Homeಮುಖಪುಟಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದ ಸಿಲ್ಕ್ಯಾರ ಕಾರ್ಯಾಚರಣೆ

ಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದ ಸಿಲ್ಕ್ಯಾರ ಕಾರ್ಯಾಚರಣೆ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರ ಸುರಂಗದಲ್ಲಿ ಕುಸಿತ ಸಂಭವಿಸಿದ ಪರಿಣಾಮ ಒಳಗಡೆ ಸಿಲುಕಿಕೊಂಡಿದ್ದ 17 ಕಾರ್ಮಿಕರನ್ನು ನವೆಂಬರ್ 28ರಂದು ರಕ್ಷಣೆ ಮಾಡಲಾಗಿದೆ. 17 ದಿನಗಳ ಕತ್ತಲ ವಾಸದ ಬಳಿಕ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿ ಹೊರ ಬಂದಿದ್ದಾರೆ.

ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದ ಈ ರಕ್ಷಣಾ ಕಾರ್ಯಾಚರಣೆ, ಕಾರ್ಮಿಕರ ಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದೆ. ರಕ್ಷಣಾ ಕಾರ್ಯಾಚರಣೆಯ ಅಂತಿಮ ಹಂತದಲ್ಲಿ ಸುರಂಗ ಕೊರೆದ ಸಿಬ್ಬಂದಿಯ ಮುಖ್ಯಸ್ಥರು ತಮ್ಮ ತಂಡದಲ್ಲಿನ ನಂಬಿಕೆಗಳ ವೈವಿಧ್ಯತೆಯನ್ನು ಒತ್ತಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಮ್ಮ ತಂಡದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಇದ್ದಾರೆ. ಎರಡೂ ಧರ್ಮಗಳ ಜನರು 41 ಜೀವಗಳನ್ನು ಉಳಿಸಲು ಶ್ರಮಿಸಿದ್ದಾರೆ. ಅವರಲ್ಲಿ ಯಾರೂ ಇದನ್ನು ಒಬ್ಬರೇ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಸಾಮರಸ್ಯದಿಂದ ಬದುಕಬೇಕು. ದ್ವೇಷದ ವಿಷ ಹರಡಬಾರದು. ದೇಶಕ್ಕಾಗಿ ನಮ್ಮ 100 ಶೇಖಡ ಶ್ರಮ ಹಾಕಬೇಕು. ಇದು ನನ್ನ ಸಂದೇಶ, ದಯವಿಟ್ಟು ಇದನ್ನು ಎಲ್ಲರಿಗೂ ತಲುಪಿಸಿ” ಎಂದು ದೆಹಲಿ ಮೂಲದ ರಾಕ್‌ವೆಲ್ ಎಂಟರ್‌ಪ್ರೈಸಸ್ ಮಾಲೀಕ ವಕೀಲ್ ಹಸನ್ ಹೇಳಿದ್ದಾರೆ.

ವಕೀಲ್ ಹಸನ್ ಅವರ ಕಂಪನಿಯ ಸಿಬ್ಬಂದಿಗಳಾದ ದೆಹಲಿಯ 6 ಮಂದಿ ಮತ್ತು ಉತ್ತರ ಪ್ರದೇಶದ ಬುಲಂದ್‌ಶಹರ್‌ನ 6 ಮಂದಿ ಡ್ರಿಲ್ಲಿಂಗ್ ಯಂತ್ರ ಕೆಟ್ಟು ನಿಂತಾಗ ಸುರಂಗ ಕೊರೆದವರಾಗಿದ್ದಾರೆ. ಕಳೆದ ಸೋಮವಾರ ಮತ್ತು ಮಂಗಳವಾರದ ನಡುವೆ, ಸುರಂಗದೊಳಗೆ ಸಿಲುಕಿಕೊಂಡಿದ್ದ ಜನರನ್ನು ತಲುಪಲು ಈ 12 ಮಂದಿ ಇಕ್ಕಟ್ಟಾದ ಜಾಗದಲ್ಲಿ 12 ಮೀಟರ್‌ ಕೊರೆದು ಪೈಪ್ ಅಳವಡಿಸಿದ್ದಾರೆ.

