Homeಚಳವಳಿಶಾಲೆ ಆರಂಭಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಮೌನ ಪ್ರತಿಭಟನೆ

ಶಾಲೆ ಆರಂಭಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಮೌನ ಪ್ರತಿಭಟನೆ

ನಮಗೆ ಜ್ಞಾನದೇಗುಲದ ಅವಶ್ಯಕತೆ ಇದೆ. ನಮ್ಮನ್ನು ಬಂಧಿ ಮಾಡಬೇಡಿ, ಶಿಕ್ಷಣ ನಮ್ಮ ಮೂಲಭೂತ ಹಕ್ಕು ಕಸಿಯಬೇಡಿ, ಶಾಲೆ ತೆರೆದು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಿಸಿ ಎಂಬ ಪ್ಲೆಕಾರ್ಡುಗಳನ್ನು ಹಿಡಿದು ಪ್ರತಿಭಟಿಸಲಾಯಿತು.

- Advertisement -
- Advertisement -

ಕೊರೊನಾ ಕಾರಣಕ್ಕೆ ಸ್ಥಗಿತಗೊಂಡಿರುವ ಶಾಲೆಗಳನ್ನು ಕೂಡಲೇ ಆರಂಭಿಸುವಂತೆ ಒತ್ತಾಯಿಸಿ ‘ವಿದ್ಯಾರ್ಥಿಗಳ ನಡೆ-ಶಾಲೆಯ ಕಡೆ’ ಅಭಿಯಾನದ ವತಿಯಿಂದ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು.

ನಮಗೆ ಜ್ಞಾನದೇಗುಲದ ಅವಶ್ಯಕತೆ ಇದೆ. ನಮ್ಮನ್ನು ಬಂಧಿ ಮಾಡಬೇಡಿ, ಶಿಕ್ಷಣ ನಮ್ಮ ಮೂಲಭೂತ ಹಕ್ಕು ಕಸಿಯಬೇಡಿ, ಶಾಲೆ ತೆರೆದು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಿಸಿ ಎಂಬ ಪ್ಲೆಕಾರ್ಡುಗಳನ್ನು ಹಿಡಿದು ಪ್ರತಿಭಟಿಸಲಾಯಿತು.

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಪರವಾಗಿ ನಾವು ಪ್ರತಿಭಟಿಸೋಣ, ಆನ್‌ಲೈನ್‌ ಶಿಕ್ಷಣ ಬೇಡವೇ ಬೇಡ ಎಂಬ ಹಕ್ಕೊತ್ತಾಯಗಳು ಕೇಳಿಬಂದವು.

ವಿದ್ಯಾರ್ಥಿಗಳ ನಡೆ-ಶಾಲೆಯ ಕಡೆ ಅಭಿಯಾನದ ಪರವಾಗಿ ಪ್ರತಿಭಟನೆಯಲ್ಲಿ ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯ, ಸಮಾನ ಶಿಕ್ಷಣಕ್ಕಾಗಿ ಜನಾಂದೋಲದ ಬಿ.ಶ್ರೀಪಾದ್ ಭಟ್, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕೀಕೆರೆ, ಮನೋಜ್, ಎಐಎಸ್‌ಎಫ್‌ನ ಜ್ಯೋತಿ ಕೆ, ವಿಚಾರವಾದಿ ವೇದಿಕೆಯ ನಾಗೇಶ್ ಅರಳಕುಪ್ಪೆ ಮುಂತಾದವರು ಭಾಗವಹಿಸಿದ್ದರು.

ರಾಜ್ಯದಲ್ಲಿ ಸೆಪ್ಟೆಂಬರ್ ಬಳಿಕ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ ನಿರ್ಧರವನ್ನು ಖಂಡಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಕಳೆದ ವಾರ ಶಿಕ್ಷಣ ಸಚಿವರಿಗೆ ಪತ್ರ ಬರೆದಿತ್ತು.

ಕಳೆದ 3-4 ತಿಂಗಳಲ್ಲಿ ಸಾರ್ವಜನಿಕ ಚಟುವಟಿಕೆಗಳಿಗೆಲ್ಲ ಅನುವು ಮಾಡಲಾಗಿದೆ. ಪ್ರಯಾಣ, ಹೋಟೆಲ್, ಬಾರುಗಳು, ಮಾರುಕಟ್ಟೆಗಳು, ದೊಡ್ಡ ದೊಡ್ಡ ಮಾಲ್‌ಗಳು, ಸಭೆ-ಸಮಾರಂಭಗಳು, ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಚುನಾವಣಾ ಪ್ರಚಾರ ಮುಂತಾದ ಎಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ. ಕೊರೋನ ಸೋಂಕು ವ್ಯಾಪಕವಾಗಿಯೂ, ಕ್ಷಿಪ್ರವಾಗಿಯೂ ಹರಡುತ್ತಿದ್ದ ಮೇ-ಜುಲೈ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನೂ, ಸಿಇಟಿ, ನೀಟ್ ಇತ್ಯಾದಿ ಪರೀಕ್ಷೆಗಳನ್ನೂ ಯಶಸ್ವಿಯಾಗಿ ನಡೆಸಲಾಗಿದ್ದು, ಅದರಿಂದ ವಿದ್ಯಾರ್ಥಿಗಳಿಗಾಗಲೀ, ಶಿಕ್ಷಕರಿಗಾಗಲೀ ಯಾವುದೇ ಸಮಸ್ಯೆಗಳಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಶಾಲೆ ಆರಂಭಕ್ಕೆ ಏಕೆ ತಡೆ ಎಂದು ಸಮಿತಿ ಕಿಡಿಕಾರಿದೆ.


ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...