Homeಕರ್ನಾಟಕಕೇರಳ ಹಾಗೂ ಕರ್ನಾಟಕದ ಕರಾವಳಿಯಾದ್ಯಂತ ಸರಳ ‘ಬಕ್ರೀದ್’ ಆಚರಣೆ

ಕೇರಳ ಹಾಗೂ ಕರ್ನಾಟಕದ ಕರಾವಳಿಯಾದ್ಯಂತ ಸರಳ ‘ಬಕ್ರೀದ್’ ಆಚರಣೆ

ಪ್ರವಾದಿ ಇಬ್ರಾಹಿಂ ಹಾಗೂ ಅವರ ಮಗ ಇಸ್ಮಾಯಿಲ್ ಅವರ ತ್ಯಾಗ-ಬಲಿದಾನದ ನೆನೆಪಿನಲ್ಲಿ ವಿಶ್ವದಾದ್ಯಂತ ಮುಸಲ್ಮಾನರು ಬಕ್ರೀದ್ ಹಬ್ಬ ಆಚರಿಸುತ್ತಾರೆ.

- Advertisement -
- Advertisement -

ತ್ಯಾಗ ಮತ್ತು ಬಲಿದಾನದ ಸಂಕೇಂತವಾದ ಬಕ್ರೀದ್ ಹಬ್ಬವನ್ನು ಕೇರಳ ಸೇರಿದಂತೆ ಕರ್ನಾಟದ ಕರಾವಳಿಯಾದ್ಯಂತ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಪ್ರವಾದಿ ಇಬ್ರಾಹಿಂ ಮತ್ತು ಅವರ ಪುತ್ರ ಇಸ್ಮಾಯಿಲ್ ಅವರ ತ್ಯಾಗ ಮತ್ತು ಬಲಿದಾದನ ನೆನಪಿಗೆ ಮುಸಲ್ಮಾನರು ಈ ಹಬ್ಬವನ್ನು ಆಚರಿಸುತ್ತಾರೆ.

ಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸಲು ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಸುರಕ್ಷಿತ ಅಂತರ ಕಾಪಾಡಿ ಮಸೀದಿಗಳಲ್ಲಿ ಸಾಮೂಹಿಕವಾಗಿ ಈದ್ ಪ್ರಾರ್ಥನೆಯನ್ನು ಮಾಡಲಾಯಿತು. ದಕ್ಷಿಣ ಕನ್ನಡ, ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಾದ್ಯಂತ ತಮ್ಮ ವ್ಯಾಪ್ತಿಯಲ್ಲಿರುವ ಮಸೀದಿಗಳಲ್ಲಿ ಮುಸ್ಲಿಮರು ಬಕ್ರೀದ್ ನಮಾಝ್ ಮಾಡಿದರು.

ದ.ಕ ಜಿಲ್ಲೆಯಲ್ಲಿ ಕೊರೊನಾ ಪ್ರಯುಕ್ತ ಈದ್ಗಾದಲ್ಲಿ ಸಾಮೂಹಿಕ ನಮಾಝ್‌ಗೆ ನಿರ್ಬಂಧ ವಿಧಿಸಲಾಗಿದ್ದರಿಂದ ಅಲ್ಲಿ ನಮಾಝ್ ಇರಲಿಲ್ಲ. ಅಲ್ಲದೆ 60 ವರ್ಷಕ್ಕಿಂದ ಮೇಲ್ಪಟ್ಟ ಹಾಗೂ 10 ವರ್ಷಕ್ಕಿಂತ ಕೆಳಗಿನ ಪ್ರಾಯದವರು ಮಸೀದಿ ಪ್ರವೇಶಿಸಲು ಅವಕಾಶ ಇರಲಿಲ್ಲ.

ತ್ಯಾಗ ಬಲಿದಾನದ ಹಬ್ಬಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಶುಭಾಶಯ ಹೇಳಿದ್ದಾರೆ. ತಮ್ಮ ಟ್ವೀಟ್‌ನಲ್ಲಿ “ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬದ ಆಶಯಗಳು ನಮ್ಮೆಲ್ಲರ ಬದುಕಿನ ಮೌಲ್ಯಗಳಾಗಲಿ.‌ ಸುಖ-ಕಷ್ಟಗಳೆರಡರ ಕಾಲದಲ್ಲಿಯೂ ಸೌಹಾರ್ದತೆಯ ಬಂಧ ನಮ್ಮೆಲ್ಲರನ್ನು ಬೆಸೆದಿರಲಿ” ಎಂದು ಶುಭಾಶಯ ಹೇಳಿದ್ದಾರೆ.

