧಿಕೃತ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಳ್ಳಲಾಗಿದೆ. “ಸಿಖ್ಖರ ಪವಿತ್ರ ದೇವಾಲಯ ಶ್ರೀ ಹರ್ಮಂದರ್ ಸಾಹಿಬ್, ಅತ್ಯುನ್ನತ ಧಾರ್ಮಿಕ ಸ್ಥಳ ಅಕಲ್ ತಖ್ತ್ ಸಾಹಿಬ್ ಮತ್ತು ಇತರ ಗುರುದ್ವಾರಗಳ ಮೇಲಿನ ದಾಳಿಗಳು ಮತ್ತು ಸಿಖ್ ನರಮೇಧ (1984 ರ)ಕ್ಕೆ ಸಂಬಂಧಿಸಿದ ಸಂಗತಿಗಳನ್ನು ಮರೆಮಾಚುವ ಮೂಲಕ, ಈ ಚಿತ್ರವು ಸಿಖ್ ವಿರೋಧಿ ಕಾರ್ಯಸೂಚಿಯಡಿಯಲ್ಲಿ ವಿಷವನ್ನು ಹರಡಲು ಕೆಲಸ ಮಾಡುತ್ತದೆ. ಆದ್ದರಿಂದ, ಪಂಜಾಬ್‌ನಲ್ಲಿ ಈ ಚಿತ್ರವನ್ನು ಪ್ರದರ್ಶಿಸುವುದನ್ನು ನಿಷೇಧಿಸಬೇಕೆಂದು ನಾವು ಮತ್ತೆ ಒತ್ತಾಯಿಸುತ್ತೇವೆ. ಬಿಡುಗಡೆಯಾದರೆ, ನಾವು ಅದನ್ನು ಬಲವಾಗಿ ಪ್ರತಿಭಟಿಸಬೇಕಾಗುತ್ತದೆ” ಎಂದಿದ್ದಾರೆ.

ಕೋಲಾಹಲದ ನಡುವೆ, ಅಮೃತಸರದ ಚಿತ್ರಮಂದಿರಗಳ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು, ಎಸ್‌ಜಿಪಿಸಿ ಸದಸ್ಯರೊಬ್ಬರು ಈ ವಿಷಯದ ಕುರಿತು ಎಎನ್‌ಐ ಜೊತೆ ಮಾತನಾಡುತ್ತಾ, “ಕಂಗನಾ ರನೌತ್ ಅವರ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆಗೆ ಸಂಬಂಧಿಸಿದಂತೆ ನಮ್ಮ ಇಂದಿನ ಪ್ರತಿಭಟನೆ. ಈ ಚಿತ್ರದಲ್ಲಿ ಸಿಖ್ ಧರ್ಮದ ಇತಿಹಾಸ ಮತ್ತು 1984ರ ಇತಿಹಾಸವನ್ನು ವಿರೂಪಗೊಳಿಸಿದ ರೀತಿಯಲ್ಲಿ ಚಿತ್ರಿಸಲಾಗಿದೆ. ಇದರ ಟೀಸರ್ ಹೊರಬಂದಾಗಲೂ ನಾವು ಇದರ ವಿರುದ್ಧ ಮೊದಲೇ ಪ್ರತಿಭಟಿಸಿದ್ದೆವು, ಆದರೆ ಸರ್ಕಾರ ಅದರ ವಿರುದ್ಧ ಯಾವ ಕ್ರಮಕೈಗೊಂಡಿಲ್ಲ. ಸೆನ್ಸಾರ್ ಮಂಡಳಿ ಅದನ್ನು ನಿಷೇಧಿಸುವ ಬದಲು ಹಸಿರು ನಿಶಾನೆ ತೋರಿಸಿದೆ. ಚಿತ್ರದ ಪ್ರದರ್ಶನದ ವಿರುದ್ಧ ಪ್ರತಿಭಟಿಸಲು ನಾವು ನಿರ್ಧರಿಸಿದ್ದೇವೆ. ಇಂದು ಚಿತ್ರಮಂದಿರದ ಮಾಲೀಕರು ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಲಿಲ್ಲ. ಆದರೆ ದಿನ ಕಳೆದಂತೆ ಈ ಕುರಿತು ಏನೂ ಮಾಡುತ್ತಾರೆ ಎಂಬುದನ್ನು ಕಾಯ್ದು ನೋಡಬೇಕು. ಇದು ಹೀಗೆಯೇ ಮುಂದುವರಿದರೆ, ಎಲ್ಲವೂ ಸರಿಯಾಗುತ್ತದೆ. ಇಲ್ಲದಿದ್ದರೆ ಚಿತ್ರ ಬಿಡುಗಡೆಯಾದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಪಂಜಾಬ್ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆಯ ಅಡಚಣೆಗೆ ಕಾರಣವಾಗಿರುತ್ತದೆ. ಏಕೆಂದರೆ ನಾವು ಮುಖ್ಯಮಂತ್ರಿಗೂ ಪತ್ರ ಬರೆದಿದ್ದೆವು, ಆದರೆ ಅವರಿಂದ ಯಾವುದೇ ಉತ್ತರ ಬಂದಿಲ್ಲ.” ಎಂದಿದ್ದಾರೆ.

1975ರಲ್ಲಿ ಗಾಂಧಿಯವರು ಹೇರಿದ ತುರ್ತು ಪರಿಸ್ಥಿತಿಯ ಅವಧಿಯ ಜೊತೆಗೆ, ಚಿತ್ರವು ಆಗಿನ ಪ್ರಧಾನಿಯ ಹತ್ಯೆ ಮತ್ತು 80ರ ದಶಕದಲ್ಲಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ನೇತೃತ್ವದ ಖಲಿಸ್ತಾನ್ ಚಳುವಳಿಯನ್ನು ಸಹ ಚಿತ್ರಿಸುತ್ತದೆ. ಇದನ್ನು ಬಿಡುಗಡೆಯಾದ ಟ್ರೇಲರ್‌ನಲ್ಲಿ ಹೈಲೈಟ್ ಮಾಡಲಾಗಿದೆ.

ವಿವಿಧ ಸಿಖ್ ಸಮುದಾಯಗಳು ಚಿತ್ರದಲ್ಲಿ ನಿರ್ಮಾಪಕರು ಸತ್ಯಗಳನ್ನು ತಪ್ಪಾಗಿ ನಿರೂಪಿಸಿದ್ದಾರೆ ಮತ್ತು ವಿರೂಪಗೊಳಿಸಿದ್ದಾರೆ ಎಂದು ಆರೋಪಿಸಿವೆ ಮತ್ತು ಇಂಟರ್ನೆಟ್‌ನಲ್ಲಿ ಈ ಹಿಂದೆ ಬಿಡುಗಡೆಯಾದ ಪ್ರೋಮೋವನ್ನು ವಿರೋಧಿಸಿವೆ.

ಗೋಧ್ರಾ ರೈಲು ದಹನ ದುರಂತ: ಫೆ.13ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...