Homeಮುಖಪುಟಶೇ.50 ರಷ್ಟು ಬೆಲೆ ಕುಸಿತದಿಂದ ಸಂಕಷ್ಟದಲ್ಲಿ ರೇಷ್ಮೆ ಬೆಳೆಗಾರರು: ತಿರುಗಿ ನೋಡದ ಸರ್ಕಾರ

ಶೇ.50 ರಷ್ಟು ಬೆಲೆ ಕುಸಿತದಿಂದ ಸಂಕಷ್ಟದಲ್ಲಿ ರೇಷ್ಮೆ ಬೆಳೆಗಾರರು: ತಿರುಗಿ ನೋಡದ ಸರ್ಕಾರ

- Advertisement -
- Advertisement -

ಪ್ರಪಂಚದಲ್ಲಿಯೇ ಅತಿ ಹೆಚ್ಚು ರೇಷ್ಮೆ ಉತ್ಪಾದಿಸುವ ರಾಷ್ಟ್ರಗಳಲ್ಲಿ ಭಾರತಕ್ಕೆ ಎರಡನೇ ಸ್ಥಾನ. ಇನ್ನು ಭಾರತದಲ್ಲಿಯೇ ಅತಿ ಹೆಚ್ಚು ರೇಷ್ಮೆ ಉತ್ಪಾದಿಸುವ ರಾಜ್ಯ ಕರ್ನಾಟವಾಗಿದೆ. 2018-19ರಲ್ಲಿ ಉತ್ಪಾದನೆಯಾದ 35,261 ಮೆಟ್ರಿಕ್ ಟನ್ ರೇಷ್ಮೆಯಲ್ಲಿ ಭಾರತದ ಶೇಕಡಾ 32 ರಷ್ಟು ಕೊಡುಗೆಯನ್ನು ಕರ್ನಾಟಕವೇ ನೀಡಿದೆ. ಅದೇ ರೀತಿ ಏಷ್ಯಾದಲ್ಲಿಯೇ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಕರ್ನಾಟಕದ ರಾಮನಗರದಲ್ಲಿದೆ. ಸಾವಿರಾರು ರೈತರಿಗೆ ಆಸೆಯಾಗಿದ್ದು ಅದು ಈಗ ಕಣ್ಣೀರಿನ ಕತೆ ಹೇಳುತ್ತಿದೆ.

ಹಾವೇರಿ ಜಿಲ್ಲೆಯ ಹಂದಿಗನೂರಿನ ನಿಖಿರಪ್ಪ ಗಡಿಯಪ್ಪ ಅವರು ಮೇ ತಿಂಗಳ ಕೊನೆಯಲ್ಲಿ ಸುಮಾರು 250 ಕೆಜಿ ರೇಷ್ಮೆ ತೆಗೆದುಕೊಂಡು ಟೆಂಪೊದಲ್ಲಿ ರಾಮನಗರಕ್ಕೆ ಪ್ರಯಾಣ ಬೆಳೆಸಿದರು. ಸತತ 11 ಗಂಟೆಗಳ ತಡೆರಹಿತ 370 ಕಿಲೋಮೀಟರ್ ಪ್ರಯಾಣದ ಸಮಯದಲ್ಲಿ ಲಾಕ್‌ಡೌನ್‌ ಕಾರಣಕ್ಕೆ ಅವರಿಗೆ ದಾರಿಯುದ್ದಕ್ಕೂ ಆಹಾರ ಸಿಗಲಿಲ್ಲ. ಆದರೆ ಅವರ ಚಿಂತೆ ಆಹಾರದ್ದಾಗಿರಲಿಲ್ಲ ಬದಲಿಗೆ ರೇಷ್ಮೆಗೆ ಬೆಲೆ ಕಡಿಮೆಯಾಗಿದ್ದರೆ? ಎನ್ನುವ ಚಿಂತೆ ಅವರನ್ನು ಕಾಡುತ್ತಿತ್ತು.

ಕೊನೆಗೂ ಅವರ ಆತಂಕ ನಿಜವಾಯಿತು. ಅವರ ಕನಸುಗಳು ಕಮರಿ ಹೋದವು. ಏಕೆಂದರೆ ಅಷ್ಟೆಲ್ಲ ಕಷ್ಟಪಟ್ಟರೂ ಸಹ ಕೊನೆಗೆ ಅವರಿಗೆ ಸಿಕ್ಕಿದ್ದು ಪ್ರತಿ ಕೆಜಿಗೆ 270 ರೂನಂತೆ ಕೇವಲ 67,500 ರೂ ಮಾತ್ರ.

