Homeಮುಖಪುಟಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಅದು ಹೇಳಿದೆ

- Advertisement -
- Advertisement -

ಹಿಜಾಬ್ ನಿಷೇಧ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪೀಠವು ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಹೇಳಿದ್ದು, ಸಿಖ್ ಧರ್ಮದ ಆಚರಣೆಗಳು ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದ್ದು, ಅದು ಇಸ್ಲಾಂ ಧರ್ಮದಂತೆ ಅಲ್ಲ ಎಂದು ಹೇಳಿದೆ.

ಹಿಜಾಬ್ ನಿಷೇಧವನ್ನು ವಿರೋಧಿಸಿದ ವಿದ್ಯಾರ್ಥಿಗಳಲ್ಲಿ ಒಬ್ಬರನ್ನು ಪ್ರತಿನಿಧಿಸಿದ ವಕೀಲ ನಿಜಾಮ್ ಪಾಷಾ, ಸಿಖ್ಖರಿಗೆ ಪೇಟವನ್ನು ಧರಿಸುವುದಕ್ಕೆ ನೀಡಿದ ರಕ್ಷಣೆಯನ್ನು ಹಿಜಾಬ್‌‌ಗೆ ಕೂಡಾ ಅತ್ಯುತ್ತಮ ಸಾಂಸ್ಕೃತಿಕ ಅಚರಣೆಯಾಗಿ ನೀಡಬೇಕು ಎಂದು ವಾದಿಸಿದ್ದಾರೆ. ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠ, ಹಿಜಾಬ್‌ಗೆ ಸಿಖ್ ಧರ್ಮದ ಆಚರಣೆಗಳನ್ನು ಹೋಲಿಸುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐದು ‘ಕೆ’ಗಳು ಸಿಖ್‌ ಧರ್ಮದ ಭಾಗವೆಂದು ಈಗಾಗಲೆ ಸ್ಥಾಪಿತವಾಗಿವೆ ಎಂದು ಪೀಠವು ಹೇಳಿದೆ. “ಈ ಆಚರಣೆಗಳನ್ನು ಹಿಜಾಬ್‌ಗೆ ಹೋಲಿಸಬೇಡಿ ಏಕೆಂದರೆ ಅವುಗಳು 100 ವರ್ಷಗಳಿಂದ ಗುರುತಿಸಲ್ಪಟ್ಟಿವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

ಕಾರಾ ಮತ್ತು ಪೇಟದ ಬಗ್ಗೆ ವಾದಗಳು ಮುಂದುವರಿದಿರುವುದನ್ನು ಗಮನಿಸಿದ ಪೀಠ, ಸಿಖ್ ಧರ್ಮದಲ್ಲಿನ ಆಚರಣೆಗಳು ದೇಶದ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ ಎಂದು ಹೇಳಿದೆ. ಕರ್ನಾಟಕ ಹೈಕೋರ್ಟ್ ಪವಿತ್ರ ಕುರಾನ್‌ನ ಕೆಲವು ಶ್ಲೋಕಗಳು ಮತ್ತು ಕೆಲವು ವ್ಯಾಖ್ಯಾನಗಳನ್ನು ಉಲ್ಲೇಖಿಸಿದೆ ಎಂದು ವಾದದ ಸಮಯದಲ್ಲಿ ಪಾಷಾ ಹೇಳಿದ್ದಾರೆ. ಪವಿತ್ರ ಕುರಾನ್ ಎಲ್ಲಾ ಕಾಲಕ್ಕೂ ಪರಿಪೂರ್ಣವಾಗಿದ್ದು, ಅದರ ಶ್ಲೋಕಗಳು ಬಳಕೆಯಲ್ಲಿಲ್ಲ ಎಂದು ಹೇಳುವುದು ‘ದೇವನಿಂದೆ’ಯಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್, ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಹಾಕಿಕೊಂಡು ಬಂದರೆ ಬೇರೆಯವರಿಗೆ ತೊಂದರೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಹೇಳಿದೆ. ಆದರೆ ಈ ಕಾರಣಕ್ಕೆ ಅದನ್ನು ನಿಷೇಧ ಸಾಧ್ಯವಿಲ್ಲ ಎಂದು ಪೀಠಕ್ಕೆ ತಿಳಿಸಿದರು. “ಆರ್ಟಿಕಲ್ 25 ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯ ಎಂಬ ಮೂರು ನಿರ್ಬಂಧಗಳನ್ನು ಹೊಂದಿದೆ. ತಲೆ ಸ್ಕಾರ್ಫ್ ಧರಿಸುವುದು ಧಾರ್ಮಿಕ ನಂಬಿಕೆಯ ಒಂದು ಭಾಗವಾಗಿದ್ದು ಅದು ಸಂವಿಧಾನದ ಆರ್ಟಿಕಲ್‌ 19 ಮತ್ತು 21 ರ ಭಾಗವಾಗಿದೆ” ಎಂದು ಕಾಮತ್ ಪ್ರತಿಪಾದಿಸಿದರು.

