HomeಮುಖಪುಟSilence for Gaza| ಇಸ್ರೇಲ್ ನರಮೇಧದ ವಿರುದ್ಧ 'ಡಿಜಿಟಲ್ ಸತ್ಯಾಗ್ರಹ'ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

Silence for Gaza| ಇಸ್ರೇಲ್ ನರಮೇಧದ ವಿರುದ್ಧ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧವನ್ನು ಖಂಡಿಸಿ ಜಾಗತಿಕವಾಗಿ ನಡೆಯುತ್ತಿರುವ ಸೈಲೆನ್ಸ್ ಫಾರ್ ಗಾಝಾ (Silence for Gaza)’ಡಿಜಿಟಲ್ ಸತ್ಯಾಗ್ರಹ’ವನ್ನು ಬೆಂಬಲಿಸುವಂತೆ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕರೆಕೊಟ್ಟಿದೆ.

ಪ್ರತಿದಿನ 30 ನಿಮಿಷಗಳ ಕಾಲ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡುವುದು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವುದು, ಲೈಕ್ ಒತ್ತುವುದು, ಕಾಮೆಂಟ್, ಶೇರ್ ಮಾಡುವುದರಿಂದ ದೂರ ಉಳಿಯುವುದೇ ಈ ಡಿಜಿಟಲ್ ಸತ್ಯಾಗ್ರಹ.

ಜಗತ್ತಿನ ವಿವಿದೆಡೆ ಈ ಪ್ರಯೋಗಗಳು ನಡೆದಿದೆ ಎಂದು ವರದಿಗಳು ಹೇಳಿವೆ. ಭಾರತದಲ್ಲಿ ಮೊದಲ ಬಾರಿಗೆ ಸಿಪಿಐ(ಎಂ) ಈ ಸತ್ಯಾಗ್ರಹಕ್ಕೆ ಕರೆಕೊಟ್ಟಿದೆ. ಈ ಮೂಲಕ ಜಾಗತಿಕ ಪ್ರತಿಭಟನೆಯನ್ನು ಬೆಂಬಲಿಸಿದೆ.

ಪ್ರತಿದಿನ ರಾತ್ರಿ 9.00 ಗಂಟೆಯಿಂದ 9.30ರವರೆಗೆ ಮೊಬೈಲ್ ಫೋನ್‌ಗಳನ್ನು ಸ್ವಿಚ್‌ ಅಫ್ ಮಾಡಿ ‘ಸೈಲೆನ್ಸ್ ಫಾರ್ ಗಾಝಾ’ ಡಿಜಿಟಲ್ ಸತ್ಯಾಗ್ರಹವನ್ನು ಬೆಂಬಲಿಸುವಂತೆ ಸಿಪಿಐ(ಎಂ) ಪಾಲಿಟ್ ಬ್ಯೂರೋ ಜುಲೈ 5ರಂದು ಕರೆ ಕೊಟ್ಟಿದೆ.

ಇತ್ತೀಚೆಗೆ ಬಿಡುಗಡೆಯಾದ ವಿಶ್ವಸಂಸ್ಥೆಯ ವರದಿ “ಆಕ್ಯುಪೇಶನ್ ಆರ್ಥಿಕತೆಯಿಂದ ಜನಾಂಗೀಯ ಹತ್ಯೆಯ ಆರ್ಥಿಕತೆಗೆ”, ಗಾಜಾದ ಮೇಲಿನ ಇಸ್ರೇಲ್ ದಾಳಿಯಲ್ಲಿ ವಿವಿಧ ಬಹುರಾಷ್ಟ್ರೀಯ ಸಂಸ್ಥೆಗಳು ಹೇಗೆ ಭಾಗಿಯಾಗಿವೆ ಎಂಬುದನ್ನು ವಿವರಿಸುತ್ತದೆ ಎಂದು ಸಿಪಿಐ(ಎಂ) ಹೇಳಿದೆ.