ಕೇರಳದಲ್ಲೂ ಇಂದು ಬಕ್ರೀದನ್ನು ಆಚರಿಸಲಾಗುತ್ತಿದೆ. ಕೇರಳದ ಮಲಪ್ಪುರಂ ಹಾಗೂ ಇತರ ಜಿಲ್ಲೆಗಳಲ್ಲಿ ಸರಳವಾಗಿ ಹಾಗೂ ಅಂತರ ಕಾಪಾಡಿಕೊಂಡು ಹಬ್ಬದ ನಮಾಝ್ ನಡೆಸಲಾಯಿತು.

ಕೇರಳ ಮುಸ್ಲಿಮರ ಧಾರ್ಮಿಕ ಮತ್ತು ಆಧ್ಯಾತ್ಮಿಕ ನಾಯಕರಾದ ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಮತ್ತು ಸೆಯ್ಯದ್ ಹೈದರಾಲಿ ಶಿಹಾಬ್ ತಂಙಲ್ ಸೇರಿದಂತೆ ಸಾಮಾಜಿಕ ಮುಖಂಡರು, ತಮ್ಮ ಸಹೋದರರನ್ನು ಕೊರೊನಾ ಕಾರ್ಯಸೂಚಿಯ ಮಿತಿಯಲ್ಲಿ ಈದ್ ಆಚರಿಸಲು ಒತ್ತಾಯಿಸಿದ್ದರು. ಆಚರಣೆ ಮತ್ತು ಪ್ರಾರ್ಥನಾ ಸಭೆಗಳು ಯಾವುದೇ ರೀತಿಯಲ್ಲಿ ಸಾಮಾಜಿಕ ಕೂಟಗಳು ಮತ್ತು ಸಾರ್ವಜನಿಕ ಸಭೆಗಳಿಗೆ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿರಬಾರದು ಎಂದು ಅವರು ಕೇಳಿದ್ದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ಈದ್-ಉಲ್-ಅಝ್ಹಾ ನಮಗೆ ತ್ಯಾಗ, ಭಕ್ತಿ ಮತ್ತು ಮಾನವೀಯತೆ, ಪ್ರೀತಿಯ ದೊಡ್ಡ ಸಂದೇಶವನ್ನು ನೀಡುತ್ತದೆ. ಈ ವರ್ಷದ ಈದ್ ಆಚರಣೆಯು ಜೀವನದಲ್ಲಿ ಈ ಮಹಾನ್ ಮೌಲ್ಯಗಳನ್ನು ಸಾಕಾರಗೊಳಿಸುವ ಪ್ರತಿಜ್ಞೆಯನ್ನು ನವೀಕರಿಸಲು ಬಂದ ಒಂದು ಅವಕಾಶವಾಗಿದೆ. ಪ್ರಪಂಚದಾದ್ಯಂತವಿರುವ ಮಲಯಾಳಿಗಳಿಗೆ ಈದ್ ಶುಭ ಹಾರೈಸುತ್ತೇನೆ.” ಎಂದು ಟ್ಟಿಟ್ಟರ್‌ ಮೂಲಕ ಶುಭಾಶಯ ಕೋರಿದ್ದಾರೆ.

ನಾಳೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಹಾಗೂ ಭಾರತದಾದ್ಯಂತ ಬಕ್ರೀದ್ ಆಚರಿಸಲಾಗುತ್ತದೆ.


ಓದಿ: ಹುಲಿ ಜಾನಪದ; ಕನ್ನಡ ಜಾನಪದ ಪರಂಪರೆಯಲ್ಲಿ ಹುಲಿಯ ಜತೆಗಿನ ಮುಖಾಮುಖಿ- ಅರುಣ್ ಜೋಳದಕೂಡ್ಲಿಗಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...