Homeಮುಖಪುಟಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದ ಸಿಲ್ಕ್ಯಾರ ಕಾರ್ಯಾಚರಣೆ

ಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದ ಸಿಲ್ಕ್ಯಾರ ಕಾರ್ಯಾಚರಣೆ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರ ಸುರಂಗದಲ್ಲಿ ಕುಸಿತ ಸಂಭವಿಸಿದ ಪರಿಣಾಮ ಒಳಗಡೆ ಸಿಲುಕಿಕೊಂಡಿದ್ದ 17 ಕಾರ್ಮಿಕರನ್ನು ನವೆಂಬರ್ 28ರಂದು ರಕ್ಷಣೆ ಮಾಡಲಾಗಿದೆ. 17 ದಿನಗಳ ಕತ್ತಲ ವಾಸದ ಬಳಿಕ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿ ಹೊರ ಬಂದಿದ್ದಾರೆ.

ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದ ಈ ರಕ್ಷಣಾ ಕಾರ್ಯಾಚರಣೆ, ಕಾರ್ಮಿಕರ ಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದೆ. ರಕ್ಷಣಾ ಕಾರ್ಯಾಚರಣೆಯ ಅಂತಿಮ ಹಂತದಲ್ಲಿ ಸುರಂಗ ಕೊರೆದ ಸಿಬ್ಬಂದಿಯ ಮುಖ್ಯಸ್ಥರು ತಮ್ಮ ತಂಡದಲ್ಲಿನ ನಂಬಿಕೆಗಳ ವೈವಿಧ್ಯತೆಯನ್ನು ಒತ್ತಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಮ್ಮ ತಂಡದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಇದ್ದಾರೆ. ಎರಡೂ ಧರ್ಮಗಳ ಜನರು 41 ಜೀವಗಳನ್ನು ಉಳಿಸಲು ಶ್ರಮಿಸಿದ್ದಾರೆ. ಅವರಲ್ಲಿ ಯಾರೂ ಇದನ್ನು ಒಬ್ಬರೇ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಸಾಮರಸ್ಯದಿಂದ ಬದುಕಬೇಕು. ದ್ವೇಷದ ವಿಷ ಹರಡಬಾರದು. ದೇಶಕ್ಕಾಗಿ ನಮ್ಮ 100 ಶೇಖಡ ಶ್ರಮ ಹಾಕಬೇಕು. ಇದು ನನ್ನ ಸಂದೇಶ, ದಯವಿಟ್ಟು ಇದನ್ನು ಎಲ್ಲರಿಗೂ ತಲುಪಿಸಿ” ಎಂದು ದೆಹಲಿ ಮೂಲದ ರಾಕ್‌ವೆಲ್ ಎಂಟರ್‌ಪ್ರೈಸಸ್ ಮಾಲೀಕ ವಕೀಲ್ ಹಸನ್ ಹೇಳಿದ್ದಾರೆ.

ವಕೀಲ್ ಹಸನ್ ಅವರ ಕಂಪನಿಯ ಸಿಬ್ಬಂದಿಗಳಾದ ದೆಹಲಿಯ 6 ಮಂದಿ ಮತ್ತು ಉತ್ತರ ಪ್ರದೇಶದ ಬುಲಂದ್‌ಶಹರ್‌ನ 6 ಮಂದಿ ಡ್ರಿಲ್ಲಿಂಗ್ ಯಂತ್ರ ಕೆಟ್ಟು ನಿಂತಾಗ ಸುರಂಗ ಕೊರೆದವರಾಗಿದ್ದಾರೆ. ಕಳೆದ ಸೋಮವಾರ ಮತ್ತು ಮಂಗಳವಾರದ ನಡುವೆ, ಸುರಂಗದೊಳಗೆ ಸಿಲುಕಿಕೊಂಡಿದ್ದ ಜನರನ್ನು ತಲುಪಲು ಈ 12 ಮಂದಿ ಇಕ್ಕಟ್ಟಾದ ಜಾಗದಲ್ಲಿ 12 ಮೀಟರ್‌ ಕೊರೆದು ಪೈಪ್ ಅಳವಡಿಸಿದ್ದಾರೆ.

