Homeಮುಖಪುಟಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಅದು ಹೇಳಿದೆ

- Advertisement -
- Advertisement -

ಹಿಜಾಬ್ ನಿಷೇಧ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪೀಠವು ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಹೇಳಿದ್ದು, ಸಿಖ್ ಧರ್ಮದ ಆಚರಣೆಗಳು ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದ್ದು, ಅದು ಇಸ್ಲಾಂ ಧರ್ಮದಂತೆ ಅಲ್ಲ ಎಂದು ಹೇಳಿದೆ.

ಹಿಜಾಬ್ ನಿಷೇಧವನ್ನು ವಿರೋಧಿಸಿದ ವಿದ್ಯಾರ್ಥಿಗಳಲ್ಲಿ ಒಬ್ಬರನ್ನು ಪ್ರತಿನಿಧಿಸಿದ ವಕೀಲ ನಿಜಾಮ್ ಪಾಷಾ, ಸಿಖ್ಖರಿಗೆ ಪೇಟವನ್ನು ಧರಿಸುವುದಕ್ಕೆ ನೀಡಿದ ರಕ್ಷಣೆಯನ್ನು ಹಿಜಾಬ್‌‌ಗೆ ಕೂಡಾ ಅತ್ಯುತ್ತಮ ಸಾಂಸ್ಕೃತಿಕ ಅಚರಣೆಯಾಗಿ ನೀಡಬೇಕು ಎಂದು ವಾದಿಸಿದ್ದಾರೆ. ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠ, ಹಿಜಾಬ್‌ಗೆ ಸಿಖ್ ಧರ್ಮದ ಆಚರಣೆಗಳನ್ನು ಹೋಲಿಸುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐದು ‘ಕೆ’ಗಳು ಸಿಖ್‌ ಧರ್ಮದ ಭಾಗವೆಂದು ಈಗಾಗಲೆ ಸ್ಥಾಪಿತವಾಗಿವೆ ಎಂದು ಪೀಠವು ಹೇಳಿದೆ. “ಈ ಆಚರಣೆಗಳನ್ನು ಹಿಜಾಬ್‌ಗೆ ಹೋಲಿಸಬೇಡಿ ಏಕೆಂದರೆ ಅವುಗಳು 100 ವರ್ಷಗಳಿಂದ ಗುರುತಿಸಲ್ಪಟ್ಟಿವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

ಕಾರಾ ಮತ್ತು ಪೇಟದ ಬಗ್ಗೆ ವಾದಗಳು ಮುಂದುವರಿದಿರುವುದನ್ನು ಗಮನಿಸಿದ ಪೀಠ, ಸಿಖ್ ಧರ್ಮದಲ್ಲಿನ ಆಚರಣೆಗಳು ದೇಶದ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ ಎಂದು ಹೇಳಿದೆ. ಕರ್ನಾಟಕ ಹೈಕೋರ್ಟ್ ಪವಿತ್ರ ಕುರಾನ್‌ನ ಕೆಲವು ಶ್ಲೋಕಗಳು ಮತ್ತು ಕೆಲವು ವ್ಯಾಖ್ಯಾನಗಳನ್ನು ಉಲ್ಲೇಖಿಸಿದೆ ಎಂದು ವಾದದ ಸಮಯದಲ್ಲಿ ಪಾಷಾ ಹೇಳಿದ್ದಾರೆ. ಪವಿತ್ರ ಕುರಾನ್ ಎಲ್ಲಾ ಕಾಲಕ್ಕೂ ಪರಿಪೂರ್ಣವಾಗಿದ್ದು, ಅದರ ಶ್ಲೋಕಗಳು ಬಳಕೆಯಲ್ಲಿಲ್ಲ ಎಂದು ಹೇಳುವುದು ‘ದೇವನಿಂದೆ’ಯಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್, ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಹಾಕಿಕೊಂಡು ಬಂದರೆ ಬೇರೆಯವರಿಗೆ ತೊಂದರೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಹೇಳಿದೆ. ಆದರೆ ಈ ಕಾರಣಕ್ಕೆ ಅದನ್ನು ನಿಷೇಧ ಸಾಧ್ಯವಿಲ್ಲ ಎಂದು ಪೀಠಕ್ಕೆ ತಿಳಿಸಿದರು. “ಆರ್ಟಿಕಲ್ 25 ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯ ಎಂಬ ಮೂರು ನಿರ್ಬಂಧಗಳನ್ನು ಹೊಂದಿದೆ. ತಲೆ ಸ್ಕಾರ್ಫ್ ಧರಿಸುವುದು ಧಾರ್ಮಿಕ ನಂಬಿಕೆಯ ಒಂದು ಭಾಗವಾಗಿದ್ದು ಅದು ಸಂವಿಧಾನದ ಆರ್ಟಿಕಲ್‌ 19 ಮತ್ತು 21 ರ ಭಾಗವಾಗಿದೆ” ಎಂದು ಕಾಮತ್ ಪ್ರತಿಪಾದಿಸಿದರು.

