Homeಮುಖಪುಟಶೇ.50 ರಷ್ಟು ಬೆಲೆ ಕುಸಿತದಿಂದ ಸಂಕಷ್ಟದಲ್ಲಿ ರೇಷ್ಮೆ ಬೆಳೆಗಾರರು: ತಿರುಗಿ ನೋಡದ ಸರ್ಕಾರ

ಶೇ.50 ರಷ್ಟು ಬೆಲೆ ಕುಸಿತದಿಂದ ಸಂಕಷ್ಟದಲ್ಲಿ ರೇಷ್ಮೆ ಬೆಳೆಗಾರರು: ತಿರುಗಿ ನೋಡದ ಸರ್ಕಾರ

- Advertisement -
- Advertisement -

ಪ್ರಪಂಚದಲ್ಲಿಯೇ ಅತಿ ಹೆಚ್ಚು ರೇಷ್ಮೆ ಉತ್ಪಾದಿಸುವ ರಾಷ್ಟ್ರಗಳಲ್ಲಿ ಭಾರತಕ್ಕೆ ಎರಡನೇ ಸ್ಥಾನ. ಇನ್ನು ಭಾರತದಲ್ಲಿಯೇ ಅತಿ ಹೆಚ್ಚು ರೇಷ್ಮೆ ಉತ್ಪಾದಿಸುವ ರಾಜ್ಯ ಕರ್ನಾಟವಾಗಿದೆ. 2018-19ರಲ್ಲಿ ಉತ್ಪಾದನೆಯಾದ 35,261 ಮೆಟ್ರಿಕ್ ಟನ್ ರೇಷ್ಮೆಯಲ್ಲಿ ಭಾರತದ ಶೇಕಡಾ 32 ರಷ್ಟು ಕೊಡುಗೆಯನ್ನು ಕರ್ನಾಟಕವೇ ನೀಡಿದೆ. ಅದೇ ರೀತಿ ಏಷ್ಯಾದಲ್ಲಿಯೇ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಕರ್ನಾಟಕದ ರಾಮನಗರದಲ್ಲಿದೆ. ಸಾವಿರಾರು ರೈತರಿಗೆ ಆಸೆಯಾಗಿದ್ದು ಅದು ಈಗ ಕಣ್ಣೀರಿನ ಕತೆ ಹೇಳುತ್ತಿದೆ.

ಹಾವೇರಿ ಜಿಲ್ಲೆಯ ಹಂದಿಗನೂರಿನ ನಿಖಿರಪ್ಪ ಗಡಿಯಪ್ಪ ಅವರು ಮೇ ತಿಂಗಳ ಕೊನೆಯಲ್ಲಿ ಸುಮಾರು 250 ಕೆಜಿ ರೇಷ್ಮೆ ತೆಗೆದುಕೊಂಡು ಟೆಂಪೊದಲ್ಲಿ ರಾಮನಗರಕ್ಕೆ ಪ್ರಯಾಣ ಬೆಳೆಸಿದರು. ಸತತ 11 ಗಂಟೆಗಳ ತಡೆರಹಿತ 370 ಕಿಲೋಮೀಟರ್ ಪ್ರಯಾಣದ ಸಮಯದಲ್ಲಿ ಲಾಕ್‌ಡೌನ್‌ ಕಾರಣಕ್ಕೆ ಅವರಿಗೆ ದಾರಿಯುದ್ದಕ್ಕೂ ಆಹಾರ ಸಿಗಲಿಲ್ಲ. ಆದರೆ ಅವರ ಚಿಂತೆ ಆಹಾರದ್ದಾಗಿರಲಿಲ್ಲ ಬದಲಿಗೆ ರೇಷ್ಮೆಗೆ ಬೆಲೆ ಕಡಿಮೆಯಾಗಿದ್ದರೆ? ಎನ್ನುವ ಚಿಂತೆ ಅವರನ್ನು ಕಾಡುತ್ತಿತ್ತು.

ಕೊನೆಗೂ ಅವರ ಆತಂಕ ನಿಜವಾಯಿತು. ಅವರ ಕನಸುಗಳು ಕಮರಿ ಹೋದವು. ಏಕೆಂದರೆ ಅಷ್ಟೆಲ್ಲ ಕಷ್ಟಪಟ್ಟರೂ ಸಹ ಕೊನೆಗೆ ಅವರಿಗೆ ಸಿಕ್ಕಿದ್ದು ಪ್ರತಿ ಕೆಜಿಗೆ 270 ರೂನಂತೆ ಕೇವಲ 67,500 ರೂ ಮಾತ್ರ.

