Homeಮುಖಪುಟಶೇ.50 ರಷ್ಟು ಬೆಲೆ ಕುಸಿತದಿಂದ ಸಂಕಷ್ಟದಲ್ಲಿ ರೇಷ್ಮೆ ಬೆಳೆಗಾರರು: ತಿರುಗಿ ನೋಡದ ಸರ್ಕಾರ

ಶೇ.50 ರಷ್ಟು ಬೆಲೆ ಕುಸಿತದಿಂದ ಸಂಕಷ್ಟದಲ್ಲಿ ರೇಷ್ಮೆ ಬೆಳೆಗಾರರು: ತಿರುಗಿ ನೋಡದ ಸರ್ಕಾರ

- Advertisement -
- Advertisement -

ಪ್ರಪಂಚದಲ್ಲಿಯೇ ಅತಿ ಹೆಚ್ಚು ರೇಷ್ಮೆ ಉತ್ಪಾದಿಸುವ ರಾಷ್ಟ್ರಗಳಲ್ಲಿ ಭಾರತಕ್ಕೆ ಎರಡನೇ ಸ್ಥಾನ. ಇನ್ನು ಭಾರತದಲ್ಲಿಯೇ ಅತಿ ಹೆಚ್ಚು ರೇಷ್ಮೆ ಉತ್ಪಾದಿಸುವ ರಾಜ್ಯ ಕರ್ನಾಟವಾಗಿದೆ. 2018-19ರಲ್ಲಿ ಉತ್ಪಾದನೆಯಾದ 35,261 ಮೆಟ್ರಿಕ್ ಟನ್ ರೇಷ್ಮೆಯಲ್ಲಿ ಭಾರತದ ಶೇಕಡಾ 32 ರಷ್ಟು ಕೊಡುಗೆಯನ್ನು ಕರ್ನಾಟಕವೇ ನೀಡಿದೆ. ಅದೇ ರೀತಿ ಏಷ್ಯಾದಲ್ಲಿಯೇ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಕರ್ನಾಟಕದ ರಾಮನಗರದಲ್ಲಿದೆ. ಸಾವಿರಾರು ರೈತರಿಗೆ ಆಸೆಯಾಗಿದ್ದು ಅದು ಈಗ ಕಣ್ಣೀರಿನ ಕತೆ ಹೇಳುತ್ತಿದೆ.

ಹಾವೇರಿ ಜಿಲ್ಲೆಯ ಹಂದಿಗನೂರಿನ ನಿಖಿರಪ್ಪ ಗಡಿಯಪ್ಪ ಅವರು ಮೇ ತಿಂಗಳ ಕೊನೆಯಲ್ಲಿ ಸುಮಾರು 250 ಕೆಜಿ ರೇಷ್ಮೆ ತೆಗೆದುಕೊಂಡು ಟೆಂಪೊದಲ್ಲಿ ರಾಮನಗರಕ್ಕೆ ಪ್ರಯಾಣ ಬೆಳೆಸಿದರು. ಸತತ 11 ಗಂಟೆಗಳ ತಡೆರಹಿತ 370 ಕಿಲೋಮೀಟರ್ ಪ್ರಯಾಣದ ಸಮಯದಲ್ಲಿ ಲಾಕ್‌ಡೌನ್‌ ಕಾರಣಕ್ಕೆ ಅವರಿಗೆ ದಾರಿಯುದ್ದಕ್ಕೂ ಆಹಾರ ಸಿಗಲಿಲ್ಲ. ಆದರೆ ಅವರ ಚಿಂತೆ ಆಹಾರದ್ದಾಗಿರಲಿಲ್ಲ ಬದಲಿಗೆ ರೇಷ್ಮೆಗೆ ಬೆಲೆ ಕಡಿಮೆಯಾಗಿದ್ದರೆ? ಎನ್ನುವ ಚಿಂತೆ ಅವರನ್ನು ಕಾಡುತ್ತಿತ್ತು.

ಕೊನೆಗೂ ಅವರ ಆತಂಕ ನಿಜವಾಯಿತು. ಅವರ ಕನಸುಗಳು ಕಮರಿ ಹೋದವು. ಏಕೆಂದರೆ ಅಷ್ಟೆಲ್ಲ ಕಷ್ಟಪಟ್ಟರೂ ಸಹ ಕೊನೆಗೆ ಅವರಿಗೆ ಸಿಕ್ಕಿದ್ದು ಪ್ರತಿ ಕೆಜಿಗೆ 270 ರೂನಂತೆ ಕೇವಲ 67,500 ರೂ ಮಾತ್ರ.

