Homeಮುಖಪುಟಶೇ.50 ರಷ್ಟು ಬೆಲೆ ಕುಸಿತದಿಂದ ಸಂಕಷ್ಟದಲ್ಲಿ ರೇಷ್ಮೆ ಬೆಳೆಗಾರರು: ತಿರುಗಿ ನೋಡದ ಸರ್ಕಾರ

ಶೇ.50 ರಷ್ಟು ಬೆಲೆ ಕುಸಿತದಿಂದ ಸಂಕಷ್ಟದಲ್ಲಿ ರೇಷ್ಮೆ ಬೆಳೆಗಾರರು: ತಿರುಗಿ ನೋಡದ ಸರ್ಕಾರ

- Advertisement -
- Advertisement -

ಪ್ರಪಂಚದಲ್ಲಿಯೇ ಅತಿ ಹೆಚ್ಚು ರೇಷ್ಮೆ ಉತ್ಪಾದಿಸುವ ರಾಷ್ಟ್ರಗಳಲ್ಲಿ ಭಾರತಕ್ಕೆ ಎರಡನೇ ಸ್ಥಾನ. ಇನ್ನು ಭಾರತದಲ್ಲಿಯೇ ಅತಿ ಹೆಚ್ಚು ರೇಷ್ಮೆ ಉತ್ಪಾದಿಸುವ ರಾಜ್ಯ ಕರ್ನಾಟವಾಗಿದೆ. 2018-19ರಲ್ಲಿ ಉತ್ಪಾದನೆಯಾದ 35,261 ಮೆಟ್ರಿಕ್ ಟನ್ ರೇಷ್ಮೆಯಲ್ಲಿ ಭಾರತದ ಶೇಕಡಾ 32 ರಷ್ಟು ಕೊಡುಗೆಯನ್ನು ಕರ್ನಾಟಕವೇ ನೀಡಿದೆ. ಅದೇ ರೀತಿ ಏಷ್ಯಾದಲ್ಲಿಯೇ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಕರ್ನಾಟಕದ ರಾಮನಗರದಲ್ಲಿದೆ. ಸಾವಿರಾರು ರೈತರಿಗೆ ಆಸೆಯಾಗಿದ್ದು ಅದು ಈಗ ಕಣ್ಣೀರಿನ ಕತೆ ಹೇಳುತ್ತಿದೆ.

ಹಾವೇರಿ ಜಿಲ್ಲೆಯ ಹಂದಿಗನೂರಿನ ನಿಖಿರಪ್ಪ ಗಡಿಯಪ್ಪ ಅವರು ಮೇ ತಿಂಗಳ ಕೊನೆಯಲ್ಲಿ ಸುಮಾರು 250 ಕೆಜಿ ರೇಷ್ಮೆ ತೆಗೆದುಕೊಂಡು ಟೆಂಪೊದಲ್ಲಿ ರಾಮನಗರಕ್ಕೆ ಪ್ರಯಾಣ ಬೆಳೆಸಿದರು. ಸತತ 11 ಗಂಟೆಗಳ ತಡೆರಹಿತ 370 ಕಿಲೋಮೀಟರ್ ಪ್ರಯಾಣದ ಸಮಯದಲ್ಲಿ ಲಾಕ್‌ಡೌನ್‌ ಕಾರಣಕ್ಕೆ ಅವರಿಗೆ ದಾರಿಯುದ್ದಕ್ಕೂ ಆಹಾರ ಸಿಗಲಿಲ್ಲ. ಆದರೆ ಅವರ ಚಿಂತೆ ಆಹಾರದ್ದಾಗಿರಲಿಲ್ಲ ಬದಲಿಗೆ ರೇಷ್ಮೆಗೆ ಬೆಲೆ ಕಡಿಮೆಯಾಗಿದ್ದರೆ? ಎನ್ನುವ ಚಿಂತೆ ಅವರನ್ನು ಕಾಡುತ್ತಿತ್ತು.

ಕೊನೆಗೂ ಅವರ ಆತಂಕ ನಿಜವಾಯಿತು. ಅವರ ಕನಸುಗಳು ಕಮರಿ ಹೋದವು. ಏಕೆಂದರೆ ಅಷ್ಟೆಲ್ಲ ಕಷ್ಟಪಟ್ಟರೂ ಸಹ ಕೊನೆಗೆ ಅವರಿಗೆ ಸಿಕ್ಕಿದ್ದು ಪ್ರತಿ ಕೆಜಿಗೆ 270 ರೂನಂತೆ ಕೇವಲ 67,500 ರೂ ಮಾತ್ರ.

