Homeಮುಖಪುಟಸಿಕ್ಕಿಂ ವಿಧಾನಸಭಾ ಚುನಾವಣೆ ಫಲಿತಾಂಶ: ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದ ಎಸ್‌ಕೆಎಂ

ಸಿಕ್ಕಿಂ ವಿಧಾನಸಭಾ ಚುನಾವಣೆ ಫಲಿತಾಂಶ: ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದ ಎಸ್‌ಕೆಎಂ

- Advertisement -
- Advertisement -

ಸಿಕ್ಕಿಂ ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಂ) ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಪಕ್ಷದ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಅವರು ಭಾನುವಾರ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ್ದು, ಎಸ್‌ಕೆಎಂ ಕಾರ್ಯಕರ್ತರು ಮತ್ತು ರಾಜ್ಯದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.

ಎಸ್‌ಕೆಎಂ ಕಾರ್ಯಕರ್ತರ ಶ್ರಮ ಮತ್ತು ಅವರ ಸರ್ಕಾರದ ಮೇಲೆ ಜನತೆ ಇಟ್ಟಿರುವ ನಂಬಿಕೆಯಿಂದ ಗೆಲುವು ಸಾಧ್ಯವಾಗಿದೆ ಎಂದರು.

ಎಸ್‌ಕೆಎಂ ಹಿಮಾಲಯ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ. ಇಲ್ಲಿಯವರೆಗೆ ವಿಧಾನಸಭೆಯ 31 ಸ್ಥಾನಗಳಲ್ಲಿ ಆಡಳಿತ ಪಕ್ಷ 26 ಸ್ಥಾನಗಳನ್ನು ಗೆದ್ದಿದೆ. ಉಳಿದ ಐದು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಗೆಲುವಿಗಾಗಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮುಖ್ಯಮಂತ್ರಿ ತಮಾಂಗ್ ಧನ್ಯವಾದ ತಿಳಿಸಿದ್ದಾರೆ.

“ಜನರ ಪ್ರೀತಿ ಮತ್ತು ವಿಶ್ವಾಸದಿಂದಾಗಿ ನಾವು ಕಳೆದ ಐದು ವರ್ಷಗಳಲ್ಲಿ ಸರ್ಕಾರವನ್ನು ಭದ್ರಪಡಿಸುವಲ್ಲಿ ಯಶಸ್ವಿಯಾಗಿದ್ದೇವೆ. ಜೊತೆಗೆ, ಪಕ್ಷದ ಕಾರ್ಯಕರ್ತರು ತುಂಬಾ ಶ್ರಮಿಸಿದ್ದಾರೆ. ಈಗ ನಾವು ಮುಂದಿನ ಐದು ವರ್ಷಗಳಲ್ಲಿ ನಮ್ಮ 100 ಪ್ರತಿಶತವನ್ನು ಸಿಕ್ಕಿಂ ಜನರಿಗಾಗಿ ನೀಡುತ್ತೇವೆ” ಎಂದು ಅವರು ಗ್ಯಾಂಗ್ಟಾಕ್‌ನ ಪಾಲ್ಜೋರ್ ಸ್ಟೇಡಿಯಂನಲ್ಲಿ ನಡೆದ ಸಭೆಯಲ್ಲಿ ಹೇಳಿದರು.

ತಮಾಂಗ್ ಸಿಕ್ಕಿಂನ ರೆನಾಕ್ ಮತ್ತು ಸೊರೆಂಗ್-ಚಕುಂಗ್‌ನ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ, ಎಸ್‌ಕೆಂ 17 ಸ್ಥಾನಗಳನ್ನು ಗೆದ್ದು, 25 ವರ್ಷಗಳ ನಂತರ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಪಕ್ಷವನ್ನು (ಎಸ್‌ಡಿಎಂ) ಅಧಿಕಾರದಿಂದ ಉರುಳಿಸಿತು. ಈ ಬಾರಿ, ಆಡಳಿತ ಪಕ್ಷವು ತನ್ನ ಹಿಂದಿನ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸಿದೆ.

