HomeಮುಖಪುಟSilence for Gaza| ಇಸ್ರೇಲ್ ನರಮೇಧದ ವಿರುದ್ಧ 'ಡಿಜಿಟಲ್ ಸತ್ಯಾಗ್ರಹ'ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

Silence for Gaza| ಇಸ್ರೇಲ್ ನರಮೇಧದ ವಿರುದ್ಧ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧವನ್ನು ಖಂಡಿಸಿ ಜಾಗತಿಕವಾಗಿ ನಡೆಯುತ್ತಿರುವ ಸೈಲೆನ್ಸ್ ಫಾರ್ ಗಾಝಾ (Silence for Gaza)’ಡಿಜಿಟಲ್ ಸತ್ಯಾಗ್ರಹ’ವನ್ನು ಬೆಂಬಲಿಸುವಂತೆ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕರೆಕೊಟ್ಟಿದೆ.

ಪ್ರತಿದಿನ 30 ನಿಮಿಷಗಳ ಕಾಲ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡುವುದು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವುದು, ಲೈಕ್ ಒತ್ತುವುದು, ಕಾಮೆಂಟ್, ಶೇರ್ ಮಾಡುವುದರಿಂದ ದೂರ ಉಳಿಯುವುದೇ ಈ ಡಿಜಿಟಲ್ ಸತ್ಯಾಗ್ರಹ.

ಜಗತ್ತಿನ ವಿವಿದೆಡೆ ಈ ಪ್ರಯೋಗಗಳು ನಡೆದಿದೆ ಎಂದು ವರದಿಗಳು ಹೇಳಿವೆ. ಭಾರತದಲ್ಲಿ ಮೊದಲ ಬಾರಿಗೆ ಸಿಪಿಐ(ಎಂ) ಈ ಸತ್ಯಾಗ್ರಹಕ್ಕೆ ಕರೆಕೊಟ್ಟಿದೆ. ಈ ಮೂಲಕ ಜಾಗತಿಕ ಪ್ರತಿಭಟನೆಯನ್ನು ಬೆಂಬಲಿಸಿದೆ.

ಪ್ರತಿದಿನ ರಾತ್ರಿ 9.00 ಗಂಟೆಯಿಂದ 9.30ರವರೆಗೆ ಮೊಬೈಲ್ ಫೋನ್‌ಗಳನ್ನು ಸ್ವಿಚ್‌ ಅಫ್ ಮಾಡಿ ‘ಸೈಲೆನ್ಸ್ ಫಾರ್ ಗಾಝಾ’ ಡಿಜಿಟಲ್ ಸತ್ಯಾಗ್ರಹವನ್ನು ಬೆಂಬಲಿಸುವಂತೆ ಸಿಪಿಐ(ಎಂ) ಪಾಲಿಟ್ ಬ್ಯೂರೋ ಜುಲೈ 5ರಂದು ಕರೆ ಕೊಟ್ಟಿದೆ.

ಇತ್ತೀಚೆಗೆ ಬಿಡುಗಡೆಯಾದ ವಿಶ್ವಸಂಸ್ಥೆಯ ವರದಿ “ಆಕ್ಯುಪೇಶನ್ ಆರ್ಥಿಕತೆಯಿಂದ ಜನಾಂಗೀಯ ಹತ್ಯೆಯ ಆರ್ಥಿಕತೆಗೆ”, ಗಾಜಾದ ಮೇಲಿನ ಇಸ್ರೇಲ್ ದಾಳಿಯಲ್ಲಿ ವಿವಿಧ ಬಹುರಾಷ್ಟ್ರೀಯ ಸಂಸ್ಥೆಗಳು ಹೇಗೆ ಭಾಗಿಯಾಗಿವೆ ಎಂಬುದನ್ನು ವಿವರಿಸುತ್ತದೆ ಎಂದು ಸಿಪಿಐ(ಎಂ) ಹೇಳಿದೆ.