ಕೊನೆಯ ಹಂತದ ಸುರಂಗ ಕೊರೆದವರಲ್ಲಿ ಹಸನ್, ಮುನ್ನಾ ಖುರೇಷಿ, ನಸೀಮ್ ಮಲಿಕ್, ಮೋನು ಕುಮಾರ್, ಸೌರಭ್, ಜತಿನ್ ಕುಮಾರ್, ಅಂಕುರ್, ನಾಸಿರ್ ಖಾನ್, ದೇವೇಂದ್ರ, ಫಿರೋಜ್ ಖುರೇಷಿ, ರಶೀದ್ ಅನ್ಸಾರಿ ಮತ್ತು ಇರ್ಷಾದ್ ಅನ್ಸಾರಿ ಎಂಬ 20 ರಿಂದ 45 ವರ್ಷ ವಯಸ್ಸಿನವರು ಇದ್ದರು.

ಕಿರಿದಾದ ಜಾಗದಲ್ಲಿ ಕಲ್ಲು, ಮಣ್ಣು ಕೊರೆದು ಕೊಳವೆ ಅಳವಡಿಸಿದ ಈ ತಂಡದ ಸಾಹಸಕ್ಕೆ ಇಡೀ ದೇಶ ಸಲಾಂ ಹೇಳಿದೆ. ಈ ನಿಪುಣ ‘ಇಲಿ ಬಿಲ’ ತಂಡದ ಸದಸ್ಯರು ದೆಹಲಿ ಜಲ ಮಂಡಳಿಯಲ್ಲಿ ಪೈಪ್ ಅಳವಡಿಕೆಗೆ ಸುರಂಗ ಕೊರೆದು ಅಭ್ಯಾಸ ಹೊಂದಿದ್ದಾರೆ.

41 ಜನರ ಜೀವ, ಅವರ ಕುಟುಂಬದ ಸಾವಿರಾರು ಕನಸುಗಳನ್ನು ಜೀವಂತವಾಗಿಸಿ ಇಲಿ ಬಿಲ ತಂಡದ ನಿಪುಣರು ಬುಧವಾರ ಸಿಲ್ಕ್ಯಾರದಿಂದ ತಮ್ಮ ಊರಿಗೆ ತೆರಳಿದ್ದಾರೆ. ಹೊರಡುವ ಮುಂಚೆ ತಮ್ಮ ಕೆಲಸ ಕುರಿತು ಹಸನ್ ಮಾತನಾಡಿದ್ದು, ನಾವು ದೆಹಲಿ ಜಲ ಮಂಡಳಿಗಾಗಿ ಕೆಲಸ ಮಾಡುವವರು. ಇಲಿಗಳಂತೆ ಸುರಂಗ ಕೊರೆದು ನೀರಿನ ಪೈಪ್ ಅಳವಡಿಸುವುದು ನಮ್ಮ ಕೆಲಸ. ನಮ್ಮಲ್ಲಿ ಇಬ್ಬರು ಮುಂದೆ ಹೋಗುತ್ತಾರೆ. ಅವರಲ್ಲಿ ಒಬ್ಬರು ಮಣ್ಣು ಕರೆಯುತ್ತಾರೆ. ಇನ್ನೊಬ್ಬರು ಅದನ್ನು ಬಕೆಟ್‌ನಲ್ಲಿ ತುಂಬಿಸಿ ಕೊಡುತ್ತಾರೆ. ಉಳಿದವರು ಮಣ್ಣು ಹೊರಗೆಳೆಯುವ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಕಾರ್ಮಿಕರ ಜೀವ ರಕ್ಷಣೆಯ ಜೊತೆಗೆ ಇಲಿ ಬಿಲ ತಂಡದ ಸದಸ್ಯರು ಮಾನವೀಯತೆ, ಭಾರತದ ಬಹುತ್ವದ ಸಂದೇಶವನ್ನು ಇಡೀ ಜಗತ್ತಿಗೆ ಸಾರಿದ್ದಾರೆ.

ಇದನ್ನೂ ಓದಿ : ಅಝಾನ್‌ಗೆ ಧ್ವನಿವರ್ಧಕ ಬಳಸಿದರೆ ಶಬ್ಧಮಾಲಿನ್ಯವಾಗುತ್ತದೆ ಎನ್ನುವುದು ತಪ್ಪು ಕಲ್ಪನೆ: ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...