HomeಮುಖಪುಟSilence for Gaza| ಇಸ್ರೇಲ್ ನರಮೇಧದ ವಿರುದ್ಧ 'ಡಿಜಿಟಲ್ ಸತ್ಯಾಗ್ರಹ'ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

Silence for Gaza| ಇಸ್ರೇಲ್ ನರಮೇಧದ ವಿರುದ್ಧ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧವನ್ನು ಖಂಡಿಸಿ ಜಾಗತಿಕವಾಗಿ ನಡೆಯುತ್ತಿರುವ ಸೈಲೆನ್ಸ್ ಫಾರ್ ಗಾಝಾ (Silence for Gaza)’ಡಿಜಿಟಲ್ ಸತ್ಯಾಗ್ರಹ’ವನ್ನು ಬೆಂಬಲಿಸುವಂತೆ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕರೆಕೊಟ್ಟಿದೆ.

ಪ್ರತಿದಿನ 30 ನಿಮಿಷಗಳ ಕಾಲ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡುವುದು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವುದು, ಲೈಕ್ ಒತ್ತುವುದು, ಕಾಮೆಂಟ್, ಶೇರ್ ಮಾಡುವುದರಿಂದ ದೂರ ಉಳಿಯುವುದೇ ಈ ಡಿಜಿಟಲ್ ಸತ್ಯಾಗ್ರಹ.

ಜಗತ್ತಿನ ವಿವಿದೆಡೆ ಈ ಪ್ರಯೋಗಗಳು ನಡೆದಿದೆ ಎಂದು ವರದಿಗಳು ಹೇಳಿವೆ. ಭಾರತದಲ್ಲಿ ಮೊದಲ ಬಾರಿಗೆ ಸಿಪಿಐ(ಎಂ) ಈ ಸತ್ಯಾಗ್ರಹಕ್ಕೆ ಕರೆಕೊಟ್ಟಿದೆ. ಈ ಮೂಲಕ ಜಾಗತಿಕ ಪ್ರತಿಭಟನೆಯನ್ನು ಬೆಂಬಲಿಸಿದೆ.

ಪ್ರತಿದಿನ ರಾತ್ರಿ 9.00 ಗಂಟೆಯಿಂದ 9.30ರವರೆಗೆ ಮೊಬೈಲ್ ಫೋನ್‌ಗಳನ್ನು ಸ್ವಿಚ್‌ ಅಫ್ ಮಾಡಿ ‘ಸೈಲೆನ್ಸ್ ಫಾರ್ ಗಾಝಾ’ ಡಿಜಿಟಲ್ ಸತ್ಯಾಗ್ರಹವನ್ನು ಬೆಂಬಲಿಸುವಂತೆ ಸಿಪಿಐ(ಎಂ) ಪಾಲಿಟ್ ಬ್ಯೂರೋ ಜುಲೈ 5ರಂದು ಕರೆ ಕೊಟ್ಟಿದೆ.

ಇತ್ತೀಚೆಗೆ ಬಿಡುಗಡೆಯಾದ ವಿಶ್ವಸಂಸ್ಥೆಯ ವರದಿ “ಆಕ್ಯುಪೇಶನ್ ಆರ್ಥಿಕತೆಯಿಂದ ಜನಾಂಗೀಯ ಹತ್ಯೆಯ ಆರ್ಥಿಕತೆಗೆ”, ಗಾಜಾದ ಮೇಲಿನ ಇಸ್ರೇಲ್ ದಾಳಿಯಲ್ಲಿ ವಿವಿಧ ಬಹುರಾಷ್ಟ್ರೀಯ ಸಂಸ್ಥೆಗಳು ಹೇಗೆ ಭಾಗಿಯಾಗಿವೆ ಎಂಬುದನ್ನು ವಿವರಿಸುತ್ತದೆ ಎಂದು ಸಿಪಿಐ(ಎಂ) ಹೇಳಿದೆ.

