Homeಮುಖಪುಟಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಅದು ಹೇಳಿದೆ

- Advertisement -
- Advertisement -

ಹಿಜಾಬ್ ನಿಷೇಧ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪೀಠವು ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಹೇಳಿದ್ದು, ಸಿಖ್ ಧರ್ಮದ ಆಚರಣೆಗಳು ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದ್ದು, ಅದು ಇಸ್ಲಾಂ ಧರ್ಮದಂತೆ ಅಲ್ಲ ಎಂದು ಹೇಳಿದೆ.

ಹಿಜಾಬ್ ನಿಷೇಧವನ್ನು ವಿರೋಧಿಸಿದ ವಿದ್ಯಾರ್ಥಿಗಳಲ್ಲಿ ಒಬ್ಬರನ್ನು ಪ್ರತಿನಿಧಿಸಿದ ವಕೀಲ ನಿಜಾಮ್ ಪಾಷಾ, ಸಿಖ್ಖರಿಗೆ ಪೇಟವನ್ನು ಧರಿಸುವುದಕ್ಕೆ ನೀಡಿದ ರಕ್ಷಣೆಯನ್ನು ಹಿಜಾಬ್‌‌ಗೆ ಕೂಡಾ ಅತ್ಯುತ್ತಮ ಸಾಂಸ್ಕೃತಿಕ ಅಚರಣೆಯಾಗಿ ನೀಡಬೇಕು ಎಂದು ವಾದಿಸಿದ್ದಾರೆ. ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠ, ಹಿಜಾಬ್‌ಗೆ ಸಿಖ್ ಧರ್ಮದ ಆಚರಣೆಗಳನ್ನು ಹೋಲಿಸುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐದು ‘ಕೆ’ಗಳು ಸಿಖ್‌ ಧರ್ಮದ ಭಾಗವೆಂದು ಈಗಾಗಲೆ ಸ್ಥಾಪಿತವಾಗಿವೆ ಎಂದು ಪೀಠವು ಹೇಳಿದೆ. “ಈ ಆಚರಣೆಗಳನ್ನು ಹಿಜಾಬ್‌ಗೆ ಹೋಲಿಸಬೇಡಿ ಏಕೆಂದರೆ ಅವುಗಳು 100 ವರ್ಷಗಳಿಂದ ಗುರುತಿಸಲ್ಪಟ್ಟಿವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

ಕಾರಾ ಮತ್ತು ಪೇಟದ ಬಗ್ಗೆ ವಾದಗಳು ಮುಂದುವರಿದಿರುವುದನ್ನು ಗಮನಿಸಿದ ಪೀಠ, ಸಿಖ್ ಧರ್ಮದಲ್ಲಿನ ಆಚರಣೆಗಳು ದೇಶದ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ ಎಂದು ಹೇಳಿದೆ. ಕರ್ನಾಟಕ ಹೈಕೋರ್ಟ್ ಪವಿತ್ರ ಕುರಾನ್‌ನ ಕೆಲವು ಶ್ಲೋಕಗಳು ಮತ್ತು ಕೆಲವು ವ್ಯಾಖ್ಯಾನಗಳನ್ನು ಉಲ್ಲೇಖಿಸಿದೆ ಎಂದು ವಾದದ ಸಮಯದಲ್ಲಿ ಪಾಷಾ ಹೇಳಿದ್ದಾರೆ. ಪವಿತ್ರ ಕುರಾನ್ ಎಲ್ಲಾ ಕಾಲಕ್ಕೂ ಪರಿಪೂರ್ಣವಾಗಿದ್ದು, ಅದರ ಶ್ಲೋಕಗಳು ಬಳಕೆಯಲ್ಲಿಲ್ಲ ಎಂದು ಹೇಳುವುದು ‘ದೇವನಿಂದೆ’ಯಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್, ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಹಾಕಿಕೊಂಡು ಬಂದರೆ ಬೇರೆಯವರಿಗೆ ತೊಂದರೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಹೇಳಿದೆ. ಆದರೆ ಈ ಕಾರಣಕ್ಕೆ ಅದನ್ನು ನಿಷೇಧ ಸಾಧ್ಯವಿಲ್ಲ ಎಂದು ಪೀಠಕ್ಕೆ ತಿಳಿಸಿದರು. “ಆರ್ಟಿಕಲ್ 25 ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯ ಎಂಬ ಮೂರು ನಿರ್ಬಂಧಗಳನ್ನು ಹೊಂದಿದೆ. ತಲೆ ಸ್ಕಾರ್ಫ್ ಧರಿಸುವುದು ಧಾರ್ಮಿಕ ನಂಬಿಕೆಯ ಒಂದು ಭಾಗವಾಗಿದ್ದು ಅದು ಸಂವಿಧಾನದ ಆರ್ಟಿಕಲ್‌ 19 ಮತ್ತು 21 ರ ಭಾಗವಾಗಿದೆ” ಎಂದು ಕಾಮತ್ ಪ್ರತಿಪಾದಿಸಿದರು.

