Homeಮುಖಪುಟಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಅದು ಹೇಳಿದೆ

- Advertisement -
- Advertisement -

ಹಿಜಾಬ್ ನಿಷೇಧ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪೀಠವು ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಹೇಳಿದ್ದು, ಸಿಖ್ ಧರ್ಮದ ಆಚರಣೆಗಳು ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದ್ದು, ಅದು ಇಸ್ಲಾಂ ಧರ್ಮದಂತೆ ಅಲ್ಲ ಎಂದು ಹೇಳಿದೆ.

ಹಿಜಾಬ್ ನಿಷೇಧವನ್ನು ವಿರೋಧಿಸಿದ ವಿದ್ಯಾರ್ಥಿಗಳಲ್ಲಿ ಒಬ್ಬರನ್ನು ಪ್ರತಿನಿಧಿಸಿದ ವಕೀಲ ನಿಜಾಮ್ ಪಾಷಾ, ಸಿಖ್ಖರಿಗೆ ಪೇಟವನ್ನು ಧರಿಸುವುದಕ್ಕೆ ನೀಡಿದ ರಕ್ಷಣೆಯನ್ನು ಹಿಜಾಬ್‌‌ಗೆ ಕೂಡಾ ಅತ್ಯುತ್ತಮ ಸಾಂಸ್ಕೃತಿಕ ಅಚರಣೆಯಾಗಿ ನೀಡಬೇಕು ಎಂದು ವಾದಿಸಿದ್ದಾರೆ. ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠ, ಹಿಜಾಬ್‌ಗೆ ಸಿಖ್ ಧರ್ಮದ ಆಚರಣೆಗಳನ್ನು ಹೋಲಿಸುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐದು ‘ಕೆ’ಗಳು ಸಿಖ್‌ ಧರ್ಮದ ಭಾಗವೆಂದು ಈಗಾಗಲೆ ಸ್ಥಾಪಿತವಾಗಿವೆ ಎಂದು ಪೀಠವು ಹೇಳಿದೆ. “ಈ ಆಚರಣೆಗಳನ್ನು ಹಿಜಾಬ್‌ಗೆ ಹೋಲಿಸಬೇಡಿ ಏಕೆಂದರೆ ಅವುಗಳು 100 ವರ್ಷಗಳಿಂದ ಗುರುತಿಸಲ್ಪಟ್ಟಿವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

ಕಾರಾ ಮತ್ತು ಪೇಟದ ಬಗ್ಗೆ ವಾದಗಳು ಮುಂದುವರಿದಿರುವುದನ್ನು ಗಮನಿಸಿದ ಪೀಠ, ಸಿಖ್ ಧರ್ಮದಲ್ಲಿನ ಆಚರಣೆಗಳು ದೇಶದ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ ಎಂದು ಹೇಳಿದೆ. ಕರ್ನಾಟಕ ಹೈಕೋರ್ಟ್ ಪವಿತ್ರ ಕುರಾನ್‌ನ ಕೆಲವು ಶ್ಲೋಕಗಳು ಮತ್ತು ಕೆಲವು ವ್ಯಾಖ್ಯಾನಗಳನ್ನು ಉಲ್ಲೇಖಿಸಿದೆ ಎಂದು ವಾದದ ಸಮಯದಲ್ಲಿ ಪಾಷಾ ಹೇಳಿದ್ದಾರೆ. ಪವಿತ್ರ ಕುರಾನ್ ಎಲ್ಲಾ ಕಾಲಕ್ಕೂ ಪರಿಪೂರ್ಣವಾಗಿದ್ದು, ಅದರ ಶ್ಲೋಕಗಳು ಬಳಕೆಯಲ್ಲಿಲ್ಲ ಎಂದು ಹೇಳುವುದು ‘ದೇವನಿಂದೆ’ಯಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್, ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಹಾಕಿಕೊಂಡು ಬಂದರೆ ಬೇರೆಯವರಿಗೆ ತೊಂದರೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಹೇಳಿದೆ. ಆದರೆ ಈ ಕಾರಣಕ್ಕೆ ಅದನ್ನು ನಿಷೇಧ ಸಾಧ್ಯವಿಲ್ಲ ಎಂದು ಪೀಠಕ್ಕೆ ತಿಳಿಸಿದರು. “ಆರ್ಟಿಕಲ್ 25 ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯ ಎಂಬ ಮೂರು ನಿರ್ಬಂಧಗಳನ್ನು ಹೊಂದಿದೆ. ತಲೆ ಸ್ಕಾರ್ಫ್ ಧರಿಸುವುದು ಧಾರ್ಮಿಕ ನಂಬಿಕೆಯ ಒಂದು ಭಾಗವಾಗಿದ್ದು ಅದು ಸಂವಿಧಾನದ ಆರ್ಟಿಕಲ್‌ 19 ಮತ್ತು 21 ರ ಭಾಗವಾಗಿದೆ” ಎಂದು ಕಾಮತ್ ಪ್ರತಿಪಾದಿಸಿದರು.