ಇತ್ತೀಚೆಗೆ ಬಿಡುಗಡೆಯಾದ ‘From Economy of Occupation to Economy of Genocide’ಗಾಝಾದ ಮೇಲಿನ ಇಸ್ರೇಲ್ ದಾಳಿಯಲ್ಲಿ ವಿವಿಧ ಬಹುರಾಷ್ಟ್ರೀಯ ಸಂಸ್ಥೆಗಳು ಹೇಗೆ ಭಾಗಿಯಾಗಿವೆ ಎಂಬುದನ್ನು ವಿವರಿಸುತ್ತದೆ. ಹಾಗಾಗಿ, ಈ ಸಂಸ್ಥೆಗಳ ದುಷ್ಟ ಪಾತ್ರವನ್ನು ಬಹಿರಂಗಪಡಿಸಬೇಕು. ಅವುಗಳನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.

ಈ ಸಂಸ್ಥೆಗಳು ನರಮೇಧಕ್ಕೆ ಕಾರಣವಾದರೂ ಕೂಡ, ನಮ್ಮ ಡಿಜಿಟಲ್ ಹೆಜ್ಜೆಗುರುತುಗಳನ್ನು ಪೋಷಿಸುತ್ತವೆ. ನಿಗದಿತ ಸಮಯದಲ್ಲಿ ಪ್ರತಿದಿನ ಅರ್ಧ ಗಂಟೆ ನಮ್ಮ ಮೊಬೈಲ್ ಫೋನ್‌ಗಳನ್ನು ಸ್ಥಗಿತಗೊಳಿಸುವುದು ಸಣ್ಣ ವಿಷಯ. ಆದರೆ, ಡಿಜಿಟಲ್ ಅಡ್ಡಿಪಡಿಸುವಿಕೆಯ ಶಕ್ತಿಯುತವಾದ ಕ್ರಿಯೆಯಾಗಿದೆ. ಇಸ್ರೇಲ್‌ನ ನರಮೇಧ ಮತ್ತು ವರ್ಣಭೇದ ನೀತಿಯನ್ನು ಬೆಂಬಲಿಸುವ ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧದ ಮುಷ್ಕರ ಎಂದಿದೆ.

ಸಿಪಿಐ(ಎಂ) ದೇಶಾದ್ಯಂತ ಜನರು ಈ ಡಿಜಿಟಲ್ ಪ್ರತಿರೋಧದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದೆ. ಪ್ರತಿಭಟನೆಯ ಅವಧಿಯಲ್ಲಿ ನಿಮ್ಮ ಮೊಬೈಲ್ ಫೋನ್‌ಗಳನ್ನು ಆಫ್ ಮಾಡಿ ಮತ್ತು ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡುವುದು, ಲೈಕ್ ಮಾಡುವುದು ಅಥವಾ ಕಾಮೆಂಟ್ ಮಾಡುವುದನ್ನು ತಪ್ಪಿಸಿ ಎಂದು ಕೋರಿದೆ.

‘ಸೈಲೆನ್ಸ್ ಫಾರ್ ಗಾಝ’ ಎಂಬ ಜಾಗತಿಕ ಪ್ರತಿರೋಧದಲ್ಲಿ ಭಾಗವಹಿಸುವ ಮೂಲಕ, ಸಿಪಿಐ(ಎಂ) ಪ್ಯಾಲೆಸ್ತೀನ್ ಜನರೊಂದಿಗೆ ಮತ್ತು ಇಸ್ರೇಲ್ ನಡೆಸಿದ ಕ್ರೂರ, ನರಮೇಧದ ವಿರುದ್ಧ ನಿಲ್ಲುತ್ತದೆ. ಈ ಸಾಮೂಹಿಕ ಮೌನವು ನರಮೇಧದ ವಿರುದ್ದದ ಧಿಕ್ಕಾರದ ಕೂಗಾಗಲಿ. ಯುದ್ಧ ಅಪರಾಧಗಳ ವಿರುದ್ಧದ ಧ್ವನಿಯನ್ನು ಅಡಗಿಸಲಾಗುವುದಿಲ್ಲ ಎಂಬ ಪ್ರಬಲ ಪ್ರತಿಪಾದನೆಯಾಗಿರಲಿ ಎಂದು ಸಿಪಿಐ(ಎಂ) ಹೇಳಿದೆ.

ಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...