ಪ್ರತಿಯೊಂದು ಧಾರ್ಮಿಕ ಆಚರಣೆಗಳು ಧರ್ಮಕ್ಕೆ ಅತ್ಯಗತ್ಯವಲ್ಲ, ಆದರೆ ಅದು ಅನಿವಾರ್ಯವಲ್ಲ ಎಂಬ ಕಾರಣ ನೀಡಿ ಸರ್ಕಾರ ಅದನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ನಾನು ಎಲ್ಲಿಯವರೆಗೆ ಸಾರ್ವಜನಿಕ ಸುವ್ಯವಸ್ಥೆಯನ್ನು ಉಲ್ಲಂಘಿಸುವುದಿಲ್ಲವೋ, ಎಲ್ಲಿಯವರೆಗೆ ನಾನು ನೈತಿಕತೆಯ ಎಲ್ಲೆ ಮೀರುವುದಿಲವೊ ಮತ್ತು ಎಲ್ಲಿವರೆಗೆ ಇತರರ ಆರೋಗ್ಯದ ಮೇಲೆ ಪರಿಣಾಮ ಬೀರುವುದಿಲ್ಲವೊ ಅಲ್ಲಿವರೆಗೆ ನಾನು ಧಾರ್ಮಿಕ ಆಚರಣೆ ಮಾಡಲು ಅರ್ಹನಾಗಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿಚಾರಣೆ ಮುಂದೂಡಲು ಒಪ್ಪದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ನೋಟಿಸ್

ಹಿರಿಯ ವಕೀಲರೊಬ್ಬರು ಧರಿಸುವ ‘ನಾಮ’ವನ್ನು ಉದಾಹರಣೆ ನೀಡಿದ ಕಾಮತ್, “ಇದು ಹಿಂದೂ ನಂಬಿಕೆಯ ಧರ್ಮದ ಅವಿಭಾಜ್ಯ ಅಂಗವಾಗಿಲ್ಲ. ಆದರೆ ಇದು ನ್ಯಾಯಾಲಯದಲ್ಲಿ ಶಿಸ್ತಿಗೆ ಹೇಗೆ ಹಾನಿ ಮಾಡುತ್ತದೆ? ಇದು ಸಾರ್ವಜನಿಕ ಸುವ್ಯವಸ್ಥೆಗೆ ಹೇಗೆ ಧಕ್ಕೆ ತರುತ್ತದೆಯೇ?” ಎಂದು ಕೇಳಿದರು.