ಕೊನೆಯ ಹಂತದ ಸುರಂಗ ಕೊರೆದವರಲ್ಲಿ ಹಸನ್, ಮುನ್ನಾ ಖುರೇಷಿ, ನಸೀಮ್ ಮಲಿಕ್, ಮೋನು ಕುಮಾರ್, ಸೌರಭ್, ಜತಿನ್ ಕುಮಾರ್, ಅಂಕುರ್, ನಾಸಿರ್ ಖಾನ್, ದೇವೇಂದ್ರ, ಫಿರೋಜ್ ಖುರೇಷಿ, ರಶೀದ್ ಅನ್ಸಾರಿ ಮತ್ತು ಇರ್ಷಾದ್ ಅನ್ಸಾರಿ ಎಂಬ 20 ರಿಂದ 45 ವರ್ಷ ವಯಸ್ಸಿನವರು ಇದ್ದರು.

ಕಿರಿದಾದ ಜಾಗದಲ್ಲಿ ಕಲ್ಲು, ಮಣ್ಣು ಕೊರೆದು ಕೊಳವೆ ಅಳವಡಿಸಿದ ಈ ತಂಡದ ಸಾಹಸಕ್ಕೆ ಇಡೀ ದೇಶ ಸಲಾಂ ಹೇಳಿದೆ. ಈ ನಿಪುಣ ‘ಇಲಿ ಬಿಲ’ ತಂಡದ ಸದಸ್ಯರು ದೆಹಲಿ ಜಲ ಮಂಡಳಿಯಲ್ಲಿ ಪೈಪ್ ಅಳವಡಿಕೆಗೆ ಸುರಂಗ ಕೊರೆದು ಅಭ್ಯಾಸ ಹೊಂದಿದ್ದಾರೆ.

41 ಜನರ ಜೀವ, ಅವರ ಕುಟುಂಬದ ಸಾವಿರಾರು ಕನಸುಗಳನ್ನು ಜೀವಂತವಾಗಿಸಿ ಇಲಿ ಬಿಲ ತಂಡದ ನಿಪುಣರು ಬುಧವಾರ ಸಿಲ್ಕ್ಯಾರದಿಂದ ತಮ್ಮ ಊರಿಗೆ ತೆರಳಿದ್ದಾರೆ. ಹೊರಡುವ ಮುಂಚೆ ತಮ್ಮ ಕೆಲಸ ಕುರಿತು ಹಸನ್ ಮಾತನಾಡಿದ್ದು, ನಾವು ದೆಹಲಿ ಜಲ ಮಂಡಳಿಗಾಗಿ ಕೆಲಸ ಮಾಡುವವರು. ಇಲಿಗಳಂತೆ ಸುರಂಗ ಕೊರೆದು ನೀರಿನ ಪೈಪ್ ಅಳವಡಿಸುವುದು ನಮ್ಮ ಕೆಲಸ. ನಮ್ಮಲ್ಲಿ ಇಬ್ಬರು ಮುಂದೆ ಹೋಗುತ್ತಾರೆ. ಅವರಲ್ಲಿ ಒಬ್ಬರು ಮಣ್ಣು ಕರೆಯುತ್ತಾರೆ. ಇನ್ನೊಬ್ಬರು ಅದನ್ನು ಬಕೆಟ್‌ನಲ್ಲಿ ತುಂಬಿಸಿ ಕೊಡುತ್ತಾರೆ. ಉಳಿದವರು ಮಣ್ಣು ಹೊರಗೆಳೆಯುವ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಕಾರ್ಮಿಕರ ಜೀವ ರಕ್ಷಣೆಯ ಜೊತೆಗೆ ಇಲಿ ಬಿಲ ತಂಡದ ಸದಸ್ಯರು ಮಾನವೀಯತೆ, ಭಾರತದ ಬಹುತ್ವದ ಸಂದೇಶವನ್ನು ಇಡೀ ಜಗತ್ತಿಗೆ ಸಾರಿದ್ದಾರೆ.

ಇದನ್ನೂ ಓದಿ : ಅಝಾನ್‌ಗೆ ಧ್ವನಿವರ್ಧಕ ಬಳಸಿದರೆ ಶಬ್ಧಮಾಲಿನ್ಯವಾಗುತ್ತದೆ ಎನ್ನುವುದು ತಪ್ಪು ಕಲ್ಪನೆ: ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...