Homeಮುಖಪುಟಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದ ಸಿಲ್ಕ್ಯಾರ ಕಾರ್ಯಾಚರಣೆ

ಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದ ಸಿಲ್ಕ್ಯಾರ ಕಾರ್ಯಾಚರಣೆ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರ ಸುರಂಗದಲ್ಲಿ ಕುಸಿತ ಸಂಭವಿಸಿದ ಪರಿಣಾಮ ಒಳಗಡೆ ಸಿಲುಕಿಕೊಂಡಿದ್ದ 17 ಕಾರ್ಮಿಕರನ್ನು ನವೆಂಬರ್ 28ರಂದು ರಕ್ಷಣೆ ಮಾಡಲಾಗಿದೆ. 17 ದಿನಗಳ ಕತ್ತಲ ವಾಸದ ಬಳಿಕ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿ ಹೊರ ಬಂದಿದ್ದಾರೆ.

ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದ ಈ ರಕ್ಷಣಾ ಕಾರ್ಯಾಚರಣೆ, ಕಾರ್ಮಿಕರ ಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದೆ. ರಕ್ಷಣಾ ಕಾರ್ಯಾಚರಣೆಯ ಅಂತಿಮ ಹಂತದಲ್ಲಿ ಸುರಂಗ ಕೊರೆದ ಸಿಬ್ಬಂದಿಯ ಮುಖ್ಯಸ್ಥರು ತಮ್ಮ ತಂಡದಲ್ಲಿನ ನಂಬಿಕೆಗಳ ವೈವಿಧ್ಯತೆಯನ್ನು ಒತ್ತಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಮ್ಮ ತಂಡದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಇದ್ದಾರೆ. ಎರಡೂ ಧರ್ಮಗಳ ಜನರು 41 ಜೀವಗಳನ್ನು ಉಳಿಸಲು ಶ್ರಮಿಸಿದ್ದಾರೆ. ಅವರಲ್ಲಿ ಯಾರೂ ಇದನ್ನು ಒಬ್ಬರೇ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಸಾಮರಸ್ಯದಿಂದ ಬದುಕಬೇಕು. ದ್ವೇಷದ ವಿಷ ಹರಡಬಾರದು. ದೇಶಕ್ಕಾಗಿ ನಮ್ಮ 100 ಶೇಖಡ ಶ್ರಮ ಹಾಕಬೇಕು. ಇದು ನನ್ನ ಸಂದೇಶ, ದಯವಿಟ್ಟು ಇದನ್ನು ಎಲ್ಲರಿಗೂ ತಲುಪಿಸಿ” ಎಂದು ದೆಹಲಿ ಮೂಲದ ರಾಕ್‌ವೆಲ್ ಎಂಟರ್‌ಪ್ರೈಸಸ್ ಮಾಲೀಕ ವಕೀಲ್ ಹಸನ್ ಹೇಳಿದ್ದಾರೆ.

ವಕೀಲ್ ಹಸನ್ ಅವರ ಕಂಪನಿಯ ಸಿಬ್ಬಂದಿಗಳಾದ ದೆಹಲಿಯ 6 ಮಂದಿ ಮತ್ತು ಉತ್ತರ ಪ್ರದೇಶದ ಬುಲಂದ್‌ಶಹರ್‌ನ 6 ಮಂದಿ ಡ್ರಿಲ್ಲಿಂಗ್ ಯಂತ್ರ ಕೆಟ್ಟು ನಿಂತಾಗ ಸುರಂಗ ಕೊರೆದವರಾಗಿದ್ದಾರೆ. ಕಳೆದ ಸೋಮವಾರ ಮತ್ತು ಮಂಗಳವಾರದ ನಡುವೆ, ಸುರಂಗದೊಳಗೆ ಸಿಲುಕಿಕೊಂಡಿದ್ದ ಜನರನ್ನು ತಲುಪಲು ಈ 12 ಮಂದಿ ಇಕ್ಕಟ್ಟಾದ ಜಾಗದಲ್ಲಿ 12 ಮೀಟರ್‌ ಕೊರೆದು ಪೈಪ್ ಅಳವಡಿಸಿದ್ದಾರೆ.

