Homeಮುಖಪುಟಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಅದು ಹೇಳಿದೆ

- Advertisement -
- Advertisement -

ಹಿಜಾಬ್ ನಿಷೇಧ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪೀಠವು ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಹೇಳಿದ್ದು, ಸಿಖ್ ಧರ್ಮದ ಆಚರಣೆಗಳು ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದ್ದು, ಅದು ಇಸ್ಲಾಂ ಧರ್ಮದಂತೆ ಅಲ್ಲ ಎಂದು ಹೇಳಿದೆ.

ಹಿಜಾಬ್ ನಿಷೇಧವನ್ನು ವಿರೋಧಿಸಿದ ವಿದ್ಯಾರ್ಥಿಗಳಲ್ಲಿ ಒಬ್ಬರನ್ನು ಪ್ರತಿನಿಧಿಸಿದ ವಕೀಲ ನಿಜಾಮ್ ಪಾಷಾ, ಸಿಖ್ಖರಿಗೆ ಪೇಟವನ್ನು ಧರಿಸುವುದಕ್ಕೆ ನೀಡಿದ ರಕ್ಷಣೆಯನ್ನು ಹಿಜಾಬ್‌‌ಗೆ ಕೂಡಾ ಅತ್ಯುತ್ತಮ ಸಾಂಸ್ಕೃತಿಕ ಅಚರಣೆಯಾಗಿ ನೀಡಬೇಕು ಎಂದು ವಾದಿಸಿದ್ದಾರೆ. ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠ, ಹಿಜಾಬ್‌ಗೆ ಸಿಖ್ ಧರ್ಮದ ಆಚರಣೆಗಳನ್ನು ಹೋಲಿಸುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐದು ‘ಕೆ’ಗಳು ಸಿಖ್‌ ಧರ್ಮದ ಭಾಗವೆಂದು ಈಗಾಗಲೆ ಸ್ಥಾಪಿತವಾಗಿವೆ ಎಂದು ಪೀಠವು ಹೇಳಿದೆ. “ಈ ಆಚರಣೆಗಳನ್ನು ಹಿಜಾಬ್‌ಗೆ ಹೋಲಿಸಬೇಡಿ ಏಕೆಂದರೆ ಅವುಗಳು 100 ವರ್ಷಗಳಿಂದ ಗುರುತಿಸಲ್ಪಟ್ಟಿವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

ಕಾರಾ ಮತ್ತು ಪೇಟದ ಬಗ್ಗೆ ವಾದಗಳು ಮುಂದುವರಿದಿರುವುದನ್ನು ಗಮನಿಸಿದ ಪೀಠ, ಸಿಖ್ ಧರ್ಮದಲ್ಲಿನ ಆಚರಣೆಗಳು ದೇಶದ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ ಎಂದು ಹೇಳಿದೆ. ಕರ್ನಾಟಕ ಹೈಕೋರ್ಟ್ ಪವಿತ್ರ ಕುರಾನ್‌ನ ಕೆಲವು ಶ್ಲೋಕಗಳು ಮತ್ತು ಕೆಲವು ವ್ಯಾಖ್ಯಾನಗಳನ್ನು ಉಲ್ಲೇಖಿಸಿದೆ ಎಂದು ವಾದದ ಸಮಯದಲ್ಲಿ ಪಾಷಾ ಹೇಳಿದ್ದಾರೆ. ಪವಿತ್ರ ಕುರಾನ್ ಎಲ್ಲಾ ಕಾಲಕ್ಕೂ ಪರಿಪೂರ್ಣವಾಗಿದ್ದು, ಅದರ ಶ್ಲೋಕಗಳು ಬಳಕೆಯಲ್ಲಿಲ್ಲ ಎಂದು ಹೇಳುವುದು ‘ದೇವನಿಂದೆ’ಯಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್, ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಹಾಕಿಕೊಂಡು ಬಂದರೆ ಬೇರೆಯವರಿಗೆ ತೊಂದರೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಹೇಳಿದೆ. ಆದರೆ ಈ ಕಾರಣಕ್ಕೆ ಅದನ್ನು ನಿಷೇಧ ಸಾಧ್ಯವಿಲ್ಲ ಎಂದು ಪೀಠಕ್ಕೆ ತಿಳಿಸಿದರು. “ಆರ್ಟಿಕಲ್ 25 ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯ ಎಂಬ ಮೂರು ನಿರ್ಬಂಧಗಳನ್ನು ಹೊಂದಿದೆ. ತಲೆ ಸ್ಕಾರ್ಫ್ ಧರಿಸುವುದು ಧಾರ್ಮಿಕ ನಂಬಿಕೆಯ ಒಂದು ಭಾಗವಾಗಿದ್ದು ಅದು ಸಂವಿಧಾನದ ಆರ್ಟಿಕಲ್‌ 19 ಮತ್ತು 21 ರ ಭಾಗವಾಗಿದೆ” ಎಂದು ಕಾಮತ್ ಪ್ರತಿಪಾದಿಸಿದರು.