ಪ್ರತಿಯೊಂದು ಧಾರ್ಮಿಕ ಆಚರಣೆಗಳು ಧರ್ಮಕ್ಕೆ ಅತ್ಯಗತ್ಯವಲ್ಲ, ಆದರೆ ಅದು ಅನಿವಾರ್ಯವಲ್ಲ ಎಂಬ ಕಾರಣ ನೀಡಿ ಸರ್ಕಾರ ಅದನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ನಾನು ಎಲ್ಲಿಯವರೆಗೆ ಸಾರ್ವಜನಿಕ ಸುವ್ಯವಸ್ಥೆಯನ್ನು ಉಲ್ಲಂಘಿಸುವುದಿಲ್ಲವೋ, ಎಲ್ಲಿಯವರೆಗೆ ನಾನು ನೈತಿಕತೆಯ ಎಲ್ಲೆ ಮೀರುವುದಿಲವೊ ಮತ್ತು ಎಲ್ಲಿವರೆಗೆ ಇತರರ ಆರೋಗ್ಯದ ಮೇಲೆ ಪರಿಣಾಮ ಬೀರುವುದಿಲ್ಲವೊ ಅಲ್ಲಿವರೆಗೆ ನಾನು ಧಾರ್ಮಿಕ ಆಚರಣೆ ಮಾಡಲು ಅರ್ಹನಾಗಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿಚಾರಣೆ ಮುಂದೂಡಲು ಒಪ್ಪದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ನೋಟಿಸ್

ಹಿರಿಯ ವಕೀಲರೊಬ್ಬರು ಧರಿಸುವ ‘ನಾಮ’ವನ್ನು ಉದಾಹರಣೆ ನೀಡಿದ ಕಾಮತ್, “ಇದು ಹಿಂದೂ ನಂಬಿಕೆಯ ಧರ್ಮದ ಅವಿಭಾಜ್ಯ ಅಂಗವಾಗಿಲ್ಲ. ಆದರೆ ಇದು ನ್ಯಾಯಾಲಯದಲ್ಲಿ ಶಿಸ್ತಿಗೆ ಹೇಗೆ ಹಾನಿ ಮಾಡುತ್ತದೆ? ಇದು ಸಾರ್ವಜನಿಕ ಸುವ್ಯವಸ್ಥೆಗೆ ಹೇಗೆ ಧಕ್ಕೆ ತರುತ್ತದೆಯೇ?” ಎಂದು ಕೇಳಿದರು.

