Homeಮುಖಪುಟಪುಲ್ವಾಮಾ ದಾಳಿಯ ಹಿಂದಿನ ಸತ್ಯ ಬಹಿರಂಗಗೊಂಡಿದೆ: ಪ್ರಧಾನಿ ಮೋದಿ

ಪುಲ್ವಾಮಾ ದಾಳಿಯ ಹಿಂದಿನ ಸತ್ಯ ಬಹಿರಂಗಗೊಂಡಿದೆ: ಪ್ರಧಾನಿ ಮೋದಿ

ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮವಾರ್ಷಿಕೋತ್ಸವದ ಹಿನ್ನೆಲೆ, ಗುಜರಾತ್‌ನ ಕೆವಾಡಿಯಾದಲ್ಲಿನ ಏಕತಾ ಪ್ರತಿಮೆಗೆ ನಮನ ಸಲ್ಲಿಸಿದರು.

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನ ಹೇಳಿಕೆಗಳ ನಂತರ ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿಂದಿನ ಸತ್ಯ ಬಹಿರಂಗಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಕಳೆದ ವರ್ಷ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 40 ಸೈನಿಕರನ್ನು ಪುಲ್ವಾಮಾದಲ್ಲಿ ಹತ್ಯೆಗೈಯಲಾಗಿತ್ತು.

“ಪುಲ್ವಾಮಾ ದಾಳಿಯ ಸಮಯದಲ್ಲಿ ಭದ್ರತಾ ಸಿಬ್ಬಂದಿಯ ತ್ಯಾಗದ ಬಗ್ಗೆ ಕೆಲವರು ದುಃಖಿತರಾಗಿರಲಿಲ್ಲ ಎಂಬುದನ್ನು ದೇಶ ಎಂದಿಗೂ ಮರೆಯಲು ಸಾಧ್ಯವಿಲ್ಲ. ವಿರೋಧ ಪಕ್ಷದವರು ಪುಲ್ವಾಮಾ ದಾಳಿಯಲ್ಲೂ ರಾಜಕೀಯ ಲಾಭವನ್ನು ಹುಡುಕುತ್ತಿದ್ದಾರೆಂದು ನನಗೆ ತಿಳಿದಿತ್ತು. ಹಾಗಾಗೀ ನಾನು ಎಲ್ಲಾ ವಿವಾದಗಳಿಂದ ದೂರವಿದ್ದು, ಎಲ್ಲಾ ಆರೋಪಗಳನ್ನು ಮೌನವಾಗಿ ಸಹಿಸಿಕೊಂಡಿದೆ”ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

’ನೆರೆಯ ದೇಶವು ತನ್ನ ಸಂಸತ್ತಿನಲ್ಲಿ ಪುಲ್ವಾಮಾ ದಾಳಿಯ ಜವಾಬ್ದಾರಿಯನ್ನು ಒಪ್ಪಿಕೊಂಡ ನಂತರ, ನಮ್ಮ ಕಷ್ಟದ ಸಮಯದಲ್ಲಿ ಕೊಳಕು ರಾಜಕೀಯವನ್ನು ಮಾಡಿದವರ ನಿಜ ಸ್ವರೂಪ ಬಹಿರಂಗವಾಗಿದೆ. ರಾಷ್ಟ್ರದ ಹಿತದೃಷ್ಟಿಯಿಂದ ಇಂತಹ ರಾಜಕೀಯ ಮಾಡದಂತೆ ನಾನು ವಿರೋಧ ಪಕ್ಷಗಳಿಗೆ ವಿನಂತಿಸುತ್ತೇನೆ, ”ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

“ಈ ಪಕ್ಷಗಳು ತಮ್ಮ ಗುರಿಗಳನ್ನು ಸಾಧಿಸುವಲ್ಲಿ ಭಾರತ ವಿರೋಧಿ ಶಕ್ತಿಗಳಿಗೆ ಸಹಾಯ ಮಾಡುತ್ತಿವೆ. ವಿರೋಧ ಪಕ್ಷಗಳು ದೇಶಕ್ಕೆ ಅಥವಾ ಅವರ ಪಕ್ಷಕ್ಕೆ ಯಾವುದೇ ಒಳ್ಳೆಯದನ್ನು ಮಾಡುವುದಿಲ್ಲ” ಎಂದು ಆಕ್ರೊಶ ಹೊರಹಾಕಿದ್ದಾರೆ.

“ನಾವು ಇತರರಿಗೆ ಒಳ್ಳೆಯದನ್ನು ಮಾಡಿದಾಗ ಮಾತ್ರ ನಮಗೆ ಒಳ್ಳೆಯದಾಗುತ್ತದೆ ಎಂಬುದನ್ನು ನಾವು ನೆನಪಿಟ್ಟುಕೊಳ್ಳಬೇಕು. ಸರ್ದಾರ್ ಪಟೇಲ್ ಕಲ್ಪಿಸಿದಂತೆಯೇ ಭಾರತವನ್ನು ಸದೃ , ಸ್ವತಂತ್ರ ಮತ್ತು ಸ್ವಾವಲಂಬಿಗಳನ್ನಾಗಿ ಮಾಡಲು ನಾವೆಲ್ಲರೂ ಕೆಲಸ ಮಾಡಬೇಕು ”ಎಂದು ಪ್ರಧಾನಿ ಮೋದಿ ಹೇಳಿದರು.

‘ಇಂದು ವಿಶ್ವದ ಎಲ್ಲಾ ದೇಶಗಳು ಭಯೋತ್ಪಾದನೆ ವಿರುದ್ಧ ಹೋರಾಡಲು ಒಂದಾಗಬೇಕಿದೆ. ಭಯೋತ್ಪಾದನೆ ಮತ್ತು ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಿಲ್ಲ. ಭಾರತ ನಿರಂತರವಾಗಿ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ’ ಎಂದರು.

ಇದಕ್ಕೂ ಮುನ್ನ, ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮವಾರ್ಷಿಕೋತ್ಸವದ ಹಿನ್ನೆಲೆ, ಗುಜರಾತ್‌ನ ಕೆವಾಡಿಯಾದಲ್ಲಿನ ಏಕತಾ ಪ್ರತಿಮೆಗೆ ನಮನ ಸಲ್ಲಿಸಿದರು. ಬಳಿಕ ‘ರಾಷ್ಟ್ರೀಯ ಏಕತಾ ದಿವಸ’ ಅಂಗವಾಗಿ ನಡೆದ ಸೇನಾಪಡೆಗಳ ಪಥಸಂಚಲನವನ್ನು ವೀಕ್ಷಿಸಿದರು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...