ಪ್ರತಿಯೊಂದು ಧಾರ್ಮಿಕ ಆಚರಣೆಗಳು ಧರ್ಮಕ್ಕೆ ಅತ್ಯಗತ್ಯವಲ್ಲ, ಆದರೆ ಅದು ಅನಿವಾರ್ಯವಲ್ಲ ಎಂಬ ಕಾರಣ ನೀಡಿ ಸರ್ಕಾರ ಅದನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ನಾನು ಎಲ್ಲಿಯವರೆಗೆ ಸಾರ್ವಜನಿಕ ಸುವ್ಯವಸ್ಥೆಯನ್ನು ಉಲ್ಲಂಘಿಸುವುದಿಲ್ಲವೋ, ಎಲ್ಲಿಯವರೆಗೆ ನಾನು ನೈತಿಕತೆಯ ಎಲ್ಲೆ ಮೀರುವುದಿಲವೊ ಮತ್ತು ಎಲ್ಲಿವರೆಗೆ ಇತರರ ಆರೋಗ್ಯದ ಮೇಲೆ ಪರಿಣಾಮ ಬೀರುವುದಿಲ್ಲವೊ ಅಲ್ಲಿವರೆಗೆ ನಾನು ಧಾರ್ಮಿಕ ಆಚರಣೆ ಮಾಡಲು ಅರ್ಹನಾಗಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿಚಾರಣೆ ಮುಂದೂಡಲು ಒಪ್ಪದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ನೋಟಿಸ್

ಹಿರಿಯ ವಕೀಲರೊಬ್ಬರು ಧರಿಸುವ ‘ನಾಮ’ವನ್ನು ಉದಾಹರಣೆ ನೀಡಿದ ಕಾಮತ್, “ಇದು ಹಿಂದೂ ನಂಬಿಕೆಯ ಧರ್ಮದ ಅವಿಭಾಜ್ಯ ಅಂಗವಾಗಿಲ್ಲ. ಆದರೆ ಇದು ನ್ಯಾಯಾಲಯದಲ್ಲಿ ಶಿಸ್ತಿಗೆ ಹೇಗೆ ಹಾನಿ ಮಾಡುತ್ತದೆ? ಇದು ಸಾರ್ವಜನಿಕ ಸುವ್ಯವಸ್ಥೆಗೆ ಹೇಗೆ ಧಕ್ಕೆ ತರುತ್ತದೆಯೇ?” ಎಂದು ಕೇಳಿದರು.