ಮಾರ್ಚ್ ಆರಂಭದಲ್ಲಿ, ಕೆಜಿ ಬಿವೊಲ್ಟೈನ್ ರೇಷ್ಮೆಗೆ ಸುಮಾರು 550 ರೂ, ಮತ್ತು ಅಡ್ಡ-ತಳಿ ರೇಷ್ಮೆಗೆ ಸರಾಸರಿ 480 ರೂ ಇತ್ತು. ಮದುವೆಯ ಋತುವನ್ನು ಹೊರತುಪಡಿಸಿ ಸಾಮಾನ್ಯವಾಗಿ ಕೆಜಿ ಬಿವೊಲ್ಟೈನ್ ರೇಷ್ಮೆಗೆ ಸುಮಾರು 450-500 ರೂ ಮತ್ತು ಡ್ಡ-ತಳಿ ರೇಷ್ಮೆಗೆ ಸರಾಸರಿ 380-420 ರೂ ಇತ್ತು.

ನಮ್ಮ ಮನೆಯ ಹತ್ತು ಜನರು ರೇಷ್ಮೆ ಬೆಳೆಯಲು ತೊಡಗಿಸಿಕೊಂಡಿದ್ದೇವೆ. ಈಗ ಕೂಲಿ, ರೇಷ್ಮೆ ಹುಳು, ರಸಗೊಬ್ಬರ, ಸಾರಿಗೆ ಮತ್ತು ನಿರ್ವಹಣೆ ಸೇರಿ 48,000 ರೂ ಖರ್ಚು ಮಾಡಿದ್ದೆ. ಎಲ್ಲಾ ಕಳೆದರೆ ನಾನು ಕೇವಲ ರೂ. 20,000 ರೂ ಉಳಿಸುತ್ತೇನೆ ಅಷ್ಟೆ. “ನಾನು 2014 ರಿಂದ ಹಿಪ್ಪುನೇರಳೆ ಬೆಳೆಯಲು ಪ್ರಾರಂಭಿಸಿದೆ. ಈಗ ತೀವ್ರ ನಷ್ಟವಾದ್ದರಿಂದ ನಾನು ಪಡೆದಿರುವ ಸಾಲಗಳನ್ನು ಹೇಗೆ ಮರುಪಾವತಿಸುತ್ತೇನೆ ಎಂದು ನನಗೆ ತಿಳಿದಿಲ್ಲ”ಎಂದು 42 ವರ್ಷದ ಗಡಿಯಪ್ಪ ಹೇಳುತ್ತಾರೆ.

ಕೋವಿಡ್ -19 ಲಾಕ್‌ಡೌನ್ ರೇಷ್ಮೆ ಉದ್ಯಮವನ್ನು ತೀವ್ರವಾಗಿ ಬಾಧಿಸಿದೆ. ಬೆಲೆಗಳ ಕುಸಿತಕ್ಕೆ ಒಂದು ಕಾರಣವೆಂದರೆ ಸಂಪೂರ್ಣ ಬೇಡಿಕೆ-ಪೂರೈಕೆ ಸರಪಳಿಯ ಕಡಿತವಾಗಿದೆ. ಈ ಅವಧಿಯಲ್ಲಿ ಅನೇಕ ವಿವಾಹಗಳನ್ನು ಮುಂದೂಡಲಾಗಿದೆ, ಕಾರ್ಯಕ್ರಮಗಳು ರದ್ದಾಗಿವೆ ಮತ್ತು ಉಡುಪು ಮಳಿಗೆಗಳು ಸ್ಥಗಿತಗೊಂಡಿವೆ. ಆದ್ದರಿಂದ ರೇಷ್ಮೆಯ ಬೇಡಿಕೆ ತೀವ್ರವಾಗಿ ಕಡಿಮೆಯಾಗಿದೆ ಎಂದು ಮಾರುಕಟ್ಟೆ ಅಧಿಕಾರಿಗಳು ಮತ್ತು ಇತರರು ಹೇಳುತ್ತಾರೆ. ಆದರೆ ರೈತರು ಕಾಯಲು ಸಾಧ್ಯವಿಲ್ಲ. ಅವರು ಹಾಳಾಗುವ ಮುನ್ನವೇ ರೇಷ್ಮೆಯನ್ನು ಸಮಯಕ್ಕೆ ಸರಿಯಾಗಿ ಮಾರಾಟ ಮಾಡಬೇಕು.

ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, ರಾಮನಗರ ಮಾರುಕಟ್ಟೆಯು ಮಾರ್ಚ್ 25 ರಿಂದ ಏಪ್ರಿಲ್ 1 ರವರೆಗೆ ಒಂದು ವಾರದವರೆಗೆ ಸ್ಥಗಿತಗೊಂಡಿತ್ತು ಎಂದು ಅಧಿಕಾರಿಗಳು ಹೇಳುತ್ತಾರೆ. ಇದು ಮತ್ತೆ ತೆರೆದ ನಂತರ, ಬಿವೊಲ್ಟೈನ್ ರೇಷ್ಮೆಯ ಸರಾಸರಿ ಬೆಲೆ ರೂ. ಪ್ರತಿ ಕಿಲೋಗ್ರಾಂಗೆ 330 ರೂ., ಮತ್ತು ಅಡ್ಡ-ತಳಿ ರೇಷ್ಮೆ ರೂ. ಪ್ರತಿ ಕಿಲೋಗೆ 310 ರೂ ಇತ್ತು.

