Homeಮುಖಪುಟಪುಲ್ವಾಮಾ ದಾಳಿಯ ಹಿಂದಿನ ಸತ್ಯ ಬಹಿರಂಗಗೊಂಡಿದೆ: ಪ್ರಧಾನಿ ಮೋದಿ

ಪುಲ್ವಾಮಾ ದಾಳಿಯ ಹಿಂದಿನ ಸತ್ಯ ಬಹಿರಂಗಗೊಂಡಿದೆ: ಪ್ರಧಾನಿ ಮೋದಿ

ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮವಾರ್ಷಿಕೋತ್ಸವದ ಹಿನ್ನೆಲೆ, ಗುಜರಾತ್‌ನ ಕೆವಾಡಿಯಾದಲ್ಲಿನ ಏಕತಾ ಪ್ರತಿಮೆಗೆ ನಮನ ಸಲ್ಲಿಸಿದರು.

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನ ಹೇಳಿಕೆಗಳ ನಂತರ ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿಂದಿನ ಸತ್ಯ ಬಹಿರಂಗಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಕಳೆದ ವರ್ಷ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 40 ಸೈನಿಕರನ್ನು ಪುಲ್ವಾಮಾದಲ್ಲಿ ಹತ್ಯೆಗೈಯಲಾಗಿತ್ತು.

“ಪುಲ್ವಾಮಾ ದಾಳಿಯ ಸಮಯದಲ್ಲಿ ಭದ್ರತಾ ಸಿಬ್ಬಂದಿಯ ತ್ಯಾಗದ ಬಗ್ಗೆ ಕೆಲವರು ದುಃಖಿತರಾಗಿರಲಿಲ್ಲ ಎಂಬುದನ್ನು ದೇಶ ಎಂದಿಗೂ ಮರೆಯಲು ಸಾಧ್ಯವಿಲ್ಲ. ವಿರೋಧ ಪಕ್ಷದವರು ಪುಲ್ವಾಮಾ ದಾಳಿಯಲ್ಲೂ ರಾಜಕೀಯ ಲಾಭವನ್ನು ಹುಡುಕುತ್ತಿದ್ದಾರೆಂದು ನನಗೆ ತಿಳಿದಿತ್ತು. ಹಾಗಾಗೀ ನಾನು ಎಲ್ಲಾ ವಿವಾದಗಳಿಂದ ದೂರವಿದ್ದು, ಎಲ್ಲಾ ಆರೋಪಗಳನ್ನು ಮೌನವಾಗಿ ಸಹಿಸಿಕೊಂಡಿದೆ”ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

’ನೆರೆಯ ದೇಶವು ತನ್ನ ಸಂಸತ್ತಿನಲ್ಲಿ ಪುಲ್ವಾಮಾ ದಾಳಿಯ ಜವಾಬ್ದಾರಿಯನ್ನು ಒಪ್ಪಿಕೊಂಡ ನಂತರ, ನಮ್ಮ ಕಷ್ಟದ ಸಮಯದಲ್ಲಿ ಕೊಳಕು ರಾಜಕೀಯವನ್ನು ಮಾಡಿದವರ ನಿಜ ಸ್ವರೂಪ ಬಹಿರಂಗವಾಗಿದೆ. ರಾಷ್ಟ್ರದ ಹಿತದೃಷ್ಟಿಯಿಂದ ಇಂತಹ ರಾಜಕೀಯ ಮಾಡದಂತೆ ನಾನು ವಿರೋಧ ಪಕ್ಷಗಳಿಗೆ ವಿನಂತಿಸುತ್ತೇನೆ, ”ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

“ಈ ಪಕ್ಷಗಳು ತಮ್ಮ ಗುರಿಗಳನ್ನು ಸಾಧಿಸುವಲ್ಲಿ ಭಾರತ ವಿರೋಧಿ ಶಕ್ತಿಗಳಿಗೆ ಸಹಾಯ ಮಾಡುತ್ತಿವೆ. ವಿರೋಧ ಪಕ್ಷಗಳು ದೇಶಕ್ಕೆ ಅಥವಾ ಅವರ ಪಕ್ಷಕ್ಕೆ ಯಾವುದೇ ಒಳ್ಳೆಯದನ್ನು ಮಾಡುವುದಿಲ್ಲ” ಎಂದು ಆಕ್ರೊಶ ಹೊರಹಾಕಿದ್ದಾರೆ.

“ನಾವು ಇತರರಿಗೆ ಒಳ್ಳೆಯದನ್ನು ಮಾಡಿದಾಗ ಮಾತ್ರ ನಮಗೆ ಒಳ್ಳೆಯದಾಗುತ್ತದೆ ಎಂಬುದನ್ನು ನಾವು ನೆನಪಿಟ್ಟುಕೊಳ್ಳಬೇಕು. ಸರ್ದಾರ್ ಪಟೇಲ್ ಕಲ್ಪಿಸಿದಂತೆಯೇ ಭಾರತವನ್ನು ಸದೃ , ಸ್ವತಂತ್ರ ಮತ್ತು ಸ್ವಾವಲಂಬಿಗಳನ್ನಾಗಿ ಮಾಡಲು ನಾವೆಲ್ಲರೂ ಕೆಲಸ ಮಾಡಬೇಕು ”ಎಂದು ಪ್ರಧಾನಿ ಮೋದಿ ಹೇಳಿದರು.

‘ಇಂದು ವಿಶ್ವದ ಎಲ್ಲಾ ದೇಶಗಳು ಭಯೋತ್ಪಾದನೆ ವಿರುದ್ಧ ಹೋರಾಡಲು ಒಂದಾಗಬೇಕಿದೆ. ಭಯೋತ್ಪಾದನೆ ಮತ್ತು ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಿಲ್ಲ. ಭಾರತ ನಿರಂತರವಾಗಿ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ’ ಎಂದರು.

ಇದಕ್ಕೂ ಮುನ್ನ, ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮವಾರ್ಷಿಕೋತ್ಸವದ ಹಿನ್ನೆಲೆ, ಗುಜರಾತ್‌ನ ಕೆವಾಡಿಯಾದಲ್ಲಿನ ಏಕತಾ ಪ್ರತಿಮೆಗೆ ನಮನ ಸಲ್ಲಿಸಿದರು. ಬಳಿಕ ‘ರಾಷ್ಟ್ರೀಯ ಏಕತಾ ದಿವಸ’ ಅಂಗವಾಗಿ ನಡೆದ ಸೇನಾಪಡೆಗಳ ಪಥಸಂಚಲನವನ್ನು ವೀಕ್ಷಿಸಿದರು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...