ಪ್ರತಿಯೊಂದು ಧಾರ್ಮಿಕ ಆಚರಣೆಗಳು ಧರ್ಮಕ್ಕೆ ಅತ್ಯಗತ್ಯವಲ್ಲ, ಆದರೆ ಅದು ಅನಿವಾರ್ಯವಲ್ಲ ಎಂಬ ಕಾರಣ ನೀಡಿ ಸರ್ಕಾರ ಅದನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ನಾನು ಎಲ್ಲಿಯವರೆಗೆ ಸಾರ್ವಜನಿಕ ಸುವ್ಯವಸ್ಥೆಯನ್ನು ಉಲ್ಲಂಘಿಸುವುದಿಲ್ಲವೋ, ಎಲ್ಲಿಯವರೆಗೆ ನಾನು ನೈತಿಕತೆಯ ಎಲ್ಲೆ ಮೀರುವುದಿಲವೊ ಮತ್ತು ಎಲ್ಲಿವರೆಗೆ ಇತರರ ಆರೋಗ್ಯದ ಮೇಲೆ ಪರಿಣಾಮ ಬೀರುವುದಿಲ್ಲವೊ ಅಲ್ಲಿವರೆಗೆ ನಾನು ಧಾರ್ಮಿಕ ಆಚರಣೆ ಮಾಡಲು ಅರ್ಹನಾಗಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿಚಾರಣೆ ಮುಂದೂಡಲು ಒಪ್ಪದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ನೋಟಿಸ್

ಹಿರಿಯ ವಕೀಲರೊಬ್ಬರು ಧರಿಸುವ ‘ನಾಮ’ವನ್ನು ಉದಾಹರಣೆ ನೀಡಿದ ಕಾಮತ್, “ಇದು ಹಿಂದೂ ನಂಬಿಕೆಯ ಧರ್ಮದ ಅವಿಭಾಜ್ಯ ಅಂಗವಾಗಿಲ್ಲ. ಆದರೆ ಇದು ನ್ಯಾಯಾಲಯದಲ್ಲಿ ಶಿಸ್ತಿಗೆ ಹೇಗೆ ಹಾನಿ ಮಾಡುತ್ತದೆ? ಇದು ಸಾರ್ವಜನಿಕ ಸುವ್ಯವಸ್ಥೆಗೆ ಹೇಗೆ ಧಕ್ಕೆ ತರುತ್ತದೆಯೇ?” ಎಂದು ಕೇಳಿದರು.