ಮಾರ್ಚ್ ಆರಂಭದಲ್ಲಿ, ಕೆಜಿ ಬಿವೊಲ್ಟೈನ್ ರೇಷ್ಮೆಗೆ ಸುಮಾರು 550 ರೂ, ಮತ್ತು ಅಡ್ಡ-ತಳಿ ರೇಷ್ಮೆಗೆ ಸರಾಸರಿ 480 ರೂ ಇತ್ತು. ಮದುವೆಯ ಋತುವನ್ನು ಹೊರತುಪಡಿಸಿ ಸಾಮಾನ್ಯವಾಗಿ ಕೆಜಿ ಬಿವೊಲ್ಟೈನ್ ರೇಷ್ಮೆಗೆ ಸುಮಾರು 450-500 ರೂ ಮತ್ತು ಡ್ಡ-ತಳಿ ರೇಷ್ಮೆಗೆ ಸರಾಸರಿ 380-420 ರೂ ಇತ್ತು.

ನಮ್ಮ ಮನೆಯ ಹತ್ತು ಜನರು ರೇಷ್ಮೆ ಬೆಳೆಯಲು ತೊಡಗಿಸಿಕೊಂಡಿದ್ದೇವೆ. ಈಗ ಕೂಲಿ, ರೇಷ್ಮೆ ಹುಳು, ರಸಗೊಬ್ಬರ, ಸಾರಿಗೆ ಮತ್ತು ನಿರ್ವಹಣೆ ಸೇರಿ 48,000 ರೂ ಖರ್ಚು ಮಾಡಿದ್ದೆ. ಎಲ್ಲಾ ಕಳೆದರೆ ನಾನು ಕೇವಲ ರೂ. 20,000 ರೂ ಉಳಿಸುತ್ತೇನೆ ಅಷ್ಟೆ. “ನಾನು 2014 ರಿಂದ ಹಿಪ್ಪುನೇರಳೆ ಬೆಳೆಯಲು ಪ್ರಾರಂಭಿಸಿದೆ. ಈಗ ತೀವ್ರ ನಷ್ಟವಾದ್ದರಿಂದ ನಾನು ಪಡೆದಿರುವ ಸಾಲಗಳನ್ನು ಹೇಗೆ ಮರುಪಾವತಿಸುತ್ತೇನೆ ಎಂದು ನನಗೆ ತಿಳಿದಿಲ್ಲ”ಎಂದು 42 ವರ್ಷದ ಗಡಿಯಪ್ಪ ಹೇಳುತ್ತಾರೆ.

ಕೋವಿಡ್ -19 ಲಾಕ್‌ಡೌನ್ ರೇಷ್ಮೆ ಉದ್ಯಮವನ್ನು ತೀವ್ರವಾಗಿ ಬಾಧಿಸಿದೆ. ಬೆಲೆಗಳ ಕುಸಿತಕ್ಕೆ ಒಂದು ಕಾರಣವೆಂದರೆ ಸಂಪೂರ್ಣ ಬೇಡಿಕೆ-ಪೂರೈಕೆ ಸರಪಳಿಯ ಕಡಿತವಾಗಿದೆ. ಈ ಅವಧಿಯಲ್ಲಿ ಅನೇಕ ವಿವಾಹಗಳನ್ನು ಮುಂದೂಡಲಾಗಿದೆ, ಕಾರ್ಯಕ್ರಮಗಳು ರದ್ದಾಗಿವೆ ಮತ್ತು ಉಡುಪು ಮಳಿಗೆಗಳು ಸ್ಥಗಿತಗೊಂಡಿವೆ. ಆದ್ದರಿಂದ ರೇಷ್ಮೆಯ ಬೇಡಿಕೆ ತೀವ್ರವಾಗಿ ಕಡಿಮೆಯಾಗಿದೆ ಎಂದು ಮಾರುಕಟ್ಟೆ ಅಧಿಕಾರಿಗಳು ಮತ್ತು ಇತರರು ಹೇಳುತ್ತಾರೆ. ಆದರೆ ರೈತರು ಕಾಯಲು ಸಾಧ್ಯವಿಲ್ಲ. ಅವರು ಹಾಳಾಗುವ ಮುನ್ನವೇ ರೇಷ್ಮೆಯನ್ನು ಸಮಯಕ್ಕೆ ಸರಿಯಾಗಿ ಮಾರಾಟ ಮಾಡಬೇಕು.

ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, ರಾಮನಗರ ಮಾರುಕಟ್ಟೆಯು ಮಾರ್ಚ್ 25 ರಿಂದ ಏಪ್ರಿಲ್ 1 ರವರೆಗೆ ಒಂದು ವಾರದವರೆಗೆ ಸ್ಥಗಿತಗೊಂಡಿತ್ತು ಎಂದು ಅಧಿಕಾರಿಗಳು ಹೇಳುತ್ತಾರೆ. ಇದು ಮತ್ತೆ ತೆರೆದ ನಂತರ, ಬಿವೊಲ್ಟೈನ್ ರೇಷ್ಮೆಯ ಸರಾಸರಿ ಬೆಲೆ ರೂ. ಪ್ರತಿ ಕಿಲೋಗ್ರಾಂಗೆ 330 ರೂ., ಮತ್ತು ಅಡ್ಡ-ತಳಿ ರೇಷ್ಮೆ ರೂ. ಪ್ರತಿ ಕಿಲೋಗೆ 310 ರೂ ಇತ್ತು.