ಮಾರ್ಚ್ ಆರಂಭದಲ್ಲಿ, ಕೆಜಿ ಬಿವೊಲ್ಟೈನ್ ರೇಷ್ಮೆಗೆ ಸುಮಾರು 550 ರೂ, ಮತ್ತು ಅಡ್ಡ-ತಳಿ ರೇಷ್ಮೆಗೆ ಸರಾಸರಿ 480 ರೂ ಇತ್ತು. ಮದುವೆಯ ಋತುವನ್ನು ಹೊರತುಪಡಿಸಿ ಸಾಮಾನ್ಯವಾಗಿ ಕೆಜಿ ಬಿವೊಲ್ಟೈನ್ ರೇಷ್ಮೆಗೆ ಸುಮಾರು 450-500 ರೂ ಮತ್ತು ಡ್ಡ-ತಳಿ ರೇಷ್ಮೆಗೆ ಸರಾಸರಿ 380-420 ರೂ ಇತ್ತು.

ನಮ್ಮ ಮನೆಯ ಹತ್ತು ಜನರು ರೇಷ್ಮೆ ಬೆಳೆಯಲು ತೊಡಗಿಸಿಕೊಂಡಿದ್ದೇವೆ. ಈಗ ಕೂಲಿ, ರೇಷ್ಮೆ ಹುಳು, ರಸಗೊಬ್ಬರ, ಸಾರಿಗೆ ಮತ್ತು ನಿರ್ವಹಣೆ ಸೇರಿ 48,000 ರೂ ಖರ್ಚು ಮಾಡಿದ್ದೆ. ಎಲ್ಲಾ ಕಳೆದರೆ ನಾನು ಕೇವಲ ರೂ. 20,000 ರೂ ಉಳಿಸುತ್ತೇನೆ ಅಷ್ಟೆ. “ನಾನು 2014 ರಿಂದ ಹಿಪ್ಪುನೇರಳೆ ಬೆಳೆಯಲು ಪ್ರಾರಂಭಿಸಿದೆ. ಈಗ ತೀವ್ರ ನಷ್ಟವಾದ್ದರಿಂದ ನಾನು ಪಡೆದಿರುವ ಸಾಲಗಳನ್ನು ಹೇಗೆ ಮರುಪಾವತಿಸುತ್ತೇನೆ ಎಂದು ನನಗೆ ತಿಳಿದಿಲ್ಲ”ಎಂದು 42 ವರ್ಷದ ಗಡಿಯಪ್ಪ ಹೇಳುತ್ತಾರೆ.

ಕೋವಿಡ್ -19 ಲಾಕ್‌ಡೌನ್ ರೇಷ್ಮೆ ಉದ್ಯಮವನ್ನು ತೀವ್ರವಾಗಿ ಬಾಧಿಸಿದೆ. ಬೆಲೆಗಳ ಕುಸಿತಕ್ಕೆ ಒಂದು ಕಾರಣವೆಂದರೆ ಸಂಪೂರ್ಣ ಬೇಡಿಕೆ-ಪೂರೈಕೆ ಸರಪಳಿಯ ಕಡಿತವಾಗಿದೆ. ಈ ಅವಧಿಯಲ್ಲಿ ಅನೇಕ ವಿವಾಹಗಳನ್ನು ಮುಂದೂಡಲಾಗಿದೆ, ಕಾರ್ಯಕ್ರಮಗಳು ರದ್ದಾಗಿವೆ ಮತ್ತು ಉಡುಪು ಮಳಿಗೆಗಳು ಸ್ಥಗಿತಗೊಂಡಿವೆ. ಆದ್ದರಿಂದ ರೇಷ್ಮೆಯ ಬೇಡಿಕೆ ತೀವ್ರವಾಗಿ ಕಡಿಮೆಯಾಗಿದೆ ಎಂದು ಮಾರುಕಟ್ಟೆ ಅಧಿಕಾರಿಗಳು ಮತ್ತು ಇತರರು ಹೇಳುತ್ತಾರೆ. ಆದರೆ ರೈತರು ಕಾಯಲು ಸಾಧ್ಯವಿಲ್ಲ. ಅವರು ಹಾಳಾಗುವ ಮುನ್ನವೇ ರೇಷ್ಮೆಯನ್ನು ಸಮಯಕ್ಕೆ ಸರಿಯಾಗಿ ಮಾರಾಟ ಮಾಡಬೇಕು.

ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, ರಾಮನಗರ ಮಾರುಕಟ್ಟೆಯು ಮಾರ್ಚ್ 25 ರಿಂದ ಏಪ್ರಿಲ್ 1 ರವರೆಗೆ ಒಂದು ವಾರದವರೆಗೆ ಸ್ಥಗಿತಗೊಂಡಿತ್ತು ಎಂದು ಅಧಿಕಾರಿಗಳು ಹೇಳುತ್ತಾರೆ. ಇದು ಮತ್ತೆ ತೆರೆದ ನಂತರ, ಬಿವೊಲ್ಟೈನ್ ರೇಷ್ಮೆಯ ಸರಾಸರಿ ಬೆಲೆ ರೂ. ಪ್ರತಿ ಕಿಲೋಗ್ರಾಂಗೆ 330 ರೂ., ಮತ್ತು ಅಡ್ಡ-ತಳಿ ರೇಷ್ಮೆ ರೂ. ಪ್ರತಿ ಕಿಲೋಗೆ 310 ರೂ ಇತ್ತು.

