Homeಮುಖಪುಟಶೇ.50 ರಷ್ಟು ಬೆಲೆ ಕುಸಿತದಿಂದ ಸಂಕಷ್ಟದಲ್ಲಿ ರೇಷ್ಮೆ ಬೆಳೆಗಾರರು: ತಿರುಗಿ ನೋಡದ ಸರ್ಕಾರ

ಶೇ.50 ರಷ್ಟು ಬೆಲೆ ಕುಸಿತದಿಂದ ಸಂಕಷ್ಟದಲ್ಲಿ ರೇಷ್ಮೆ ಬೆಳೆಗಾರರು: ತಿರುಗಿ ನೋಡದ ಸರ್ಕಾರ

- Advertisement -
- Advertisement -

ಪ್ರಪಂಚದಲ್ಲಿಯೇ ಅತಿ ಹೆಚ್ಚು ರೇಷ್ಮೆ ಉತ್ಪಾದಿಸುವ ರಾಷ್ಟ್ರಗಳಲ್ಲಿ ಭಾರತಕ್ಕೆ ಎರಡನೇ ಸ್ಥಾನ. ಇನ್ನು ಭಾರತದಲ್ಲಿಯೇ ಅತಿ ಹೆಚ್ಚು ರೇಷ್ಮೆ ಉತ್ಪಾದಿಸುವ ರಾಜ್ಯ ಕರ್ನಾಟವಾಗಿದೆ. 2018-19ರಲ್ಲಿ ಉತ್ಪಾದನೆಯಾದ 35,261 ಮೆಟ್ರಿಕ್ ಟನ್ ರೇಷ್ಮೆಯಲ್ಲಿ ಭಾರತದ ಶೇಕಡಾ 32 ರಷ್ಟು ಕೊಡುಗೆಯನ್ನು ಕರ್ನಾಟಕವೇ ನೀಡಿದೆ. ಅದೇ ರೀತಿ ಏಷ್ಯಾದಲ್ಲಿಯೇ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಕರ್ನಾಟಕದ ರಾಮನಗರದಲ್ಲಿದೆ. ಸಾವಿರಾರು ರೈತರಿಗೆ ಆಸೆಯಾಗಿದ್ದು ಅದು ಈಗ ಕಣ್ಣೀರಿನ ಕತೆ ಹೇಳುತ್ತಿದೆ.

ಹಾವೇರಿ ಜಿಲ್ಲೆಯ ಹಂದಿಗನೂರಿನ ನಿಖಿರಪ್ಪ ಗಡಿಯಪ್ಪ ಅವರು ಮೇ ತಿಂಗಳ ಕೊನೆಯಲ್ಲಿ ಸುಮಾರು 250 ಕೆಜಿ ರೇಷ್ಮೆ ತೆಗೆದುಕೊಂಡು ಟೆಂಪೊದಲ್ಲಿ ರಾಮನಗರಕ್ಕೆ ಪ್ರಯಾಣ ಬೆಳೆಸಿದರು. ಸತತ 11 ಗಂಟೆಗಳ ತಡೆರಹಿತ 370 ಕಿಲೋಮೀಟರ್ ಪ್ರಯಾಣದ ಸಮಯದಲ್ಲಿ ಲಾಕ್‌ಡೌನ್‌ ಕಾರಣಕ್ಕೆ ಅವರಿಗೆ ದಾರಿಯುದ್ದಕ್ಕೂ ಆಹಾರ ಸಿಗಲಿಲ್ಲ. ಆದರೆ ಅವರ ಚಿಂತೆ ಆಹಾರದ್ದಾಗಿರಲಿಲ್ಲ ಬದಲಿಗೆ ರೇಷ್ಮೆಗೆ ಬೆಲೆ ಕಡಿಮೆಯಾಗಿದ್ದರೆ? ಎನ್ನುವ ಚಿಂತೆ ಅವರನ್ನು ಕಾಡುತ್ತಿತ್ತು.

ಕೊನೆಗೂ ಅವರ ಆತಂಕ ನಿಜವಾಯಿತು. ಅವರ ಕನಸುಗಳು ಕಮರಿ ಹೋದವು. ಏಕೆಂದರೆ ಅಷ್ಟೆಲ್ಲ ಕಷ್ಟಪಟ್ಟರೂ ಸಹ ಕೊನೆಗೆ ಅವರಿಗೆ ಸಿಕ್ಕಿದ್ದು ಪ್ರತಿ ಕೆಜಿಗೆ 270 ರೂನಂತೆ ಕೇವಲ 67,500 ರೂ ಮಾತ್ರ.