ಈ ವೇಳೆ ನ್ಯಾಯಾಲಯಕ್ಕೆ ಹಾಜರಾಗಲು ವಕೀಲರಿಗೆ ನಿರ್ದಿಷ್ಟ ಸಮವಸ್ತ್ರವಿದೆ ಎಂದು ಪೀಠವು ಹೇಳಿತು. ಹವಾಮಾನ ವೈಪರೀತ್ಯದ ಕಾರಣದಿಂದ ರಾಜಸ್ಥಾನ ಮತ್ತು ಗುಜರಾತಿನ ಜನರು ಪೇಟ(ಪಗ್ಡಿ)ವನ್ನು ವಾಡಿಕೆಯಂತೆ ಧರಿಸುತ್ತಾರೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆ ಕುರಿತ ವಾದಗಳ ಕುರಿತು ಮಾತನಾಡಿದ ಪೀಠವು, “ರಸ್ತೆಯಲ್ಲಿ ಹಿಜಾಬ್ ಧರಿಸುವುದರಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಆದರೆ ನೀವು ಶಾಲೆಯ ಕಟ್ಟಡ, ಶಾಲಾ ಆವರಣದ ಬಗ್ಗೆ ಮಾತನಾಡುತ್ತಿದ್ದರೆ, ಶಾಲೆಯು ಅಲ್ಲಿ ಯಾವ ರೀತಿಯ ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಬಯಸುತ್ತದೆ ಎಂಬುದು ಪ್ರಶ್ನೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಸಾರ್ವಜನಿಕ ಸುವ್ಯವಸ್ಥೆ ಸರ್ಕಾರದ ಜವಾಬ್ದಾರಿಯಾಗಿದೆ, ಆದರೆ ಶಾಲೆಗೆ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ಕಲಂ 25ರ ಪ್ರಕಾರ ಜನರು ತಮ್ಮ ಹಕ್ಕುಗಳನ್ನು ಚಲಾಯಿಸುವ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಕರ್ತವ್ಯ. ನಾನು ತಲೆಗೆ ಸ್ಕಾರ್ಫ್ ಧರಿಸುವುದರಿಂದ ಯಾರದ್ದಾದರೂ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಆಗುತ್ತದೆಯೆ?” ಅವರು ಹೇಳಿದ್ದಾರೆ.

ಇದು ಇತರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಪ್ರಶ್ನೆಯಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. “ನೀವು ಯಾವ ರೀತಿಯ ಮೂಲಭೂತ ಹಕ್ಕನ್ನು ನೀವು ಚಲಾಯಿಸಲು ಬಯಸುತ್ತೀರಿ ಎಂಬ ಪ್ರಶ್ನೆಯಾಗಿದೆ” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಿಸ್ಸಂಶಯವಾಗಿ ಇದೊಂದು ಪೂರ್ವಾಗ್ರಹ ಪೀಡಿತ ಧೋರಣೆ. ಭಾರತದಲ್ಲಿ ಉದಯಿಸದ ಧರ್ಮಗಳನ್ನು ಭಾರತೀಯರು ಪಾಲಿಸುವ ಹಕ್ಕಿದೆಯೆಂದಾದರೆ ಧಾರ್ಮಿಕ ಆಚರಣೆಗಳೂ ಸರ್ವರ ಧರ್ಮದವರಿಗೂ ಸಮಾನವಾಗಿರಬೇಕು.ಸಿಖ್,ಹಿಂದೂ,ಇಸ್ಲಾಂ ಧರ್ಮದವರಿಗೂ ತಮ್ಮ ಧಾರ್ಮಿಕಾಚರಣೆಯ ಸಮಾನ ಹಕ್ಕುಗಳನ್ನು ಅಮೇರಿಕಾ, ಕೆನಡಾ, ಬ್ರಿಟನ್ ಮೊದಲಾದ ದೇಶಗಳು ಕೊಟ್ಟಿವೆ. ಸಾಂವಿಧಾನಿಕ ಹಕ್ಕುಗಳ ಸರಿಯಾದ ವಿಶ್ಲೇಷಣೆ ಮಾಡಿ ನ್ಯಾಯ ಒದಗಿಸುವುದು ಸುಪ್ರೀಂ ಕೋರ್ಟ್ ಕಟ್ಟಡವಲ್ಲ, ನಮ್ಮ ನಿಮ್ಮಂತಿರುವ ಹುಲು ಮಾನವರು. ಅವರೂ ಪೂರ್ವಾಗ್ರಹತೆಗಳನ್ನು ಹೊಂದಿರುತ್ತಾರೆ,ಭ್ರಷ್ಟರೂ ಆಗಿರುತ್ತಾರೆ ಎಂಬುದನ್ನು ಕಳೆದ ಎರಡು ದಶಕಗಳ ತೀರ್ಪಗಳು ಸಾಬೀತು ಪಡಿಸಿವೆ.

  2. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಸಂಸ್ಕೃತಿ ಯನ್ನು ಮಾತ್ರ ಎತ್ತಿ ಹಿಡಿದರೆ ಕೋರ್ಟ್ ಗೇನು ಬೆಲೆ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...