ಮಾರ್ಚ್ ಆರಂಭದಲ್ಲಿ, ಕೆಜಿ ಬಿವೊಲ್ಟೈನ್ ರೇಷ್ಮೆಗೆ ಸುಮಾರು 550 ರೂ, ಮತ್ತು ಅಡ್ಡ-ತಳಿ ರೇಷ್ಮೆಗೆ ಸರಾಸರಿ 480 ರೂ ಇತ್ತು. ಮದುವೆಯ ಋತುವನ್ನು ಹೊರತುಪಡಿಸಿ ಸಾಮಾನ್ಯವಾಗಿ ಕೆಜಿ ಬಿವೊಲ್ಟೈನ್ ರೇಷ್ಮೆಗೆ ಸುಮಾರು 450-500 ರೂ ಮತ್ತು ಡ್ಡ-ತಳಿ ರೇಷ್ಮೆಗೆ ಸರಾಸರಿ 380-420 ರೂ ಇತ್ತು.

ನಮ್ಮ ಮನೆಯ ಹತ್ತು ಜನರು ರೇಷ್ಮೆ ಬೆಳೆಯಲು ತೊಡಗಿಸಿಕೊಂಡಿದ್ದೇವೆ. ಈಗ ಕೂಲಿ, ರೇಷ್ಮೆ ಹುಳು, ರಸಗೊಬ್ಬರ, ಸಾರಿಗೆ ಮತ್ತು ನಿರ್ವಹಣೆ ಸೇರಿ 48,000 ರೂ ಖರ್ಚು ಮಾಡಿದ್ದೆ. ಎಲ್ಲಾ ಕಳೆದರೆ ನಾನು ಕೇವಲ ರೂ. 20,000 ರೂ ಉಳಿಸುತ್ತೇನೆ ಅಷ್ಟೆ. “ನಾನು 2014 ರಿಂದ ಹಿಪ್ಪುನೇರಳೆ ಬೆಳೆಯಲು ಪ್ರಾರಂಭಿಸಿದೆ. ಈಗ ತೀವ್ರ ನಷ್ಟವಾದ್ದರಿಂದ ನಾನು ಪಡೆದಿರುವ ಸಾಲಗಳನ್ನು ಹೇಗೆ ಮರುಪಾವತಿಸುತ್ತೇನೆ ಎಂದು ನನಗೆ ತಿಳಿದಿಲ್ಲ”ಎಂದು 42 ವರ್ಷದ ಗಡಿಯಪ್ಪ ಹೇಳುತ್ತಾರೆ.

ಕೋವಿಡ್ -19 ಲಾಕ್‌ಡೌನ್ ರೇಷ್ಮೆ ಉದ್ಯಮವನ್ನು ತೀವ್ರವಾಗಿ ಬಾಧಿಸಿದೆ. ಬೆಲೆಗಳ ಕುಸಿತಕ್ಕೆ ಒಂದು ಕಾರಣವೆಂದರೆ ಸಂಪೂರ್ಣ ಬೇಡಿಕೆ-ಪೂರೈಕೆ ಸರಪಳಿಯ ಕಡಿತವಾಗಿದೆ. ಈ ಅವಧಿಯಲ್ಲಿ ಅನೇಕ ವಿವಾಹಗಳನ್ನು ಮುಂದೂಡಲಾಗಿದೆ, ಕಾರ್ಯಕ್ರಮಗಳು ರದ್ದಾಗಿವೆ ಮತ್ತು ಉಡುಪು ಮಳಿಗೆಗಳು ಸ್ಥಗಿತಗೊಂಡಿವೆ. ಆದ್ದರಿಂದ ರೇಷ್ಮೆಯ ಬೇಡಿಕೆ ತೀವ್ರವಾಗಿ ಕಡಿಮೆಯಾಗಿದೆ ಎಂದು ಮಾರುಕಟ್ಟೆ ಅಧಿಕಾರಿಗಳು ಮತ್ತು ಇತರರು ಹೇಳುತ್ತಾರೆ. ಆದರೆ ರೈತರು ಕಾಯಲು ಸಾಧ್ಯವಿಲ್ಲ. ಅವರು ಹಾಳಾಗುವ ಮುನ್ನವೇ ರೇಷ್ಮೆಯನ್ನು ಸಮಯಕ್ಕೆ ಸರಿಯಾಗಿ ಮಾರಾಟ ಮಾಡಬೇಕು.

ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, ರಾಮನಗರ ಮಾರುಕಟ್ಟೆಯು ಮಾರ್ಚ್ 25 ರಿಂದ ಏಪ್ರಿಲ್ 1 ರವರೆಗೆ ಒಂದು ವಾರದವರೆಗೆ ಸ್ಥಗಿತಗೊಂಡಿತ್ತು ಎಂದು ಅಧಿಕಾರಿಗಳು ಹೇಳುತ್ತಾರೆ. ಇದು ಮತ್ತೆ ತೆರೆದ ನಂತರ, ಬಿವೊಲ್ಟೈನ್ ರೇಷ್ಮೆಯ ಸರಾಸರಿ ಬೆಲೆ ರೂ. ಪ್ರತಿ ಕಿಲೋಗ್ರಾಂಗೆ 330 ರೂ., ಮತ್ತು ಅಡ್ಡ-ತಳಿ ರೇಷ್ಮೆ ರೂ. ಪ್ರತಿ ಕಿಲೋಗೆ 310 ರೂ ಇತ್ತು.