ಈ ವೇಳೆ ನ್ಯಾಯಾಲಯಕ್ಕೆ ಹಾಜರಾಗಲು ವಕೀಲರಿಗೆ ನಿರ್ದಿಷ್ಟ ಸಮವಸ್ತ್ರವಿದೆ ಎಂದು ಪೀಠವು ಹೇಳಿತು. ಹವಾಮಾನ ವೈಪರೀತ್ಯದ ಕಾರಣದಿಂದ ರಾಜಸ್ಥಾನ ಮತ್ತು ಗುಜರಾತಿನ ಜನರು ಪೇಟ(ಪಗ್ಡಿ)ವನ್ನು ವಾಡಿಕೆಯಂತೆ ಧರಿಸುತ್ತಾರೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆ ಕುರಿತ ವಾದಗಳ ಕುರಿತು ಮಾತನಾಡಿದ ಪೀಠವು, “ರಸ್ತೆಯಲ್ಲಿ ಹಿಜಾಬ್ ಧರಿಸುವುದರಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಆದರೆ ನೀವು ಶಾಲೆಯ ಕಟ್ಟಡ, ಶಾಲಾ ಆವರಣದ ಬಗ್ಗೆ ಮಾತನಾಡುತ್ತಿದ್ದರೆ, ಶಾಲೆಯು ಅಲ್ಲಿ ಯಾವ ರೀತಿಯ ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಬಯಸುತ್ತದೆ ಎಂಬುದು ಪ್ರಶ್ನೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಸಾರ್ವಜನಿಕ ಸುವ್ಯವಸ್ಥೆ ಸರ್ಕಾರದ ಜವಾಬ್ದಾರಿಯಾಗಿದೆ, ಆದರೆ ಶಾಲೆಗೆ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ಕಲಂ 25ರ ಪ್ರಕಾರ ಜನರು ತಮ್ಮ ಹಕ್ಕುಗಳನ್ನು ಚಲಾಯಿಸುವ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಕರ್ತವ್ಯ. ನಾನು ತಲೆಗೆ ಸ್ಕಾರ್ಫ್ ಧರಿಸುವುದರಿಂದ ಯಾರದ್ದಾದರೂ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಆಗುತ್ತದೆಯೆ?” ಅವರು ಹೇಳಿದ್ದಾರೆ.

ಇದು ಇತರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಪ್ರಶ್ನೆಯಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. “ನೀವು ಯಾವ ರೀತಿಯ ಮೂಲಭೂತ ಹಕ್ಕನ್ನು ನೀವು ಚಲಾಯಿಸಲು ಬಯಸುತ್ತೀರಿ ಎಂಬ ಪ್ರಶ್ನೆಯಾಗಿದೆ” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಿಸ್ಸಂಶಯವಾಗಿ ಇದೊಂದು ಪೂರ್ವಾಗ್ರಹ ಪೀಡಿತ ಧೋರಣೆ. ಭಾರತದಲ್ಲಿ ಉದಯಿಸದ ಧರ್ಮಗಳನ್ನು ಭಾರತೀಯರು ಪಾಲಿಸುವ ಹಕ್ಕಿದೆಯೆಂದಾದರೆ ಧಾರ್ಮಿಕ ಆಚರಣೆಗಳೂ ಸರ್ವರ ಧರ್ಮದವರಿಗೂ ಸಮಾನವಾಗಿರಬೇಕು.ಸಿಖ್,ಹಿಂದೂ,ಇಸ್ಲಾಂ ಧರ್ಮದವರಿಗೂ ತಮ್ಮ ಧಾರ್ಮಿಕಾಚರಣೆಯ ಸಮಾನ ಹಕ್ಕುಗಳನ್ನು ಅಮೇರಿಕಾ, ಕೆನಡಾ, ಬ್ರಿಟನ್ ಮೊದಲಾದ ದೇಶಗಳು ಕೊಟ್ಟಿವೆ. ಸಾಂವಿಧಾನಿಕ ಹಕ್ಕುಗಳ ಸರಿಯಾದ ವಿಶ್ಲೇಷಣೆ ಮಾಡಿ ನ್ಯಾಯ ಒದಗಿಸುವುದು ಸುಪ್ರೀಂ ಕೋರ್ಟ್ ಕಟ್ಟಡವಲ್ಲ, ನಮ್ಮ ನಿಮ್ಮಂತಿರುವ ಹುಲು ಮಾನವರು. ಅವರೂ ಪೂರ್ವಾಗ್ರಹತೆಗಳನ್ನು ಹೊಂದಿರುತ್ತಾರೆ,ಭ್ರಷ್ಟರೂ ಆಗಿರುತ್ತಾರೆ ಎಂಬುದನ್ನು ಕಳೆದ ಎರಡು ದಶಕಗಳ ತೀರ್ಪಗಳು ಸಾಬೀತು ಪಡಿಸಿವೆ.

  2. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಸಂಸ್ಕೃತಿ ಯನ್ನು ಮಾತ್ರ ಎತ್ತಿ ಹಿಡಿದರೆ ಕೋರ್ಟ್ ಗೇನು ಬೆಲೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...