ಈ ವೇಳೆ ನ್ಯಾಯಾಲಯಕ್ಕೆ ಹಾಜರಾಗಲು ವಕೀಲರಿಗೆ ನಿರ್ದಿಷ್ಟ ಸಮವಸ್ತ್ರವಿದೆ ಎಂದು ಪೀಠವು ಹೇಳಿತು. ಹವಾಮಾನ ವೈಪರೀತ್ಯದ ಕಾರಣದಿಂದ ರಾಜಸ್ಥಾನ ಮತ್ತು ಗುಜರಾತಿನ ಜನರು ಪೇಟ(ಪಗ್ಡಿ)ವನ್ನು ವಾಡಿಕೆಯಂತೆ ಧರಿಸುತ್ತಾರೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆ ಕುರಿತ ವಾದಗಳ ಕುರಿತು ಮಾತನಾಡಿದ ಪೀಠವು, “ರಸ್ತೆಯಲ್ಲಿ ಹಿಜಾಬ್ ಧರಿಸುವುದರಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಆದರೆ ನೀವು ಶಾಲೆಯ ಕಟ್ಟಡ, ಶಾಲಾ ಆವರಣದ ಬಗ್ಗೆ ಮಾತನಾಡುತ್ತಿದ್ದರೆ, ಶಾಲೆಯು ಅಲ್ಲಿ ಯಾವ ರೀತಿಯ ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಬಯಸುತ್ತದೆ ಎಂಬುದು ಪ್ರಶ್ನೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಸಾರ್ವಜನಿಕ ಸುವ್ಯವಸ್ಥೆ ಸರ್ಕಾರದ ಜವಾಬ್ದಾರಿಯಾಗಿದೆ, ಆದರೆ ಶಾಲೆಗೆ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ಕಲಂ 25ರ ಪ್ರಕಾರ ಜನರು ತಮ್ಮ ಹಕ್ಕುಗಳನ್ನು ಚಲಾಯಿಸುವ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಕರ್ತವ್ಯ. ನಾನು ತಲೆಗೆ ಸ್ಕಾರ್ಫ್ ಧರಿಸುವುದರಿಂದ ಯಾರದ್ದಾದರೂ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಆಗುತ್ತದೆಯೆ?” ಅವರು ಹೇಳಿದ್ದಾರೆ.

ಇದು ಇತರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಪ್ರಶ್ನೆಯಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. “ನೀವು ಯಾವ ರೀತಿಯ ಮೂಲಭೂತ ಹಕ್ಕನ್ನು ನೀವು ಚಲಾಯಿಸಲು ಬಯಸುತ್ತೀರಿ ಎಂಬ ಪ್ರಶ್ನೆಯಾಗಿದೆ” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಿಸ್ಸಂಶಯವಾಗಿ ಇದೊಂದು ಪೂರ್ವಾಗ್ರಹ ಪೀಡಿತ ಧೋರಣೆ. ಭಾರತದಲ್ಲಿ ಉದಯಿಸದ ಧರ್ಮಗಳನ್ನು ಭಾರತೀಯರು ಪಾಲಿಸುವ ಹಕ್ಕಿದೆಯೆಂದಾದರೆ ಧಾರ್ಮಿಕ ಆಚರಣೆಗಳೂ ಸರ್ವರ ಧರ್ಮದವರಿಗೂ ಸಮಾನವಾಗಿರಬೇಕು.ಸಿಖ್,ಹಿಂದೂ,ಇಸ್ಲಾಂ ಧರ್ಮದವರಿಗೂ ತಮ್ಮ ಧಾರ್ಮಿಕಾಚರಣೆಯ ಸಮಾನ ಹಕ್ಕುಗಳನ್ನು ಅಮೇರಿಕಾ, ಕೆನಡಾ, ಬ್ರಿಟನ್ ಮೊದಲಾದ ದೇಶಗಳು ಕೊಟ್ಟಿವೆ. ಸಾಂವಿಧಾನಿಕ ಹಕ್ಕುಗಳ ಸರಿಯಾದ ವಿಶ್ಲೇಷಣೆ ಮಾಡಿ ನ್ಯಾಯ ಒದಗಿಸುವುದು ಸುಪ್ರೀಂ ಕೋರ್ಟ್ ಕಟ್ಟಡವಲ್ಲ, ನಮ್ಮ ನಿಮ್ಮಂತಿರುವ ಹುಲು ಮಾನವರು. ಅವರೂ ಪೂರ್ವಾಗ್ರಹತೆಗಳನ್ನು ಹೊಂದಿರುತ್ತಾರೆ,ಭ್ರಷ್ಟರೂ ಆಗಿರುತ್ತಾರೆ ಎಂಬುದನ್ನು ಕಳೆದ ಎರಡು ದಶಕಗಳ ತೀರ್ಪಗಳು ಸಾಬೀತು ಪಡಿಸಿವೆ.

  2. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಸಂಸ್ಕೃತಿ ಯನ್ನು ಮಾತ್ರ ಎತ್ತಿ ಹಿಡಿದರೆ ಕೋರ್ಟ್ ಗೇನು ಬೆಲೆ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...