ದೇಶಾದ್ಯಂತ ಲಾಕ್‌ಡೌನ್ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಿಸಿದಾಗ ರೈತರು ರೇಷ್ಮೆ  ಬೆಲೆಗಳು ಮತ್ತೆ ಪುಟಿಯುವ ನಿರೀಕ್ಷೆಯಲ್ಲಿದ್ದರು. ಆದರೆ ಬೆಲೆಗಳು ಮತ್ತಷ್ಟು ಕಡಿಮೆಯಾದವು. ಮೇ ಕೊನೆಯ ವಾರದ ವೇಳೆಗೆ ಬಿವೊಲ್ಟೈನ್ ರೇಷ್ಮೆ ಸರಾಸರಿ ಬೆಲೆ ರೂ. 250 ಮತ್ತು ಕ್ರಾಸ್‌ಬ್ರೀಡ್ ಬೆಲೆ ಸರಿಸುಮಾರು ರೂ. 200ರೂ ಕುಸಿದಿದೆ.

ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಕರ್ನಾಟಕದಿಂದ ರೇಷ್ಮೆ ಸರಬರಾಜು ಆಗುತ್ತಿತ್ತು. ಆದರೆ ಲಾಕ್‌ಡೌನ್‌ ಕಾರಣದಿಂದ ಸಾರಿಗೆ ವ್ಯವಸ್ಥೆ ವ್ಯತ್ಯಯವಾದ್ದರಿಂದ ಬೇಡಿಕೆಯಲ್ಲಿ ಕುಸಿತವಾಗಿದೆ. ಅದರಿಂದ ಸಹಜವಾಗಿ ಬೆಲೆ ಕುಸಿದಿದೆ ಎಂದು ಉಪ ನಿರ್ದೇಶಕ ಮುನ್ಶಿ ಬಸಯ್ಯ ಹೇಳಿದ್ದಾರೆ.

“ಬೆಲೆಗಳು ಕಡಿಮೆ ಇರುವುದರಿಂದ ನಾನು ಒಂದು ದಿನವೂ ಕೆಲಸವನ್ನು ನಿಲ್ಲಿಸಲು ಸಾಧ್ಯವಿಲ್ಲ. ನನ್ನ ಕುಟುಂಬವನ್ನು ನಾನು ಹೇಗೆ ಪೋಷಿಸುತ್ತೇನೆ?” ಎಂದು ಗಡಿಯಪ್ಪ ಪ್ರಶ್ನಿಸುತ್ತಾರೆ. ಮುಂದಿನ ಬ್ಯಾಚ್‌ನ ರೇಷ್ಮೆ ತಯಾರಿಸಲು ಅವರೀಗ ಮತ್ತೆ ಸಾಲದ ಮೊರೆ ಹೋಗಬೇಕಾಗಿದೆ. 2019 ರಲ್ಲಿ ಶೇ 12 ರಷ್ಟು ಬಡ್ಡಿದರದಲ್ಲಿ ಸಹಕಾರಿ ಬ್ಯಾಂಕಿನಿಂದ 3.5 ಲಕ್ಷ ರೂ ಮತ್ತು ನಾಲ್ಕು ವರ್ಷಗಳ ಹಿಂದೆ ವಿಜಯ ಬ್ಯಾಂಕಿನಿಂದ ತೆಗೆದುಕೊಂಡ  ಶೇ 7 ರಷ್ಟು ಬಡ್ಡಿಗೆ 1.5 ಲಕ್ಷ ರೂ ಸಾಲವನ್ನು ಇನ್ನೂ ತೀರಿಸಿಲ್ಲಿ ಎಂದು ಅವರು ಹೇಳುತ್ತಾರೆ.

ಸರ್ಕಾರ ಏನದರೂ ಮಧ್ಯಪ್ರವೇಶಿಸಿದೆಯೇ? ಈ ರೈತರು ಏನು ಮಾಡಬೇಕು? ಈ ಪರಿಸ್ಥಿತಿ ಯಾವಾಗ ಸುಧಾರಿಸುತ್ತದೆ? ಈ ಪ್ರಶ್ನೆಗಳಿಗೆ ಉತ್ತರ ನೀಡುವವರು ಯಾರು?

ಕೃಪೆ: ರೂರಲ್‌ಇಂಡಿಯಾಆನ್‌ಲೈನ್‌.ಆರ್ಗ್‌


ಇದನ್ನೂ ಓದಿ: ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...