ಪ್ರತಿಯೊಂದು ಧಾರ್ಮಿಕ ಆಚರಣೆಗಳು ಧರ್ಮಕ್ಕೆ ಅತ್ಯಗತ್ಯವಲ್ಲ, ಆದರೆ ಅದು ಅನಿವಾರ್ಯವಲ್ಲ ಎಂಬ ಕಾರಣ ನೀಡಿ ಸರ್ಕಾರ ಅದನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ನಾನು ಎಲ್ಲಿಯವರೆಗೆ ಸಾರ್ವಜನಿಕ ಸುವ್ಯವಸ್ಥೆಯನ್ನು ಉಲ್ಲಂಘಿಸುವುದಿಲ್ಲವೋ, ಎಲ್ಲಿಯವರೆಗೆ ನಾನು ನೈತಿಕತೆಯ ಎಲ್ಲೆ ಮೀರುವುದಿಲವೊ ಮತ್ತು ಎಲ್ಲಿವರೆಗೆ ಇತರರ ಆರೋಗ್ಯದ ಮೇಲೆ ಪರಿಣಾಮ ಬೀರುವುದಿಲ್ಲವೊ ಅಲ್ಲಿವರೆಗೆ ನಾನು ಧಾರ್ಮಿಕ ಆಚರಣೆ ಮಾಡಲು ಅರ್ಹನಾಗಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿಚಾರಣೆ ಮುಂದೂಡಲು ಒಪ್ಪದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ನೋಟಿಸ್

ಹಿರಿಯ ವಕೀಲರೊಬ್ಬರು ಧರಿಸುವ ‘ನಾಮ’ವನ್ನು ಉದಾಹರಣೆ ನೀಡಿದ ಕಾಮತ್, “ಇದು ಹಿಂದೂ ನಂಬಿಕೆಯ ಧರ್ಮದ ಅವಿಭಾಜ್ಯ ಅಂಗವಾಗಿಲ್ಲ. ಆದರೆ ಇದು ನ್ಯಾಯಾಲಯದಲ್ಲಿ ಶಿಸ್ತಿಗೆ ಹೇಗೆ ಹಾನಿ ಮಾಡುತ್ತದೆ? ಇದು ಸಾರ್ವಜನಿಕ ಸುವ್ಯವಸ್ಥೆಗೆ ಹೇಗೆ ಧಕ್ಕೆ ತರುತ್ತದೆಯೇ?” ಎಂದು ಕೇಳಿದರು.

