Homeಮುಖಪುಟಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಅದು ಹೇಳಿದೆ

- Advertisement -
- Advertisement -

ಹಿಜಾಬ್ ನಿಷೇಧ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪೀಠವು ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಹೇಳಿದ್ದು, ಸಿಖ್ ಧರ್ಮದ ಆಚರಣೆಗಳು ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದ್ದು, ಅದು ಇಸ್ಲಾಂ ಧರ್ಮದಂತೆ ಅಲ್ಲ ಎಂದು ಹೇಳಿದೆ.

ಹಿಜಾಬ್ ನಿಷೇಧವನ್ನು ವಿರೋಧಿಸಿದ ವಿದ್ಯಾರ್ಥಿಗಳಲ್ಲಿ ಒಬ್ಬರನ್ನು ಪ್ರತಿನಿಧಿಸಿದ ವಕೀಲ ನಿಜಾಮ್ ಪಾಷಾ, ಸಿಖ್ಖರಿಗೆ ಪೇಟವನ್ನು ಧರಿಸುವುದಕ್ಕೆ ನೀಡಿದ ರಕ್ಷಣೆಯನ್ನು ಹಿಜಾಬ್‌‌ಗೆ ಕೂಡಾ ಅತ್ಯುತ್ತಮ ಸಾಂಸ್ಕೃತಿಕ ಅಚರಣೆಯಾಗಿ ನೀಡಬೇಕು ಎಂದು ವಾದಿಸಿದ್ದಾರೆ. ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠ, ಹಿಜಾಬ್‌ಗೆ ಸಿಖ್ ಧರ್ಮದ ಆಚರಣೆಗಳನ್ನು ಹೋಲಿಸುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐದು ‘ಕೆ’ಗಳು ಸಿಖ್‌ ಧರ್ಮದ ಭಾಗವೆಂದು ಈಗಾಗಲೆ ಸ್ಥಾಪಿತವಾಗಿವೆ ಎಂದು ಪೀಠವು ಹೇಳಿದೆ. “ಈ ಆಚರಣೆಗಳನ್ನು ಹಿಜಾಬ್‌ಗೆ ಹೋಲಿಸಬೇಡಿ ಏಕೆಂದರೆ ಅವುಗಳು 100 ವರ್ಷಗಳಿಂದ ಗುರುತಿಸಲ್ಪಟ್ಟಿವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

ಕಾರಾ ಮತ್ತು ಪೇಟದ ಬಗ್ಗೆ ವಾದಗಳು ಮುಂದುವರಿದಿರುವುದನ್ನು ಗಮನಿಸಿದ ಪೀಠ, ಸಿಖ್ ಧರ್ಮದಲ್ಲಿನ ಆಚರಣೆಗಳು ದೇಶದ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ ಎಂದು ಹೇಳಿದೆ. ಕರ್ನಾಟಕ ಹೈಕೋರ್ಟ್ ಪವಿತ್ರ ಕುರಾನ್‌ನ ಕೆಲವು ಶ್ಲೋಕಗಳು ಮತ್ತು ಕೆಲವು ವ್ಯಾಖ್ಯಾನಗಳನ್ನು ಉಲ್ಲೇಖಿಸಿದೆ ಎಂದು ವಾದದ ಸಮಯದಲ್ಲಿ ಪಾಷಾ ಹೇಳಿದ್ದಾರೆ. ಪವಿತ್ರ ಕುರಾನ್ ಎಲ್ಲಾ ಕಾಲಕ್ಕೂ ಪರಿಪೂರ್ಣವಾಗಿದ್ದು, ಅದರ ಶ್ಲೋಕಗಳು ಬಳಕೆಯಲ್ಲಿಲ್ಲ ಎಂದು ಹೇಳುವುದು ‘ದೇವನಿಂದೆ’ಯಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್, ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಹಾಕಿಕೊಂಡು ಬಂದರೆ ಬೇರೆಯವರಿಗೆ ತೊಂದರೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಹೇಳಿದೆ. ಆದರೆ ಈ ಕಾರಣಕ್ಕೆ ಅದನ್ನು ನಿಷೇಧ ಸಾಧ್ಯವಿಲ್ಲ ಎಂದು ಪೀಠಕ್ಕೆ ತಿಳಿಸಿದರು. “ಆರ್ಟಿಕಲ್ 25 ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯ ಎಂಬ ಮೂರು ನಿರ್ಬಂಧಗಳನ್ನು ಹೊಂದಿದೆ. ತಲೆ ಸ್ಕಾರ್ಫ್ ಧರಿಸುವುದು ಧಾರ್ಮಿಕ ನಂಬಿಕೆಯ ಒಂದು ಭಾಗವಾಗಿದ್ದು ಅದು ಸಂವಿಧಾನದ ಆರ್ಟಿಕಲ್‌ 19 ಮತ್ತು 21 ರ ಭಾಗವಾಗಿದೆ” ಎಂದು ಕಾಮತ್ ಪ್ರತಿಪಾದಿಸಿದರು.