ಇತ್ತೀಚೆಗೆ ಬಿಡುಗಡೆಯಾದ ‘From Economy of Occupation to Economy of Genocide’ಗಾಝಾದ ಮೇಲಿನ ಇಸ್ರೇಲ್ ದಾಳಿಯಲ್ಲಿ ವಿವಿಧ ಬಹುರಾಷ್ಟ್ರೀಯ ಸಂಸ್ಥೆಗಳು ಹೇಗೆ ಭಾಗಿಯಾಗಿವೆ ಎಂಬುದನ್ನು ವಿವರಿಸುತ್ತದೆ. ಹಾಗಾಗಿ, ಈ ಸಂಸ್ಥೆಗಳ ದುಷ್ಟ ಪಾತ್ರವನ್ನು ಬಹಿರಂಗಪಡಿಸಬೇಕು. ಅವುಗಳನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.

ಈ ಸಂಸ್ಥೆಗಳು ನರಮೇಧಕ್ಕೆ ಕಾರಣವಾದರೂ ಕೂಡ, ನಮ್ಮ ಡಿಜಿಟಲ್ ಹೆಜ್ಜೆಗುರುತುಗಳನ್ನು ಪೋಷಿಸುತ್ತವೆ. ನಿಗದಿತ ಸಮಯದಲ್ಲಿ ಪ್ರತಿದಿನ ಅರ್ಧ ಗಂಟೆ ನಮ್ಮ ಮೊಬೈಲ್ ಫೋನ್‌ಗಳನ್ನು ಸ್ಥಗಿತಗೊಳಿಸುವುದು ಸಣ್ಣ ವಿಷಯ. ಆದರೆ, ಡಿಜಿಟಲ್ ಅಡ್ಡಿಪಡಿಸುವಿಕೆಯ ಶಕ್ತಿಯುತವಾದ ಕ್ರಿಯೆಯಾಗಿದೆ. ಇಸ್ರೇಲ್‌ನ ನರಮೇಧ ಮತ್ತು ವರ್ಣಭೇದ ನೀತಿಯನ್ನು ಬೆಂಬಲಿಸುವ ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧದ ಮುಷ್ಕರ ಎಂದಿದೆ.

ಸಿಪಿಐ(ಎಂ) ದೇಶಾದ್ಯಂತ ಜನರು ಈ ಡಿಜಿಟಲ್ ಪ್ರತಿರೋಧದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದೆ. ಪ್ರತಿಭಟನೆಯ ಅವಧಿಯಲ್ಲಿ ನಿಮ್ಮ ಮೊಬೈಲ್ ಫೋನ್‌ಗಳನ್ನು ಆಫ್ ಮಾಡಿ ಮತ್ತು ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡುವುದು, ಲೈಕ್ ಮಾಡುವುದು ಅಥವಾ ಕಾಮೆಂಟ್ ಮಾಡುವುದನ್ನು ತಪ್ಪಿಸಿ ಎಂದು ಕೋರಿದೆ.

‘ಸೈಲೆನ್ಸ್ ಫಾರ್ ಗಾಝ’ ಎಂಬ ಜಾಗತಿಕ ಪ್ರತಿರೋಧದಲ್ಲಿ ಭಾಗವಹಿಸುವ ಮೂಲಕ, ಸಿಪಿಐ(ಎಂ) ಪ್ಯಾಲೆಸ್ತೀನ್ ಜನರೊಂದಿಗೆ ಮತ್ತು ಇಸ್ರೇಲ್ ನಡೆಸಿದ ಕ್ರೂರ, ನರಮೇಧದ ವಿರುದ್ಧ ನಿಲ್ಲುತ್ತದೆ. ಈ ಸಾಮೂಹಿಕ ಮೌನವು ನರಮೇಧದ ವಿರುದ್ದದ ಧಿಕ್ಕಾರದ ಕೂಗಾಗಲಿ. ಯುದ್ಧ ಅಪರಾಧಗಳ ವಿರುದ್ಧದ ಧ್ವನಿಯನ್ನು ಅಡಗಿಸಲಾಗುವುದಿಲ್ಲ ಎಂಬ ಪ್ರಬಲ ಪ್ರತಿಪಾದನೆಯಾಗಿರಲಿ ಎಂದು ಸಿಪಿಐ(ಎಂ) ಹೇಳಿದೆ.

ಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...