ಈ ವೇಳೆ ನ್ಯಾಯಾಲಯಕ್ಕೆ ಹಾಜರಾಗಲು ವಕೀಲರಿಗೆ ನಿರ್ದಿಷ್ಟ ಸಮವಸ್ತ್ರವಿದೆ ಎಂದು ಪೀಠವು ಹೇಳಿತು. ಹವಾಮಾನ ವೈಪರೀತ್ಯದ ಕಾರಣದಿಂದ ರಾಜಸ್ಥಾನ ಮತ್ತು ಗುಜರಾತಿನ ಜನರು ಪೇಟ(ಪಗ್ಡಿ)ವನ್ನು ವಾಡಿಕೆಯಂತೆ ಧರಿಸುತ್ತಾರೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆ ಕುರಿತ ವಾದಗಳ ಕುರಿತು ಮಾತನಾಡಿದ ಪೀಠವು, “ರಸ್ತೆಯಲ್ಲಿ ಹಿಜಾಬ್ ಧರಿಸುವುದರಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಆದರೆ ನೀವು ಶಾಲೆಯ ಕಟ್ಟಡ, ಶಾಲಾ ಆವರಣದ ಬಗ್ಗೆ ಮಾತನಾಡುತ್ತಿದ್ದರೆ, ಶಾಲೆಯು ಅಲ್ಲಿ ಯಾವ ರೀತಿಯ ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಬಯಸುತ್ತದೆ ಎಂಬುದು ಪ್ರಶ್ನೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಸಾರ್ವಜನಿಕ ಸುವ್ಯವಸ್ಥೆ ಸರ್ಕಾರದ ಜವಾಬ್ದಾರಿಯಾಗಿದೆ, ಆದರೆ ಶಾಲೆಗೆ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ಕಲಂ 25ರ ಪ್ರಕಾರ ಜನರು ತಮ್ಮ ಹಕ್ಕುಗಳನ್ನು ಚಲಾಯಿಸುವ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಕರ್ತವ್ಯ. ನಾನು ತಲೆಗೆ ಸ್ಕಾರ್ಫ್ ಧರಿಸುವುದರಿಂದ ಯಾರದ್ದಾದರೂ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಆಗುತ್ತದೆಯೆ?” ಅವರು ಹೇಳಿದ್ದಾರೆ.

ಇದು ಇತರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಪ್ರಶ್ನೆಯಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. “ನೀವು ಯಾವ ರೀತಿಯ ಮೂಲಭೂತ ಹಕ್ಕನ್ನು ನೀವು ಚಲಾಯಿಸಲು ಬಯಸುತ್ತೀರಿ ಎಂಬ ಪ್ರಶ್ನೆಯಾಗಿದೆ” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಿಸ್ಸಂಶಯವಾಗಿ ಇದೊಂದು ಪೂರ್ವಾಗ್ರಹ ಪೀಡಿತ ಧೋರಣೆ. ಭಾರತದಲ್ಲಿ ಉದಯಿಸದ ಧರ್ಮಗಳನ್ನು ಭಾರತೀಯರು ಪಾಲಿಸುವ ಹಕ್ಕಿದೆಯೆಂದಾದರೆ ಧಾರ್ಮಿಕ ಆಚರಣೆಗಳೂ ಸರ್ವರ ಧರ್ಮದವರಿಗೂ ಸಮಾನವಾಗಿರಬೇಕು.ಸಿಖ್,ಹಿಂದೂ,ಇಸ್ಲಾಂ ಧರ್ಮದವರಿಗೂ ತಮ್ಮ ಧಾರ್ಮಿಕಾಚರಣೆಯ ಸಮಾನ ಹಕ್ಕುಗಳನ್ನು ಅಮೇರಿಕಾ, ಕೆನಡಾ, ಬ್ರಿಟನ್ ಮೊದಲಾದ ದೇಶಗಳು ಕೊಟ್ಟಿವೆ. ಸಾಂವಿಧಾನಿಕ ಹಕ್ಕುಗಳ ಸರಿಯಾದ ವಿಶ್ಲೇಷಣೆ ಮಾಡಿ ನ್ಯಾಯ ಒದಗಿಸುವುದು ಸುಪ್ರೀಂ ಕೋರ್ಟ್ ಕಟ್ಟಡವಲ್ಲ, ನಮ್ಮ ನಿಮ್ಮಂತಿರುವ ಹುಲು ಮಾನವರು. ಅವರೂ ಪೂರ್ವಾಗ್ರಹತೆಗಳನ್ನು ಹೊಂದಿರುತ್ತಾರೆ,ಭ್ರಷ್ಟರೂ ಆಗಿರುತ್ತಾರೆ ಎಂಬುದನ್ನು ಕಳೆದ ಎರಡು ದಶಕಗಳ ತೀರ್ಪಗಳು ಸಾಬೀತು ಪಡಿಸಿವೆ.

  2. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಸಂಸ್ಕೃತಿ ಯನ್ನು ಮಾತ್ರ ಎತ್ತಿ ಹಿಡಿದರೆ ಕೋರ್ಟ್ ಗೇನು ಬೆಲೆ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...