ದೇಶಾದ್ಯಂತ ಲಾಕ್‌ಡೌನ್ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಿಸಿದಾಗ ರೈತರು ರೇಷ್ಮೆ  ಬೆಲೆಗಳು ಮತ್ತೆ ಪುಟಿಯುವ ನಿರೀಕ್ಷೆಯಲ್ಲಿದ್ದರು. ಆದರೆ ಬೆಲೆಗಳು ಮತ್ತಷ್ಟು ಕಡಿಮೆಯಾದವು. ಮೇ ಕೊನೆಯ ವಾರದ ವೇಳೆಗೆ ಬಿವೊಲ್ಟೈನ್ ರೇಷ್ಮೆ ಸರಾಸರಿ ಬೆಲೆ ರೂ. 250 ಮತ್ತು ಕ್ರಾಸ್‌ಬ್ರೀಡ್ ಬೆಲೆ ಸರಿಸುಮಾರು ರೂ. 200ರೂ ಕುಸಿದಿದೆ.

ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಕರ್ನಾಟಕದಿಂದ ರೇಷ್ಮೆ ಸರಬರಾಜು ಆಗುತ್ತಿತ್ತು. ಆದರೆ ಲಾಕ್‌ಡೌನ್‌ ಕಾರಣದಿಂದ ಸಾರಿಗೆ ವ್ಯವಸ್ಥೆ ವ್ಯತ್ಯಯವಾದ್ದರಿಂದ ಬೇಡಿಕೆಯಲ್ಲಿ ಕುಸಿತವಾಗಿದೆ. ಅದರಿಂದ ಸಹಜವಾಗಿ ಬೆಲೆ ಕುಸಿದಿದೆ ಎಂದು ಉಪ ನಿರ್ದೇಶಕ ಮುನ್ಶಿ ಬಸಯ್ಯ ಹೇಳಿದ್ದಾರೆ.

“ಬೆಲೆಗಳು ಕಡಿಮೆ ಇರುವುದರಿಂದ ನಾನು ಒಂದು ದಿನವೂ ಕೆಲಸವನ್ನು ನಿಲ್ಲಿಸಲು ಸಾಧ್ಯವಿಲ್ಲ. ನನ್ನ ಕುಟುಂಬವನ್ನು ನಾನು ಹೇಗೆ ಪೋಷಿಸುತ್ತೇನೆ?” ಎಂದು ಗಡಿಯಪ್ಪ ಪ್ರಶ್ನಿಸುತ್ತಾರೆ. ಮುಂದಿನ ಬ್ಯಾಚ್‌ನ ರೇಷ್ಮೆ ತಯಾರಿಸಲು ಅವರೀಗ ಮತ್ತೆ ಸಾಲದ ಮೊರೆ ಹೋಗಬೇಕಾಗಿದೆ. 2019 ರಲ್ಲಿ ಶೇ 12 ರಷ್ಟು ಬಡ್ಡಿದರದಲ್ಲಿ ಸಹಕಾರಿ ಬ್ಯಾಂಕಿನಿಂದ 3.5 ಲಕ್ಷ ರೂ ಮತ್ತು ನಾಲ್ಕು ವರ್ಷಗಳ ಹಿಂದೆ ವಿಜಯ ಬ್ಯಾಂಕಿನಿಂದ ತೆಗೆದುಕೊಂಡ  ಶೇ 7 ರಷ್ಟು ಬಡ್ಡಿಗೆ 1.5 ಲಕ್ಷ ರೂ ಸಾಲವನ್ನು ಇನ್ನೂ ತೀರಿಸಿಲ್ಲಿ ಎಂದು ಅವರು ಹೇಳುತ್ತಾರೆ.

ಸರ್ಕಾರ ಏನದರೂ ಮಧ್ಯಪ್ರವೇಶಿಸಿದೆಯೇ? ಈ ರೈತರು ಏನು ಮಾಡಬೇಕು? ಈ ಪರಿಸ್ಥಿತಿ ಯಾವಾಗ ಸುಧಾರಿಸುತ್ತದೆ? ಈ ಪ್ರಶ್ನೆಗಳಿಗೆ ಉತ್ತರ ನೀಡುವವರು ಯಾರು?

ಕೃಪೆ: ರೂರಲ್‌ಇಂಡಿಯಾಆನ್‌ಲೈನ್‌.ಆರ್ಗ್‌


ಇದನ್ನೂ ಓದಿ: ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...