ದೇಶಾದ್ಯಂತ ಲಾಕ್‌ಡೌನ್ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಿಸಿದಾಗ ರೈತರು ರೇಷ್ಮೆ  ಬೆಲೆಗಳು ಮತ್ತೆ ಪುಟಿಯುವ ನಿರೀಕ್ಷೆಯಲ್ಲಿದ್ದರು. ಆದರೆ ಬೆಲೆಗಳು ಮತ್ತಷ್ಟು ಕಡಿಮೆಯಾದವು. ಮೇ ಕೊನೆಯ ವಾರದ ವೇಳೆಗೆ ಬಿವೊಲ್ಟೈನ್ ರೇಷ್ಮೆ ಸರಾಸರಿ ಬೆಲೆ ರೂ. 250 ಮತ್ತು ಕ್ರಾಸ್‌ಬ್ರೀಡ್ ಬೆಲೆ ಸರಿಸುಮಾರು ರೂ. 200ರೂ ಕುಸಿದಿದೆ.

ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಕರ್ನಾಟಕದಿಂದ ರೇಷ್ಮೆ ಸರಬರಾಜು ಆಗುತ್ತಿತ್ತು. ಆದರೆ ಲಾಕ್‌ಡೌನ್‌ ಕಾರಣದಿಂದ ಸಾರಿಗೆ ವ್ಯವಸ್ಥೆ ವ್ಯತ್ಯಯವಾದ್ದರಿಂದ ಬೇಡಿಕೆಯಲ್ಲಿ ಕುಸಿತವಾಗಿದೆ. ಅದರಿಂದ ಸಹಜವಾಗಿ ಬೆಲೆ ಕುಸಿದಿದೆ ಎಂದು ಉಪ ನಿರ್ದೇಶಕ ಮುನ್ಶಿ ಬಸಯ್ಯ ಹೇಳಿದ್ದಾರೆ.

“ಬೆಲೆಗಳು ಕಡಿಮೆ ಇರುವುದರಿಂದ ನಾನು ಒಂದು ದಿನವೂ ಕೆಲಸವನ್ನು ನಿಲ್ಲಿಸಲು ಸಾಧ್ಯವಿಲ್ಲ. ನನ್ನ ಕುಟುಂಬವನ್ನು ನಾನು ಹೇಗೆ ಪೋಷಿಸುತ್ತೇನೆ?” ಎಂದು ಗಡಿಯಪ್ಪ ಪ್ರಶ್ನಿಸುತ್ತಾರೆ. ಮುಂದಿನ ಬ್ಯಾಚ್‌ನ ರೇಷ್ಮೆ ತಯಾರಿಸಲು ಅವರೀಗ ಮತ್ತೆ ಸಾಲದ ಮೊರೆ ಹೋಗಬೇಕಾಗಿದೆ. 2019 ರಲ್ಲಿ ಶೇ 12 ರಷ್ಟು ಬಡ್ಡಿದರದಲ್ಲಿ ಸಹಕಾರಿ ಬ್ಯಾಂಕಿನಿಂದ 3.5 ಲಕ್ಷ ರೂ ಮತ್ತು ನಾಲ್ಕು ವರ್ಷಗಳ ಹಿಂದೆ ವಿಜಯ ಬ್ಯಾಂಕಿನಿಂದ ತೆಗೆದುಕೊಂಡ  ಶೇ 7 ರಷ್ಟು ಬಡ್ಡಿಗೆ 1.5 ಲಕ್ಷ ರೂ ಸಾಲವನ್ನು ಇನ್ನೂ ತೀರಿಸಿಲ್ಲಿ ಎಂದು ಅವರು ಹೇಳುತ್ತಾರೆ.

ಸರ್ಕಾರ ಏನದರೂ ಮಧ್ಯಪ್ರವೇಶಿಸಿದೆಯೇ? ಈ ರೈತರು ಏನು ಮಾಡಬೇಕು? ಈ ಪರಿಸ್ಥಿತಿ ಯಾವಾಗ ಸುಧಾರಿಸುತ್ತದೆ? ಈ ಪ್ರಶ್ನೆಗಳಿಗೆ ಉತ್ತರ ನೀಡುವವರು ಯಾರು?

ಕೃಪೆ: ರೂರಲ್‌ಇಂಡಿಯಾಆನ್‌ಲೈನ್‌.ಆರ್ಗ್‌


ಇದನ್ನೂ ಓದಿ: ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...