ಆದರೆ, ಎಸ್‌ಡಿಎಫ್ ಅಧ್ಯಕ್ಷ ಮತ್ತು ಮಾಜಿ ಸಿಎಂ ಪವನ್ ಚಾಮ್ಲಿಂಗ್ ಎರಡೂ ಸ್ಥಾನಗಳಿಂದ ಸೋತಿದ್ದಾರೆ.  ತಮಾಂಗ್ ಅವರ ಪತ್ನಿ ಕೃಷ್ಣ ಕುಮಾರಿ ರೈ ಕೂಡ ನಾಮ್ಚಿ-ಸಿಂಘಿತಂಗ್ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ. ಅವರು ಎಸ್‌ಡಿಎಫ್‌ನ ಬಿಮಲ್ ರೈ ಅವರನ್ನು 5000 ಮತಗಳಿಂದ ಸೋಲಿಸಿದರು.

ಎಸ್‌ಕೆಎಂ ಅಭ್ಯರ್ಥಿ 7,605 ಮತಗಳನ್ನು ಪಡೆದರೆ, ಅವರ ಎಸ್‌ಡಿಎಫ್ ಎದುರಾಳಿ 2,605 ಮತಗಳನ್ನು ಗಳಿಸಿದರು. ಮಹೇಶ್ ರೈ (ಸಿಎಪಿ-ಎಸ್) ಮತ್ತು ಅರುಣಾ ಮಾಂಗರ್ (ಬಿಜೆಪಿ) 136 ಮತ್ತು 233 ಮತಗಳನ್ನು ಪಡೆದರು. ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಂ) ಸತತವಾಗಿ ಎರಡನೇ ಅವಧಿಗೆ ತನ್ನ ಸರ್ಕಾರವನ್ನು ರಚಿಸಲಿದೆ.

ಆರಂಭದಿಂದಲೂ ಸಿಕ್ಕಿಂ ಮುನ್ನಡೆ:

ವಿಧಾನಸಭಾ ಚುನಾವಣೆ ಮತ ಎಣಿಕೆಯ ಆರಂಭದಿಂದಲೂ ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಂ) ಮುನ್ನಡೆ ಕಾಯ್ದುಕೊಂಡಿತ್ತು. 32 ಸ್ಥಾನಗಳಲ್ಲಿ ಎಸ್‌ಕೆಎಂ 31 ಸ್ಥಾನಗಳನ್ನು ಗೆದ್ದಿದ್ದರೆ, ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (ಎಸ್‌ಡಿಎಫ್) ಒಂದನ್ನು ಪಡೆದುಕೊಂಡಿದೆ. 2019 ರ ಚುನಾವಣೆಯಲ್ಲಿ ಎಸ್‌ಕೆಎಂ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಭಾರತೀಯ ಜನತಾ ಪಕ್ಷವು ರಾಜ್ಯದಲ್ಲಿ ಯಾವುದೇ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿಲ್ಲ. ಸರ್ಕಾರ ರಚಿಸಲು ಪಕ್ಷ ಅಥವಾ ಮೈತ್ರಿಕೂಟ 16ರ ಗಡಿ ದಾಟಬೇಕಾಗುತ್ತದೆ.

ಸಿಕ್ಕಿಂನ ಹಾಲಿ ಮುಖ್ಯಮಂತ್ರಿ ಮತ್ತು ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ನಾಯಕ ಪ್ರೇಮ್ ಸಿಂಗ್ ತಮಾಂಗ್ ಅವರು ರೆನಾಕ್ ಅಸೆಂಬ್ಲಿ ಸ್ಥಾನದಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ. ತಮಾಂಗ್ ಅವರು ಸೋಮ್ ನಾಥ್ ಪೌಡ್ಯಾಲ್ ಅವರನ್ನು 7,000 ಮತಗಳಿಂದ ಸೋಲಿಸಿದರು.

ಇದನ್ನೂ ಓದಿ; ‘ಇದು ಮೋದಿ ಸಮೀಕ್ಷೆ, ಎಕ್ಸಿಟ್ ಪೋಲ್ ಅಲ್ಲ’: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...