ಪ್ರತಿಯೊಂದು ಧಾರ್ಮಿಕ ಆಚರಣೆಗಳು ಧರ್ಮಕ್ಕೆ ಅತ್ಯಗತ್ಯವಲ್ಲ, ಆದರೆ ಅದು ಅನಿವಾರ್ಯವಲ್ಲ ಎಂಬ ಕಾರಣ ನೀಡಿ ಸರ್ಕಾರ ಅದನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ನಾನು ಎಲ್ಲಿಯವರೆಗೆ ಸಾರ್ವಜನಿಕ ಸುವ್ಯವಸ್ಥೆಯನ್ನು ಉಲ್ಲಂಘಿಸುವುದಿಲ್ಲವೋ, ಎಲ್ಲಿಯವರೆಗೆ ನಾನು ನೈತಿಕತೆಯ ಎಲ್ಲೆ ಮೀರುವುದಿಲವೊ ಮತ್ತು ಎಲ್ಲಿವರೆಗೆ ಇತರರ ಆರೋಗ್ಯದ ಮೇಲೆ ಪರಿಣಾಮ ಬೀರುವುದಿಲ್ಲವೊ ಅಲ್ಲಿವರೆಗೆ ನಾನು ಧಾರ್ಮಿಕ ಆಚರಣೆ ಮಾಡಲು ಅರ್ಹನಾಗಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿಚಾರಣೆ ಮುಂದೂಡಲು ಒಪ್ಪದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ನೋಟಿಸ್

ಹಿರಿಯ ವಕೀಲರೊಬ್ಬರು ಧರಿಸುವ ‘ನಾಮ’ವನ್ನು ಉದಾಹರಣೆ ನೀಡಿದ ಕಾಮತ್, “ಇದು ಹಿಂದೂ ನಂಬಿಕೆಯ ಧರ್ಮದ ಅವಿಭಾಜ್ಯ ಅಂಗವಾಗಿಲ್ಲ. ಆದರೆ ಇದು ನ್ಯಾಯಾಲಯದಲ್ಲಿ ಶಿಸ್ತಿಗೆ ಹೇಗೆ ಹಾನಿ ಮಾಡುತ್ತದೆ? ಇದು ಸಾರ್ವಜನಿಕ ಸುವ್ಯವಸ್ಥೆಗೆ ಹೇಗೆ ಧಕ್ಕೆ ತರುತ್ತದೆಯೇ?” ಎಂದು ಕೇಳಿದರು.