ಇತ್ತೀಚೆಗೆ ಬಿಡುಗಡೆಯಾದ ‘From Economy of Occupation to Economy of Genocide’ಗಾಝಾದ ಮೇಲಿನ ಇಸ್ರೇಲ್ ದಾಳಿಯಲ್ಲಿ ವಿವಿಧ ಬಹುರಾಷ್ಟ್ರೀಯ ಸಂಸ್ಥೆಗಳು ಹೇಗೆ ಭಾಗಿಯಾಗಿವೆ ಎಂಬುದನ್ನು ವಿವರಿಸುತ್ತದೆ. ಹಾಗಾಗಿ, ಈ ಸಂಸ್ಥೆಗಳ ದುಷ್ಟ ಪಾತ್ರವನ್ನು ಬಹಿರಂಗಪಡಿಸಬೇಕು. ಅವುಗಳನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.

ಈ ಸಂಸ್ಥೆಗಳು ನರಮೇಧಕ್ಕೆ ಕಾರಣವಾದರೂ ಕೂಡ, ನಮ್ಮ ಡಿಜಿಟಲ್ ಹೆಜ್ಜೆಗುರುತುಗಳನ್ನು ಪೋಷಿಸುತ್ತವೆ. ನಿಗದಿತ ಸಮಯದಲ್ಲಿ ಪ್ರತಿದಿನ ಅರ್ಧ ಗಂಟೆ ನಮ್ಮ ಮೊಬೈಲ್ ಫೋನ್‌ಗಳನ್ನು ಸ್ಥಗಿತಗೊಳಿಸುವುದು ಸಣ್ಣ ವಿಷಯ. ಆದರೆ, ಡಿಜಿಟಲ್ ಅಡ್ಡಿಪಡಿಸುವಿಕೆಯ ಶಕ್ತಿಯುತವಾದ ಕ್ರಿಯೆಯಾಗಿದೆ. ಇಸ್ರೇಲ್‌ನ ನರಮೇಧ ಮತ್ತು ವರ್ಣಭೇದ ನೀತಿಯನ್ನು ಬೆಂಬಲಿಸುವ ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧದ ಮುಷ್ಕರ ಎಂದಿದೆ.

ಸಿಪಿಐ(ಎಂ) ದೇಶಾದ್ಯಂತ ಜನರು ಈ ಡಿಜಿಟಲ್ ಪ್ರತಿರೋಧದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದೆ. ಪ್ರತಿಭಟನೆಯ ಅವಧಿಯಲ್ಲಿ ನಿಮ್ಮ ಮೊಬೈಲ್ ಫೋನ್‌ಗಳನ್ನು ಆಫ್ ಮಾಡಿ ಮತ್ತು ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡುವುದು, ಲೈಕ್ ಮಾಡುವುದು ಅಥವಾ ಕಾಮೆಂಟ್ ಮಾಡುವುದನ್ನು ತಪ್ಪಿಸಿ ಎಂದು ಕೋರಿದೆ.

‘ಸೈಲೆನ್ಸ್ ಫಾರ್ ಗಾಝ’ ಎಂಬ ಜಾಗತಿಕ ಪ್ರತಿರೋಧದಲ್ಲಿ ಭಾಗವಹಿಸುವ ಮೂಲಕ, ಸಿಪಿಐ(ಎಂ) ಪ್ಯಾಲೆಸ್ತೀನ್ ಜನರೊಂದಿಗೆ ಮತ್ತು ಇಸ್ರೇಲ್ ನಡೆಸಿದ ಕ್ರೂರ, ನರಮೇಧದ ವಿರುದ್ಧ ನಿಲ್ಲುತ್ತದೆ. ಈ ಸಾಮೂಹಿಕ ಮೌನವು ನರಮೇಧದ ವಿರುದ್ದದ ಧಿಕ್ಕಾರದ ಕೂಗಾಗಲಿ. ಯುದ್ಧ ಅಪರಾಧಗಳ ವಿರುದ್ಧದ ಧ್ವನಿಯನ್ನು ಅಡಗಿಸಲಾಗುವುದಿಲ್ಲ ಎಂಬ ಪ್ರಬಲ ಪ್ರತಿಪಾದನೆಯಾಗಿರಲಿ ಎಂದು ಸಿಪಿಐ(ಎಂ) ಹೇಳಿದೆ.

ಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...