ಈ ವೇಳೆ ನ್ಯಾಯಾಲಯಕ್ಕೆ ಹಾಜರಾಗಲು ವಕೀಲರಿಗೆ ನಿರ್ದಿಷ್ಟ ಸಮವಸ್ತ್ರವಿದೆ ಎಂದು ಪೀಠವು ಹೇಳಿತು. ಹವಾಮಾನ ವೈಪರೀತ್ಯದ ಕಾರಣದಿಂದ ರಾಜಸ್ಥಾನ ಮತ್ತು ಗುಜರಾತಿನ ಜನರು ಪೇಟ(ಪಗ್ಡಿ)ವನ್ನು ವಾಡಿಕೆಯಂತೆ ಧರಿಸುತ್ತಾರೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆ ಕುರಿತ ವಾದಗಳ ಕುರಿತು ಮಾತನಾಡಿದ ಪೀಠವು, “ರಸ್ತೆಯಲ್ಲಿ ಹಿಜಾಬ್ ಧರಿಸುವುದರಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಆದರೆ ನೀವು ಶಾಲೆಯ ಕಟ್ಟಡ, ಶಾಲಾ ಆವರಣದ ಬಗ್ಗೆ ಮಾತನಾಡುತ್ತಿದ್ದರೆ, ಶಾಲೆಯು ಅಲ್ಲಿ ಯಾವ ರೀತಿಯ ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಬಯಸುತ್ತದೆ ಎಂಬುದು ಪ್ರಶ್ನೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಸಾರ್ವಜನಿಕ ಸುವ್ಯವಸ್ಥೆ ಸರ್ಕಾರದ ಜವಾಬ್ದಾರಿಯಾಗಿದೆ, ಆದರೆ ಶಾಲೆಗೆ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ಕಲಂ 25ರ ಪ್ರಕಾರ ಜನರು ತಮ್ಮ ಹಕ್ಕುಗಳನ್ನು ಚಲಾಯಿಸುವ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಕರ್ತವ್ಯ. ನಾನು ತಲೆಗೆ ಸ್ಕಾರ್ಫ್ ಧರಿಸುವುದರಿಂದ ಯಾರದ್ದಾದರೂ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಆಗುತ್ತದೆಯೆ?” ಅವರು ಹೇಳಿದ್ದಾರೆ.

ಇದು ಇತರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಪ್ರಶ್ನೆಯಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. “ನೀವು ಯಾವ ರೀತಿಯ ಮೂಲಭೂತ ಹಕ್ಕನ್ನು ನೀವು ಚಲಾಯಿಸಲು ಬಯಸುತ್ತೀರಿ ಎಂಬ ಪ್ರಶ್ನೆಯಾಗಿದೆ” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಿಸ್ಸಂಶಯವಾಗಿ ಇದೊಂದು ಪೂರ್ವಾಗ್ರಹ ಪೀಡಿತ ಧೋರಣೆ. ಭಾರತದಲ್ಲಿ ಉದಯಿಸದ ಧರ್ಮಗಳನ್ನು ಭಾರತೀಯರು ಪಾಲಿಸುವ ಹಕ್ಕಿದೆಯೆಂದಾದರೆ ಧಾರ್ಮಿಕ ಆಚರಣೆಗಳೂ ಸರ್ವರ ಧರ್ಮದವರಿಗೂ ಸಮಾನವಾಗಿರಬೇಕು.ಸಿಖ್,ಹಿಂದೂ,ಇಸ್ಲಾಂ ಧರ್ಮದವರಿಗೂ ತಮ್ಮ ಧಾರ್ಮಿಕಾಚರಣೆಯ ಸಮಾನ ಹಕ್ಕುಗಳನ್ನು ಅಮೇರಿಕಾ, ಕೆನಡಾ, ಬ್ರಿಟನ್ ಮೊದಲಾದ ದೇಶಗಳು ಕೊಟ್ಟಿವೆ. ಸಾಂವಿಧಾನಿಕ ಹಕ್ಕುಗಳ ಸರಿಯಾದ ವಿಶ್ಲೇಷಣೆ ಮಾಡಿ ನ್ಯಾಯ ಒದಗಿಸುವುದು ಸುಪ್ರೀಂ ಕೋರ್ಟ್ ಕಟ್ಟಡವಲ್ಲ, ನಮ್ಮ ನಿಮ್ಮಂತಿರುವ ಹುಲು ಮಾನವರು. ಅವರೂ ಪೂರ್ವಾಗ್ರಹತೆಗಳನ್ನು ಹೊಂದಿರುತ್ತಾರೆ,ಭ್ರಷ್ಟರೂ ಆಗಿರುತ್ತಾರೆ ಎಂಬುದನ್ನು ಕಳೆದ ಎರಡು ದಶಕಗಳ ತೀರ್ಪಗಳು ಸಾಬೀತು ಪಡಿಸಿವೆ.

  2. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಸಂಸ್ಕೃತಿ ಯನ್ನು ಮಾತ್ರ ಎತ್ತಿ ಹಿಡಿದರೆ ಕೋರ್ಟ್ ಗೇನು ಬೆಲೆ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...