Homeಮುಖಪುಟಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದ ಸಿಲ್ಕ್ಯಾರ ಕಾರ್ಯಾಚರಣೆ

ಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದ ಸಿಲ್ಕ್ಯಾರ ಕಾರ್ಯಾಚರಣೆ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರ ಸುರಂಗದಲ್ಲಿ ಕುಸಿತ ಸಂಭವಿಸಿದ ಪರಿಣಾಮ ಒಳಗಡೆ ಸಿಲುಕಿಕೊಂಡಿದ್ದ 17 ಕಾರ್ಮಿಕರನ್ನು ನವೆಂಬರ್ 28ರಂದು ರಕ್ಷಣೆ ಮಾಡಲಾಗಿದೆ. 17 ದಿನಗಳ ಕತ್ತಲ ವಾಸದ ಬಳಿಕ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿ ಹೊರ ಬಂದಿದ್ದಾರೆ.

ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದ ಈ ರಕ್ಷಣಾ ಕಾರ್ಯಾಚರಣೆ, ಕಾರ್ಮಿಕರ ಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದೆ. ರಕ್ಷಣಾ ಕಾರ್ಯಾಚರಣೆಯ ಅಂತಿಮ ಹಂತದಲ್ಲಿ ಸುರಂಗ ಕೊರೆದ ಸಿಬ್ಬಂದಿಯ ಮುಖ್ಯಸ್ಥರು ತಮ್ಮ ತಂಡದಲ್ಲಿನ ನಂಬಿಕೆಗಳ ವೈವಿಧ್ಯತೆಯನ್ನು ಒತ್ತಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಮ್ಮ ತಂಡದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಇದ್ದಾರೆ. ಎರಡೂ ಧರ್ಮಗಳ ಜನರು 41 ಜೀವಗಳನ್ನು ಉಳಿಸಲು ಶ್ರಮಿಸಿದ್ದಾರೆ. ಅವರಲ್ಲಿ ಯಾರೂ ಇದನ್ನು ಒಬ್ಬರೇ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಸಾಮರಸ್ಯದಿಂದ ಬದುಕಬೇಕು. ದ್ವೇಷದ ವಿಷ ಹರಡಬಾರದು. ದೇಶಕ್ಕಾಗಿ ನಮ್ಮ 100 ಶೇಖಡ ಶ್ರಮ ಹಾಕಬೇಕು. ಇದು ನನ್ನ ಸಂದೇಶ, ದಯವಿಟ್ಟು ಇದನ್ನು ಎಲ್ಲರಿಗೂ ತಲುಪಿಸಿ” ಎಂದು ದೆಹಲಿ ಮೂಲದ ರಾಕ್‌ವೆಲ್ ಎಂಟರ್‌ಪ್ರೈಸಸ್ ಮಾಲೀಕ ವಕೀಲ್ ಹಸನ್ ಹೇಳಿದ್ದಾರೆ.

ವಕೀಲ್ ಹಸನ್ ಅವರ ಕಂಪನಿಯ ಸಿಬ್ಬಂದಿಗಳಾದ ದೆಹಲಿಯ 6 ಮಂದಿ ಮತ್ತು ಉತ್ತರ ಪ್ರದೇಶದ ಬುಲಂದ್‌ಶಹರ್‌ನ 6 ಮಂದಿ ಡ್ರಿಲ್ಲಿಂಗ್ ಯಂತ್ರ ಕೆಟ್ಟು ನಿಂತಾಗ ಸುರಂಗ ಕೊರೆದವರಾಗಿದ್ದಾರೆ. ಕಳೆದ ಸೋಮವಾರ ಮತ್ತು ಮಂಗಳವಾರದ ನಡುವೆ, ಸುರಂಗದೊಳಗೆ ಸಿಲುಕಿಕೊಂಡಿದ್ದ ಜನರನ್ನು ತಲುಪಲು ಈ 12 ಮಂದಿ ಇಕ್ಕಟ್ಟಾದ ಜಾಗದಲ್ಲಿ 12 ಮೀಟರ್‌ ಕೊರೆದು ಪೈಪ್ ಅಳವಡಿಸಿದ್ದಾರೆ.