ಮಾರ್ಚ್ ಆರಂಭದಲ್ಲಿ, ಕೆಜಿ ಬಿವೊಲ್ಟೈನ್ ರೇಷ್ಮೆಗೆ ಸುಮಾರು 550 ರೂ, ಮತ್ತು ಅಡ್ಡ-ತಳಿ ರೇಷ್ಮೆಗೆ ಸರಾಸರಿ 480 ರೂ ಇತ್ತು. ಮದುವೆಯ ಋತುವನ್ನು ಹೊರತುಪಡಿಸಿ ಸಾಮಾನ್ಯವಾಗಿ ಕೆಜಿ ಬಿವೊಲ್ಟೈನ್ ರೇಷ್ಮೆಗೆ ಸುಮಾರು 450-500 ರೂ ಮತ್ತು ಡ್ಡ-ತಳಿ ರೇಷ್ಮೆಗೆ ಸರಾಸರಿ 380-420 ರೂ ಇತ್ತು.

ನಮ್ಮ ಮನೆಯ ಹತ್ತು ಜನರು ರೇಷ್ಮೆ ಬೆಳೆಯಲು ತೊಡಗಿಸಿಕೊಂಡಿದ್ದೇವೆ. ಈಗ ಕೂಲಿ, ರೇಷ್ಮೆ ಹುಳು, ರಸಗೊಬ್ಬರ, ಸಾರಿಗೆ ಮತ್ತು ನಿರ್ವಹಣೆ ಸೇರಿ 48,000 ರೂ ಖರ್ಚು ಮಾಡಿದ್ದೆ. ಎಲ್ಲಾ ಕಳೆದರೆ ನಾನು ಕೇವಲ ರೂ. 20,000 ರೂ ಉಳಿಸುತ್ತೇನೆ ಅಷ್ಟೆ. “ನಾನು 2014 ರಿಂದ ಹಿಪ್ಪುನೇರಳೆ ಬೆಳೆಯಲು ಪ್ರಾರಂಭಿಸಿದೆ. ಈಗ ತೀವ್ರ ನಷ್ಟವಾದ್ದರಿಂದ ನಾನು ಪಡೆದಿರುವ ಸಾಲಗಳನ್ನು ಹೇಗೆ ಮರುಪಾವತಿಸುತ್ತೇನೆ ಎಂದು ನನಗೆ ತಿಳಿದಿಲ್ಲ”ಎಂದು 42 ವರ್ಷದ ಗಡಿಯಪ್ಪ ಹೇಳುತ್ತಾರೆ.

ಕೋವಿಡ್ -19 ಲಾಕ್‌ಡೌನ್ ರೇಷ್ಮೆ ಉದ್ಯಮವನ್ನು ತೀವ್ರವಾಗಿ ಬಾಧಿಸಿದೆ. ಬೆಲೆಗಳ ಕುಸಿತಕ್ಕೆ ಒಂದು ಕಾರಣವೆಂದರೆ ಸಂಪೂರ್ಣ ಬೇಡಿಕೆ-ಪೂರೈಕೆ ಸರಪಳಿಯ ಕಡಿತವಾಗಿದೆ. ಈ ಅವಧಿಯಲ್ಲಿ ಅನೇಕ ವಿವಾಹಗಳನ್ನು ಮುಂದೂಡಲಾಗಿದೆ, ಕಾರ್ಯಕ್ರಮಗಳು ರದ್ದಾಗಿವೆ ಮತ್ತು ಉಡುಪು ಮಳಿಗೆಗಳು ಸ್ಥಗಿತಗೊಂಡಿವೆ. ಆದ್ದರಿಂದ ರೇಷ್ಮೆಯ ಬೇಡಿಕೆ ತೀವ್ರವಾಗಿ ಕಡಿಮೆಯಾಗಿದೆ ಎಂದು ಮಾರುಕಟ್ಟೆ ಅಧಿಕಾರಿಗಳು ಮತ್ತು ಇತರರು ಹೇಳುತ್ತಾರೆ. ಆದರೆ ರೈತರು ಕಾಯಲು ಸಾಧ್ಯವಿಲ್ಲ. ಅವರು ಹಾಳಾಗುವ ಮುನ್ನವೇ ರೇಷ್ಮೆಯನ್ನು ಸಮಯಕ್ಕೆ ಸರಿಯಾಗಿ ಮಾರಾಟ ಮಾಡಬೇಕು.

ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, ರಾಮನಗರ ಮಾರುಕಟ್ಟೆಯು ಮಾರ್ಚ್ 25 ರಿಂದ ಏಪ್ರಿಲ್ 1 ರವರೆಗೆ ಒಂದು ವಾರದವರೆಗೆ ಸ್ಥಗಿತಗೊಂಡಿತ್ತು ಎಂದು ಅಧಿಕಾರಿಗಳು ಹೇಳುತ್ತಾರೆ. ಇದು ಮತ್ತೆ ತೆರೆದ ನಂತರ, ಬಿವೊಲ್ಟೈನ್ ರೇಷ್ಮೆಯ ಸರಾಸರಿ ಬೆಲೆ ರೂ. ಪ್ರತಿ ಕಿಲೋಗ್ರಾಂಗೆ 330 ರೂ., ಮತ್ತು ಅಡ್ಡ-ತಳಿ ರೇಷ್ಮೆ ರೂ. ಪ್ರತಿ ಕಿಲೋಗೆ 310 ರೂ ಇತ್ತು.

