Homeಚಳವಳಿಶಾಲೆ ಆರಂಭಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಮೌನ ಪ್ರತಿಭಟನೆ

ಶಾಲೆ ಆರಂಭಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಮೌನ ಪ್ರತಿಭಟನೆ

ನಮಗೆ ಜ್ಞಾನದೇಗುಲದ ಅವಶ್ಯಕತೆ ಇದೆ. ನಮ್ಮನ್ನು ಬಂಧಿ ಮಾಡಬೇಡಿ, ಶಿಕ್ಷಣ ನಮ್ಮ ಮೂಲಭೂತ ಹಕ್ಕು ಕಸಿಯಬೇಡಿ, ಶಾಲೆ ತೆರೆದು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಿಸಿ ಎಂಬ ಪ್ಲೆಕಾರ್ಡುಗಳನ್ನು ಹಿಡಿದು ಪ್ರತಿಭಟಿಸಲಾಯಿತು.

- Advertisement -
- Advertisement -

ಕೊರೊನಾ ಕಾರಣಕ್ಕೆ ಸ್ಥಗಿತಗೊಂಡಿರುವ ಶಾಲೆಗಳನ್ನು ಕೂಡಲೇ ಆರಂಭಿಸುವಂತೆ ಒತ್ತಾಯಿಸಿ ‘ವಿದ್ಯಾರ್ಥಿಗಳ ನಡೆ-ಶಾಲೆಯ ಕಡೆ’ ಅಭಿಯಾನದ ವತಿಯಿಂದ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು.

ನಮಗೆ ಜ್ಞಾನದೇಗುಲದ ಅವಶ್ಯಕತೆ ಇದೆ. ನಮ್ಮನ್ನು ಬಂಧಿ ಮಾಡಬೇಡಿ, ಶಿಕ್ಷಣ ನಮ್ಮ ಮೂಲಭೂತ ಹಕ್ಕು ಕಸಿಯಬೇಡಿ, ಶಾಲೆ ತೆರೆದು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಿಸಿ ಎಂಬ ಪ್ಲೆಕಾರ್ಡುಗಳನ್ನು ಹಿಡಿದು ಪ್ರತಿಭಟಿಸಲಾಯಿತು.

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಪರವಾಗಿ ನಾವು ಪ್ರತಿಭಟಿಸೋಣ, ಆನ್‌ಲೈನ್‌ ಶಿಕ್ಷಣ ಬೇಡವೇ ಬೇಡ ಎಂಬ ಹಕ್ಕೊತ್ತಾಯಗಳು ಕೇಳಿಬಂದವು.

ವಿದ್ಯಾರ್ಥಿಗಳ ನಡೆ-ಶಾಲೆಯ ಕಡೆ ಅಭಿಯಾನದ ಪರವಾಗಿ ಪ್ರತಿಭಟನೆಯಲ್ಲಿ ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯ, ಸಮಾನ ಶಿಕ್ಷಣಕ್ಕಾಗಿ ಜನಾಂದೋಲದ ಬಿ.ಶ್ರೀಪಾದ್ ಭಟ್, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕೀಕೆರೆ, ಮನೋಜ್, ಎಐಎಸ್‌ಎಫ್‌ನ ಜ್ಯೋತಿ ಕೆ, ವಿಚಾರವಾದಿ ವೇದಿಕೆಯ ನಾಗೇಶ್ ಅರಳಕುಪ್ಪೆ ಮುಂತಾದವರು ಭಾಗವಹಿಸಿದ್ದರು.

ರಾಜ್ಯದಲ್ಲಿ ಸೆಪ್ಟೆಂಬರ್ ಬಳಿಕ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ ನಿರ್ಧರವನ್ನು ಖಂಡಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಕಳೆದ ವಾರ ಶಿಕ್ಷಣ ಸಚಿವರಿಗೆ ಪತ್ರ ಬರೆದಿತ್ತು.

ಕಳೆದ 3-4 ತಿಂಗಳಲ್ಲಿ ಸಾರ್ವಜನಿಕ ಚಟುವಟಿಕೆಗಳಿಗೆಲ್ಲ ಅನುವು ಮಾಡಲಾಗಿದೆ. ಪ್ರಯಾಣ, ಹೋಟೆಲ್, ಬಾರುಗಳು, ಮಾರುಕಟ್ಟೆಗಳು, ದೊಡ್ಡ ದೊಡ್ಡ ಮಾಲ್‌ಗಳು, ಸಭೆ-ಸಮಾರಂಭಗಳು, ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಚುನಾವಣಾ ಪ್ರಚಾರ ಮುಂತಾದ ಎಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ. ಕೊರೋನ ಸೋಂಕು ವ್ಯಾಪಕವಾಗಿಯೂ, ಕ್ಷಿಪ್ರವಾಗಿಯೂ ಹರಡುತ್ತಿದ್ದ ಮೇ-ಜುಲೈ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನೂ, ಸಿಇಟಿ, ನೀಟ್ ಇತ್ಯಾದಿ ಪರೀಕ್ಷೆಗಳನ್ನೂ ಯಶಸ್ವಿಯಾಗಿ ನಡೆಸಲಾಗಿದ್ದು, ಅದರಿಂದ ವಿದ್ಯಾರ್ಥಿಗಳಿಗಾಗಲೀ, ಶಿಕ್ಷಕರಿಗಾಗಲೀ ಯಾವುದೇ ಸಮಸ್ಯೆಗಳಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಶಾಲೆ ಆರಂಭಕ್ಕೆ ಏಕೆ ತಡೆ ಎಂದು ಸಮಿತಿ ಕಿಡಿಕಾರಿದೆ.


ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...