ಕೊನೆಯ ಹಂತದ ಸುರಂಗ ಕೊರೆದವರಲ್ಲಿ ಹಸನ್, ಮುನ್ನಾ ಖುರೇಷಿ, ನಸೀಮ್ ಮಲಿಕ್, ಮೋನು ಕುಮಾರ್, ಸೌರಭ್, ಜತಿನ್ ಕುಮಾರ್, ಅಂಕುರ್, ನಾಸಿರ್ ಖಾನ್, ದೇವೇಂದ್ರ, ಫಿರೋಜ್ ಖುರೇಷಿ, ರಶೀದ್ ಅನ್ಸಾರಿ ಮತ್ತು ಇರ್ಷಾದ್ ಅನ್ಸಾರಿ ಎಂಬ 20 ರಿಂದ 45 ವರ್ಷ ವಯಸ್ಸಿನವರು ಇದ್ದರು.

ಕಿರಿದಾದ ಜಾಗದಲ್ಲಿ ಕಲ್ಲು, ಮಣ್ಣು ಕೊರೆದು ಕೊಳವೆ ಅಳವಡಿಸಿದ ಈ ತಂಡದ ಸಾಹಸಕ್ಕೆ ಇಡೀ ದೇಶ ಸಲಾಂ ಹೇಳಿದೆ. ಈ ನಿಪುಣ ‘ಇಲಿ ಬಿಲ’ ತಂಡದ ಸದಸ್ಯರು ದೆಹಲಿ ಜಲ ಮಂಡಳಿಯಲ್ಲಿ ಪೈಪ್ ಅಳವಡಿಕೆಗೆ ಸುರಂಗ ಕೊರೆದು ಅಭ್ಯಾಸ ಹೊಂದಿದ್ದಾರೆ.

41 ಜನರ ಜೀವ, ಅವರ ಕುಟುಂಬದ ಸಾವಿರಾರು ಕನಸುಗಳನ್ನು ಜೀವಂತವಾಗಿಸಿ ಇಲಿ ಬಿಲ ತಂಡದ ನಿಪುಣರು ಬುಧವಾರ ಸಿಲ್ಕ್ಯಾರದಿಂದ ತಮ್ಮ ಊರಿಗೆ ತೆರಳಿದ್ದಾರೆ. ಹೊರಡುವ ಮುಂಚೆ ತಮ್ಮ ಕೆಲಸ ಕುರಿತು ಹಸನ್ ಮಾತನಾಡಿದ್ದು, ನಾವು ದೆಹಲಿ ಜಲ ಮಂಡಳಿಗಾಗಿ ಕೆಲಸ ಮಾಡುವವರು. ಇಲಿಗಳಂತೆ ಸುರಂಗ ಕೊರೆದು ನೀರಿನ ಪೈಪ್ ಅಳವಡಿಸುವುದು ನಮ್ಮ ಕೆಲಸ. ನಮ್ಮಲ್ಲಿ ಇಬ್ಬರು ಮುಂದೆ ಹೋಗುತ್ತಾರೆ. ಅವರಲ್ಲಿ ಒಬ್ಬರು ಮಣ್ಣು ಕರೆಯುತ್ತಾರೆ. ಇನ್ನೊಬ್ಬರು ಅದನ್ನು ಬಕೆಟ್‌ನಲ್ಲಿ ತುಂಬಿಸಿ ಕೊಡುತ್ತಾರೆ. ಉಳಿದವರು ಮಣ್ಣು ಹೊರಗೆಳೆಯುವ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಕಾರ್ಮಿಕರ ಜೀವ ರಕ್ಷಣೆಯ ಜೊತೆಗೆ ಇಲಿ ಬಿಲ ತಂಡದ ಸದಸ್ಯರು ಮಾನವೀಯತೆ, ಭಾರತದ ಬಹುತ್ವದ ಸಂದೇಶವನ್ನು ಇಡೀ ಜಗತ್ತಿಗೆ ಸಾರಿದ್ದಾರೆ.

ಇದನ್ನೂ ಓದಿ : ಅಝಾನ್‌ಗೆ ಧ್ವನಿವರ್ಧಕ ಬಳಸಿದರೆ ಶಬ್ಧಮಾಲಿನ್ಯವಾಗುತ್ತದೆ ಎನ್ನುವುದು ತಪ್ಪು ಕಲ್ಪನೆ: ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...