ದೇಶಾದ್ಯಂತ ಲಾಕ್‌ಡೌನ್ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಿಸಿದಾಗ ರೈತರು ರೇಷ್ಮೆ  ಬೆಲೆಗಳು ಮತ್ತೆ ಪುಟಿಯುವ ನಿರೀಕ್ಷೆಯಲ್ಲಿದ್ದರು. ಆದರೆ ಬೆಲೆಗಳು ಮತ್ತಷ್ಟು ಕಡಿಮೆಯಾದವು. ಮೇ ಕೊನೆಯ ವಾರದ ವೇಳೆಗೆ ಬಿವೊಲ್ಟೈನ್ ರೇಷ್ಮೆ ಸರಾಸರಿ ಬೆಲೆ ರೂ. 250 ಮತ್ತು ಕ್ರಾಸ್‌ಬ್ರೀಡ್ ಬೆಲೆ ಸರಿಸುಮಾರು ರೂ. 200ರೂ ಕುಸಿದಿದೆ.

ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಕರ್ನಾಟಕದಿಂದ ರೇಷ್ಮೆ ಸರಬರಾಜು ಆಗುತ್ತಿತ್ತು. ಆದರೆ ಲಾಕ್‌ಡೌನ್‌ ಕಾರಣದಿಂದ ಸಾರಿಗೆ ವ್ಯವಸ್ಥೆ ವ್ಯತ್ಯಯವಾದ್ದರಿಂದ ಬೇಡಿಕೆಯಲ್ಲಿ ಕುಸಿತವಾಗಿದೆ. ಅದರಿಂದ ಸಹಜವಾಗಿ ಬೆಲೆ ಕುಸಿದಿದೆ ಎಂದು ಉಪ ನಿರ್ದೇಶಕ ಮುನ್ಶಿ ಬಸಯ್ಯ ಹೇಳಿದ್ದಾರೆ.

“ಬೆಲೆಗಳು ಕಡಿಮೆ ಇರುವುದರಿಂದ ನಾನು ಒಂದು ದಿನವೂ ಕೆಲಸವನ್ನು ನಿಲ್ಲಿಸಲು ಸಾಧ್ಯವಿಲ್ಲ. ನನ್ನ ಕುಟುಂಬವನ್ನು ನಾನು ಹೇಗೆ ಪೋಷಿಸುತ್ತೇನೆ?” ಎಂದು ಗಡಿಯಪ್ಪ ಪ್ರಶ್ನಿಸುತ್ತಾರೆ. ಮುಂದಿನ ಬ್ಯಾಚ್‌ನ ರೇಷ್ಮೆ ತಯಾರಿಸಲು ಅವರೀಗ ಮತ್ತೆ ಸಾಲದ ಮೊರೆ ಹೋಗಬೇಕಾಗಿದೆ. 2019 ರಲ್ಲಿ ಶೇ 12 ರಷ್ಟು ಬಡ್ಡಿದರದಲ್ಲಿ ಸಹಕಾರಿ ಬ್ಯಾಂಕಿನಿಂದ 3.5 ಲಕ್ಷ ರೂ ಮತ್ತು ನಾಲ್ಕು ವರ್ಷಗಳ ಹಿಂದೆ ವಿಜಯ ಬ್ಯಾಂಕಿನಿಂದ ತೆಗೆದುಕೊಂಡ  ಶೇ 7 ರಷ್ಟು ಬಡ್ಡಿಗೆ 1.5 ಲಕ್ಷ ರೂ ಸಾಲವನ್ನು ಇನ್ನೂ ತೀರಿಸಿಲ್ಲಿ ಎಂದು ಅವರು ಹೇಳುತ್ತಾರೆ.

ಸರ್ಕಾರ ಏನದರೂ ಮಧ್ಯಪ್ರವೇಶಿಸಿದೆಯೇ? ಈ ರೈತರು ಏನು ಮಾಡಬೇಕು? ಈ ಪರಿಸ್ಥಿತಿ ಯಾವಾಗ ಸುಧಾರಿಸುತ್ತದೆ? ಈ ಪ್ರಶ್ನೆಗಳಿಗೆ ಉತ್ತರ ನೀಡುವವರು ಯಾರು?

ಕೃಪೆ: ರೂರಲ್‌ಇಂಡಿಯಾಆನ್‌ಲೈನ್‌.ಆರ್ಗ್‌


ಇದನ್ನೂ ಓದಿ: ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...