ಈ ವೇಳೆ ನ್ಯಾಯಾಲಯಕ್ಕೆ ಹಾಜರಾಗಲು ವಕೀಲರಿಗೆ ನಿರ್ದಿಷ್ಟ ಸಮವಸ್ತ್ರವಿದೆ ಎಂದು ಪೀಠವು ಹೇಳಿತು. ಹವಾಮಾನ ವೈಪರೀತ್ಯದ ಕಾರಣದಿಂದ ರಾಜಸ್ಥಾನ ಮತ್ತು ಗುಜರಾತಿನ ಜನರು ಪೇಟ(ಪಗ್ಡಿ)ವನ್ನು ವಾಡಿಕೆಯಂತೆ ಧರಿಸುತ್ತಾರೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆ ಕುರಿತ ವಾದಗಳ ಕುರಿತು ಮಾತನಾಡಿದ ಪೀಠವು, “ರಸ್ತೆಯಲ್ಲಿ ಹಿಜಾಬ್ ಧರಿಸುವುದರಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಆದರೆ ನೀವು ಶಾಲೆಯ ಕಟ್ಟಡ, ಶಾಲಾ ಆವರಣದ ಬಗ್ಗೆ ಮಾತನಾಡುತ್ತಿದ್ದರೆ, ಶಾಲೆಯು ಅಲ್ಲಿ ಯಾವ ರೀತಿಯ ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಬಯಸುತ್ತದೆ ಎಂಬುದು ಪ್ರಶ್ನೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಸಾರ್ವಜನಿಕ ಸುವ್ಯವಸ್ಥೆ ಸರ್ಕಾರದ ಜವಾಬ್ದಾರಿಯಾಗಿದೆ, ಆದರೆ ಶಾಲೆಗೆ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ಕಲಂ 25ರ ಪ್ರಕಾರ ಜನರು ತಮ್ಮ ಹಕ್ಕುಗಳನ್ನು ಚಲಾಯಿಸುವ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಕರ್ತವ್ಯ. ನಾನು ತಲೆಗೆ ಸ್ಕಾರ್ಫ್ ಧರಿಸುವುದರಿಂದ ಯಾರದ್ದಾದರೂ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಆಗುತ್ತದೆಯೆ?” ಅವರು ಹೇಳಿದ್ದಾರೆ.

ಇದು ಇತರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಪ್ರಶ್ನೆಯಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. “ನೀವು ಯಾವ ರೀತಿಯ ಮೂಲಭೂತ ಹಕ್ಕನ್ನು ನೀವು ಚಲಾಯಿಸಲು ಬಯಸುತ್ತೀರಿ ಎಂಬ ಪ್ರಶ್ನೆಯಾಗಿದೆ” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಿಸ್ಸಂಶಯವಾಗಿ ಇದೊಂದು ಪೂರ್ವಾಗ್ರಹ ಪೀಡಿತ ಧೋರಣೆ. ಭಾರತದಲ್ಲಿ ಉದಯಿಸದ ಧರ್ಮಗಳನ್ನು ಭಾರತೀಯರು ಪಾಲಿಸುವ ಹಕ್ಕಿದೆಯೆಂದಾದರೆ ಧಾರ್ಮಿಕ ಆಚರಣೆಗಳೂ ಸರ್ವರ ಧರ್ಮದವರಿಗೂ ಸಮಾನವಾಗಿರಬೇಕು.ಸಿಖ್,ಹಿಂದೂ,ಇಸ್ಲಾಂ ಧರ್ಮದವರಿಗೂ ತಮ್ಮ ಧಾರ್ಮಿಕಾಚರಣೆಯ ಸಮಾನ ಹಕ್ಕುಗಳನ್ನು ಅಮೇರಿಕಾ, ಕೆನಡಾ, ಬ್ರಿಟನ್ ಮೊದಲಾದ ದೇಶಗಳು ಕೊಟ್ಟಿವೆ. ಸಾಂವಿಧಾನಿಕ ಹಕ್ಕುಗಳ ಸರಿಯಾದ ವಿಶ್ಲೇಷಣೆ ಮಾಡಿ ನ್ಯಾಯ ಒದಗಿಸುವುದು ಸುಪ್ರೀಂ ಕೋರ್ಟ್ ಕಟ್ಟಡವಲ್ಲ, ನಮ್ಮ ನಿಮ್ಮಂತಿರುವ ಹುಲು ಮಾನವರು. ಅವರೂ ಪೂರ್ವಾಗ್ರಹತೆಗಳನ್ನು ಹೊಂದಿರುತ್ತಾರೆ,ಭ್ರಷ್ಟರೂ ಆಗಿರುತ್ತಾರೆ ಎಂಬುದನ್ನು ಕಳೆದ ಎರಡು ದಶಕಗಳ ತೀರ್ಪಗಳು ಸಾಬೀತು ಪಡಿಸಿವೆ.

  2. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಸಂಸ್ಕೃತಿ ಯನ್ನು ಮಾತ್ರ ಎತ್ತಿ ಹಿಡಿದರೆ ಕೋರ್ಟ್ ಗೇನು ಬೆಲೆ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...