ಕೊನೆಯ ಹಂತದ ಸುರಂಗ ಕೊರೆದವರಲ್ಲಿ ಹಸನ್, ಮುನ್ನಾ ಖುರೇಷಿ, ನಸೀಮ್ ಮಲಿಕ್, ಮೋನು ಕುಮಾರ್, ಸೌರಭ್, ಜತಿನ್ ಕುಮಾರ್, ಅಂಕುರ್, ನಾಸಿರ್ ಖಾನ್, ದೇವೇಂದ್ರ, ಫಿರೋಜ್ ಖುರೇಷಿ, ರಶೀದ್ ಅನ್ಸಾರಿ ಮತ್ತು ಇರ್ಷಾದ್ ಅನ್ಸಾರಿ ಎಂಬ 20 ರಿಂದ 45 ವರ್ಷ ವಯಸ್ಸಿನವರು ಇದ್ದರು.

ಕಿರಿದಾದ ಜಾಗದಲ್ಲಿ ಕಲ್ಲು, ಮಣ್ಣು ಕೊರೆದು ಕೊಳವೆ ಅಳವಡಿಸಿದ ಈ ತಂಡದ ಸಾಹಸಕ್ಕೆ ಇಡೀ ದೇಶ ಸಲಾಂ ಹೇಳಿದೆ. ಈ ನಿಪುಣ ‘ಇಲಿ ಬಿಲ’ ತಂಡದ ಸದಸ್ಯರು ದೆಹಲಿ ಜಲ ಮಂಡಳಿಯಲ್ಲಿ ಪೈಪ್ ಅಳವಡಿಕೆಗೆ ಸುರಂಗ ಕೊರೆದು ಅಭ್ಯಾಸ ಹೊಂದಿದ್ದಾರೆ.

41 ಜನರ ಜೀವ, ಅವರ ಕುಟುಂಬದ ಸಾವಿರಾರು ಕನಸುಗಳನ್ನು ಜೀವಂತವಾಗಿಸಿ ಇಲಿ ಬಿಲ ತಂಡದ ನಿಪುಣರು ಬುಧವಾರ ಸಿಲ್ಕ್ಯಾರದಿಂದ ತಮ್ಮ ಊರಿಗೆ ತೆರಳಿದ್ದಾರೆ. ಹೊರಡುವ ಮುಂಚೆ ತಮ್ಮ ಕೆಲಸ ಕುರಿತು ಹಸನ್ ಮಾತನಾಡಿದ್ದು, ನಾವು ದೆಹಲಿ ಜಲ ಮಂಡಳಿಗಾಗಿ ಕೆಲಸ ಮಾಡುವವರು. ಇಲಿಗಳಂತೆ ಸುರಂಗ ಕೊರೆದು ನೀರಿನ ಪೈಪ್ ಅಳವಡಿಸುವುದು ನಮ್ಮ ಕೆಲಸ. ನಮ್ಮಲ್ಲಿ ಇಬ್ಬರು ಮುಂದೆ ಹೋಗುತ್ತಾರೆ. ಅವರಲ್ಲಿ ಒಬ್ಬರು ಮಣ್ಣು ಕರೆಯುತ್ತಾರೆ. ಇನ್ನೊಬ್ಬರು ಅದನ್ನು ಬಕೆಟ್‌ನಲ್ಲಿ ತುಂಬಿಸಿ ಕೊಡುತ್ತಾರೆ. ಉಳಿದವರು ಮಣ್ಣು ಹೊರಗೆಳೆಯುವ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಕಾರ್ಮಿಕರ ಜೀವ ರಕ್ಷಣೆಯ ಜೊತೆಗೆ ಇಲಿ ಬಿಲ ತಂಡದ ಸದಸ್ಯರು ಮಾನವೀಯತೆ, ಭಾರತದ ಬಹುತ್ವದ ಸಂದೇಶವನ್ನು ಇಡೀ ಜಗತ್ತಿಗೆ ಸಾರಿದ್ದಾರೆ.

ಇದನ್ನೂ ಓದಿ : ಅಝಾನ್‌ಗೆ ಧ್ವನಿವರ್ಧಕ ಬಳಸಿದರೆ ಶಬ್ಧಮಾಲಿನ್ಯವಾಗುತ್ತದೆ ಎನ್ನುವುದು ತಪ್ಪು ಕಲ್ಪನೆ: ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...