ದೇಶಾದ್ಯಂತ ಲಾಕ್‌ಡೌನ್ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಿಸಿದಾಗ ರೈತರು ರೇಷ್ಮೆ  ಬೆಲೆಗಳು ಮತ್ತೆ ಪುಟಿಯುವ ನಿರೀಕ್ಷೆಯಲ್ಲಿದ್ದರು. ಆದರೆ ಬೆಲೆಗಳು ಮತ್ತಷ್ಟು ಕಡಿಮೆಯಾದವು. ಮೇ ಕೊನೆಯ ವಾರದ ವೇಳೆಗೆ ಬಿವೊಲ್ಟೈನ್ ರೇಷ್ಮೆ ಸರಾಸರಿ ಬೆಲೆ ರೂ. 250 ಮತ್ತು ಕ್ರಾಸ್‌ಬ್ರೀಡ್ ಬೆಲೆ ಸರಿಸುಮಾರು ರೂ. 200ರೂ ಕುಸಿದಿದೆ.

ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಕರ್ನಾಟಕದಿಂದ ರೇಷ್ಮೆ ಸರಬರಾಜು ಆಗುತ್ತಿತ್ತು. ಆದರೆ ಲಾಕ್‌ಡೌನ್‌ ಕಾರಣದಿಂದ ಸಾರಿಗೆ ವ್ಯವಸ್ಥೆ ವ್ಯತ್ಯಯವಾದ್ದರಿಂದ ಬೇಡಿಕೆಯಲ್ಲಿ ಕುಸಿತವಾಗಿದೆ. ಅದರಿಂದ ಸಹಜವಾಗಿ ಬೆಲೆ ಕುಸಿದಿದೆ ಎಂದು ಉಪ ನಿರ್ದೇಶಕ ಮುನ್ಶಿ ಬಸಯ್ಯ ಹೇಳಿದ್ದಾರೆ.

“ಬೆಲೆಗಳು ಕಡಿಮೆ ಇರುವುದರಿಂದ ನಾನು ಒಂದು ದಿನವೂ ಕೆಲಸವನ್ನು ನಿಲ್ಲಿಸಲು ಸಾಧ್ಯವಿಲ್ಲ. ನನ್ನ ಕುಟುಂಬವನ್ನು ನಾನು ಹೇಗೆ ಪೋಷಿಸುತ್ತೇನೆ?” ಎಂದು ಗಡಿಯಪ್ಪ ಪ್ರಶ್ನಿಸುತ್ತಾರೆ. ಮುಂದಿನ ಬ್ಯಾಚ್‌ನ ರೇಷ್ಮೆ ತಯಾರಿಸಲು ಅವರೀಗ ಮತ್ತೆ ಸಾಲದ ಮೊರೆ ಹೋಗಬೇಕಾಗಿದೆ. 2019 ರಲ್ಲಿ ಶೇ 12 ರಷ್ಟು ಬಡ್ಡಿದರದಲ್ಲಿ ಸಹಕಾರಿ ಬ್ಯಾಂಕಿನಿಂದ 3.5 ಲಕ್ಷ ರೂ ಮತ್ತು ನಾಲ್ಕು ವರ್ಷಗಳ ಹಿಂದೆ ವಿಜಯ ಬ್ಯಾಂಕಿನಿಂದ ತೆಗೆದುಕೊಂಡ  ಶೇ 7 ರಷ್ಟು ಬಡ್ಡಿಗೆ 1.5 ಲಕ್ಷ ರೂ ಸಾಲವನ್ನು ಇನ್ನೂ ತೀರಿಸಿಲ್ಲಿ ಎಂದು ಅವರು ಹೇಳುತ್ತಾರೆ.

ಸರ್ಕಾರ ಏನದರೂ ಮಧ್ಯಪ್ರವೇಶಿಸಿದೆಯೇ? ಈ ರೈತರು ಏನು ಮಾಡಬೇಕು? ಈ ಪರಿಸ್ಥಿತಿ ಯಾವಾಗ ಸುಧಾರಿಸುತ್ತದೆ? ಈ ಪ್ರಶ್ನೆಗಳಿಗೆ ಉತ್ತರ ನೀಡುವವರು ಯಾರು?

ಕೃಪೆ: ರೂರಲ್‌ಇಂಡಿಯಾಆನ್‌ಲೈನ್‌.ಆರ್ಗ್‌


ಇದನ್ನೂ ಓದಿ: ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...