Homeಚಳವಳಿಶಾಲೆ ಆರಂಭಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಮೌನ ಪ್ರತಿಭಟನೆ

ಶಾಲೆ ಆರಂಭಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಮೌನ ಪ್ರತಿಭಟನೆ

ನಮಗೆ ಜ್ಞಾನದೇಗುಲದ ಅವಶ್ಯಕತೆ ಇದೆ. ನಮ್ಮನ್ನು ಬಂಧಿ ಮಾಡಬೇಡಿ, ಶಿಕ್ಷಣ ನಮ್ಮ ಮೂಲಭೂತ ಹಕ್ಕು ಕಸಿಯಬೇಡಿ, ಶಾಲೆ ತೆರೆದು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಿಸಿ ಎಂಬ ಪ್ಲೆಕಾರ್ಡುಗಳನ್ನು ಹಿಡಿದು ಪ್ರತಿಭಟಿಸಲಾಯಿತು.

- Advertisement -
- Advertisement -

ಕೊರೊನಾ ಕಾರಣಕ್ಕೆ ಸ್ಥಗಿತಗೊಂಡಿರುವ ಶಾಲೆಗಳನ್ನು ಕೂಡಲೇ ಆರಂಭಿಸುವಂತೆ ಒತ್ತಾಯಿಸಿ ‘ವಿದ್ಯಾರ್ಥಿಗಳ ನಡೆ-ಶಾಲೆಯ ಕಡೆ’ ಅಭಿಯಾನದ ವತಿಯಿಂದ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು.

ನಮಗೆ ಜ್ಞಾನದೇಗುಲದ ಅವಶ್ಯಕತೆ ಇದೆ. ನಮ್ಮನ್ನು ಬಂಧಿ ಮಾಡಬೇಡಿ, ಶಿಕ್ಷಣ ನಮ್ಮ ಮೂಲಭೂತ ಹಕ್ಕು ಕಸಿಯಬೇಡಿ, ಶಾಲೆ ತೆರೆದು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಿಸಿ ಎಂಬ ಪ್ಲೆಕಾರ್ಡುಗಳನ್ನು ಹಿಡಿದು ಪ್ರತಿಭಟಿಸಲಾಯಿತು.

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಪರವಾಗಿ ನಾವು ಪ್ರತಿಭಟಿಸೋಣ, ಆನ್‌ಲೈನ್‌ ಶಿಕ್ಷಣ ಬೇಡವೇ ಬೇಡ ಎಂಬ ಹಕ್ಕೊತ್ತಾಯಗಳು ಕೇಳಿಬಂದವು.

ವಿದ್ಯಾರ್ಥಿಗಳ ನಡೆ-ಶಾಲೆಯ ಕಡೆ ಅಭಿಯಾನದ ಪರವಾಗಿ ಪ್ರತಿಭಟನೆಯಲ್ಲಿ ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯ, ಸಮಾನ ಶಿಕ್ಷಣಕ್ಕಾಗಿ ಜನಾಂದೋಲದ ಬಿ.ಶ್ರೀಪಾದ್ ಭಟ್, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕೀಕೆರೆ, ಮನೋಜ್, ಎಐಎಸ್‌ಎಫ್‌ನ ಜ್ಯೋತಿ ಕೆ, ವಿಚಾರವಾದಿ ವೇದಿಕೆಯ ನಾಗೇಶ್ ಅರಳಕುಪ್ಪೆ ಮುಂತಾದವರು ಭಾಗವಹಿಸಿದ್ದರು.

ರಾಜ್ಯದಲ್ಲಿ ಸೆಪ್ಟೆಂಬರ್ ಬಳಿಕ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ ನಿರ್ಧರವನ್ನು ಖಂಡಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಕಳೆದ ವಾರ ಶಿಕ್ಷಣ ಸಚಿವರಿಗೆ ಪತ್ರ ಬರೆದಿತ್ತು.

ಕಳೆದ 3-4 ತಿಂಗಳಲ್ಲಿ ಸಾರ್ವಜನಿಕ ಚಟುವಟಿಕೆಗಳಿಗೆಲ್ಲ ಅನುವು ಮಾಡಲಾಗಿದೆ. ಪ್ರಯಾಣ, ಹೋಟೆಲ್, ಬಾರುಗಳು, ಮಾರುಕಟ್ಟೆಗಳು, ದೊಡ್ಡ ದೊಡ್ಡ ಮಾಲ್‌ಗಳು, ಸಭೆ-ಸಮಾರಂಭಗಳು, ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಚುನಾವಣಾ ಪ್ರಚಾರ ಮುಂತಾದ ಎಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ. ಕೊರೋನ ಸೋಂಕು ವ್ಯಾಪಕವಾಗಿಯೂ, ಕ್ಷಿಪ್ರವಾಗಿಯೂ ಹರಡುತ್ತಿದ್ದ ಮೇ-ಜುಲೈ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನೂ, ಸಿಇಟಿ, ನೀಟ್ ಇತ್ಯಾದಿ ಪರೀಕ್ಷೆಗಳನ್ನೂ ಯಶಸ್ವಿಯಾಗಿ ನಡೆಸಲಾಗಿದ್ದು, ಅದರಿಂದ ವಿದ್ಯಾರ್ಥಿಗಳಿಗಾಗಲೀ, ಶಿಕ್ಷಕರಿಗಾಗಲೀ ಯಾವುದೇ ಸಮಸ್ಯೆಗಳಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಶಾಲೆ ಆರಂಭಕ್ಕೆ ಏಕೆ ತಡೆ ಎಂದು ಸಮಿತಿ ಕಿಡಿಕಾರಿದೆ.


ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...